ದಿನದ ಸುದ್ದಿ

ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ :‌ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ ಅನಿರ್ಧಿಷ್ಟಾವಧಿ ಮುಂದೂಡಿಕೆಯಾಗುತ್ತಿದ್ದಂತೆ, ಸಭೆ ಕರೆದು ತಕರಾರು ಪರಿಹರಿಸುವುದಾಗಿ, ತಿಳಿಸಿದರು.

ರಾಜ್ಯ ಸರ್ಕಾರ, ಪಂಚ ಖಾತ್ರಿ ಯೋಜನೆಗಳ ಅನುಷ್ಠಾನಕ್ಕಾಗಿ, ಸಮಿತಿ ರಚಿಸಿ, ರಾಜ್ಯದ ತೆರಿಗೆದಾರರ ಹಣವನ್ನು, ದುರುಪಯೋಗ ಮಾಡುತ್ತಿದೆ ಎಂದು ಆರೋಪಿಸಿ, ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ, ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಶಾಸಕರು, ವಿಧಾನಸೌಧದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ, ಪ್ರತಿಭಟನೆ ನಡೆಸಿದರು. ಗ್ಯಾರಂಟಿ ಯೋಜನೆಗಳ ಅನುಷ್ಟಾನದ ಮೇಲ್ವಿಚಾರಣಾ ಸಮಿತಿ ರದ್ದು ಪಡಿಸುವಂತೆ, ರಾಜಭವನಕ್ಕೆ ತೆರಳಿ, ರಾಜ್ಯಪಾಲರಿಗೆ ದೂರು ನೀಡಿದರು.

ಖಾತ್ರಿ ಯೋಜನೆಗಳ ಅನುಷ್ಟಾನಕ್ಕೆ ರಚಿಸಲಾಗಿರುವ, ಕಾಂಗ್ರೆಸ್ ಕಾರ್ಯಕರ್ತರ ಸಮಿತಿಗಳನ್ನು ರದ್ದು ಪಡಿಸಿ, ಶಾಸಕರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸುವಂತೆ, ಪ್ರತಿಪಕ್ಷ ಬಿ.ಜೆ.ಪಿ. ಮತ್ತು ಜೆ.ಡಿ.ಎಸ್. ಸದಸ್ಯರು ವಿಧಾನಸಭೆಯಲ್ಲಿ ಧರಣಿ ಮುಂದುವರೆಸಿದ್ದರಿAದ, ಸದನ ಕಲಾಪವನ್ನು ಮಧ್ಯಾಹ್ನದ ವರೆಗೆ ಮುಂದೂಡಲಾಗಿತ್ತು.

ಇಂಧನ ಬೆಲೆ ಏರಿಕೆ, ಸಿಬ್ಬಂದಿ ವೇತನ ಹಾಗೂ ವಾಹನ ಬಿಡಿ ಭಾಗಗಳ ಬೆಲೆ ಹೆಚ್ಚಳದಿಂದ ಉಂಟಾದ, ಆರ್ಥಿಕ ಹೊರೆ ತಗ್ಗಿಸಲು, ಕಳೆದ ಜನವರಿಯಲ್ಲಿ ಬಸ್ ಪ್ರಯಾಣ ದರವನ್ನು, ಶೇಕಡ 15ರಷ್ಟು ಹೆಚ್ಚಿಸಲಾಗಿದೆ ಎಂದು, ಸಾರಿಗೆ ಖಾತೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ, ಬಿಜೆಪಿ ಶಾಸಕ ಕೇಶವಪ್ರಸಾದ್ ಅವರ ಪ್ರಶ್ನೆಗೆ ಸಚಿವರು, ಉತ್ತರಿಸಿದರು.

ರಾಜ್ಯ ಸಾರಿಗೆ ಸಂಸ್ಥೆ ಅಧೀನದ, ನಾಲ್ಕು ಸಾರಿಗೆ ನಿಗಮಗಳು, 5ಸಾವಿರದ 200 ಕೋಟಿ ರೂಪಾಯಿ ನಷ್ಟದಲ್ಲಿವೆ. ನಿಗಮಗಳ ಪುನಃಶ್ವೇತನಕ್ಕೆ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ ಎಂದು, ಸಮರ್ಥಿಸಿಕೊಂಡರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version