Connect with us

ದಿನದ ಸುದ್ದಿ

ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಹಗಲು ದರೋಡೆ ; ಹಣ ಕೊಡದಿದ್ರೆ ಪರೀಕ್ಷೇಲಿ ಫೇಲ್ ..! ವಿದ್ಯಾರ್ಥಿಗಳ ಗೋಳು ಕೇಳೋರ್ ಯಾರು..? ಓದಿ ಈ ಸ್ಟೋರಿ..!

Published

on

  • ವಿಶೇಷ ವರದಿ : ಗಿರೀಶ್ ಕುಮಾರ್, ಬಳ್ಳಾರಿ

ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ನಗರದ ಕಿಷ್ಕಿಂದ ವಿಶ್ವವಿದ್ಯಾಲಯ ಆರಂಭವಾಗಿ ಎರಡು ವರ್ಷ ಕಳೆದಿಲ್ಲ, ಆಗಾಲೇ ವಿದ್ಯಾರ್ಥಿಗಳಿಗೆ ಡೋನೇಷನ್ ಹಾವಾಳಿ ಹೆಚ್ಚಾಗಿದೆ. ಚೆನ್ನಾಗಿ ಪರೀಕ್ಷೆ ಬರೆದರು, 4-5 ಪುಟಗಳ ಮೌಲ್ಯಮಾಪನ ಮಾಡದೇ ಇರೋದು. ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ನಕಲು ಪ್ರತಿ ಕೇಳಿದರೇ ಕೊಡೀದಿಲ್ಲ ಎನ್ನುವ ಬಹು ದೊಡ್ಡ ಆರೋಪ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಂದ ಕೇಳಿಬಂದಿದೆ.

ಹಾಜರಾತಿ 85 ಶೇಕಡ ಏಕೆ..?

ಈ ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ದೇಶದ ಯಾವುದೇ ವಿಶ್ವವಿದ್ಯಾಲಯದಲ್ಲಿ ಇರದೇ ಇರೋ ನಿಯಮಗಳು ಇಲ್ಲಿ ಇದೆ. ರಾಜ್ಯ ಮತ್ತು ದೇಶದ ವಿಶ್ವವಿದ್ಯಾಲಯಗಳಲ್ಲಿ ಪ್ರತಿಯೊಂದು ವಿದ್ಯಾರ್ಥಿಗೆ ಶೇಕಡ 75 ಹಾಜರಾಗಿ ಇದ್ದರೆ, ಈ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ 85 ಶೇಕಡಾ ಹಾಜರಾತಿ ಅಂತೆ, ಇಲ್ಲದಿದ್ದರೇ ದಂಡ ಹಾಕುತ್ತಾರೆ ಎನ್ನುವ ಆರೋಪ ಸಹ ಇದೆ. ಪರೀಕ್ಷೆ ಸಮಯದಲ್ಲಿ ದಂಡದ ಹಣ ನೀಡದಿದ್ದರೆ ಹಾಲ್ ಟಿಕೆಟ್ ಕೊಡಲ್ಲವಂತೆ.

ನಗದು ಹಣ 60 ಸಾವಿರ ಡೋನೆಷನ್ ನೀಡಲು ಒತ್ತಾಯ

ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಓದುವ ವಿದ್ಯಾರ್ಥಿಗಳಿಗೆ 1 ಲಕ್ಷ 60 ಸಾವಿರ ಆನ್ ಲೈನ್ ಮೂಲಕ ಶುಲ್ಕ ಪಾವತಿ ಮಾಡಿಸಿಕೊಂಡು ನಂತರ ಪರೀಕ್ಷೆ ಹತ್ತಿರ ಬರುವ ಮುಂಚೆಯೇ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ 60 ಸಾವಿರ ನಗದು ರೂಪಾಯಿ ಹಣವನ್ನು ನೀಡಬೇಕೆಂದು ಒತ್ತಾಯ ಮಾಡುತ್ತಾರೆ, ಹಣ ಕಟ್ಟದಿದ್ದರೆ ಪರೀಕ್ಷೆಯಲ್ಲಿ ಅನುತ್ತೀರ್ಣಾ ಮಾಡುತ್ತಾರೆ ಎನ್ನುವ ಆರೋಪ ಇದೆ. ಒಂದು ಪರೀಕ್ಷೆ ಅನುತ್ತಿಣಾ ಹೊಂದಿದ್ದರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಅದಕ್ಕೆ ಪ್ರತ್ಯೇಕವಾಗಿ ಹಣವನ್ನು ಕಟ್ಟಬೇಕು ಅದು ಸಹ ದುಬಾರಿ ಇದೆ. ಒಂದು ವಿಷಯಕ್ಕೆ ಒಬ್ಬ ವಿದ್ಯಾರ್ಥಿಗೆ 700 ರೂಪಾಯಿ ಪಾವತಿಸಬೇಕು.

ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ

ಕಿಷ್ಕಿಂದ ವಿಶ್ವವಿದ್ಯಾಲಯ ಆಗಿರುವುದರಿಂದ ಇಲ್ಲಯೇ ಪ್ರಶ್ನೆ ಪತ್ರಿಕೆ ತಯಾರಾಗುತ್ತದೆ ಹಾಗೇಯೇ ಇಲ್ಲಿಯ ಉಪನ್ಯಾಸಕರು ಮೌಲ್ಯಮಾಪನ ಮಾಡುತ್ತಾರೆ ಆದರೆ ಈ ಉಪನ್ಯಾಸಕರು ಮೇಲೆ ಆಡಳಿತ ಮಂಡಳಿ ವಿ.ವಿ ಒತ್ತಾಯ ಇದೆಯೇ ಎನ್ನುವ ಪ್ರಶ್ನೆ ಕಾಡುತ್ತದೆ.

ಇನ್ನು ಮೂರು – ನಾಲ್ಕು ವರ್ಷ ಹೇಗೆ ? ಓದು ಪೂರ್ಣಗೊಳಿಸಬೇಕು ಅನ್ನೋ ಭಯ

ಈ ಕಿಷ್ಕಿಂದ ವಿಶ್ವವಿದ್ಯಾಲಯ ಬಳ್ಳಾರಿ ನಗರದಲ್ಲಿ ಹೊಸದಾಗಿ ಆರಂಭವಾಗಿದೆ. ಕಡಿಮೆ ಹಣ ಎಂದು ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಇನ್ನು ನಮ್ಮ ಮಕ್ಕಳು ವಿದ್ಯಾಭ್ಯಾಸ ಗತಿ ಹೇಗೆ ? ಎಂದು ಭಯದ ವಾತಾವರಣದಲ್ಲಿ‌ ಇದ್ದಾರೆ.

10 ಲಕ್ಷ ಕಟ್ಟಿ ಹೋಗಿ ಎನ್ನುವ ವಿವಿಯ ಅಧಿಕಾರಿಗಳು

ಇನ್ನು ಈ ವಿಚಾರವಾಗಿ ಕಿಷ್ಕಿಂದ ವಿಶ್ವವಿದ್ಯಾಲಯದ ಪ್ರವೇಶ ಪಡೆದ ನೂರಾರು ವಿದ್ಯಾರ್ಥಿಗಳು ಈ ಡೋನೇಷನ್, ಶುಲ್ಕ, ಇನ್ನಿತರ ದಂಡಗಳನ್ನು ಪಡೆಯಲು ಹಾಗೂ ಹಗಲು ದರೋಡೆ ಮಾಡುತ್ತಿದ್ದಾರೆ. ವಿವಿ ಬಿಟ್ಟು ಹೋಗಲು ನಿರ್ಧರಿಸಿದ ವಿದ್ಯಾರ್ಥಿಗಳಿಗೆ ಉಳಿದ ವರ್ಷದ 10 ಲಕ್ಷ ಹಣ ಕಟ್ಟಿ ಹೋಗಿ ಎಂದು ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಆರೋಪ ಸಹ ಇದೆ.

ಇನ್ನು ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ನಿಮ್ಮನೆಲ್ಲಾ ಫೇಲ್ ಮಾಡಿದರೇ ವಿಶ್ವವಿದ್ಯಾಲಯ ನಡೆಯೋದ್ ಹೇಗೆ ? ನಮಗೆ ಸಂಬಳ ಕೊಡೋರ್ ಯಾರು ? ಎಂದು ವಿದ್ಯಾರ್ಥಿಗಳಿಗೆ ಉತ್ತರಿಸಿದ್ದು ಸಹ ನಾಚಿಕೆಗೆಡಿನ ಸಂಗತಿಯಾಗಿದೆ. ಇನ್ನು ದುಡ್ಡು ಕೊಟ್ಟರೆ ಮಾತ್ರ ವಿದ್ಯಾರ್ಥಿಗಳು ಪಾಸು ಎನ್ನುವ ಮಾತು ಪೋಷಕರಿಂದ ಕೇಳಿಬಂದಿದೆ.

ಇನ್ನು ಪೋಷಕರು ಈ ಕಿಷ್ಕಿಂದ ವಿಶ್ವವಿದ್ಯಾಲಯ ಹೊಸದಾಗಿ ಆರಂಭಾಗಿದೆ, ಕಡಿಮೆ ಶುಲ್ಕ ಇದೆ ಎಂದು ಪ್ರವೇಶಾತಿ ಪಡೆದಿದ್ದಾರೆ ಆದರೆ ಈ ವಿವಿಯಲ್ಲಿ ನಿರಂತರವಾಗಿ ಪೋಷಕರಿಂದ ಹಣವನ್ನು ಕೀಳುತ್ತಿದ್ದಾರೆ. ಈಗಲಾದರೂ ಪೋಷಕರು ಎಚ್ಚೆತ್ತುಕೊಳ್ಳಬೇಕಿದೆ.

ಇನ್ನು ಈ ವಿಚಾರವಾಗಿ ದೂರವಾಣಿ ಕರೆ ಮಾಡಿ ಮಾತನಾಡಿದ ಕಿಷ್ಕಿಂದ ವಿಶ್ವವಿದ್ಯಾಲಯ ಅಮರೇಶಯ್ಯ ಅವರು ಇಲ್ಲ ನಮ್ಮಲ್ಲಿ ಹಾಗೇನು ನಡೆದಿಲ್ಲ, ಡೊನೆಷನ್ ತೆಗೆದುಕೊಳ್ಳುವುದಿಲ್ಲ, ವಿವಿಗೆ ಕಟ್ಟಿದ ಶುಲ್ಕ ನೇರವಾಗಿ ಪೋಷಕರಿಗೆ ಮೆಸೇಜ್ ಹೋಗುತ್ತದೆ ಎಂದರು.

ಇದರಲ್ಲಿ ಯಾರು ಸುಳ್ಳುರು ಎನ್ನುವ ಅಂಶ ಹೊರಗಡೆ ಬರಲಿ

ಇನ್ನು ಕಿಷ್ಕಿಂದ ಟ್ರಸ್ಟ್ ಮೌನಕ್ಕೆ ಜಾರಿದೆಯೇ ಕಾದು ನೋಡಬೇಕಿದೆ. ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ವಿವಿಯ ಕುಲಪತಿಯಾದ ಶ್ರೀ ರಾಜ್ಯಪಾಲರು ಯಾವ ರೀತಿಯ ಕ್ರಮ ತೆಗೆದುಕೊಳ್ಳುತ್ತಾರೋ..?

ಒಟ್ಟಾರೆಯಾಗಿ ಹೊಸ ವಿಶ್ವವಿದ್ಯಾಲಯ ಆರಂಭವಾಗಿ ಅಭಿವೃದ್ಧಿ ಹೊಂದಬೇಕು ಹಾಗೂ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಅನುಕೂಲಕರವಾಗ ಬೇಕು ಎನ್ನುವುದು ನಮ್ಮ ಆಶಯ.


  • ಆರಂಭದಲ್ಲಿ 1.65 ಲಕ್ಷ ಹಣ ಕಟ್ಟಿದ್ದೆವೆ, ಆದರೆ 60 ಸಾವಿರ ಡೋನೇಷನ್ ನಗದು ಹಣ ತಂದು ಕೊಡು ಅಂತ ಹೇಳ್ತಾರೆ, ಉತ್ತರ ಪತ್ರಿಕೆ ಸರಿಯಾಗಿ ಮೌಲ್ಯ ಮಾಪನ ಮಾಡೊಲ್ಲ, ಫೇಲ್ ಮಾಡ್ತಾರೆ, ಉತ್ತರ ಪತ್ರಿಕೆ ನಕಲು ಪ್ರತಿ ಕೇಳಿದ್ರೆ ಕೊಡೋದಿಲ್ಲ, ಮತ್ತೆ ಪರೀಕ್ಷೆ ಬರೆದಿದ್ದೆವೆ, 85 ರಷ್ಟು ಹಾಜರಾತಿ ಕಡ್ಡಾಯ ಎಂದು ಕಿಷ್ಕಿಂದ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ಅವರು ಪೋಷಕರು ಅವರಿಗೆ ಆದ ನೋವನ್ನು ಹೇಳಿಕೊಂಡಿದ್ದಾರೆ.

|ನೊಂದ ವಿದ್ಯಾರ್ಥಿಗಳು, ಪೋಷಕರು, ಬಳ್ಳಾರಿ


ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ

Published

on

ಸುದ್ದಿದಿನ,ದಾವಣಗೆರೆ:ಭಾರತೀಯ ಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಹೊಸ ಸೌಲಭ್ಯವನ್ನು ಆಯೋಜಿಸಲಾಗಿದೆ. ಈ ಸೌಲಭ್ಯದಿಂದ ನಾಗರಿಕರು ತಮ್ಮ ಮೊಬೈಲ್ ಅಥವಾ ಕಂಪ್ಯೂಟರ್ ಬಳಸಿ ಸ್ಪೀಡ್ ಪೊಸ್ಟ್ , ಪಾರ್ಸಲ್ ಸೇರಿದಂತೆ ವಿವಿಧ ಅಂಚೆ ಸೇವೆಗಳನ್ನು ಮನೆಯಿಂದಲೇ ಬುಕ್ ಮಾಡುವ ಅವಕಾಶವನ್ನು ಪಡೆಯಬಹುದು. ಇದರ ಮೂಲಕ ಅಂಚೆ ಕಚೇರಿಯಲ್ಲಿ ಸಾಲಿನಲ್ಲಿ ನಿಲುವ ಅನಿವಾರ್ಯತೆ ಕಡಿಮೆಯಾಗುತ್ತದೆ ಹಾಗೂ ಸಮಯದ ಉಳಿತಾಯವಾಗುತ್ತದೆ.

ಸೇವೆಯನ್ನು ಈ ಮೂಲಕ https://app.indiapost.gov.in/customer.selfservice/home ಪೂರ್ಣಗೊಳಿಸಿದ ನಂತರ ಸೃಷ್ಟಿಯಾಗುವ ಲೇಬಲ್, ಕ್ಯೂಆರ್ ಅನ್ನು ಮುದ್ರಿಸಿ ಹತ್ತಿರದ ಯಾವುದೇ ಅಂಚೆ ಕಚೇರಿಯಲ್ಲಿ ಸ್ಪೀಡ್ ಫೆÇೀಸ್ಟ್, ಪಾರ್ಸೆಲ್ ಅನ್ನು ಬುಕ್ಕಿಂಗ್ ಸಂಖ್ಯೆಯ ಮೂಲಕ ಹಸ್ತಾಂತರಿಸಬಹುದು. ಸಾರ್ವಜನಿಕರು ಈ ನವೀನ ಡಿಜಿಟಲ್ ಸೌಲಭ್ಯವನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಳಸಿಕೊಳ್ಳಬೇಕೆಂದು ಅಂಚೆ ಅಧೀಕ್ಷಕರಾದ ಚಂದ್ರಶೇಖರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಮಾಧ್ಯಮ ಕ್ಷೇತ್ರದಲ್ಲಿ ಮತ್ತು ಮಾಧ್ಯಮ ಚಟುವಟಿಕೆಗಳ ಕಾರ್ಯನಿರ್ವಹಣೆ ಕುರಿತು 12 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದ್ದು, ಡಿಸೆಂಬರ್ 26 ಕೊನೆಯ ದಿನವಾಗಿದೆ.

