ದಿನದ ಸುದ್ದಿ

ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಹಗಲು ದರೋಡೆ ; ಹಣ ಕೊಡದಿದ್ರೆ ಪರೀಕ್ಷೇಲಿ ಫೇಲ್ ..! ವಿದ್ಯಾರ್ಥಿಗಳ ಗೋಳು ಕೇಳೋರ್ ಯಾರು..? ಓದಿ ಈ ಸ್ಟೋರಿ..!

Published

on

  • ವಿಶೇಷ ವರದಿ : ಗಿರೀಶ್ ಕುಮಾರ್, ಬಳ್ಳಾರಿ

ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ನಗರದ ಕಿಷ್ಕಿಂದ ವಿಶ್ವವಿದ್ಯಾಲಯ ಆರಂಭವಾಗಿ ಎರಡು ವರ್ಷ ಕಳೆದಿಲ್ಲ, ಆಗಾಲೇ ವಿದ್ಯಾರ್ಥಿಗಳಿಗೆ ಡೋನೇಷನ್ ಹಾವಾಳಿ ಹೆಚ್ಚಾಗಿದೆ. ಚೆನ್ನಾಗಿ ಪರೀಕ್ಷೆ ಬರೆದರು, 4-5 ಪುಟಗಳ ಮೌಲ್ಯಮಾಪನ ಮಾಡದೇ ಇರೋದು. ವಿದ್ಯಾರ್ಥಿಗಳಿಗೆ ಉತ್ತರ ಪತ್ರಿಕೆಯ ನಕಲು ಪ್ರತಿ ಕೇಳಿದರೇ ಕೊಡೀದಿಲ್ಲ ಎನ್ನುವ ಬಹು ದೊಡ್ಡ ಆರೋಪ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಂದ ಕೇಳಿಬಂದಿದೆ.

ಹಾಜರಾತಿ 85 ಶೇಕಡ ಏಕೆ..?

ಈ ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ದೇಶದ ಯಾವುದೇ ವಿಶ್ವವಿದ್ಯಾಲಯದಲ್ಲಿ ಇರದೇ ಇರೋ ನಿಯಮಗಳು ಇಲ್ಲಿ ಇದೆ. ರಾಜ್ಯ ಮತ್ತು ದೇಶದ ವಿಶ್ವವಿದ್ಯಾಲಯಗಳಲ್ಲಿ ಪ್ರತಿಯೊಂದು ವಿದ್ಯಾರ್ಥಿಗೆ ಶೇಕಡ 75 ಹಾಜರಾಗಿ ಇದ್ದರೆ, ಈ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ 85 ಶೇಕಡಾ ಹಾಜರಾತಿ ಅಂತೆ, ಇಲ್ಲದಿದ್ದರೇ ದಂಡ ಹಾಕುತ್ತಾರೆ ಎನ್ನುವ ಆರೋಪ ಸಹ ಇದೆ. ಪರೀಕ್ಷೆ ಸಮಯದಲ್ಲಿ ದಂಡದ ಹಣ ನೀಡದಿದ್ದರೆ ಹಾಲ್ ಟಿಕೆಟ್ ಕೊಡಲ್ಲವಂತೆ.

ನಗದು ಹಣ 60 ಸಾವಿರ ಡೋನೆಷನ್ ನೀಡಲು ಒತ್ತಾಯ

ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಓದುವ ವಿದ್ಯಾರ್ಥಿಗಳಿಗೆ 1 ಲಕ್ಷ 60 ಸಾವಿರ ಆನ್ ಲೈನ್ ಮೂಲಕ ಶುಲ್ಕ ಪಾವತಿ ಮಾಡಿಸಿಕೊಂಡು ನಂತರ ಪರೀಕ್ಷೆ ಹತ್ತಿರ ಬರುವ ಮುಂಚೆಯೇ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ 60 ಸಾವಿರ ನಗದು ರೂಪಾಯಿ ಹಣವನ್ನು ನೀಡಬೇಕೆಂದು ಒತ್ತಾಯ ಮಾಡುತ್ತಾರೆ, ಹಣ ಕಟ್ಟದಿದ್ದರೆ ಪರೀಕ್ಷೆಯಲ್ಲಿ ಅನುತ್ತೀರ್ಣಾ ಮಾಡುತ್ತಾರೆ ಎನ್ನುವ ಆರೋಪ ಇದೆ. ಒಂದು ಪರೀಕ್ಷೆ ಅನುತ್ತಿಣಾ ಹೊಂದಿದ್ದರೆ ಪ್ರತಿಯೊಬ್ಬ ವಿದ್ಯಾರ್ಥಿಗಳು ಅದಕ್ಕೆ ಪ್ರತ್ಯೇಕವಾಗಿ ಹಣವನ್ನು ಕಟ್ಟಬೇಕು ಅದು ಸಹ ದುಬಾರಿ ಇದೆ. ಒಂದು ವಿಷಯಕ್ಕೆ ಒಬ್ಬ ವಿದ್ಯಾರ್ಥಿಗೆ 700 ರೂಪಾಯಿ ಪಾವತಿಸಬೇಕು.

ಪೋಷಕರಲ್ಲಿ ಹಾಗೂ ವಿದ್ಯಾರ್ಥಿಗಳಲ್ಲಿ ಭಯದ ವಾತಾವರಣ

ಕಿಷ್ಕಿಂದ ವಿಶ್ವವಿದ್ಯಾಲಯ ಆಗಿರುವುದರಿಂದ ಇಲ್ಲಯೇ ಪ್ರಶ್ನೆ ಪತ್ರಿಕೆ ತಯಾರಾಗುತ್ತದೆ ಹಾಗೇಯೇ ಇಲ್ಲಿಯ ಉಪನ್ಯಾಸಕರು ಮೌಲ್ಯಮಾಪನ ಮಾಡುತ್ತಾರೆ ಆದರೆ ಈ ಉಪನ್ಯಾಸಕರು ಮೇಲೆ ಆಡಳಿತ ಮಂಡಳಿ ವಿ.ವಿ ಒತ್ತಾಯ ಇದೆಯೇ ಎನ್ನುವ ಪ್ರಶ್ನೆ ಕಾಡುತ್ತದೆ.

ಇನ್ನು ಮೂರು – ನಾಲ್ಕು ವರ್ಷ ಹೇಗೆ ? ಓದು ಪೂರ್ಣಗೊಳಿಸಬೇಕು ಅನ್ನೋ ಭಯ

ಈ ಕಿಷ್ಕಿಂದ ವಿಶ್ವವಿದ್ಯಾಲಯ ಬಳ್ಳಾರಿ ನಗರದಲ್ಲಿ ಹೊಸದಾಗಿ ಆರಂಭವಾಗಿದೆ. ಕಡಿಮೆ ಹಣ ಎಂದು ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಪೋಷಕರಿಗೆ ಇನ್ನು ನಮ್ಮ ಮಕ್ಕಳು ವಿದ್ಯಾಭ್ಯಾಸ ಗತಿ ಹೇಗೆ ? ಎಂದು ಭಯದ ವಾತಾವರಣದಲ್ಲಿ‌ ಇದ್ದಾರೆ.

10 ಲಕ್ಷ ಕಟ್ಟಿ ಹೋಗಿ ಎನ್ನುವ ವಿವಿಯ ಅಧಿಕಾರಿಗಳು

ಇನ್ನು ಈ ವಿಚಾರವಾಗಿ ಕಿಷ್ಕಿಂದ ವಿಶ್ವವಿದ್ಯಾಲಯದ ಪ್ರವೇಶ ಪಡೆದ ನೂರಾರು ವಿದ್ಯಾರ್ಥಿಗಳು ಈ ಡೋನೇಷನ್, ಶುಲ್ಕ, ಇನ್ನಿತರ ದಂಡಗಳನ್ನು ಪಡೆಯಲು ಹಾಗೂ ಹಗಲು ದರೋಡೆ ಮಾಡುತ್ತಿದ್ದಾರೆ. ವಿವಿ ಬಿಟ್ಟು ಹೋಗಲು ನಿರ್ಧರಿಸಿದ ವಿದ್ಯಾರ್ಥಿಗಳಿಗೆ ಉಳಿದ ವರ್ಷದ 10 ಲಕ್ಷ ಹಣ ಕಟ್ಟಿ ಹೋಗಿ ಎಂದು ಬೆದರಿಕೆ ಹಾಕುತ್ತಿದ್ದಾರೆ ಎನ್ನುವ ಆರೋಪ ಸಹ ಇದೆ.

ಇನ್ನು ಇಲ್ಲಿ ಕೆಲಸ ಮಾಡುವ ಸಿಬ್ಬಂದಿಗಳು ನಿಮ್ಮನೆಲ್ಲಾ ಫೇಲ್ ಮಾಡಿದರೇ ವಿಶ್ವವಿದ್ಯಾಲಯ ನಡೆಯೋದ್ ಹೇಗೆ ? ನಮಗೆ ಸಂಬಳ ಕೊಡೋರ್ ಯಾರು ? ಎಂದು ವಿದ್ಯಾರ್ಥಿಗಳಿಗೆ ಉತ್ತರಿಸಿದ್ದು ಸಹ ನಾಚಿಕೆಗೆಡಿನ ಸಂಗತಿಯಾಗಿದೆ. ಇನ್ನು ದುಡ್ಡು ಕೊಟ್ಟರೆ ಮಾತ್ರ ವಿದ್ಯಾರ್ಥಿಗಳು ಪಾಸು ಎನ್ನುವ ಮಾತು ಪೋಷಕರಿಂದ ಕೇಳಿಬಂದಿದೆ.

ಇನ್ನು ಪೋಷಕರು ಈ ಕಿಷ್ಕಿಂದ ವಿಶ್ವವಿದ್ಯಾಲಯ ಹೊಸದಾಗಿ ಆರಂಭಾಗಿದೆ, ಕಡಿಮೆ ಶುಲ್ಕ ಇದೆ ಎಂದು ಪ್ರವೇಶಾತಿ ಪಡೆದಿದ್ದಾರೆ ಆದರೆ ಈ ವಿವಿಯಲ್ಲಿ ನಿರಂತರವಾಗಿ ಪೋಷಕರಿಂದ ಹಣವನ್ನು ಕೀಳುತ್ತಿದ್ದಾರೆ. ಈಗಲಾದರೂ ಪೋಷಕರು ಎಚ್ಚೆತ್ತುಕೊಳ್ಳಬೇಕಿದೆ.

ಇನ್ನು ಈ ವಿಚಾರವಾಗಿ ದೂರವಾಣಿ ಕರೆ ಮಾಡಿ ಮಾತನಾಡಿದ ಕಿಷ್ಕಿಂದ ವಿಶ್ವವಿದ್ಯಾಲಯ ಅಮರೇಶಯ್ಯ ಅವರು ಇಲ್ಲ ನಮ್ಮಲ್ಲಿ ಹಾಗೇನು ನಡೆದಿಲ್ಲ, ಡೊನೆಷನ್ ತೆಗೆದುಕೊಳ್ಳುವುದಿಲ್ಲ, ವಿವಿಗೆ ಕಟ್ಟಿದ ಶುಲ್ಕ ನೇರವಾಗಿ ಪೋಷಕರಿಗೆ ಮೆಸೇಜ್ ಹೋಗುತ್ತದೆ ಎಂದರು.

ಇದರಲ್ಲಿ ಯಾರು ಸುಳ್ಳುರು ಎನ್ನುವ ಅಂಶ ಹೊರಗಡೆ ಬರಲಿ

ಇನ್ನು ಕಿಷ್ಕಿಂದ ಟ್ರಸ್ಟ್ ಮೌನಕ್ಕೆ ಜಾರಿದೆಯೇ ಕಾದು ನೋಡಬೇಕಿದೆ. ಬಳ್ಳಾರಿ ಜಿಲ್ಲಾಧಿಕಾರಿ ಹಾಗೂ ವಿವಿಯ ಕುಲಪತಿಯಾದ ಶ್ರೀ ರಾಜ್ಯಪಾಲರು ಯಾವ ರೀತಿಯ ಕ್ರಮ ತೆಗೆದುಕೊಳ್ಳುತ್ತಾರೋ..?

ಒಟ್ಟಾರೆಯಾಗಿ ಹೊಸ ವಿಶ್ವವಿದ್ಯಾಲಯ ಆರಂಭವಾಗಿ ಅಭಿವೃದ್ಧಿ ಹೊಂದಬೇಕು ಹಾಗೂ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳು ಅನುಕೂಲಕರವಾಗ ಬೇಕು ಎನ್ನುವುದು ನಮ್ಮ ಆಶಯ.


  • ಆರಂಭದಲ್ಲಿ 1.65 ಲಕ್ಷ ಹಣ ಕಟ್ಟಿದ್ದೆವೆ, ಆದರೆ 60 ಸಾವಿರ ಡೋನೇಷನ್ ನಗದು ಹಣ ತಂದು ಕೊಡು ಅಂತ ಹೇಳ್ತಾರೆ, ಉತ್ತರ ಪತ್ರಿಕೆ ಸರಿಯಾಗಿ ಮೌಲ್ಯ ಮಾಪನ ಮಾಡೊಲ್ಲ, ಫೇಲ್ ಮಾಡ್ತಾರೆ, ಉತ್ತರ ಪತ್ರಿಕೆ ನಕಲು ಪ್ರತಿ ಕೇಳಿದ್ರೆ ಕೊಡೋದಿಲ್ಲ, ಮತ್ತೆ ಪರೀಕ್ಷೆ ಬರೆದಿದ್ದೆವೆ, 85 ರಷ್ಟು ಹಾಜರಾತಿ ಕಡ್ಡಾಯ ಎಂದು ಕಿಷ್ಕಿಂದ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಹಾಗೂ ಅವರು ಪೋಷಕರು ಅವರಿಗೆ ಆದ ನೋವನ್ನು ಹೇಳಿಕೊಂಡಿದ್ದಾರೆ.

|ನೊಂದ ವಿದ್ಯಾರ್ಥಿಗಳು, ಪೋಷಕರು, ಬಳ್ಳಾರಿ


ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version