Connect with us

ದಿನದ ಸುದ್ದಿ

ಕೋಲಾರ ಜಿಲ್ಲೆಯ 134 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಬಗೆಹರಿಸಲಾಗಿದೆ : ಜಿಲ್ಲಾಧಿಕಾರಿ ಜೆ.‌ಮಂಜುನಾಥ್

Published

on

ಸುದ್ದಿದಿನ, ಕೋಲಾರ : ಜಿಲ್ಲೆಯಲ್ಲಿ ಅಕ್ಟೋಬರ್‍ನಿಂದ ಇಲ್ಲಿಯವರೆಗೆ 192 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಿದ್ದು, ಇವುಗಳಲ್ಲಿ 134 ಗ್ರಾಮಗಳಲ್ಲಿ ಹೊಸದಾಗಿ ಕೊಳವೆ ಬಾವಿ ಕೊರೆಸಿ ಅಥವಾ ಇರುವ ಕೊಳವೆ ಬಾವಿಗಳಿಗೆ ಹೊಸದಾಗಿ ಪಂಪು ಮೋಟಾರ್ ಅಳವಡಿಸಿ ನೀರಿನ ಸಮಸ್ಯೆ ಬಗೆಹರಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಜೆ.ಮಂಜುನಾಥ್ ಅವರು ತಿಳಿಸಿದರು.

ಇಂದು ಬರ ನಿರ್ವಹಣೆ ಸಂಬಂಧ ಜಿಲ್ಲೆಯಲ್ಲಿ ಕೈಗೊಂಡಿದ್ದ ಪರಿಹಾರ ಕಾರ್ಯಕ್ರಮಗಳನ್ನು ವೀಕ್ಷಿಸಿದ ಅವರು ಮಾತನಾಡಿ ಉಳಿದ 58 ಗ್ರಾಮಗಳಲ್ಲಿ 29 ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದು ನೀರನ್ನು ಒದಗಿಸಲಾಗುತ್ತಿದೆ. ಕೋಲಾರದ ಇತಿಹಾಸದಲ್ಲಿ ಅತಿ ಹೆಚ್ಚು ಖಾಸಗಿ ಕೊಳವೆ ಬಾವಿಗಳನ್ನು ಬಾಡಿಗೆಗೆ ಪಡೆದಿರುವುದು ಇದೇ ಮೊದಲು ಎಂದು ಅವರು ತಿಳಿಸಿದರು. ಇನ್ನುಳಿದ 29 ಗ್ರಾಮಗಳಿಗೆ ಖಾಸಗಿ ಟ್ಯಾಂಕರ್‍ಗಳ ಮೂಲಕ ನೀರನ್ನು ಒದಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಕೋಲಾರದಲ್ಲಿ ಮುಂಗಾರಿನಲ್ಲಿ ಮಳೆಯ ಕೊರತೆ ಉಂಟಾಗಿದ್ದು, ಹಿಂಗಾರು ಮಳೆ ಸಂಪೂರ್ಣವಾಗಿ ಕೈ ಕೊಟ್ಟಿದ್ದರಿಂದ ಜಿಲ್ಲೆಯು ತೀವ್ರ ಬರಕ್ಕೆ ತುತ್ತಾಗಿದೆ. ಕೋಲಾರ ಜಿಲ್ಲೆಯ ನಗರ ವ್ಯಾಪ್ತಿಯಲ್ಲಿ ಕೋಲಾರ ಮತ್ತು ಶ್ರೀನಿವಾಸಪುರದಲ್ಲಿ ನೀರಿನ ಸಮಸ್ಯೆ ಇದ್ದು, 20 ಖಾಸಗಿ ಟ್ಯಾಂಕರ್‍ಗಳ ಮೂಲಕ ಪ್ರತಿದಿನ 99 ಟ್ರಿಪ್‍ಗಳಲ್ಲಿ ನೀರನ್ನು ಒದಗಿಸಲಾಗುತ್ತಿದೆ ಎಂದರು.

ಹಸಿರು ಮೇವು

ಜಿಲ್ಲೆಯಲ್ಲಿನ 2 ಲಕ್ಷದ 8 ಸಾವಿರ ರಾಸುಗಳಿದ್ದು ಅಗತ್ಯ ಹಸಿರು ಮೇವು ಒದಗಿಸುವ ಸಂಬಂಧ
92 ಸಾವಿರ ಮಿನಿಕಿಟ್‍ಗಳನ್ನು ನೀರು ಲಭ್ಯವಿರುವ ರೈತರು ಹಾಗೂ ಹಾಲು ಉತ್ಪಾದಕರ ಸಂಘದ ಸದಸ್ಯರಿಗೆ ಒದಗಿಸಲಾಗಿದೆ. ಪ್ರಸ್ತುತ 82 ಸಾವಿರ ಮೆಟ್ರಿಕ್ ಟನ್ ಹಸಿರು ಮೇವು ಲಭ್ಯವಿದ್ದು, ಇದು 12 ವಾರಗಳಿಗೆ ಸಾಕಾಗುತ್ತದೆ. ಸಿ.ಆರ್.ಎಫ್ ಅನುದಾನದಲ್ಲಿ 20 ಸಾವಿರ ಮಿನಿಕಿಟ್‍ಗಳನ್ನು ವಿತರಿಸಿದ್ದು, ಇವನ್ನು ಫೆಬ್ರವರಿ ತಿಂಗಳಿನಲ್ಲಿ ಬಿತ್ತನೆ ಮಾಡಿದ್ದು ಮುಂದಿನ ತಿಂಗಳು ಕಟಾವಣೆಗೆ ಬರುತ್ತದೆ ಎಂದರು.

ಒಣ ಮೇವು

ಟೆಂಡರ್ ಮೂಲಕ ರಾಯಚೂರಿನಿಂದ 49 ಮೆಟ್ರಿಕ್ ಟನ್ ಒಣ ಮೇವನ್ನು ಖರೀದಿಸಿದ್ದು ದಾಸ್ತಾನು ಮಾಡಲಾಗಿದೆ. ಈಗಾಗಲೇ ಶ್ರೀನಿವಾಸಪುರ ಮತ್ತು ಮುಳಬಾಗಿಲಿನಲ್ಲಿನ ಮೇವು ಬ್ಯಾಂಕ್ ತೆರೆÉಯಲಾಗಿದ್ದು, ಉಳಿದ 4 ತಾಲ್ಲೂಕುಗಳಲ್ಲಿಯೂ ಮೇವು ಬ್ಯಾಂಕ್ ತೆರೆಯಲಾಗುವುದು. ಅಗತ್ಯವಿರುವ ರೈತರಿಗೆ ರಿಯಾಯಿತಿ ದರವಾದ ಕೆ.ಜಿ.ಗೆ 2 ರೂ ನಂತೆ ವಿತರಿಸಲಾಗುವುದು ಎಂದು ತಿಳಿಸಿದರು.

ಪ್ರವಾಸ ಕಾರ್ಯಕ್ರಮ

ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಬರ ನಿರ್ವಹಣೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಕೋಲಾರ ನಗರದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿರುವ ಕುರಿತು ವೀಕ್ಷಣೆ ಮಾಡಿದರು. ನಂತರ ಹನಿಗಾನಹಳ್ಳಿಯ ಮುನಿಸ್ವಾಮಿಗೌಡರ ರೇಷ್ಮೆ ಬೆಳೆ ವೀಕ್ಷಣೆ ಮಾಡಿದರು. ಸದರಿ ರೈತರಿಗೆ ನರೇಗಾ ಯೋಜನೆಯಡಿ ಪ್ರತಿ ಎಕರೆಗೆ 86 ಸಾವಿರ ರೂ.ಗಳಂತೆ 2 ಎಕರೆಗೆ ಪ್ರೋತ್ಸಾಹಧನ ನೀಡಲಾಗಿದ್ದು, ಕೃಷಿ ಹೊಂಡವನ್ನು ಸಹ ನಿರ್ಮಿಸಿ ಕೊಡಲಾಗಿತ್ತು.

ಚಿಕ್ಕ ಅಂಕಂಡಹಳ್ಳಿ ಗ್ರಾಮಕ್ಕೆ ಭೇಟಿ ನೀಡಿ 10 ಲಕ್ಷ ರೂ. ವೆಚ್ಚದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿರುವ ಚೆಕ್ ಡ್ಯಾಮ್ ಕಾಮಗಾರಿಯನ್ನು ವೀಕ್ಷಿಸಿ ರೈತರಿಂದ ಚೆಕ್ ಡ್ಯಾಂ ನಿರ್ಮಾಣದ ಕುರಿತು ಅಭಿಪ್ರಾಯಗಳನ್ನು ಪಡೆದುಕೊಂಡರು. ಕುಪ್ಪನಹಳ್ಳಿ ಗೇಟ್‍ನಲ್ಲಿ ವಿಜಿಯಮ್ಮ ಅವರ ಜಮೀನಿನಲ್ಲಿ ಬೆಳೆದಿದ್ದ ಮೇವು ಬೆಳೆಯನ್ನು ವೀಕ್ಷಣೆ ಮಾಡಿದರು. ಪಶು ಇಲಾಖೆಯ ವತಿಯಿಂದ 12 ಮಿನಿಕಿಟ್‍ಗಳನ್ನು ಉಚಿತವಾಗಿ ಪಡೆದ ವಿಜಯಮ್ಮ 1 ಎಕರೆ ಪ್ರದೇಶದಲ್ಲಿ ಮೇವನ್ನು ಬೆಳೆದಿದ್ದಾರೆ.

ಇದೇ ರೀತಿ ಅಕ್ಕಪಕ್ಕದಲ್ಲಿರುವ ರೈತರಿಗೂ ಮಿನಿಕಿಟ್‍ಗಳನ್ನು ನೀಡಲಾಗುವುದು. ನೀರು ಲಭ್ಯವಿರುವ ರೈತರು ವಿಜಯಮ್ಮ ಅವರಿಂದ ಸ್ಪೂರ್ತಿ ಪಡೆದು ಇದೇ ರೀತಿ ಮೇವು ಬೆಳೆಯುವಂತೆ ಆಗಬೇಕು ಎಂದು ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾಋಇ ಜಿ ಜಗದೀಶ್ ಅವರು ತಿಳಿಸಿದರು.
ಬಂಗಾರಪೇಟೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿರುವ 143, 144 ಹಾಗೂ 145 ರ ಸಂಖ್ಯೆಯ ಮತಗಟ್ಟೆಗಳಿಗೆ ಭೇಟಿ ನೀಡಿ ಅಲ್ಲಿ ಅಳವಡಿಸಿರುವ ಸೌಲಭ್ಯಗಳಾದ ರ್ಯಾಂಪ್ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಫ್ಯಾನ್, ಶೌಚಾಲಯ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಜಿಲ್ಲೆಯ ಎಲ್ಲಾ ಮತಗಟ್ಟೆಗಳಿಗೂ ಇದೇ ರೀತಿ ಸೌಲಭ್ಯ ಕಲ್ಪಿಸುವಂತೆ ತಿಳಿಸಿದರು.

ಬಂಗಾರಪೇಟೆ ತಾಲ್ಲೂಕಿನ ನಾಗಶೆಟ್ಟಿಹಳ್ಳಿ ಗ್ರಾಮದ ಶುದ್ಧ ನೀರಿನ ಕುಡಿಯುವ ಘಟಕ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ನರೇಗಾ ಯೋಜನೆಯಡಿ ನಿರ್ಮಿಸಿರುವ ನೀರಿನ ತೊಟ್ಟಿ ಕಾಮಗಾರಿಯನ್ನು ವೀಕ್ಷಿಸಿದರು. ನಂತರ ವೆಂಕಟರಮಣಪ್ಪ ಅವರು ಸಾಕಿದ್ದ 14 ಹಸುಗಳನ್ನು ಪೋಷಿಸಲು ತಗಲುವ ಖರ್ಚು, ಹಾಲು ಮಾರಾಟದಿಂದ ಬರುವ ಆದಾಯದ ಕುರಿತು ಮಾಹಿತಿ ಪಡೆದುಕೊಂಡರು. ಜಾನುವಾರುಗಳಿಗೆ ಮೇವು ಬೆಳೆಯಲು ಮಿನಿಕಿಟ್ ಒದಗಿಸುವಂತೆ ಸ್ಥಳದಲ್ಲಿದ್ದ ಪಶು
ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ನಂತರ ಖಾಸಗಿ ಬೋರ್‍ವೆಲ್‍ನಿಂದ ಕುಡಿಯುವ ನೀರನ್ನು ಒದಗಿಸುತ್ತಿರುವ ಮುಳಬಾಗಿಲಿನ ಹೊನಗಾನಹಳ್ಳಿ ರೈತರ ಜಮೀನಿಗೆ ಭೇಟಿ ನೀಡಿ ಬರ ಪರಿಸ್ಥಿತಿಯಲ್ಲಿ ಅಗತ್ಯ ನೀರು ಪೂರೈಸುತ್ತಿರುವ ರೈತನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಅಂಗೊಂಡಹಳ್ಳಿ ನಾಗರಾಜ್ ಅವರ ಸೀಬೆ ತೋಟಕ್ಕೆ ಭೇಟಿ ನೀಡಿ ಉತ್ತಮ ವ್ಯವಸಾಯ ಅಭ್ಯಾಸಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಕುದಾಂಡಹಳ್ಳಿಯಲ್ಲಿ ನರೇಗಾ ಯೋಜನೆಯಡಿ 8 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಚೆಕ್ ಡ್ಯಾಂ ವೀಕ್ಷಣೆ ಮಾಡಿದರು. ಬೆಸ್ತರಹಳ್ಳಿಯಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಿರುವ ಅಂಗನವಾಡಿ ಕೇಂದ್ರವನ್ನು ವೀಕ್ಷಿಸಿದರು. ನಂತರ ಶ್ರೀನಿವಾಸಪುರ ತಾಲ್ಲೂಕಿನ ಹೊಗಳಗೆರೆಯಲ್ಲಿ ದಾಸ್ತಾನು ಮಾಡಿರುವ ಒಣ ಮೇವನ್ನು ವೀಕ್ಷಿಸಿದರು.

ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಜಿ.ಜಗದೀಶ್ ಅವರು ಮಾತನಾಡಿ ಕಳೆದ ಸೆಪ್ಟೆಂಬರ್‍ನಲ್ಲಿ ಜಿಲ್ಲೆಯಲ್ಲಿ ಕೇವಲ 8 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಲಾಗಿತ್ತು. ನಾನು ಜಿಲ್ಲೆಗೆ ಬಂದ ನಂತರ 6 ತಿಂಗಳಲ್ಲಿ ನರೇಗಾ ಯೋಜನೆಯನ್ನು ಚುರುಕುಗೊಳಿಸಿ ಮಾರ್ಚ್ ಅಂತ್ಯಕ್ಕೆ 40 ಲಕ್ಷ 3 ಸಾವಿರ ಮಾನವ ದಿನಗಳನ್ನು ಸೃಜನೆ ಮಾಡಲಾಗಿದೆ. ಕಳೆದ ವರ್ಷ 22 ಲಕ್ಷ ಮಾನವ ದಿನಗಳನ್ನು ಸೃಜಿಸಿ 70 ಕೋಟಿ ಖರ್ಚು ಮಾಡಲಾಗಿತ್ತು. ಈ ವರ್ಷ 130 ಕೋಟಿಗಳನ್ನು ಖರ್ಚು ಮಾಡಲಾಗಿದ್ದು ಉತ್ತಮ ಪ್ರಗತಿ ಸಾಧಿಸಿದ್ದೇವೆ ಎಂದು ತಿಳಿಸಿದರು. ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದು, ಜಿಲ್ಲೆಯಲ್ಲಿ 1000 ಚೆಕ್ ಡ್ಯಾಂಗಳ ನಿರ್ಮಾಣದ ಗುರಿ ಹೊಂದಿದ್ದು, ಅನುಮೋದನೆ ನೀಡಲಾಗಿದೆ.

ಈಗಾಗಲೆ 600 ಚೆಕ್‍ಡ್ಯಾಂಗಳ ನಿರ್ಮಾಣ ಮಾಡಲಾಗಿದೆ. ನರೇಗಾ ಯೋಜನೆಯಡಿ ದನದ ಕೊಟ್ಟಿಗೆ, ಶಾಲಾ ಕಾಂಪೌಂಡ್, ಗೋಕುಂಟೆ, ಅಂಗನವಾಡಿ ಕಟ್ಟಡದ ಜೊತೆಗೆ ಹೆಚ್ಚಾಗಿ ಬಡವರು ಮನೆ ನಿರ್ಮಿಸಿಕೊಳ್ಳಲು ಪ್ರೋತ್ಸಾಹಧನ ಒದಗಿಸಲಾಗಿದೆ ಎಂದರು. ಈ ಬಾರಿ ಹೊಸ ಯೋಜನೆಯಾಗಿ ಪ್ರತಿ ಊರಿಗೆ 1 ಕೆರೆಯನ್ನು ಗುರುತಿಸಿ, ಕೆರೆಯ ಹೂಳನ್ನು ನರೇಗಾ ಯೋಜನೆಯಡಿ ರೈತರಿಂದ ತೆಗೆಸಲಾಗುತ್ತದೆ. ಒಂದು ಮಾನವ ದಿನದ ಕೆಲಸಕ್ಕೆ 1*1 ಮೀಟರ್ ಅಳತೆಯ ಹೂಳನ್ನು ತೆಗೆಯಲು ನೀಡಲಾಗುವುದು. ಒಬ್ಬ ಸಾಮಾನ್ಯ ಮನುಷ್ಯ 3 ಗಂಟೆಯಲ್ಲಿ ಈ ಕೆಲಸವನ್ನು ಮುಗಿಸಿ ನಂತರ ತನ್ನ ಜಮೀನಿನ ಕೆಲಸ ಮಾಡಿಕೊಳ್ಳುವುದರ ಜೊತೆಗೆ 1 ದಿನದ ಕೂಲಿಯನ್ನು ಪಡೆಯಬಹುದಾಗಿದೆ ಎಂದು ತಿಳಿಸಿದರು.

ಅರಣ್ಯ ಸಂರಕ್ಷಣಾಧಿಕಾರಿಗಳಾದ ಚಕ್ರಪಾಣಿ ಅವರು ಮಾತನಾಡಿ ಜಿಲ್ಲೆಯಲ್ಲಿ ಕಾಡು ಪ್ರಾಣಿಗಳಿಗೆ ಕುಡಿಯುವ ನೀರನ್ನು ಒದಗಿಸಲು 106 ಚಟುವಟಿಕೆಗಳನ್ನು ನಿರ್ಮಾಣ ಮಾಡಿ ನೀರನ್ನು ತುಂಬಿಸಲಾಗಿದೆ. ಇದಲ್ಲದೆ ಪ್ರತಿ ತಾಲ್ಲೂಕಿಗೆ 20 ರಂತೆ ಸಿಮೆಂಟ್ ತೊಟ್ಟಿಗಳನ್ನು ನಿರ್ಮಿಸಿ ನೀರನ್ನು ತುಂಬಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಪ್ರವಾಸದ ಸಂದರ್ಭದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರರು ಹಾಗೂ ಕಾರ್ಯನಿರ್ವಾಹಕ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಕ್ರೀಡೆ16 hours ago

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ...

ದಿನದ ಸುದ್ದಿ16 hours ago

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ...

ದಿನದ ಸುದ್ದಿ16 hours ago

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ17 hours ago

HEAVY RAIN | ಮೂರು ದಿನ ಭಾರೀ ಮಳೆ ; ಆರೆಂಜ್ ಅಲರ್ಟ್ ಘೋಷಣೆ

ಸುದ್ದಿದಿನಡೆಸ್ಕ್:ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಆರೆಂಜ್ ಅಲರ್ಟ್ ಹವಾಮಾನ ಇಲಾಖೆ ಘೋಷಿಸಿದೆ. ಇಂದು ಮತ್ತು ನಾಳೆ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ,...

ದಿನದ ಸುದ್ದಿ17 hours ago

ಇಂದು – ನಾಳೆ ಹಾವೇರಿ ಶಾಲಾ – ಕಾಲೇಜುಗಳಿಗೆ ರಜೆ ಘೋಷಣೆ

ಸುದ್ದಿದಿನಡೆಸ್ಕ್:ಇಂದು ಮತ್ತು ನಾಳೆ, ಹಾವೇರಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಉತ್ತರಕಡ ಜಿಲ್ಲೆಯ ಶಾಲೆ ಹಾಗೂ ಪದವಿ ಪೂರ್ವ, ಐಟಿಐ ಮತ್ತು...

ದಿನದ ಸುದ್ದಿ18 hours ago

ಯುವಕರಿಗೆ ಶಿಕ್ಷಣ, ಕೌಶಲ್ಯ ಹೆಚ್ಚಿಸುವ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ

ಸುದ್ದಿದಿನಡೆಸ್ಕ್:ಕೇಂದ್ರ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಖಾತೆ ರಾಜ್ಯ ಸಚಿವ ಜಯಂತ್ ಚೌಧರಿ ನವದೆಹಲಿಯಲ್ಲಿ ನಿನ್ನೆ ‘ಮಾದರಿ ಕೌಶಲ್ಯ ಸಾಲ ಯೋಜನೆ’ಗೆ ಚಾಲನೆ ನೀಡಿದರು. ಸಮಾರಂಭ ಉದ್ದೇಶಿಸಿ ಮಾತನಾಡಿದ...

ದಿನದ ಸುದ್ದಿ19 hours ago

ಇಂದು ಕಾರ್ಗಿಲ್ ವಿಜಯ ದಿವಸ್ ; ಯೋಧರ ಸ್ಮರಣೆ

ಸುದ್ದಿದಿನಡೆಸ್ಕ್:ಇಂದು ಕಾರ್ಗಿಲ್ ವಿಜಯ್ ದಿವಸ್. ಇದರ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕಾರ್ಗಿಲ್ ಯುದ್ಧ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಪಾಕಿಸ್ತಾನ ವಿರುದ್ಧದ ಕಾರ್ಗಿಲ್ ಯುದ್ಧದಲ್ಲಿ ಬಲಿದಾನಗೈದ...

ದಿನದ ಸುದ್ದಿ1 day ago

ದಾವಣಗೆರೆ | ನಾಳೆ ಎಲ್ಲೆಲ್ಲಿ ಕರೆಂಟ್ ಕಟ್..

ಸುದ್ದಿದಿನ,ದಾವಣಗೆರೆ:ಜಲಸಿರಿ ಕಾಮಗಾರಿ ಪ್ರಯುಕ್ತ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ...

ದಿನದ ಸುದ್ದಿ1 day ago

ದಾವಣಗೆರೆ | ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್

ಸುದ್ದಿದಿನ,ದಾವಣಗೆರೆ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟೆಂಬರ್ 14 ರಂದು ರಾಷ್ಟ್ರೀಯ ಲೋಕ್...

ದಿನದ ಸುದ್ದಿ1 day ago

ದಾವಣಗೆರೆ ಜಿಲ್ಲೆಯಲ್ಲಿ ವಾಡಿಕೆಗಿಂತ ಈ ಬಾರಿ ಹೆಚ್ಚು ಮಳೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರಿನಲ್ಲಿ ವಾಡಿಕೆಗಿಂತ 41 ಮಿ.ಮೀ ಹೆಚ್ಚು ಮಳೆಯಾಗಿದೆ. 2024 ರ ಜನವರಿಯಿಂದ ಜುಲೈ 23 ರ ವರೆಗಿನ...

Trending