ವಿಶೇಷ ಘಟಕ ಯೋಜನೆಯಡಿ 12 ತಿಂಗಳ ಅಪ್ರೆಂಟಿಸ್ ತರಬೇತಿಗಾಗಿ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ್ತಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ, ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಪರಿಶಿಷ್ಟ ಜಾತಿಗೆ ಸೇರಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ 35 ವರ್ಷ ಮೀರಿರಬಾರದು. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಎಂದು ನಮೂದಿಸಬೇಕು. ಆಯ್ಕೆಯಾದ ಅಭ್ಯರ್ಥಿಗಳು ಸಂದರ್ಶನದ ವೇಳೆ ಮೂಲ ದಾಖಲೆಗಳನ್ನು ಕಡ್ಡಾಯವಾಗಿ ಸಲ್ಲಿಸುವುದು. ಆಯ್ಕೆಯಾಗಿ ತರಬೇತಿಗೆ ಹಾಜರಾಗುವ ಸಂದರ್ಭದಲ್ಲಿ ಮೂಲ ದಾಖಲಾತಿಗಳನ್ನು ಕಚೇರಿಗೆ ಸಲ್ಲಿಸಬೇಕು.

ಅರ್ಜಿ ಸಲ್ಲಿಸಿದ ಸಂದರ್ಭದಲ್ಲಿ ಅಭ್ಯರ್ಥಿಗಳು ಪದವಿಯ ಎಲ್ಲ ವರ್ಷಗಳ ಅಂಕಪಟ್ಟಿಗಳು, ಸ್ನಾತ್ತಕೋತ್ತರ ಪದವಿಯ ಎಲ್ಲ ಅಂಕಪಟ್ಟಿಯೊಂದಿಗೆ ಅರ್ಜಿ ಸಲ್ಲಿಸಬೇಕು. ಅಂಕಪಟ್ಟಿಯನ್ನು ನಿರೀಕ್ಷಿಸಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ. ತರಬೇತಿಯ ಅವಧಿ ವೇಳೆ ಮಾಹೆಯಾನ 15,000 ರೂಗಳ ಶಿಷ್ಯ ವೇತನ ನೀಡಲಾಗುವುದು. ತರಬೇತಿಯು 2026 ರ ಜನವರಿಯಿಂದ ಡಿಸೆಂಬರ್‍ವರೆಗೆ 12 ತಿಂಗಳ ಅವಧಿಯದಾಗಿದ್ದು, ತಾತ್ಕಾಲಿಕವಾಗಿರುತ್ತದೆ. ತರಬೇತಿ ಮುಗಿದ ನಂತರ ಮುಂದುವರೆಸಲು ಅಥವಾ ಖಾಯಂಗೊಳಿಸಲು ಯಾವುದೇ ಅವಕಾಶ ಇರುವುದಿಲ್ಲ.

ತರಬೇತಿಯ ಅವಧಿಯಲ್ಲಿ ತರಬೇತಾರ್ಥಿಗಳು ಬೇರೆ ಉದ್ಯೋಗ ಮಾಡುವಂತಿಲ್ಲ. ತರಬೇತಿಯ ಅವಧಿಯ ಮಧ್ಯದಲ್ಲಿ ಬಿಟ್ಟು ಹೋದರೆ, ಮೂಲ ದಾಖಲಾತಿಗಳನ್ನು ಅವಧಿಗೆ ಮುನ್ನ ಹಿಂದಿರುಗಿಸುವುದಿಲ್ಲ. ಒಮ್ಮೆ ಫಲಾನುಭವಿಯಾದವರನ್ನು ಈ ಯೋಜನೆಯಡಿ ಮತ್ತೊಂದು ಅವಧಿಗೆ ಆಯ್ಕೆ ಮಾಡಲು ಅವಕಾಶವಿರುವುದಿಲ್ಲ ಹಾಗೂ ಸುಳ್ಳು ಮಾಹಿತಿ ನೀಡಿ ಅರ್ಜಿ ಸಲ್ಲಿಸಿದ್ದಲ್ಲಿ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಹಿರಿಯ ಸಹಾಯಕ ನಿರ್ದೇಶಕರ ಕಚೇರಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ದಾವಣಗೆರೆ ಇಲ್ಲಿ, ಮೊ.9480841218 ಗೆ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ನಿರ್ದೇಶಕರಾದ ಧನಂಜಯ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending