ದಿನದ ಸುದ್ದಿ
ಸಿಎಂ ಯಡಿಯೂರಪ್ಪ ಭೇಟಿ ಮಾಡಿದ ಕಿಚ್ಚ ಸುದೀಪ..!
ಸುದ್ದಿದಿನ,ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನ ಭೇಟಿಯಾದರು. ಕೇವಲ ಇದೊಂದು ಅನೌಪಚಾರಿಕ ಭೇಟಿ ಎನ್ನಲಾಗಿದ್ದು, ಇತ್ತೀಚೆಗೆ, ಕಿಚ್ಚ ಸುದೀಪ್ ಚಿತ್ರರಂಗಕ್ಕೆ ಕಾಲಿಟ್ಟು 25 ವರ್ಷ ಪೂರೈಸಿದ ಸಂಭ್ರಮಾಚರಣೆ ವೇಳೆ ಸಿಎಂ ಯಡಿಯೂರಪ್ಪ ಸುದೀಪ್ ಅವರನ್ನು ಸನ್ಮಾನಿಸಿದ್ದರು.
ಇದನ್ನೂ ಓದಿ | ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣು
ಈ ಹಿನ್ನೆಲೆ ಇಂದು (ಗುರುವಾರ) ಕಿಚ್ಚ ಸ್ವತಃ ಯಡಿಯೂರಪ್ಪ ಅವರ ಮನೆಗೆ ಬಂದು ಅಭಿನಂದನೆ ತಿಳಿಸಿ, ಕೆಲ ಕಾಲ ಮಾತುಕತೆ ನಡೆಸಿದ ಅವರು ಸಿಎಂ ಬಿಎಸ್ ಯಡಿಯೂರಪ್ಪಗೆ ಶಾಲು ಹೊದಿಸಿ, ಹಾರ ಹಾಕಿ ಸನ್ಮಾನಿಸಿದರು. ಈ ವೇಳೆ ರಾಜ್ಯ ಬಿಜೆಪಿ ಉಪಾಧ್ಯಕ್ಷ, ಬಿಎಸ್ವೈ ಪುತ್ರ ಬಿ.ವೈ ವಿಜಯೇಂದ್ರ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243