ದಿನದ ಸುದ್ದಿ
ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಹಗಲು ದರೋಡೆ ; ಹಣ ಕೊಡದಿದ್ರೆ ಪರೀಕ್ಷೇಲಿ ಫೇಲ್ ..! ವಿದ್ಯಾರ್ಥಿಗಳ ಗೋಳು ಕೇಳೋರ್ ಯಾರು..? ಓದಿ ಈ ಸ್ಟೋರಿ..!
- ವಿಶೇಷ ವರದಿ : ಗಿರೀಶ್ ಕುಮಾರ್, ಬಳ್ಳಾರಿ
ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ನಗರದ ಕಿಷ್ಕಿಂದ ವಿಶ್ವವಿದ್ಯಾಲಯ ಆರಂಭವಾಗಿ ಎರಡು ವರ್ಷ ಕಳೆದಿಲ್ಲ, ಆಗಾಲೇ ವಿದ್ಯಾರ್ಥಿಗಳಿಗೆ ಡೋನೇಷನ್ ಹಾವಾಳಿ ಹೆಚ್ಚಾಗಿದೆ. ಚೆನ್ನಾಗಿ ಪರೀಕ್ಷೆ ಬರೆದರು, 4-5 ಪುಟಗಳ ಮೌಲ್ಯಮಾಪನ ಮಾಡದೇ ಇರೋದು. ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ನಕಲು ಪ್ರತಿ ಕೇಳಿದರೇ ಕೊಡೀದಿಲ್ಲ ಎನ್ನುವ ಬಹು ದೊಡ್ಡ ಆರೋಪ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಂದ ಕೇಳಿಬಂದಿದೆ.
ಹಾಜರಾತಿ 85 ಶೇಕಡ ಏಕೆ..?
ಈ ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ದೇಶದ ಯಾವುದೇ ವಿಶ್ವವಿದ್ಯಾಲಯದಲ್ಲಿ ಇರದೇ ಇರೋ ನಿಯಮಗಳು ಇಲ್ಲಿ ಇದೆ. ರಾಜ್ಯ ಮತ್ತು ದೇಶದ ವಿಶ್ವವಿದ್ಯಾಲಯಗಳಲ್ಲಿ ಪ್ರತಿಯೊಂದು ವಿದ್ಯಾರ್ಥಿಗೆ ಶೇಕಡ 75 ಹಾಜರಾಗಿ ಇದ್ದರೆ, ಈ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ 85 ಶೇಕಡಾ ಹಾಜರಾತಿ ಅಂತೆ, ಇಲ್ಲದಿದ್ದರೇ ದಂಡ ಹಾಕುತ್ತಾರೆ ಎನ್ನುವ ಆರೋಪ ಸಹ ಇದೆ. ಪರೀಕ್ಷೆ ಸಮಯದಲ್ಲಿ ದಂಡದ ಹಣ ನೀಡದಿದ್ದರೆ ಹಾಲ್ ಟಿಕೆಟ್ ಕೊಡಲ್ಲವಂತೆ.
ನಗದು ಹಣ 60 ಸಾವಿರ ಡೋನೆಷನ್ ನೀಡಲು ಒತ್ತಾಯ
ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಓದುವ ವಿದ್ಯಾರ್ಥಿಗಳಿಗೆ 1 ಲಕ್ಷ 60 ಸಾವಿರ ಆನ್ ಲೈನ್ ಮೂಲಕ ಶುಲ್ಕ ಪಾವತಿ ಮಾಡಿಸಿಕೊಂಡು ನಂತರ ಪರೀಕ್ಷೆ ಹತ್ತಿರ ಬರುವ ಮುಂಚೆಯೇ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ 60 ಸಾವಿರ ನಗದು ರೂಪಾಯಿ ಹಣವನ್ನು ನೀಡಬೇಕೆಂದು ಒತ್ತಾಯ ಮಾಡುತ್ತಾರೆ, ಹಣ ಕಟ್ಟದಿದ್ದರೆ ಪರೀಕ್ಷೆಯಲ್ಲಿ ಅನುತ್ತೀರ್ಣಾ ಮಾಡುತ್ತಾರೆ ಎನ್ನುವ ಆರೋಪ ಇದೆ. ಒಂದು ಪರೀಕ್ಷೆ ಅನುತ್ತಿಣಾ ಹೊಂದಿದ್ದರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಅದಕ್ಕೆ ಪ್ರತ್ಯೇಕವಾಗಿ ಹಣವನ್ನು ಕಟ್ಟಬೇಕು ಅದು ಸಹ ದುಬಾರಿ ಇದೆ. ಒಂದು ವಿಷಯಕ್ಕೆ ಒಬ್ಬ ವಿದ್ಯಾರ್ಥಿಗೆ 700 ರೂಪಾಯಿ ಪಾವತಿಸಬೇಕು.
ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ
ಕಿಷ್ಕಿಂದ ವಿಶ್ವವಿದ್ಯಾಲಯ ಆಗಿರುವುದರಿಂದ ಇಲ್ಲಯೇ ಪ್ರಶ್ನೆ ಪತ್ರಿಕೆ ತಯಾರಾಗುತ್ತದೆ ಹಾಗೇಯೇ ಇಲ್ಲಿಯ ಉಪನ್ಯಾಸಕರು ಮೌಲ್ಯಮಾಪನ ಮಾಡುತ್ತಾರೆ ಆದರೆ ಈ ಉಪನ್ಯಾಸಕರು ಮೇಲೆ ಆಡಳಿತ ಮಂಡಳಿ ವಿ.ವಿ ಒತ್ತಾಯ ಇದೆಯೇ ಎನ್ನುವ ಪ್ರಶ್ನೆ ಕಾಡುತ್ತದೆ.
ಇನ್ನು ಮೂರು – ನಾಲ್ಕು ವರ್ಷ ಹೇಗೆ ? ಓದು ಪೂರ್ಣಗೊಳಿಸಬೇಕು ಅನ್ನೋ ಭಯ
ಈ ಕಿಷ್ಕಿಂದ ವಿಶ್ವವಿದ್ಯಾಲಯ ಬಳ್ಳಾರಿ ನಗರದಲ್ಲಿ ಹೊಸದಾಗಿ ಆರಂಭವಾಗಿದೆ. ಕಡಿಮೆ ಹಣ ಎಂದು ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಇನ್ನು ನಮ್ಮ ಮಕ್ಕಳು ವಿದ್ಯಾಭ್ಯಾಸ ಗತಿ ಹೇಗೆ ? ಎಂದು ಭಯದ ವಾತಾವರಣದಲ್ಲಿ ಇದ್ದಾರೆ.
10 ಲಕ್ಷ ಕಟ್ಟಿ ಹೋಗಿ ಎನ್ನುವ ವಿವಿಯ ಅಧಿಕಾರಿಗಳು
ಇನ್ನು ಈ ವಿಚಾರವಾಗಿ ಕಿಷ್ಕಿಂದ ವಿಶ್ವವಿದ್ಯಾಲಯದ ಪ್ರವೇಶ ಪಡೆದ ನೂರಾರು ವಿದ್ಯಾರ್ಥಿಗಳು ಈ ಡೋನೇಷನ್, ಶುಲ್ಕ, ಇನ್ನಿತರ ದಂಡಗಳನ್ನು ಪಡೆಯಲು ಹಾಗೂ ಹಗಲು ದರೋಡೆ ಮಾಡುತ್ತಿದ್ದಾರೆ. ವಿವಿ ಬಿಟ್ಟು ಹೋಗಲು ನಿರ್ಧರಿಸಿದ ವಿದ್ಯಾರ್ಥಿಗಳಿಗೆ ಉಳಿದ ವರ್ಷದ 10 ಲಕ್ಷ ಹಣ ಕಟ್ಟಿ ಹೋಗಿ ಎಂದು ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಆರೋಪ ಸಹ ಇದೆ.
ಇನ್ನು ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ನಿಮ್ಮನೆಲ್ಲಾ ಫೇಲ್ ಮಾಡಿದರೇ ವಿಶ್ವವಿದ್ಯಾಲಯ ನಡೆಯೋದ್ ಹೇಗೆ ? ನಮಗೆ ಸಂಬಳ ಕೊಡೋರ್ ಯಾರು ? ಎಂದು ವಿದ್ಯಾರ್ಥಿಗಳಿಗೆ ಉತ್ತರಿಸಿದ್ದು ಸಹ ನಾಚಿಕೆಗೆಡಿನ ಸಂಗತಿಯಾಗಿದೆ. ಇನ್ನು ದುಡ್ಡು ಕೊಟ್ಟರೆ ಮಾತ್ರ ವಿದ್ಯಾರ್ಥಿಗಳು ಪಾಸು ಎನ್ನುವ ಮಾತು ಪೋಷಕರಿಂದ ಕೇಳಿಬಂದಿದೆ.
