ದಿನದ ಸುದ್ದಿ
ಕೋಗಲೂರು ಗ್ರಾಮದಲ್ಲಿ ಕೊರೋನ ಆತಂಕ : ಹೊರ ರಾಜ್ಯದಿಂದ ಬಂದವರನ್ನು ಕ್ವಾರಂಟೈನ್ ಮಾಡಲಾಗುವುದು : ತಹಶಿಲ್ದಾರ್ ಪುಟ್ಟರಾಜಗೌಡ
ಸುದ್ದಿದಿನ,ಚನ್ನಗಿರಿ/ಕೋಗಲೂರು : ಗ್ರಾಮದಲ್ಲಿ 65 ವರ್ಷ ವಯಸ್ಸಿನ ಮಹಿಳೆಯೊಬ್ಬರಿಗೆ ಕೊರೋನ ಸೋಂಕು ದೃಡ ಪಟ್ಟಿದ್ದು. ಸೋಂಕಿತ ವ್ಯಕ್ತಿಯು ಮದುವೆ ಸಮಾರಂಭಗಳಲ್ಲಿ ಹಾಗೂ ಗ್ರಾಮದಲ್ಲಿ ಸಾಕಷ್ಟು ಓಡಾಡಿರುವುದನ್ನು ಕಂಡ ಗ್ರಾಮಸ್ಥರು ಅತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬೆಂಗಳೂರು ಹಾಗೂ ವಿವಿದ ಕಡೆಗೆ ಕೆಲಸಕ್ಕಾಗಿ ಹರಸಿ ಹೋಗಿದ್ದವರೆಲ್ಲರೂ ಸಹ ತಂತಮ್ಮ ಗ್ರಾಮಗಳಿಗೆ ವಾಪಸ್ಸಾಗುತ್ತಿರುವುದನ್ನು ನೋಡಿದರೆ ಮತ್ತಷ್ಟು ಗ್ರಾಮಸ್ಥರಲ್ಲಿ ಭಯದ ವಾತವರಣ ಸೃಷ್ಠಿಯಾಗುತ್ತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತ ಪಡಿಸಿದ್ದಾರೆ.
ಹೊರಗಡೆಯಿಂದ ಬರುತ್ತಿರುವವರ ಮೇಲೆ ಗ್ರಾಪಂ ಆಡಳಿತ ಹಾಗೂ ಅಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಈ ವಿಚಾರದ ಮುನ್ನೆಚ್ಚರಿಕೆಯಿಂದ ಗ್ರಾಮದಲ್ಲಿ ಗ್ರಾಮಪಂಚಾಯಿತಿ ಆಡಳಿತವು ದ್ವನಿವರ್ಧಕ ಮೂಲಕ ಜನತೆರಿಗೆ ಮಾಸ್ಕ್ ಧರಸಿ ಅಂತರ ಕಾಯ್ದುಕೊಳ್ಳಲು ಸಂದೇಶ ಸಾರುತಿದ್ದರೂ ಸಹ ಕೆಲವರು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರುಗಳಿಗೆ ಮಾಹಿತಿಯನ್ನು ನೀಡದೆ ಗುಪ್ತವಾಗಿ ಮನೆಗಳನ್ನು ಸೇರಿಕೊಳ್ಳುತ್ತಿದ್ದಾರೆ ಎಂದು ಗ್ರಾಮದ ಜನತೆ ಹೇಳಿದ್ದಾರೆ.
ಕೊರೋನ ಬಗ್ಗೆ ಭಯ ಬೇಡ ಎಚ್ಚರಿಕೆಯಿಂದ ಇರಿ : ತಹಸೀಲ್ದಾರ್ ಪುಟ್ಟರಾಜಗೌಡ
ಇತ್ತೀಚೆಗೆ ಹೊರ ರಾಜ್ಯಗಳಿಂದ ಹಳ್ಳಿಗಳಿಗೆ ಬರುವವರ ಸಂಖ್ಯೆ ಹೆಚ್ಚಾಗುತಿದ್ದು ತಾಲೂಕು ಆಡಳಿತವು ಸೂಕ್ಷ್ಮವಾಗಿ ಗಮನಿಸುತಿದೆ, ನಮ್ಮ ಕಂದಾಯ ಅಧಿಕಾರಿಗಳು ಅರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಪರಸ್ಪರ ಸಂಪರ್ಕಹೊಂದಿದ್ದು ಹೊರಗಡೆಯಿಂದ ಬರುವವರ ಮೇಲೆ ನಿಗಾ ಇಟ್ಟಿರುತ್ತಾರೆ. ಗುಪ್ತವಾಗಿ ಮನೆ ಸೇರಿ ಕೊಂಡಿರುವವರನ್ನು ಪತ್ತೆ ಮಾಡಿ ಅವರ ಗಂಟಲು ಮಾದರಿ ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗುವುದೆಂದು ದೂರವಾಣಿ ಮುಖಾಂತರ ತಹಸೀಲ್ದಾರ್ ಪುಟ್ಟರಾಜಗೌಡ ರವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243