ದಿನದ ಸುದ್ದಿ
ಕೊಡಗು ಪ್ರವಾಹ | ಸಂತ್ರಸ್ತರಿಗೆ ರಾಜ್ಯ ಸರ್ಕಾರಿ ನೌಕರರಿಂದ 102 ಕೋಟಿ ರೂ

ಸುದ್ದಿದಿನ,ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದ್ದು, ಸಾವಿರಾರು ಕುಟುಂಬಗಳು ಸಂಕಷ್ಟ ಅನುಭವಿಸುತ್ತಿವೆ. ಇಂತಹ ಸಂದರ್ಭದಲ್ಲಿ ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಒಂದು ದಿನ ವೇತನ 102 ಕೋಟಿ ರೂ.ವನ್ನು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ನೀಡಲಾಗುತ್ತದೆ ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷರಾದ ಎಚ್.ಕೆ.ರಾಮು ಅವರು ತಿಳಿಸಿದ್ದಾರೆ.
ನಗರದ ಹೋಟೆಲ್ವೊಂದರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅಧ್ಯಕ್ಷರು ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರಿದ್ದು, ಖಜಾನೆ ಮೂಲಕ ಒಂದು ದಿನದ ವೇತನ ಒಟ್ಟು 102 ಕೋಟಿ ರೂ ಕಟಾವಣೆಯಾಗಲಿದೆ ಎಂದು ಅವರು ತಿಳಿಸಿದರು.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಷ್ಟ್ರ ಹಾಗೂ ರಾಜ್ಯಗಳಲ್ಲಿ ಸಂಭವಿಸುವ ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸಂತ್ರಸ್ತರಿಗೆ ನೆರವಿನ ಹಸ್ತ ನೀಡುತ್ತಾ ಬಂದಿದೆ. ಈ ಹಿಂದೆ ಕಾರ್ಗಿಲ್ ಯುದ್ದ ಪರಿಹಾರ ನಿಧಿ, ಗುಜರಾತ ಭೂಕಂಪ ಸೇರಿದಂತೆ ಹಲವು ಸಂದರ್ಭಗಳಲ್ಲಿ ರಾಜ್ಯ ಸರ್ಕಾರಿ ನೌಕರರ ಒಂದು ದಿನದ ವೇತನವನ್ನು ದೇಣಿಗೆಯಾಗಿ ನೀಡಿದೆ ಎಂದು ಅವರು ಸ್ಮರಿಸಿದರು.
ಪ್ರಸ್ತುತ ರಾಜ್ಯದ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಲಕ್ಷಾಂತರ ಜನರು ನಿರಾಶ್ರೀತರಾಗಿದ್ದು, ಸಂಕಷ್ಟಕ್ಕೆ ಸಿಲುಕಿ ಅಪಾರ ಪ್ರಮಾಣದ ಸಾವುನೋವು, ಆಸ್ತಿ ಪಾಸ್ತಿಗಳಿಗೆ ನಷ್ಟ ಸಂಭವಿಸಿರುವುದು ಅತ್ಯಂತ ನೋವಿನ ಸಂಗತಿ. ಈ ಸನ್ನಿವೇಶದಲ್ಲಿ ಸಂತ್ರಸ್ತರಿಗೆ ಸಹಾಯ ಹಸ್ತ ನೀಡುವುದು ನಮ್ಮೆಲ್ಲರ ಕರ್ತವ್ಯವಾಗಿರುತ್ತದೆ.
ಈ ಹಿನ್ನಲೆಯಲ್ಲಿ ಆಗಸ್ಟ್ 20 ರಂದು ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರು ಹಾಗೂ ಕೇಂದ್ರ ಸಂಘದ ಪದಾಧಿಕಾರಿಗಳ ತುರ್ತು ಕಾರ್ಯಕಾರಿ ಸಮಿತಿ ಸಭೆಯ ತಿರ್ಮಾನದಂತೆ ರಾಜ್ಯಾದ್ಯಂತ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಸರ್ಕಾರಿ ನೌಕರರ ಒಂದು ದಿನದ ವೇತನ ಸಮಾರು 102 ಕೋಟಿ ರೂಗಳನ್ನು ಜಿಲ್ಲೆಯ ನೆರೆ ಸಂತ್ರಸ್ತರ ಪುನರ್ವಸತಿಗಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಲಾಗುವುದು ಎಂದು ಅವರು ಹೇಳಿದರು.
ಈ ಪರಿಹಾರ ನಿಧಿಯಿಂದ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡಲು ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಲಾಗಿದೆ ಎಂದು ರಾಜ್ಯ ಅಧ್ಯಕ್ಷರು ಮಾಹಿತಿ ನೀಡಿದರು.
ಜೋಡುಪಾಲ ಗ್ರಾಮದ ನಿವಾಸಿ ಹಾಗೂ ಸುಳ್ಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನೌಕರರಾಗಿ ಸೇವೆ ಸಲ್ಲಿಸುತ್ತಿದ್ದ ಬಸಪ್ಪ ಅವರು ಅತಿವೃಷ್ಟಿಗೆ ಸಿಲುಕಿ ಮೃತರಾಗಿದ್ದು, ಅವರಿಗೆ ಇದೇ ಸಂದರ್ಭದಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.
2006 ರಿಂದ ಜಾರಿಗೆ ಬಂದಿರವ ಎನ್ಪಿಎಸ್ ರದ್ದುಪಡಿಸಿ ಹಳೇ ಪದ್ಧತಿಯವನ್ನೇ ಮುಂದುವರೆಸಬೇಕು. ಆ ನಿಟ್ಟಿನಲ್ಲಿ ಮುಖ್ಯಮಂತ್ರಿಯವರಲ್ಲಿ ಕೋರಲಾಗಿದೆ. ಈ ಮನವಿಗೆ ಮಮುಖ್ಯಮಂತ್ರಿಯವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ರಾಮು ಅವರು ತಿಳಿಸಿದರು.
ರಾಜ್ಯ ಸರ್ಕಾರಿ ನೌಕಕರ ಸಂಘದ ಕಾರ್ಯದರ್ಶಿ ಪುಟ್ಟಸ್ವಾಮಿ, ನಿರ್ದೇಶಕರಾದ ರಾಜಕುಮಾರ್, ಜಗದೀಶ, ಉಮೇಶ, ಗೋವಿಂದರಾಜು, ಶಿವರಾಮು, ಲಕ್ಷ್ಮಿಕಾಂತ್, ಸರ್ಕಾರಿ ನೌಕರರ ಜಿಲ್ಲಾ ಘಟಕದ ಅಧ್ಯಕ್ಷರಾದ ರವಿ ಇತರರು ಇದ್ದರು.

ದಿನದ ಸುದ್ದಿ
ಕೌಶಲ್ಯಯುತ ಶಿಕ್ಷಣ ವೃತ್ತಿ ಭವಿಷ್ಯಕ್ಕೆ ಆಧಾರ : ಸಹಾಯಕ ಪ್ರಾಧ್ಯಾಪಕ ಎ.ಆರ್. ಸಲೀಮ್ ಮಲಿಕ್ ಕಿವಿಮಾತು

ಸುದ್ದಿದಿನ,ಹರಿಹರ:ಪ್ರಸ್ತುತ ಉನ್ನತ ಶಿಕ್ಷಣ ಪಡೆಯುತ್ತಿರುವ ಯುವಜನರು ತಮ್ಮ ಕೌಶಲ್ಯವನ್ನು ಆಧರಿಸಿದ ಶಿಕ್ಷಣದ ಕಡೆ ಆಸಕ್ತಿ ತೋರಬೇಕು. ತಂತ್ರಜ್ಞಾನ ಸಂಬಂಧಿತ ಕೌಶ್ಯಲ್ಯಗಳು ವೃತ್ತಿ ಭವಿಷ್ಯಕ್ಕೆ ಉಜ್ವಲ ಅವಕಾಶಗಳನ್ನು ಪಡೆಯಬಹುದು ಎಂದು ದಾವಣಗೆರೆಯ ಜೆ.ಟಿ ಕಾಲೇಜಿನ ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಎ.ಆರ್.ಸಲೀಮ್ ಮಲಿಕ್ ಅವರು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಐ.ಕ್ಯೂ.ಎ.ಸಿ ಮತ್ತು ಪ್ರೇರಣಾ ಕೋಶದ ಸಹಯೋಗದಲ್ಲಿ ‘ಮೃದು ಕೌಶಲ್ಯಗಳು ಮತ್ತು ವ್ಯಕ್ತಿತ್ವ ವಿಕಸನ’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವ್ಯಕ್ತಿತ್ವ ವಿಕಸನ ಮಾಡಿಕೊಳ್ಳುವ ಮೂಲಕ ಜಾಗತಿಕ ಸಂದರ್ಭದಲ್ಲಿ ವೃತ್ತಿಪರ ವ್ಯಕ್ತಿಗಳು ಬೇರೆಯವರಿಗಿಂತ ಭಿನ್ನವಾಗಿ ತಮ್ಮನ್ನು ತಾವು ರೂಪಿಸಿಕೊಳ್ಳುವ ಅನಿವಾರ್ಯತೆ ಇದೆ ಎಂದು ಸ್ಪರ್ಧಾತ್ಮಕ ಜಗತ್ತಿನಲ್ಲಿ ವೃತ್ತಿಪರ ಬದುಕು ಕಟ್ಟಿಕೊಳ್ಳುವ ಬಗ್ಗೆ ವಿವರಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ.ಎಂ.ಎನ್.ರಮೇಶ್ ಅವರು ಮಾತನಾಡಿ, ವೃತ್ತಿ ಆಧಾರಿತ ಶಿಕ್ಷಣದ ಜೊತೆಗೆ ಮೃದು ಕೌಶಲ್ಯಗಳನ್ನು ಪಡೆಯಿರಿ. ಸರ್ಕಾರದ ಸೌಲಭ್ಯಗಳನ್ನು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿನ ಸಂಪನ್ಮೂಲಗಳನ್ನು ಬಳಸಿಕೊಂಡು ಉತ್ತಮ ವೃತ್ತಿ ಭವಿಷ್ಯವನ್ನು ತಮ್ಮದಾಗಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.
ಐ.ಕ್ಯೂ.ಎಸ್.ಸಿ ಸಂಯೋಜಕರಾದ ಡಾ.ಅನಂತನಾಗ್ ಹೆಚ್.ಪಿ, ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಬಾಬು ಕೆ.ಎ ಅವರುಗಳು ಉಪಸ್ಥಿತರಿದ್ದು ಮಾತನಾಡಿದರು.
ವಿದ್ಯಾರ್ಥಿನಿ ಕು.ಆಶ್ಲೇಷ ಎಸ್ ಪ್ರಾರ್ಥಿಸಿದರು, ಕಾಲೇಜಿನ ಪ್ರೇರಣಾ ಕೋಶದ ಸಂಚಾಲಕರು, ಭೌತಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರು ಆದ ಬಸವರಾಜ ಬಿ.ಪಾಟೀಲ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ವಾಣಿಜ್ಯಶಾಸ್ತç ವಿಭಾಗದ ವಿದ್ಯಾರ್ಥಿ ಆಕಾಶ್ ವಂದಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಲೇಬೆನ್ನೂರು ಪುರಸಭೆ | ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಲೇಬೆನ್ನೂರು ಪುರಸಭೆಯ ವ್ಯಾಪ್ತಿಯಲ್ಲಿ ಸ್ವಚ್ಛ ಭಾರತ ಮಿಷನ್ (ನ)-2.0 ಯೋಜನೆಯ ಮಾಹಿತಿ ಶಿಕ್ಷಣ ಮತ್ತು ಸಂವಹನ ಘಟಕದಡಿಯಲ್ಲಿ ಘನತ್ಯಾಜ್ಯ ಮತ್ತು ದ್ರವ ತ್ಯಾಜ್ಯ ನಿರ್ವಹಣೆಯ ಕುರಿತಂತೆ ನಗರ ಸ್ಥಳೀಯ ಸಂಸ್ಥೆಗಳ ಮಟ್ಟದಲ್ಲಿ ವಿವಿಧ ಬಗೆಯ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವ-ಸಹಾಯ ಗುಂಪುಗಳ ಸದಸ್ಯೇತರ ನೇಮಕಾತಿ (ಘನತ್ಯಾಜ್ಯ, ಪಾರಂಪರಿಕ ತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಸಿಡಿ ತ್ಯಾಜ್ಯ ನಿರ್ವಹಣೆ ಸ್ವಚ್ಛ-ಸರ್ವೇಕ್ಷಣ, ನಗರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಓಡಿಎಫ್, ಓಡಿಎಫ್, ಸ್ಟಾರ್ ರೇಟಿಂಗ್ಸ್ ಮತ್ತು ಇತರೆ ವಿಷಯಗಳ ಕುರಿತು ಮನೆ ಮನೆಗೂ ಭೇಟಿ ನೀಡಿ ನೇರವಾಗಿ ಮಾತನಾಡುವುದರ ಮೂಲಕ ಐ.ಇ.ಸಿ ಚಟುವಟಿಕೆಗಳನ್ನು ಕೈಗೊಳ್ಳಲು ಮಹಿಳಾ ಸ್ವ-ಸಹಾಯ ಗುಂಪುಗಳಿಂದ 2 ಸದಸ್ಯರುಗಳನ್ನು ಮಾಸಿಕ ಗೌರವಧನ ಆಧಾರದ ಮೇಲೆ ತಾತ್ಕಾಲಿಕ ಸೇವೆ ಪಡೆದುಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮಹಿಳಾ ಅಭ್ಯರ್ಥಿಗಳು ಅಗತ್ಯ ದಾಖಲಾತಿಯೊಂದಿಗೆ ಮೇ.23 ರೊಳಗಾಗಿ ನಿಗಧಿತ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆದು ಮುಖ್ಯಾಧಿಕಾರಿಗಳು, ಪುರಸಭೆ, ಮಲೇಬೆನ್ನೂರು ವಿಳಾಸಕ್ಕೆ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕೆಂದು ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗೆ ಆಫೀಸ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಬ್ಯಾಂಕ್ ಆಫ್ ಬರೋಡದಲ್ಲಿ ಮಾಜಿ ಸೈನಿಕರಿಗಾಗಿ ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಮಾಜಿ ಸೈನಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ವೆಬ್ ಸೈಟ್ www.bankofbaroda.co.in ನಲ್ಲಿ ಮೇ.23 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ನ ಜಾಹೀರಾತು ಸಂಖ್ಯೆ-ಃBoB/HRM/REC/AVT//2025/05 ವೀಕ್ಷಿಸಬಹುದೆಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರಾದ ಡಾ.ಸಿ.ಎ.ಹಿರೇಮಠ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ದೇಶಾದ್ಯಂತ 11 ದಿನಗಳ ಕಾಲ ತಿರಂಗ ಯಾತ್ರೆ
-
ದಿನದ ಸುದ್ದಿ7 days ago
ರಕ್ತ ಮತ್ತು ನೀರು ಒಟ್ಟಿಗೆ ಹರಿಯಲಾರವು : ಪ್ರಧಾನಿ ನರೇಂದ್ರ ಮೋದಿ
-
ದಿನದ ಸುದ್ದಿ6 days ago
ಚನ್ನಗಿರಿ | ಇದೇ 15 ರಂದು ಲೋಕಾಯುಕ್ತ ಪೊಲೀಸರಿಂದ ಅಹವಾಲು ಸ್ವೀಕಾರ
-
ದಿನದ ಸುದ್ದಿ6 days ago
ದಾವಣಗೆರೆ | ವಾಹನ ತಪಾಸಣೆ ವೇಳೆ ಲಾರಿ ಹರಿದು ಪೋಲಿಸ್ ಸಾವು ; ಲಾರಿಯೊಂದಿಗೆ ಚಾಲಕ ಪರಾರಿ
-
ದಿನದ ಸುದ್ದಿ6 days ago
ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಸಹಶಿಕ್ಷಕರು ಮತ್ತು ಮುಖ್ಯಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
-
ದಿನದ ಸುದ್ದಿ4 days ago
ಶಾಸಕರ ಹಿಡಿತ ತಪ್ಪಿದ ‘ಕೈ’ ಕಾರ್ಯಕರ್ತರಲ್ಲಿ ಶಂಕೆ
-
ದಿನದ ಸುದ್ದಿ3 days ago
ಚನ್ನಗಿರಿ | ರೈತರಿಗೆ, ವ್ಯಾಪಾರಿಗಳಿಗೆ ರಿಯಾಯಿತಿ ದರದಲ್ಲಿ ಗೋದಾಮುಗಳ ಬಾಡಿಗೆ