ಇನ್ನು ಪೋಷಕರು ಈ ಕಿಷ್ಕಿಂದ ವಿಶ್ವವಿದ್ಯಾಲಯ ಹೊಸದಾಗಿ ಆರಂಭಾಗಿದೆ, ಕಡಿಮೆ ಶುಲ್ಕ ಇದೆ ಎಂದು ಪ್ರವೇಶಾತಿ ಪಡೆದಿದ್ದಾರೆ ಆದರೆ ಈ ವಿವಿಯಲ್ಲಿ ನಿರಂತರವಾಗಿ ಪೋಷಕರಿಂದ ಹಣವನ್ನು ಕೀಳುತ್ತಿದ್ದಾರೆ. ಈಗಲಾದರೂ ಪೋಷಕರು ಎಚ್ಚೆತ್ತುಕೊಳ್ಳಬೇಕಿದೆ.
ಇನ್ನು ಈ ವಿಚಾರವಾಗಿ ದೂರವಾಣಿ ಕರೆ ಮಾಡಿ ಮಾತನಾಡಿದ ಕಿಷ್ಕಿಂದ ವಿಶ್ವವಿದ್ಯಾಲಯ ಅಮರೇಶಯ್ಯ ಅವರು ಇಲ್ಲ ನಮ್ಮಲ್ಲಿ ಹಾಗೇನು ನಡೆದಿಲ್ಲ, ಡೊನೆಷನ್ ತೆಗೆದುಕೊಳ್ಳುವುದಿಲ್ಲ, ವಿವಿಗೆ ಕಟ್ಟಿದ ಶುಲ್ಕ ನೇರವಾಗಿ ಪೋಷಕರಿಗೆ ಮೆಸೇಜ್ ಹೋಗುತ್ತದೆ ಎಂದರು.
ಇದರಲ್ಲಿ ಯಾರು ಸುಳ್ಳುರು ಎನ್ನುವ ಅಂಶ ಹೊರಗಡೆ ಬರಲಿ
ಇನ್ನು ಕಿಷ್ಕಿಂದ ಟ್ರಸ್ಟ್ ಮೌನಕ್ಕೆ ಜಾರಿದೆಯೇ ಕಾದು ನೋಡಬೇಕಿದೆ. ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ವಿವಿಯ ಕುಲಪತಿಯಾದ ಶ್ರೀ ರಾಜ್ಯಪಾಲರು ಯಾವ ರೀತಿಯ ಕ್ರಮ ತೆಗೆದುಕೊಳ್ಳುತ್ತಾರೋ..?
ಒಟ್ಟಾರೆಯಾಗಿ ಹೊಸ ವಿಶ್ವವಿದ್ಯಾಲಯ ಆರಂಭವಾಗಿ ಅಭಿವೃದ್ಧಿ ಹೊಂದಬೇಕು ಹಾಗೂ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಅನುಕೂಲಕರವಾಗ ಬೇಕು ಎನ್ನುವುದು ನಮ್ಮ ಆಶಯ.
- ಆರಂಭದಲ್ಲಿ 1.65 ಲಕ್ಷ ಹಣ ಕಟ್ಟಿದ್ದೆವೆ, ಆದರೆ 60 ಸಾವಿರ ಡೋನೇಷನ್ ನಗದು ಹಣ ತಂದು ಕೊಡು ಅಂತ ಹೇಳ್ತಾರೆ, ಉತ್ತರ ಪತ್ರಿಕೆ ಸರಿಯಾಗಿ ಮೌಲ್ಯ ಮಾಪನ ಮಾಡೊಲ್ಲ, ಫೇಲ್ ಮಾಡ್ತಾರೆ, ಉತ್ತರ ಪತ್ರಿಕೆ ನಕಲು ಪ್ರತಿ ಕೇಳಿದ್ರೆ ಕೊಡೋದಿಲ್ಲ, ಮತ್ತೆ ಪರೀಕ್ಷೆ ಬರೆದಿದ್ದೆವೆ, 85 ರಷ್ಟು ಹಾಜರಾತಿ ಕಡ್ಡಾಯ ಎಂದು ಕಿಷ್ಕಿಂದ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ಅವರು ಪೋಷಕರು ಅವರಿಗೆ ಆದ ನೋವನ್ನು ಹೇಳಿಕೊಂಡಿದ್ದಾರೆ.
|ನೊಂದ ವಿದ್ಯಾರ್ಥಿಗಳು, ಪೋಷಕರು, ಬಳ್ಳಾರಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಆಯುರ್ವೇದ ಆರೋಗ್ಯಕರ ಜೀವನ ಶೈಲಿ
ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ತಿಳಿಸಿದರು.
ಅವರು ಶನಿವಾರ ತಪೋವನ ಆಯುರ್ವೇದ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಹಾಗೂ ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಸಂಸ್ಥೆಯು ಏರ್ಪಡಿಸಿದ್ದ ದ್ವಿತೀಯ ಘಟಿಕೋತ್ಸವ ಸಮಾರಂಭವನ್ನು ಉದ್ಪಾಟಿಸಿ ಮಾತನಾಡಿದರು.
ಈಗಿನ ದಿನಮಾನಗಳಲ್ಲಿ ಇಡೀ ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿದ್ದು, ಇಂತಹ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ, ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ತಿಳಿಸಿದರು.
ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ. ಜಗತ್ತು ಮಾನಸಿಕ ಒತ್ತಡ ಹಾಗೂ ಪರಿಸರ ಸವಾಲುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಆಯುರ್ವೇದ, ಯೋಗ ಮತ್ತು ನೈಸರ್ಗಿಕ ಚಿಕಿತ್ಸಾ ಪದ್ಧತಿಗಳ ಪ್ರಸ್ತುತತೆ ಹಾಗೂ ಮಹತ್ವ ಮತ್ತಷ್ಟು ಹೆಚ್ಚಾಗಿದೆ ಎಂದು ತಿಳಿಸಿದರು.
ಆಧುನಿಕ ತಂತ್ರಜ್ಞಾನ, ಕೃತಕ ಬುದ್ಧಿಮತ್ತೆ (AI) ಮತ್ತು ಡಿಜಿಟಲ್ ಆರೋಗ್ಯ ಸೇವೆಗಳು ಇಂದಿನ ವೈದ್ಯಕೀಯ ಕ್ಷೇತ್ರದ ಚಿತ್ರಣವನ್ನೇ ಸಂಪೂರ್ಣವಾಗಿ ಬದಲಾಯಿಸುತ್ತಿವೆ. ಇಂತಹ ತಾಂತ್ರಿಕ ಕ್ರಾಂತಿಯ ಯುಗದಲ್ಲಿ ಪದವಿ ಪಡೆದು ಹೊರಬರುತ್ತಿರುವ ನೂತನ ವೈದ್ಯರು ಕೇವಲ ಸಾಂಪ್ರದಾಯಿಕ ವೈದ್ಯಕೀಯ ಜ್ಞಾನಕ್ಕೆ ಸೀಮಿತವಾಗದೆ, ಆಧುನಿಕ ವಿಜ್ಞಾನದ ನೂತನ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವ ಮೂಲಕ ಉಭಯ ಕ್ಷೇತ್ರಗಳ ನಡುವೆ ಬಲವಾದ ಸೇತುವೆಯಾಗಿ ಕೆಲಸ ಮಾಡಬೇಕಾದ ತುರ್ತು ಅಗತ್ಯವಿದೆ ಎಂದರು.
ಕೃತಕ ಬುದ್ಧಿಮತ್ತೆಯು ರೋಗನಿರ್ಣಯವನ್ನು ಹೆಚ್ಚು ನಿಖರ ಹಾಗೂ ವೇಗವಾಗಿಸಲು ನೆರವಾದರೆ, ಡಿಜಿಟಲ್ ಆರೋಗ್ಯ ಸೇವೆಗಳು ದೂರದ ಊರುಗಳಿಗೂ ಚಿಕಿತ್ಸೆಯನ್ನು ತಲುಪಿಸಲು ಸಹಕಾರಿಯಾಗಿವೆ. ಆದ್ದರಿಂದ, ಹೊಸ ತಲೆಮಾರಿನ ವೈದ್ಯರು ಕೇವಲ ದಿನನಿತ್ಯದ ಕ್ಲಿನಿಕ್ ಅಥವಾ ಆಸ್ಪತ್ರೆಯ ಚಿಕಿತ್ಸೆಗೆ ಸೀಮಿತವಾಗದೆ, ತಂತ್ರಜ್ಞಾನದ ದತ್ತಾಂಶಗಳನ್ನು ಬಳಸಿಕೊಂಡು ಹೊಸ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಉತ್ತಮ ಸಂಶೋಧಕರಾಗಬೇಕು. ಇದರೊಂದಿಗೆ, ಸಮಾಜದಲ್ಲಿ ತಂತ್ರಜ್ಞಾನ ಮತ್ತು ಆರೋಗ್ಯದ ಕುರಿತು ಇರುವ ತಪ್ಪು ಕಲ್ಪನೆಗಳನ್ನು ದೂರಾಗಿಸಿ, ಮಾನವೀಯ ಕಾಳಜಿಯೊಂದಿಗೆ ಜನರನ್ನು ಸನ್ಮಾರ್ಗದಲ್ಲಿ ಮುನ್ನಡೆಸುವ ನೈಜ ಮಾರ್ಗದರ್ಶಕರಾಗಿ ಹೊರಹೊಮ್ಮಬೇಕಿದೆ ಎಂದು ತಿಳಿಸಿದರು.
ವೈದ್ಯಕೀಯ ಸೇವೆಯು ಅತ್ಯಂತ ಪವಿತ್ರವಾದ ಮಾನವೀಯ ಸೇವೆಯಾಗಿದೆ. ರೋಗಿಗಳಿಗೆ ಔಷಧಿಗಿಂತ ಮುಂಚಿತವಾಗಿ ವೈದ್ಯರ ಪ್ರೀತಿಯ ನುಡಿಗಳು ಹಾಗೂ ಸಕಾರಾತ್ಮಕ ನಡವಳಿಕೆಯ ಅಗತ್ಯವಿರುತ್ತದೆ. ಆದ್ದರಿಂದ ವೈದ್ಯರು ತಮ್ಮ ವೃತ್ತಿ ಜೀವನದಲ್ಲಿ ಮಾನವೀಯ ಮೌಲ್ಯಗಳಿಗೆ ಮೊದಲ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ಆಯುಷ್ ಮಂತ್ರಾಲಯವು ಸಾಂಪ್ರದಾಯಿಕ ಚಿಕಿತ್ಸಾ ಪದ್ಧತಿಗಳ ಅಭಿವೃದ್ಧಿಗೆ ಶ್ರಮಿಸುತ್ತಿದ್ದು, ಗುಜರಾತ್ನ ಜಾಮ್ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ, ಗ್ಲೋಬಲ್ ಟ್ರೆಡಿಷನಲ್ ಮೆಡಿಸಿನ್ ಸೆಂಟರ್’ ಸ್ಥಾಪಿಸುತ್ತಿದೆ ಎಂದು ತಿಳಿಸಿದರು.
ರಾಜ್ಯಸಭಾ ಸದಸ್ಯರಾದ ಶ್ರೀ ನಾರಾಯಣಸಾ ಭಾಂಡಗೆ, ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಮಾಜಿ ಡೀನ್ ಡಾ: ಶ್ರೀನಿವಾಸ್ ಬನ್ನಿಗೊಳ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಎಸ್.ವಿ.ಹಲಸೆ, ತಪೋವನ ಸಂಸ್ಥೆಯ ಅಧ್ಯಕ್ಷ ಡಾ. ಶಶಿಕುಮಾರ್ ವಿ.ಎಂ, ಆಯುರ್ವೇದ ಕಾಲೇಜಿನ ಪ್ರಾಚಾರ್ಯರಾದ ಡಾ. ಅಶ್ವಿನಿ ಕೆ.ಆರ್., ಡಾ.ಸುಮನ ಭಟ್ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243


