ಕ್ರೀಡೆ
ದಾವಣಗೆರೆ | ಅಖಿಲ ಭಾರತ ಅಂತರ ವಿವಿ ಖೋ-ಖೋ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನ
ಸುದ್ದಿದಿನ,ದಾವಣಗೆರೆ : ಕುವೆಂಪು ವಿಶ್ವವಿದ್ಯಾನಿಲಯ ಶಂಕರಘಟ್ಟ, ಶಿವಮೊಗ್ಗ ಇವರ ಆಶ್ರಯದಲ್ಲಿ ಜರುಗಿದ ದಕ್ಷಿಣ ವಲಯದ ಅಂತರ ವಿಶ್ವವಿದ್ಯಾನಿಲಯಲ್ಲಿ ಪಂದ್ಯಾವಳಿಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದ ಪುರುಷರ ಖೋ-ಖೋ ತಂಡ ತೃತೀಯ ಸ್ಥಾನವನ್ನು ಪಡೆದಿದೆ ಹಾಗೂ ಅಖಿಲಭಾರತ ಅಂತರ ವಿಶ್ವವಿದ್ಯಾನಿಲಯ ಪಂದ್ಯಾವಳಿಯಲ್ಲಿ ತೃತೀಯ ಸ್ಥಾನವನ್ನು ಪಡೆದಿದೆ.
ತಂಡದ ಎಲ್ಲಾ ಆಟಗಾರರಿಗೆ ಮತ್ತು ತಂಡದ ಮ್ಯಾನೇಜರ್ ಬಸವರಾಜ್ ವಿ ದಮ್ಮಳ್ಳಿ, ತಂಡದ ಕೋಚ್ ಹೆಚ್.ತಿಪ್ಪೇಸ್ವಾಮಿಯವರಿಗೆ, ಕುಲಪತಿಗಳಾದ ಪ್ರೊ.ಎಸ್.ವಿ. ಹಲಸೆ, ಕುಲಸಚಿವರಾದ ಪ್ರೊ. ಬಸವರಾಜ್ ಬಣಕಾರ್, ಪರೀಕ್ಷಾಂಗ ಕುಲಸಚಿವೆ ಪ್ರೊ.ಅನಿತಾ ಹೆಚ್.ಎಸ್. ಹಾಗೂ ಕಲಾ ನಿಕಾಯದ ಡೀನ್ ಡಾ. ಕೆ.ಬಿ. ರಂಗಪ್ಪ, ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎಂ.ಎಸ್. ರಾಜ್ಕುಮಾರ್ ಹಾಗೂ ವಿಶ್ವವಿದ್ಯಾನಿಲಯ ಅಧಿಕಾರಿ ವೃಂದದವರು ಉಪಸ್ಥಿತರಿದ್ದು ಅಭಿನಂದಿಸಿದ್ದಾರೆ ಎಂದು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ನಿರ್ದೇಶಕ ಎಂ.ಎಸ್. ರಾಜಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243