Connect with us

ದಿನದ ಸುದ್ದಿ

ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಹಗಲು ದರೋಡೆ ; ಹಣ ಕೊಡದಿದ್ರೆ ಪರೀಕ್ಷೇಲಿ ಫೇಲ್ ..! ವಿದ್ಯಾರ್ಥಿಗಳ ಗೋಳು ಕೇಳೋರ್ ಯಾರು..? ಓದಿ ಈ ಸ್ಟೋರಿ..!

Published

on

  • ವಿಶೇಷ ವರದಿ : ಗಿರೀಶ್ ಕುಮಾರ್, ಬಳ್ಳಾರಿ

ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ನಗರದ ಕಿಷ್ಕಿಂದ ವಿಶ್ವವಿದ್ಯಾಲಯ ಆರಂಭವಾಗಿ ಎರಡು ವರ್ಷ ಕಳೆದಿಲ್ಲ, ಆಗಾಲೇ ವಿದ್ಯಾರ್ಥಿಗಳಿಗೆ ಡೋನೇಷನ್ ಹಾವಾಳಿ ಹೆಚ್ಚಾಗಿದೆ. ಚೆನ್ನಾಗಿ ಪರೀಕ್ಷೆ ಬರೆದರು, 4-5 ಪುಟಗಳ ಮೌಲ್ಯಮಾಪನ ಮಾಡದೇ ಇರೋದು. ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ನಕಲು ಪ್ರತಿ ಕೇಳಿದರೇ ಕೊಡೀದಿಲ್ಲ ಎನ್ನುವ ಬಹು ದೊಡ್ಡ ಆರೋಪ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಂದ ಕೇಳಿಬಂದಿದೆ.

ಹಾಜರಾತಿ 85 ಶೇಕಡ ಏಕೆ..?

ಈ ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ದೇಶದ ಯಾವುದೇ ವಿಶ್ವವಿದ್ಯಾಲಯದಲ್ಲಿ ಇರದೇ ಇರೋ ನಿಯಮಗಳು ಇಲ್ಲಿ ಇದೆ. ರಾಜ್ಯ ಮತ್ತು ದೇಶದ ವಿಶ್ವವಿದ್ಯಾಲಯಗಳಲ್ಲಿ ಪ್ರತಿಯೊಂದು ವಿದ್ಯಾರ್ಥಿಗೆ ಶೇಕಡ 75 ಹಾಜರಾಗಿ ಇದ್ದರೆ, ಈ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ 85 ಶೇಕಡಾ ಹಾಜರಾತಿ ಅಂತೆ, ಇಲ್ಲದಿದ್ದರೇ ದಂಡ ಹಾಕುತ್ತಾರೆ ಎನ್ನುವ ಆರೋಪ ಸಹ ಇದೆ. ಪರೀಕ್ಷೆ ಸಮಯದಲ್ಲಿ ದಂಡದ ಹಣ ನೀಡದಿದ್ದರೆ ಹಾಲ್ ಟಿಕೆಟ್ ಕೊಡಲ್ಲವಂತೆ.

ನಗದು ಹಣ 60 ಸಾವಿರ ಡೋನೆಷನ್ ನೀಡಲು ಒತ್ತಾಯ

ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಓದುವ ವಿದ್ಯಾರ್ಥಿಗಳಿಗೆ 1 ಲಕ್ಷ 60 ಸಾವಿರ ಆನ್ ಲೈನ್ ಮೂಲಕ ಶುಲ್ಕ ಪಾವತಿ ಮಾಡಿಸಿಕೊಂಡು ನಂತರ ಪರೀಕ್ಷೆ ಹತ್ತಿರ ಬರುವ ಮುಂಚೆಯೇ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ 60 ಸಾವಿರ ನಗದು ರೂಪಾಯಿ ಹಣವನ್ನು ನೀಡಬೇಕೆಂದು ಒತ್ತಾಯ ಮಾಡುತ್ತಾರೆ, ಹಣ ಕಟ್ಟದಿದ್ದರೆ ಪರೀಕ್ಷೆಯಲ್ಲಿ ಅನುತ್ತೀರ್ಣಾ ಮಾಡುತ್ತಾರೆ ಎನ್ನುವ ಆರೋಪ ಇದೆ. ಒಂದು ಪರೀಕ್ಷೆ ಅನುತ್ತಿಣಾ ಹೊಂದಿದ್ದರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಅದಕ್ಕೆ ಪ್ರತ್ಯೇಕವಾಗಿ ಹಣವನ್ನು ಕಟ್ಟಬೇಕು ಅದು ಸಹ ದುಬಾರಿ ಇದೆ. ಒಂದು ವಿಷಯಕ್ಕೆ ಒಬ್ಬ ವಿದ್ಯಾರ್ಥಿಗೆ 700 ರೂಪಾಯಿ ಪಾವತಿಸಬೇಕು.

ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ

ಕಿಷ್ಕಿಂದ ವಿಶ್ವವಿದ್ಯಾಲಯ ಆಗಿರುವುದರಿಂದ ಇಲ್ಲಯೇ ಪ್ರಶ್ನೆ ಪತ್ರಿಕೆ ತಯಾರಾಗುತ್ತದೆ ಹಾಗೇಯೇ ಇಲ್ಲಿಯ ಉಪನ್ಯಾಸಕರು ಮೌಲ್ಯಮಾಪನ ಮಾಡುತ್ತಾರೆ ಆದರೆ ಈ ಉಪನ್ಯಾಸಕರು ಮೇಲೆ ಆಡಳಿತ ಮಂಡಳಿ ವಿ.ವಿ ಒತ್ತಾಯ ಇದೆಯೇ ಎನ್ನುವ ಪ್ರಶ್ನೆ ಕಾಡುತ್ತದೆ.

ಇನ್ನು ಮೂರು – ನಾಲ್ಕು ವರ್ಷ ಹೇಗೆ ? ಓದು ಪೂರ್ಣಗೊಳಿಸಬೇಕು ಅನ್ನೋ ಭಯ

ಈ ಕಿಷ್ಕಿಂದ ವಿಶ್ವವಿದ್ಯಾಲಯ ಬಳ್ಳಾರಿ ನಗರದಲ್ಲಿ ಹೊಸದಾಗಿ ಆರಂಭವಾಗಿದೆ. ಕಡಿಮೆ ಹಣ ಎಂದು ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಇನ್ನು ನಮ್ಮ ಮಕ್ಕಳು ವಿದ್ಯಾಭ್ಯಾಸ ಗತಿ ಹೇಗೆ ? ಎಂದು ಭಯದ ವಾತಾವರಣದಲ್ಲಿ‌ ಇದ್ದಾರೆ.

10 ಲಕ್ಷ ಕಟ್ಟಿ ಹೋಗಿ ಎನ್ನುವ ವಿವಿಯ ಅಧಿಕಾರಿಗಳು

ಇನ್ನು ಈ ವಿಚಾರವಾಗಿ ಕಿಷ್ಕಿಂದ ವಿಶ್ವವಿದ್ಯಾಲಯದ ಪ್ರವೇಶ ಪಡೆದ ನೂರಾರು ವಿದ್ಯಾರ್ಥಿಗಳು ಈ ಡೋನೇಷನ್, ಶುಲ್ಕ, ಇನ್ನಿತರ ದಂಡಗಳನ್ನು ಪಡೆಯಲು ಹಾಗೂ ಹಗಲು ದರೋಡೆ ಮಾಡುತ್ತಿದ್ದಾರೆ. ವಿವಿ ಬಿಟ್ಟು ಹೋಗಲು ನಿರ್ಧರಿಸಿದ ವಿದ್ಯಾರ್ಥಿಗಳಿಗೆ ಉಳಿದ ವರ್ಷದ 10 ಲಕ್ಷ ಹಣ ಕಟ್ಟಿ ಹೋಗಿ ಎಂದು ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಆರೋಪ ಸಹ ಇದೆ.

ಇನ್ನು ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ನಿಮ್ಮನೆಲ್ಲಾ ಫೇಲ್ ಮಾಡಿದರೇ ವಿಶ್ವವಿದ್ಯಾಲಯ ನಡೆಯೋದ್ ಹೇಗೆ ? ನಮಗೆ ಸಂಬಳ ಕೊಡೋರ್ ಯಾರು ? ಎಂದು ವಿದ್ಯಾರ್ಥಿಗಳಿಗೆ ಉತ್ತರಿಸಿದ್ದು ಸಹ ನಾಚಿಕೆಗೆಡಿನ ಸಂಗತಿಯಾಗಿದೆ. ಇನ್ನು ದುಡ್ಡು ಕೊಟ್ಟರೆ ಮಾತ್ರ ವಿದ್ಯಾರ್ಥಿಗಳು ಪಾಸು ಎನ್ನುವ ಮಾತು ಪೋಷಕರಿಂದ ಕೇಳಿಬಂದಿದೆ.

ಇನ್ನು ಪೋಷಕರು ಈ ಕಿಷ್ಕಿಂದ ವಿಶ್ವವಿದ್ಯಾಲಯ ಹೊಸದಾಗಿ ಆರಂಭಾಗಿದೆ, ಕಡಿಮೆ ಶುಲ್ಕ ಇದೆ ಎಂದು ಪ್ರವೇಶಾತಿ ಪಡೆದಿದ್ದಾರೆ ಆದರೆ ಈ ವಿವಿಯಲ್ಲಿ ನಿರಂತರವಾಗಿ ಪೋಷಕರಿಂದ ಹಣವನ್ನು ಕೀಳುತ್ತಿದ್ದಾರೆ. ಈಗಲಾದರೂ ಪೋಷಕರು ಎಚ್ಚೆತ್ತುಕೊಳ್ಳಬೇಕಿದೆ.

