Connect with us

ದಿನದ ಸುದ್ದಿ

ಕೋಗಲೂರು ಗ್ರಾಮದಲ್ಲಿ ಕೊರೋನ ಆತಂಕ : ಹೊರ ರಾಜ್ಯದಿಂದ ಬಂದವರನ್ನು ಕ್ವಾರಂಟೈನ್ ಮಾಡಲಾಗುವುದು : ತಹಶಿಲ್ದಾರ್ ಪುಟ್ಟರಾಜಗೌಡ

Published

on

ಸುದ್ದಿದಿನ,ಚನ್ನಗಿರಿ/ಕೋಗಲೂರು : ಗ್ರಾಮದಲ್ಲಿ‌ 65 ವರ್ಷ ವಯಸ್ಸಿನ ಮಹಿಳೆಯೊಬ್ಬರಿಗೆ ಕೊರೋನ ಸೋಂಕು‌ ದೃಡ ಪಟ್ಟಿದ್ದು. ಸೋಂಕಿತ ವ್ಯಕ್ತಿಯು ಮದುವೆ ಸಮಾರಂಭಗಳಲ್ಲಿ ಹಾಗೂ ಗ್ರಾಮದಲ್ಲಿ‌ ಸಾಕಷ್ಟು ಓಡಾಡಿರುವುದನ್ನು ಕಂಡ ಗ್ರಾಮಸ್ಥರು ಅತಂಕ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಬೆಂಗಳೂರು ಹಾಗೂ ವಿವಿದ ಕಡೆಗೆ ಕೆಲಸಕ್ಕಾಗಿ ಹರಸಿ ಹೋಗಿದ್ದವರೆಲ್ಲರೂ ಸಹ ತಂತಮ್ಮ ಗ್ರಾಮಗಳಿಗೆ ವಾಪಸ್ಸಾಗುತ್ತಿರುವುದನ್ನು ನೋಡಿದರೆ ಮತ್ತಷ್ಟು ಗ್ರಾಮಸ್ಥರಲ್ಲಿ ಭಯದ ವಾತವರಣ ಸೃಷ್ಠಿಯಾಗುತ್ತಿದೆ ಎಂದು ಗ್ರಾಮಸ್ಥರು ಆತಂಕ ವ್ಯಕ್ತ ಪಡಿಸಿದ್ದಾರೆ.

ಹೊರಗಡೆಯಿಂದ ಬರುತ್ತಿರುವವರ ಮೇಲೆ ಗ್ರಾಪಂ ಆಡಳಿತ ಹಾಗೂ ಅಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಈ ವಿಚಾರದ ಮುನ್ನೆಚ್ಚರಿಕೆಯಿಂದ ಗ್ರಾಮದಲ್ಲಿ‌ ಗ್ರಾಮಪಂಚಾಯಿತಿ ಆಡಳಿತವು ದ್ವನಿವರ್ಧಕ ಮೂಲಕ‌  ಜನತೆರಿಗೆ ಮಾಸ್ಕ್ ಧರಸಿ ಅಂತರ ಕಾಯ್ದುಕೊಳ್ಳಲು ಸಂದೇಶ ಸಾರುತಿದ್ದರೂ ಸಹ ಕೆಲವರು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರುಗಳಿಗೆ ಮಾಹಿತಿಯನ್ನು ನೀಡದೆ ಗುಪ್ತವಾಗಿ ಮನೆಗಳನ್ನು ಸೇರಿಕೊಳ್ಳುತ್ತಿದ್ದಾರೆ ಎಂದು ಗ್ರಾಮದ ಜನತೆ ಹೇಳಿದ್ದಾರೆ. ‌

ಕೋಗಲೂರು ಗ್ರಾಮದಲ್ಲಿ ಸೀಲ್ ಡೌನ್

ಕೊರೋನ ಬಗ್ಗೆ ಭಯ ಬೇಡ ಎಚ್ಚರಿಕೆಯಿಂದ ಇರಿ : ತಹಸೀಲ್ದಾರ್ ಪುಟ್ಟರಾಜಗೌಡ

ಇತ್ತೀಚೆಗೆ ಹೊರ ರಾಜ್ಯಗಳಿಂದ ಹಳ್ಳಿಗಳಿಗೆ ಬರುವವರ ಸಂಖ್ಯೆ ಹೆಚ್ಚಾಗುತಿದ್ದು ತಾಲೂಕು ಆಡಳಿತವು ಸೂಕ್ಷ್ಮವಾಗಿ ಗಮನಿಸುತಿದೆ, ನಮ್ಮ ಕಂದಾಯ ಅಧಿಕಾರಿಗಳು ಅರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆ ಪರಸ್ಪರ ಸಂಪರ್ಕಹೊಂದಿದ್ದು ಹೊರಗಡೆಯಿಂದ ಬರುವವರ ಮೇಲೆ ನಿಗಾ ಇಟ್ಟಿರುತ್ತಾರೆ. ಗುಪ್ತವಾಗಿ ಮನೆ ಸೇರಿ ಕೊಂಡಿರುವವರನ್ನು ಪತ್ತೆ ಮಾಡಿ ಅವರ ಗಂಟಲು ಮಾದರಿ ಪರೀಕ್ಷೆಗೆ ಒಳಪಡಿಸಿ ಕ್ವಾರಂಟೈನ್ ಮಾಡಲಾಗುವುದೆಂದು ದೂರವಾಣಿ ಮುಖಾಂತರ ತಹಸೀಲ್ದಾರ್ ಪುಟ್ಟರಾಜಗೌಡ ರವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending