ದಿನದ ಸುದ್ದಿ
ಕೊಡಗು ಪ್ರವಾಹ : ನಿರಾಶ್ರಿತರಿಗೆ ಮನೆ ನಿರ್ಮಾಣ ಸದ್ಯದಲ್ಲೇ ಆರಂಭ

ಸುದ್ದಿದಿನ,ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಕಳೆದ ಆಗಸ್ಟ್ ತಿಂಗಳಲ್ಲಿ ಉಂಟಾದ ಪ್ರಕೃತಿ ವಿಕೋಪದಿಂದಾಗಿ ಜಿಲ್ಲೆಯ ಜನಜೀವನ ಅಸ್ತವ್ಯಸ್ತ ಉಂಟಾಗಿತ್ತು. ಇದರಿಂದ ಹಲವು ಕುಟುಂಬಗಳು ಮನೆ-ಮಠ ಕಳೆದುಕೊಂಡು ನಿರಾಶ್ರಿತರಾದರು. ಪ್ರಕೃತಿ ವಿಕೋಪದಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಯಿತು. ಆ ದಿಸೆಯಲ್ಲಿ ಮನೆ ಕಳೆದುಕೊಂಡ ನಿರಾಶ್ರಿತರಿಗೆ ವಸತಿ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ಜಾಗ ಗುರುತಿಸಿದ್ದು, ಸಮತಟ್ಟು ಮಾಡುವ ಕಾರ್ಯ ಪೂರ್ಣಗೊಂಡು, ಬಡಾವಣೆ ನಿರ್ಮಾಣ ಸಂಬಂಧ ಅನುಮೋದನೆ ಪಡೆಯುವ ಕಾರ್ಯ ಪ್ರಗತಿಯಲ್ಲಿದೆ.
ಆ ನಿಟ್ಟಿನಲ್ಲಿ ಬಡಾವಣೆಯ ನೀಲ ನಕಾಶೆ ತಯಾರಾಗಿದ್ದು, ಒಳಚರಂಡಿ ವ್ಯವಸ್ಥೆ, ವಿದ್ಯುತ್ ಮಾರ್ಗ, ಕುಡಿಯುವ ನೀರು ಸಂಪರ್ಕ ಕಲ್ಪಿಸುವ ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳ ತಂಡವು ಶುಕ್ರವಾರ ಪರಿಶೀಲನೆ ಮಾಡಿದರು ಎಂದು ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಜಗದೀಶ್ ಅವರು ತಿಳಿಸಿದ್ದಾರೆ.
ಬಡಾವಣೆ ನಿರ್ಮಾಣ ಸಂಬಂಧ ಇನ್ನೂ ಒಂದು ವಾರದಲ್ಲಿ ಅನುಮೋದನೆ ದೊರೆಯಲಿದ್ದು, ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಅನುಮೋದನೆ ದೊರತೆ ನಂತರ ನಿರಾಶ್ರಿತರಿಗೆ ಒಪ್ಪಿಗೆಯಾಗುವ ಮನೆ ನಿರ್ಮಿಸುವ ಕಾರ್ಯ ಶುರುವಾಗಲಿದೆ ಎಂದು ಜಗದೀಶ್ ಅವರು ಮಾಹಿತಿ ನೀಡಿದರು.
ಹಾಗೆಯೇ ಪ್ರಕೃತಿ ವಿಕೋಪದಿಂದಾಗಿ ಅಪಾರ ಪ್ರಮಾಣದಲ್ಲಿ ಕೃಷಿ, ತೋಟಗಾರಿಕೆ, ಕಾಫಿ, ಕರಿಮೆಣಸು, ಏಲಕ್ಕಿ, ಬಾಳೆ ಹೀಗೆ ವಿವಿಧ ಬೆಳೆಗಳು ನಷ್ಟ ಉಂಟಾಗಿದ್ದು, ಬೆಳೆ ನಷ್ಟ ಪರಿಹಾರಕ್ಕೆ 100 ಕೋಟಿ ರೂ ಹೆಚ್ಚು ಹಣ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.
ಪ್ರಕೃತಿ ವಿಕೋಪದಿಂದಾಗಿ ಆಸ್ತಿ-ಪಾಸ್ತಿ, ಮನೆ ಕಳೆದುಕೊಂಡಿರುವ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲು ಜಿಲ್ಲಾಡಳಿತ ವಿವಿಧ ಗ್ರಾಮಗಳಲ್ಲಿ ನಿವೇಶನ ಗುರುತು ಮಾಡಿದೆ.