ಇನ್ನು ಈ ವಿಚಾರವಾಗಿ ದೂರವಾಣಿ ಕರೆ ಮಾಡಿ ಮಾತನಾಡಿದ ಕಿಷ್ಕಿಂದ ವಿಶ್ವವಿದ್ಯಾಲಯ ಅಮರೇಶಯ್ಯ ಅವರು ಇಲ್ಲ ನಮ್ಮಲ್ಲಿ ಹಾಗೇನು ನಡೆದಿಲ್ಲ, ಡೊನೆಷನ್ ತೆಗೆದುಕೊಳ್ಳುವುದಿಲ್ಲ, ವಿವಿಗೆ ಕಟ್ಟಿದ ಶುಲ್ಕ ನೇರವಾಗಿ ಪೋಷಕರಿಗೆ ಮೆಸೇಜ್ ಹೋಗುತ್ತದೆ ಎಂದರು.

ಇದರಲ್ಲಿ ಯಾರು ಸುಳ್ಳುರು ಎನ್ನುವ ಅಂಶ ಹೊರಗಡೆ ಬರಲಿ

ಇನ್ನು ಕಿಷ್ಕಿಂದ ಟ್ರಸ್ಟ್ ಮೌನಕ್ಕೆ ಜಾರಿದೆಯೇ ಕಾದು ನೋಡಬೇಕಿದೆ. ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ವಿವಿಯ ಕುಲಪತಿಯಾದ ಶ್ರೀ ರಾಜ್ಯಪಾಲರು ಯಾವ ರೀತಿಯ ಕ್ರಮ ತೆಗೆದುಕೊಳ್ಳುತ್ತಾರೋ..?

ಒಟ್ಟಾರೆಯಾಗಿ ಹೊಸ ವಿಶ್ವವಿದ್ಯಾಲಯ ಆರಂಭವಾಗಿ ಅಭಿವೃದ್ಧಿ ಹೊಂದಬೇಕು ಹಾಗೂ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಅನುಕೂಲಕರವಾಗ ಬೇಕು ಎನ್ನುವುದು ನಮ್ಮ ಆಶಯ.


  • ಆರಂಭದಲ್ಲಿ 1.65 ಲಕ್ಷ ಹಣ ಕಟ್ಟಿದ್ದೆವೆ, ಆದರೆ 60 ಸಾವಿರ ಡೋನೇಷನ್ ನಗದು ಹಣ ತಂದು ಕೊಡು ಅಂತ ಹೇಳ್ತಾರೆ, ಉತ್ತರ ಪತ್ರಿಕೆ ಸರಿಯಾಗಿ ಮೌಲ್ಯ ಮಾಪನ ಮಾಡೊಲ್ಲ, ಫೇಲ್ ಮಾಡ್ತಾರೆ, ಉತ್ತರ ಪತ್ರಿಕೆ ನಕಲು ಪ್ರತಿ ಕೇಳಿದ್ರೆ ಕೊಡೋದಿಲ್ಲ, ಮತ್ತೆ ಪರೀಕ್ಷೆ ಬರೆದಿದ್ದೆವೆ, 85 ರಷ್ಟು ಹಾಜರಾತಿ ಕಡ್ಡಾಯ ಎಂದು ಕಿಷ್ಕಿಂದ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ಅವರು ಪೋಷಕರು ಅವರಿಗೆ ಆದ ನೋವನ್ನು ಹೇಳಿಕೊಂಡಿದ್ದಾರೆ.

|ನೊಂದ ವಿದ್ಯಾರ್ಥಿಗಳು, ಪೋಷಕರು, ಬಳ್ಳಾರಿ


ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

ದಿನದ ಸುದ್ದಿ

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

Published

on

ಸೆ.10 ರಂದು ವಿಧಾನಸೌಧದಲ್ಲಿ ಶತದಿನೋತ್ಸವ ಸಮಾರಂಭ; ಮಾಜಿ ಸಿಎಂ ಸಿದ್ದರಾಮಯ್ಯರಿಂದ ಉದ್ಘಾಟನೆ, ಗ್ಯಾರಂಟಿ ಫಲಾನುಭವಿಗಳೊಂದಿಗೆ ಸಿಎಂ ಡಿ.ಕೆ. ಶಿವಕುಮಾರ್ ಸಂವಾದ

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

 

ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.

ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:

ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.

http://Visit : www.suddidina.com

ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ

ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.

100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

Continue Reading

Trending