ದಿನದ ಸುದ್ದಿ
ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆ ಅನುಷ್ಟಾನ
ಸುದ್ದಿದಿನ,ಶಿವಮೊಗ್ಗ : ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮವು ಪ್ರಸಕ್ತ ಸಾಲಿನ ವಿವಿಧ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದವರಿಗೆ (ಮುಸ್ಲಿಂ, ಕ್ರೈಸ್ತ, ಜೈನ, ಬೌದ್ದ, ಸಿಖ್ಖ್, ಪಾರ್ಸಿ) ಸಾಲ ಸೌಲಭ್ಯ ನೀಡಲು ಉದ್ದೇಶಿಸಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಿದೆ.
ಅರ್ಜಿ ಸಲ್ಲಿಸಲಿಚ್ಚಿಸುವ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿದ್ದು, 18-45ವರ್ಷ ವಯೋಮಿತಿಯೊಳಗಿನವರಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಖಾಯಂ ವಾಸಿಯಾಗಿರಬೇಕು. ಅಭ್ಯರ್ಥಿಯ ವಾರ್ಷಿಕ ವರಮಾನ ಗ್ರಾಮಾಂತರ ಪ್ರದೇಶದವರಿಗೆ ರೂ. 81,000/-, ನಗರ ಪ್ರದೇಶದವರಿಗೆ 1.03ಲಕ್ಷ ರೂ. ಮೀರಿರಬಾರದು ಹಾಗೂ ಅರಿವು ಯೋಜನೆಯಡಿ ಮಾತ್ರ ಕುಟುಂಬದ ವಾ.ಆ. ರೂ. 6.00 ಲಕ್ಷ ಮೀರಿರಬಾರದು. ತಮ್ಮ ವಿಳಾಸದ ದೃಢೀಕರಣಕ್ಕಾಗಿ ಆಧಾರ್ ಪ್ರತಿಯನ್ನು ಮತ್ತು ಅದನ್ನು ಬ್ಯಾಂಕ್ನ ಉಳಿತಾಯ ಖಾತೆಗೆ ಹೊಂದಾಣಿಕೆ (ಲಿಂಕ್) ಮಾಡಿರಬೇಕು.
ಯೋಜನೆಗಳು
ಸ್ವಯಂ ಉದ್ಯೋಗ ಯೋಜನೆ
ಈ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ವ್ಯಾಪಾರ, ಸೇವಾ ಉದ್ದಿಮೆ, ಗುಡಿ ಕೈಗಾರಿಕೆ ಹಾಗೂ ಕೃಷಿ ಆಧಾರಿತ ಕಾರ್ಯಗಳಿಗೆ ರಾಷ್ಟ್ರೀಕೃತ ಬ್ಯಾಂಕುಗಳಿಂದ ಗರಿಷ್ಠ 35ಸಾವಿರ ರೂ.ಗಳನ್ನು ಸಹಾಯಧನ ಹಾಗೂ ಘಟಕವೆಚ್ಚ ಗರಿಷ್ಠ 2 ಲಕ್ಷ ರೂ ಸಹಾಯಧನವನ್ನು ಚಾಲ್ತಿ ಬಡ್ಡಿದರದಲ್ಲಿ ಸಾಲ ನೀಡಲಾಗುವುದು.
ಶ್ರಮಶಕ್ತಿ ಯೋಜನೆ
ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ಹಾಗೂ ಕುಲಕಸುಬುದಾರರಿಗೆ ತಂತ್ರಜ್ಞಾನ ಬಳಸಿ ತಮ್ಮ ಸಾಂಪ್ರದಾಯಿಕ ಮಾರುಕಟ್ಟೆ ಹಾಗೂ ವೃತ್ತಿ ಕೌಶಲ್ಯವನ್ನು ಅಭಿವೃದ್ದಿ ಪಡೆಸಿಕೊಳ್ಳಲು ಗರಿಷ್ಠ 50ಸಾವಿರ ರೂ.ಗಳನ್ನು ಹಾಗೂ ಘಟಕ ವೆಚ್ಚಕ್ಕೆ 25ಸಾವಿರ ರೂಗಳನ್ನು ಸಬ್ಸಿಡಿ ಸೇರಿ ಸಾಲ ಕೊಡಲಾಗುವುದು.
ಮೈಕ್ರೋ ಸಾಲಯೋಜನೆ
ಮಹಿಳಾ ಸ್ವಸಾಯ ಸಂಘಗಳಿಗೆ ಅನಕ್ಷರಸ್ಥ ಕುಶಲಿಯಲ್ಲದ ಅಲ್ಪಸಂಖ್ಯಾತ ಮಹಿಳೆಯರ 10 ರಿಂದ 20 ಮಹಿಳೆಯರನ್ನು ಹೊಂದಿರುವ ಗುಂಪಿನ ಪ್ರತಿ ಸದಸ್ಯರಿಗೆ ಆರ್ಥಿಕ ಅಭಿವೃದ್ಧಿಗಾಗಿ 5000 ಸಹಾಯಧನ ಹಾಗೂ 5000 ಸಾಲವಾಗಿ ಒಟ್ಟು 10ಸಾವಿರ ರೂಗಳನ್ನು ನೀಡಲಾಗುತ್ತದೆ.
ಕೃಷಿ ಭೂಮಿ ಖರೀದಿ ಯೋಜನೆ
ಗ್ರಾಮೀಣ ಪ್ರದೇಶದಲ್ಲಿ ವಾಸವಿರುವ ಅಲ್ಪಸಂಖ್ಯಾತ ಭೂ ರಹಿತ ಕೃಷಿ ಕಾರ್ಮಿಕರಿಗೆ 2 ಎಕರೆ ಖುಷ್ಕಿ ಅಥವ 1 ಎಕರೆ ತರಿ ಭೂಮಿಯನ್ನು ನಿಗಮದಿಂದ 5ಕಿಮಿ ವ್ಯಾಪ್ತಿಯೊಳಗೆ ಖರೀದಿ ಮಾಡಿ ಕೊಡಲಾಗುತ್ತದೆ. ಇದರಲ್ಲಿ 50% ಅವದಿ ಸಾಲ 6% ಬಡ್ಡಿದರದೊಂದಿಗೆ ಮರುಪಾವತಿಸುವುದು. ಹಾಗೂ ಇನ್ನುಳಿದ 50% ಹಣವನ್ನು ಸಹಾಯಧನವನ್ನಾಗಿ ಪರಿಗಣಿಸಲಾಗುವುದು. ಭೂಮಿಯನ್ನು ಮಾರಾಟ ಮಾಡುವವರು ಹಿಂದುಳಿದ ವರ್ಗದವರಾಗಿರಬಾರದು ಮತ್ತು ಮಾರಾಟಮಾಡುವವರು ಲಿಖಿತವಾಗಿ ಅರ್ಜಿಯೊಂದಿಗೆ ಭೂಮಿಯ ದಾಖಲೆಗಳನ್ನು ಸಲ್ಲಿಸಬೇಕು.
ಗಂಗಾ ಕಲ್ಯಾಣ ಯೋಜನೆ
ಒಂದು ಎಕರೆ ಎರಡು ಗುಂಟೆಯಿಂದ ಐದು ಎಕರೆ ಖುಷ್ಕಿ ಭೂಮಿ ಹೊಂದಿದ ಸಣ್ಣ ಅಥವ ಅತಿ ಸಣ್ಣ ರೈತರು ಕೊಳವೆ ಭಾವಿ ಕೊರೆಸಲು 3.50 ಲಕ್ಷ ಸಹಾಯಧನ ಬಯಸಿದಲ್ಲಿ 50,000 ಸಾಲವನ್ನು ಒದಗಿಸಲಾಗುತ್ತದೆ.
ಮನೆ ಮಳಿಗೆ ಯೋಜನೆ
ದುರ್ಬಲ ಹಾಗೂ ವಿಶೇಷ ಫಲಾನುಭವಿಗಳಿಗೆ 5ಲಕ್ಷ ರೂಗಳ ಸಾಲ ಸೌಲಭ್ಯ ಕೊಡುವ ಯೋಜನೆ ಇದಾಗಿದೆ. ಕೋಮುಗಲಭೆ, ಪರಿಸರ ವಿಕೋಪ, ಸಂದರ್ಭದಲ್ಲಿ ತೊಂದರೆಗೊಳಗಾದವರು, ಸನ್ನಡತೆ ಮೇಲೆ ಬಿಡುಗಡೆಯಾದ ಕೈದಿಗಳು ಹಾಗೂ ಇನ್ನಿತರೆ ಪ್ರಕರಣಗಳಲ್ಲಿ ಬಂಧಿಯಾಗಿ ಆರೋಪ ಸಾಭೀತಾಗದೆ ಬಿಡುಗಡೆಯಾದ ನಿರಪರಾಧಿಗಳಿಗೆ ಜೀವನೋಪಾಯ ಕಲ್ಪಿಸುವ ಯೋಜನೆ ಇದಾಗಿದೆ.
ಪಶು ಸಂಗೋಪನೆ
ಹೈನುಗಾರಿಕೆ, ಕೋಳಿಸಾಕಣಿಕೆ, ಕುರಿ ಸಾಕಾಣಿಕೆಗೆ ಉತ್ತೇಜನ ನೀಡುವ ಸಲುವಾಗಿ 50% ದಷ್ಟು ಸಹಾಯಧನ ಸೇರಿ 40ಸಾವಿರ ರೂಗಳನ್ನು ನೀಡುವ ಯೋಜನೆ ಇದಾಗಿದೆ. ಟ್ಯಾಕ್ಸಿ / ಗೂಡ್ಸ್ ಖರೀದಿ ಯೋಜನೆ: ಟ್ಯಾಕ್ಸಿ ಹಾಗೂ ಗೂಡ್ಸ್ ವಾಹನಗಳನ್ನು ಖರಿದಿಸಲು 3ಲಕ್ಷರೂಗಳ ಸಹಾಯಧನ ನೀಡುವ ಯೋಜನೆ ಇದಾಗಿದೆ.
ಪ್ರವಾಸಿ ಲೋನ್ ಯೋಜನೆ
ಕೊಲ್ಲಿ ರಾಷ್ಟ್ರಗಳಿಂದ ಉದ್ಯೋಗ ವಂಚಿತರಾಗಿ ಎಕ್ಸಿಟ್ ಮುದ್ರೆಯೊಂದಿಗೆ ಹಿಂದಿರುಗಿದವರಿಗೆ ಸ್ವಯಂ ಉದ್ಯೋಗ್ಯ ಕಲ್ಪಿಸುವ ಯೋಜನೆ ಇದಾಗಿದೆ.
ಇದರೊಂದಿಗೆ ವೃತ್ತಿ ಪ್ರೋತ್ಸಾಹ, ಕೃಷಿ ಆಧುನಿಕ ಯಂತ್ರೋಪಕರಣ ಖರೀದಿ, ಶೈಕ್ಷಣಿಕ ಸಾಲ ನೇರ ಅವಧಿ ಸಾಲ ಹಾಗೂ ಆಟೋಮೊಬೈಲ್ಸ್ ಸರ್ವಿಸ್ ಹಾಗೂ ತರಬೇತಿ ಸಾಲ ಯೋಜನೆಗಳು ಸೇರಿವೆ.
ಅರ್ಹ ಅಭ್ಯರ್ಥಿಗಳು ನಿಗಧಿತ ನಮೂನೆಯ ಅರ್ಜಿಯನ್ನು ನಿಗಮದ ಅಂತರ್ಜಾಲತಾಣ WWW.Kmdc.kar.nic.in/loan/login.aspx ಮೂಲಕ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಜುಲೈ 31 ರೊಳಗಾಗಿ
ಜಿಲ್ಲಾ ವ್ಯವಸ್ಥಾಪಕರು, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ನಂಜಪ್ಪ ಆಸ್ಪತ್ರೆ ಮುಂಭಾಗ ರಸ್ತೆ, ಅಚ್ಯುತ್ರಾವ್ ಲೇಔಟ್, 4ನೇ ತಿರುವು, ಶಿವಮೊಗ್ಗ ಈ ಕಛೇರಿಗೆ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ವಿವರಗಳಿಗಾಗಿ 08182-228262ನ್ನು ಸಂಪರ್ಕಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9880346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ3 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