ಎಲ್ಲೆಲ್ಲಿ ಜಾಗ? ಕರ್ಣಂಗೇರಿ ಗ್ರಾಮದಲ್ಲಿ ನಾಲ್ಕು ಎಕರೆ ಗುರುತಿಸಲಾಗಿದ್ದು, ಸುಮಾರು 80 ನಿವೇಶನಗಳು ಲಭ್ಯವಾಗಲಿದೆ. ಈ ಗ್ರಾಮದಲ್ಲಿ ಕರ್ಣಂಗೇರಿಯ 13, ಮಕ್ಕಂದೂರಿನ 11, ಹಚ್ಚಿನಾಡಿ 1, ಹೊದಕಾನ 9 ಹಾಗೂ ನಗರದ 43 ಕುಟುಂಬಗಳಿಗೆ ಒಟ್ಟು 65 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ಉದ್ದೇಶಿಸಿಲಾಗಿದೆ.
ಕೆ.ನಿಡುಗಣೆ ಗ್ರಾಮದಲ್ಲಿ ಅಂದಾಜು 5 ಎಕರೆ ಜಾಗ ಗುರುತಿಸಲಾಗಿದ್ದು, ಕಾಲೂರು ಗ್ರಾಮದ 22 ಕುಟುಂಬಗಳಿಗೆ, ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಯಲ್ಲಿ ಸರ್ವೆ ನಂ.103 ರಲ್ಲಿ 7 ಎಕರೆ ಜಾಗ ಗುರುತಿಸಲಾಗಿದ್ದು, ಹೆಬ್ಬೆಟ್ಟಗೇರಿಯ 90 ಕುಟುಂಬಗಳಿಗೆ, ಗಾಳಿಬೀಡು ಗ್ರಾಮದಲ್ಲಿ 13 ಎಕರೆ ಜಾಗ ಗುರುತಿಸಲಾಗಿದ್ದು, 19 ಕುಟುಂಬಗಳಿಗೆ, ನಿಡುವಟ್ಟಿನ 26 ಕುಟುಂಬಗಳಿಗೆ ಬಾರಿಬೆಳ್ಳಚ್ಚು 2 ಕುಟುಂಬಗಳಿಗೆ, ಒಂದನೇ ಮೊಣ್ಣಂಗೇರಿ 9 ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ.
ಮದೆ ಗ್ರಾಮದ 10 ಎಕರೆ ಜಾಗ ಗುರುತಿಸಲಾಗಿದ್ದು, ಎರಡನೇ ಮೊಣ್ಣಂಗೇರಿಯ 188 ಕುಟುಂಬಗಳಿಗೆ, ಮದೆ ಗ್ರಾಮದ 79 ಕುಟುಂಬಗಳಿಗೆ, ಸಂಪಾಜೆಯಲ್ಲಿ 1.50 ಎಕರೆ ಗುರುತಿಸಲಾಗಿದ್ದು, ಸಂಪಾಜೆಯ 4 ಕುಟುಂಬಗಳಿಗೆ, ಬಿಳಿಗೇರಿಯಲ್ಲಿ 1.88 ಎಕರೆ ಜಾಗ ಗುರುತಿಸಲಾಗಿದ್ದು, ಹೆರವನಾಡಿನ 10 ಕುಟುಂಬಗಳಿಗೆ ಒಟ್ಟು 281 ಕುಟುಂಬಗಳಿಗೆ, ಜಂಬೂರು ಗ್ರಾಮದಲ್ಲಿ 50 ಎಕರೆ ಜಾಗ ಗುರುತಿಸಲಾಗಿದ್ದು, ಮಕ್ಕಂದೂರು ಗ್ರಾಮದ 99 ಕುಟುಂಬಗಳಿಗೆ, ಎಮ್ಮೆತಾಳು ಗ್ರಾಮದ 39 ಕುಟುಂಬಳಿಗೆ, ಮುಕ್ಕೋಡ್ಲು ಗ್ರಾಮದ 9 ಕುಟುಂಬಗಳಿಗೆ, ಮೇಘತ್ತಾಳು ಗ್ರಾಮದ 26 ಕುಟುಂಬಗಳಿಗೆ ಒಟ್ಟು 173 ಕುಟುಂಬಗಳಿಗೆ ಜಾಗ ಗುರುತಿಸಲಾಗಿದೆ.
ಸೋಮವಾರಪೇಟೆ ತಾಲ್ಲೂಕಿನ ಚೌಡ್ಲು 2 ಕುಟುಂಬಗಳಿಗೆ, ಕಿರಂಗಂದೂರು 6, ಬೇಳೂರು 4, ಹಾನಗಲ್ಲು 3, ನೆರುಗಳಲೆ 1, ಹಾಡಗೇರಿ 22, ಮುವತ್ತೋಕ್ಲು 4, ಇಗ್ಗೋಡ್ಲು 9, ಕಡಗದಾಳು 11, ಕಾಂಡನಕೊಲ್ಲಿ 5, ಕೊಪ್ಪತ್ತೂರು 3, ಜಂಬೂರು 4, ಗರ್ವಾಲೆ 2, ಶಿರಂಗಳ್ಳಿ 1, ಮಂಕ್ಯ 1, ಕಿಕ್ಕರಳ್ಳಿ 1, ಹಾಲೇರಿ 5 ಒಟ್ಟು 84 ಕುಟುಂಬಗಳಿಗೆ ನಿವೇಶನ ಗುರುತಿಸಲಾಗಿದೆ ಎಂದು ವಿಶೇಷ ಹೆಚ್ಚುವರಿ ಜಿಲ್ಲಾಧಿಕಾರಿ ಎಂ.ಕೆ.ಜಗದೀಶ್ ಅವರು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ | ದೂರು ವಾಪಾಸ್ ಪಡೆದ ದಿನೇಶ್ ಕಲ್ಲಳ್ಳಿ

ಸುದ್ದಿದಿನ,ಬೆಂಗಳೂರು: ದೇಶಾದ್ಯಂತ ಸಂಚಲನ ಮೂಡಿಸಿದ್ದ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ದೂರು ನೀಡಿದ್ದ ಸಾಮಾಜಿಕ ಕಾರ್ಯಕರ್ತ ದಿನೇಶ್ ಕಲ್ಲಹಳ್ಳಿ ಇದೀಗ ದೂರು ವಾಪಸ್ ಪಡೆದುಕೊಂಡಿದ್ದಾರೆ.
ದಿನೇಶ್ ಕಲ್ಲಹಳ್ಳಿ ತಮ್ಮ ವಕೀಲರನ್ನು ದೂರು ವಾಪಸ್ ಪಡೆಯಲು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಕಳುಹಿಸಿದ್ದು, ನಿಯಮಾನುಸಾರ ದೂರು ವಾಪಸ್ ಪಡೆಯಬೇಕಿರುವ ಹಿನ್ನೆಲೆಯಲ್ಲಿ ಅವರೇ ಠಾಣೆಗೆ ಆಗಮಿಸಿ ದೂರು ಪಡೆಯಲು ನಿರ್ಧರಿಸಿದ್ದಾರೆ.
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಯವರು 5 ಕೋಟಿ ಡೀಲ್ ಬಗ್ಗೆ ಮಾತಾಡಿದ್ದರಿಂದ ನನ್ನ ಮನಸ್ಸಿಗೆ ನೋವಾಗಿದೆ. ಸಂತ್ರಸ್ತೆಗೆ ನ್ಯಾಯ ಕೊಡಿಸುವ ಬಗ್ಗೆ ಚರ್ಚೆಯಾಗ ಬೇಕಿತ್ತು ಆದರೆ, ಜನ ನನ್ನ ನೈತಿಕತೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಇದು ನನಗೆ ತಿರುಗುಬಾಣವಾಗಿದೆ ಎಂದು ದೂರುದಾರ ದಿನೇಶ್ ಹೇಳಿದ್ದು, ಈ ಹಿನ್ನೆಲೆಯಲ್ಲಿ ತಾನು ದೂರು ವಾಪಸ್ ಪಡೆಯುತ್ತಿರುವುದಾಗಿ ಅವರು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರೋಟರಿ ಆಶ್ರಯದಲ್ಲಿ ನೋಟು-ನಾಣ್ಯಗಳ “ಅಪೂರ್ವ ಸಂಗ್ರಹ” ಪ್ರದರ್ಶನ : ಭಾನುವಾರ ಕಡೆ ದಿನ

ಸುದ್ದಿದಿನ,ದಾವಣಗೆರೆ : ನೋಟುಗಳು – ನಾಣ್ಯಗಳು, ಇಂದಿನ ಕಾಲದ – ಹಿಂದಿನ ಕಾಲದ, ದೇಶದ – ವಿದೇಶದ ಅಪೂರ್ವ ಸಂಗ್ರಹವನ್ನು ನೋಡುವ ಅಪರೂಪದ ಅವಕಾಶ ನಗರದ ವಿದ್ಯಾರ್ಥಿಗಳಿಗೆ, ಆಸಕ್ತರಿಗೆ ಒದಗಲಿದೆ.
ದಾವಣಗೆರೆ ರೋಟರಿ ಸಂಸ್ಥೆ ಬರುವ ಶನಿವಾರ ಮಾರ್ಚ್ 6 ಮತ್ತು ಭಾನುವಾರ ಮಾ.7ರಂದು ಎಂ.ಸಿ.ಸಿ ಎ ಬ್ಲಾಕಿನಲ್ಲಿರುವ ದಾವಣಗೆರೆ ಹರಿಹರ-ಅರ್ಬನ್ ಬ್ಯಾಂಕ್ ಸಮುದಾಯ ಭವನದಲ್ಲಿ ಈ ಪ್ರದರ್ಶನವನ್ನು ಏರ್ಪಡಿಸಲಿದೆ.
ಬೆಳಗಾವಿಯ ಈರಪ್ಪ ಗುರುಲಿಂಗ ಪರಮಶೆಟ್ಟಿ ಕಳೆದ ಐದು ದಶಕಗಳಿಂದ ಸಂಗ್ರಹಿಸಿರುವ ಅಪರೂಪದ ನೋಟುಗಳು-ನಾಣ್ಯಗಳು ದೇಶದ ಹಲವು ರಾಜ್ಯಗಳ ಪ್ರಮುಖ ನಗರಗಳಲ್ಲಿ ಪ್ರದರ್ಶನಗಳನ್ನು ಕಂಡಿವೆ. ಬ್ರಿಟೀಷ್ ಆಡಳಿತದ, ಮರಾಠಾ, ಪೇಶ್ವೇ, ಮೊಘಲರು ನಿಜಾಮರ ಹಾಗೂ ಟಿಪ್ಪು ಆಡಳಿತದ ನಾಣ್ಯಗಳ ಪ್ರದರ್ಶನ ವಿಶೇಷವಾದದ್ದು.
ಒಂದರಿಂದ ಸಾವಿರ ರೂಗಳ ಹಳೆಯ ಬೆಳ್ಳಿಯ ನಾಣ್ಯಗಳು ಇಲ್ಲಿ ಕಾಣ ಸಿಗುತ್ತವೆ. ಒಂದೇ ಮೌಲ್ಯದ ನೂರ ಐವತ್ತಕ್ಕೂ ಹೆಚ್ಚು ವಿವಿಧ ನೋಟುಗಳ ನೋಟ ಅಪರೂಪದ ಆಕರ್ಷಣೆಯಾಗಲಿದೆ.ಇವರ ಸಂಗ್ರಹ “ಲಿಮ್ಕಾ ಬುಕ್ ಆಫ್ ರೆಕಾರ್ಡ್ಸ್”ನಲ್ಲಿ 1997ರಿಂದ ಸತತವಾಗಿ ಮೂರು ವರ್ಷಗಳ ಕಾಲ ನಮೂದಿಸಲ್ಪಟ್ಟಿದೆ.
ಮಾರ್ಚ್ ಆರು ಶನಿವಾರ ಬೆಳಿಗ್ಗೆ 11 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದ್ದು ದಾವಣಗೆರೆಯ ಪ್ರಥಮ ಪೌರರಾದ ಎಸ್.ಟಿ. ವೀರೇಶ್ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ.
ಆರ್.ಟಿ. ಮೃತ್ಯುಂಜಯ ಇವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ, ಡಿಡಿಪಿಐ ಪರಮೇಶ್ವರಪ್ಪ ತಹಶೀಲ್ದಾರ್ ಗಿರೀಶ್ ಮುಂತಾದವರು ಅತಿಥಿಗಳಾಗಿ ಆಗಮಿಸಲಿದ್ದಾರೆ.
ಈ ಅಪರೂಪದ ನೋಟು-ನಾಣ್ಯಗಳ ಪ್ರದರ್ಶನ ಮಾರ್ಚ್ ಆರು ಮತ್ತು ಏಳರ ಬೆಳಿಗ್ಗೆ 9ರಿಂದ ಸಂಜೆ 7ರ ವರೆಗೆ ನಡೆಯಲಿದ್ದು ಎಲ್ಲರಿಗೂ ಉಚಿತ ಪ್ರವೇಶವಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕುಂದುವಾಡ ಕೆರೆ ಅಭಿವೃದ್ದಿ ಕಾಮಗಾರಿ

ಸುದ್ದಿದಿನ,ದಾವಣಗೆರೆ : ದಾವಣಗೆರೆ ಮಹಾನಗರಪಾಲಿಕೆ ಮಾಲೀಕತ್ವದಲ್ಲಿರುವ ಕುಂದುವಾಡ ಕೆರೆಯ ಅಭಿವೃದ್ಧಿ ಕಾಮಗಾರಿಯನ್ನು ದಾವಣಗೆರೆ ಸ್ಮಾರ್ಟ್ ಸಿಟಿ ವತಿಯಿಂದ ಕೈಗೊಳ್ಳಲಾಗಿದ್ದು, ಕೆರೆಯ ಅಭಿವೃದ್ಧಿ ಕಾರ್ಯ ಪ್ರಗತಿಯಲ್ಲಿರುತ್ತದೆ. 1.2 ಕಿ.ಮೀ ಏರಿಯನ್ನು ಎತ್ತರಿಸಿ ಗಟ್ಟಿಗೊಳಿಸಲಾಗಿದ್ದು, ಕಲ್ಲುಗಳ ಹೊದಿಕೆಯ ಕೆಲಸವು ಪ್ರಗತಿಯಲ್ಲಿದೆ.
ಉಳಿದಂತೆ 3.7 ಕಿ.ಮೀ ನಲ್ಲಿ ಮುಳ್ಳು ಗಂಟೆ ಪೊದೆ ಮತ್ತು ಹಳೆಯ ಕಲ್ಲುಗಳ ಹೊದಿಕೆಯ ತೆರವುಗೊಳಿಸುವ ಕಾರ್ಯ ಚಾಲ್ತಿಯಲ್ಲಿರುತ್ತದೆ ಎಂದು ದಾವಣಗೆರೆ ಸ್ಮಾರ್ಟ್ ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರವೀಂದ್ರ ಮಲ್ಲಾಪುರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಸಿನಿ ಸುದ್ದಿ7 days ago
ರಾಬರ್ಟ್ ನ ಫಸ್ಟ್ ವಿಡಿಯೋ ಸಾಂಗ್ ರಿಲೀಸ್ : ಬೇಬಿ ಡಾನ್ಸ್ ವಿಡಿಯೋ ನೀವೂ ನೋಡಿ..!
-
ದಿನದ ಸುದ್ದಿ6 days ago
‘ಅನುಗ್ರಹ’ ಯೋಜನೆ ರಾಜ್ಯದಲ್ಲಿ ಮರುಜಾರಿಗೊಳಿಸದಿದ್ದರೆ ವಿಧಾನಸಭೆಯಲ್ಲಿ ಹೋರಾಟ : ಸಿದ್ದರಾಮಯ್ಯ ಎಚ್ಚರಿಕೆ
-
ನಿತ್ಯ ಭವಿಷ್ಯ6 days ago
ಸೋಮವಾರ ರಾಶಿ ಭವಿಷ್ಯ : ಕರೆ ಮಾಡಿ ಕಷ್ಟಗಳನ್ನು ಪರಿಹರಿಸಿಕೊಳ್ಳಿ
-
ನಿತ್ಯ ಭವಿಷ್ಯ6 days ago
ಮೂಲಾ ನಕ್ಷತ್ರದಲ್ಲಿ ಜನಿಸಿದರೆ ಅದರ ಮಹತ್ವ ಹಾಗೂ ಅದರ ಮಾಹಿತಿ..!
-
ನಿತ್ಯ ಭವಿಷ್ಯ5 days ago
ಈ ಯೋಗ ಇದ್ದರೆ ಖಂಡಿತ ದೊಡ್ಡ ರಾಜಕಾರಣಿ, ಸಮಾಜ ಸೇವಕ, ಜಿಲ್ಲಾಧಿಕಾರಿ(IAS),IPS, ಸಾಹಿತಿಗಳು, ಗಾಯಕರು, ದೇಶ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಪಟು ಆಗುವ ಸಂಭವ
-
ಬಹಿರಂಗ5 days ago
ಪ್ರತಿರೋಧದ ದನಿಗಳು ಸರ್ವಾಧಿಕಾರಕ್ಕೆ ಸದಾ ಅಪಥ್ಯವೇ
-
ದಿನದ ಸುದ್ದಿ3 days ago
24 ಕೆರೆ ತುಂಬಿಸುವ ಯೋಜನೆಗೆ ರೂ.48 ಕೋಟಿಗಳ ಅನುದಾನ ಮಂಜೂರು : ಎಂ.ಪಿ ರೇಣುಕಾಚಾರ್ಯ
-
ನಿತ್ಯ ಭವಿಷ್ಯ4 days ago
ಬುಧವಾರ ರಾಶಿ ಭವಿಷ್ಯ : ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆತಂಕ ದೂರವಾಗಲಿದೆ