Connect with us

ಕ್ರೀಡೆ

ಕೆಪಿಎಲ್ ಪಂದ್ಯಾವಳಿ | ಆಗಸ್ಟ್ 15 ರಿಂದ ಅದ್ದೂರಿ ಆರಂಭ..!

Published

on

ಸುದ್ದಿದಿನ, ಬೆಂಗಳೂರು | ಕೆಪಿಎಲ್ ನ 7ನೇ ಆವೃತಿಯು ಇದೇ ಆಗಸ್ಟ್ 15 ರಿಂದ ಆರಂಭವಾಗಲಿದೆ. ಅಂದು ಚಿನ್ನಸ್ವಾಮಿ‌ ಕ್ರೀಡಾಂಗಣದಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ಮತ್ತು ಹಾಲಿ ಚಾಂಪಿಯನ್ ಬೆಳಗಾವು ಪ್ಯಾಂಥರ್ಸ್ ನಡುವೆ ಮೊದಲ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ.

ಹಾಗೇ ಆಗಸ್ಟ್ 15 ರಿಂದ 17 ರವರೆಗೆ ಬೆಂಗಳೂರಿನಲ್ಲಿ ಮೂರು ಪಂದ್ಯಗಳು ನಡೆಯಲಿದ್ದು, ಆ. 19 ರಿಂದ 26 ರವರೆಗೆ ಹುಬ್ಬಳ್ಳಿಯ ರಾಜನಗರ ಕ್ರೀಡಾಂಗಣದಲ್ಲಿ ಒಟ್ಟು 8 ದಿನದಲ್ಲಿ 11ಪಂದ್ಯಗಳು ನಡೆಯಲಿವೆ. ಹಾಗದೆ ಆ.28 ರಿಂದ ಸೆ. 6ರವರೆಗೆ ಎಸ್ ಡಿ ಎನ್ ಆರ್ ಒಡೆಯರ್ ಕ್ರೀಡಾಂಗಣ, ಮೈಸೂರಿನಲ್ಲಿ ಪೈನಲ್ ಪಂದ್ಯ ನಡೆಯಲಿದ್ದು ಒಟ್ಟು ಹತ್ತು ಪಂದ್ಯಗಳು ಜರುಗಲಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ವಿಶ್ವಕಪ್ ಶೂಟಿಂಗ್ ಪಂದ್ಯಾವಳಿ; ಭಾರತದ ರೈತಮ್ ಸಂಗ್ವಾನ್‌ಗೆ ಕಂಚಿನ ಪದಕ

Published

on

ಸುದ್ದಿದಿನ ಡೆಸ್ಕ್ : ಅಜರ್ ಬೈಜಾನ್‌ನ ಬಾಕುವಿನಲ್ಲಿ ನಡೆಯುತ್ತಿರುವ ಐಎಸ್‌ಎಸ್‌ಎಫ್ ಶೂಟಿಂಗ್ ವಿಶ್ವಕಪ್ ಪಂದ್ಯಾವಳಿಯ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ರೈತಮ್ ಸಂಗ್ವಾನ್ ಕಂಚಿನ ಪದಕ ಗೆದ್ದಿದ್ದಾರೆ.

ಅಂತಿಮ ಸುತ್ತಿನಲ್ಲಿ ಅವರು,219.1 ಅಂಕ ಗಳಿಸುವ ಮೂಲಕ ಮೂರನೇ ಸ್ಥಾನಕ್ಕೆ ತೃಪ್ತಿಪಟ್ಟು, ಕಂಚಿನ ಪದಕ ತಮ್ಮದಾಗಿಸಿಕೊಂಡರು. ವಿಶ್ವಕಪ್ ಶೂಟಿಂಗ್ ಪಂದ್ಯಾವಳಿಯಲ್ಲಿ ಇದು ಸಂಗ್ವಾನ್ ಅವರ ಪ್ರಥಮ ವೈಯಕ್ತಿಕ ಪದಕವಾಗಿದೆ.

 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್: ಭಾರತದ ಚಿರಾಗ್ ಮತ್ತು ಸಾತ್ವಿಕ್ ಜೋಡಿಗೆ ಸ್ವರ್ಣ ಪದಕ

Published

on

ಸುದ್ದಿದಿನ, ದುಬೈ : ದುಬೈನಲ್ಲಿ ನಡೆದ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನ ಪುರುಷರ ಡಬಲ್ಸ್ ವಿಭಾಗದಲ್ಲಿ ಭಾರತದ ಸಾತ್ವಿಕ್ ಸಾಯಿರಾಜ್ ರಾಂಕಿ ರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಜೋಡಿ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ನಿನ್ನೆ ನಡೆದ ಫೈನಲ್ ಪಂದ್ಯದಲ್ಲಿ 8ನೇ ಶ್ರೇಯಾಂಕಿತ ಮಲೇಷ್ಯಾದ ಟಿಯೊ ಇ ಯಿ ಮತ್ತು ಒಂಗ್ ಯೆವ್ ಸಿನ್ ವಿರುದ್ಧ 16-21,21-17ಮತ್ತು 21-19 ಗೇಮ್ ಗಳ ಅಂತರದಿಂದ ಗೆದ್ದು ಇತಿಹಾಸ ನಿರ್ಮಿಸಿದೆ.1965ರಲ್ಲಿ ದಿನೇಶ್ ಖನ್ನಾ ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಷಿಪ್ ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಚಿನ್ನ ಗೆದ್ದ ನಂತರ ಭಾರತಕ್ಕೆ ಒಲಿದ ಮೊದಲ ಸ್ವರ್ಣ ಪದಕ ಇದಾಗಿದೆ.

ಭಾರತ ಬ್ಯಾಡ್ಮಿಂಟನ್ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿರುವ ಚಿರಾಗ್ ಮತ್ತು ಸಾತ್ವಿಕ್ ಜೋಡಿಗೆ ಪ್ರಧಾನಿ ನರೇಂದ್ರ ಮೋದಿ, ಕ್ರೀಡಾ ಸಚಿವ ಹಾಗೂ ಭಾರತ ಬ್ಯಾಡ್ಮಿಂಟನ್ ಸಂಸ್ಥೆ ಸೇರಿದಂತೆ ಹಲವು ಗಣ್ಯರು ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ, ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್‌ಷಿಪ್ ನಲ್ಲಿ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಪುರುಷರ ಡಬಲ್ಸ್ ಜೋಡಿಯಾಗಿರುವ ಸಾತ್ವಿಕ್‌ಸಾಯಿರಾಜ್ ಮತ್ತು ಚಿರಾಗ್ ಶೆಟ್ಟಿಗೆ ಅಭಿನಂದನೆಗಳು ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಐಪಿಎಲ್ ಕ್ರಿಕೆಟ್ : ರಾಜಸ್ಥಾನ್ ರಾಯಲ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಇಂದು ಮುಖಾಮುಖಿ

Published

on

ಸುದ್ದಿದಿನ ಡೆಸ್ಕ್ : ಐಪಿಎಲ್ ಟೂರ್ನಿಯ ಇಂದಿನ ಬಹು ನಿರೀಕ್ಷಿತ ಪಂದ್ಯದಲ್ಲಿ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ 3 ನೇ ಸ್ಥಾನದಲ್ಲಿರುವ ಆತಿಥೇಯ ರಾಜಸ್ಥಾನ ರಾಯಲ್ಸ್ ತಂಡವನ್ನು ಎದುರಿಸಲಿದೆ.

ಟೂರ್ನಿಯೂದ್ದಕ್ಕೂ ಅತ್ಯೂತ್ತಮ ಪ್ರದರ್ಶನ ನೀಡುತ್ತಿರುವ ಎರಡೂ ತಂಡಗಳು ಜಯ ಗಳಿಸಲಿಕ್ಕೆ ತಮ್ಮದೇ ಆದ ಕಾರ್ಯತಂತ್ರ ರೂಪಿಸುತ್ತಿವೆ. ಆಡಿರುವ 7 ಪಂದ್ಯಗಳಲ್ಲಿ ತಮ್ಮ ಅಮೋಘ ನಾಯಕತ್ವದ ಪ್ರದರ್ಶನದಿಂದಾಗಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದ ಚೆನ್ನೈ ತಂಡ ಐದು ಪಂದ್ಯ ಜಯಿಸಿ ಅಪಾರ ಆತ್ಮ ವಿಶ್ವಾಸದಿಂದ ಬೀಗುತ್ತಿದೆ.

ಇತ್ತ ಆರ್ ಆರ್ ತಂಡ ಸಹ ಸಂಜು ಸ್ಯಾಮ್ಸನ್ ನಾಯಕತ್ವದ ಗರಡಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಇಂದಿನ ಪಂದ್ಯ ತೀವೃ ಪೈಪೋಟಿಯಿಂದ ಕೂಡಿರಲಿದೆ. ಇನ್ನೊಂದೆಡೆ ಕಳೆದ ರಾತ್ರಿ ಐಪಿಎಲ್ ಪಂದ್ಯಾವಳಿಯ ಬಹು ನೀರಿಕ್ಷಿತ ರಾಯಲ್ ಚಾಲೆಂಜರ್‍ಸ್ ಮತ್ತು ಕೊಲ್ಕತ್ತಾ ನೈಟ್ ರೈಡರ್‍ಸ್ ತಂಡದ ಮಧ್ಯೆ ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಟೂರ್ನಿಯ 36ನೇ ಪಂದ್ಯದಲ್ಲಿ, ಕೆಕೆಆರ್ ತಂಡ ಆತಿಥೇಯ ರಾಯಲ್ಸ್ ಚಾಲೆಂಜರ್‍ಸ್ ತಂಡವನ್ನು 21ರನ್‌ಗಳಿಂದ ಮಣಿಸಿತು.

ಟಾಸ್ ಗೆದ್ದ ಬೆಂಗಳೂರು ತಂಡದ ನಾಯಕ ಕೋಹ್ಲಿ ಮೊದಲು ಎದುರಾಳಿ ತಂಡವನ್ನು ಬ್ಯಾಟಿಂಗ್‌ಗೆ ಅಹ್ವಾನಿಸಿದರು. ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡ ಕೋಲ್ಕತ್ತಾ ತಂಡ, ಜೆಸನ್ ರಾಯ್, ನಾಯಕ ನಿತಿಶ್ ರಾಣಾ ಮತ್ತು ವೆಂಕಟೇಶ್ ಐಯ್ಯರ್ ಅವರ ಅತ್ಯೂತ್ತಮ ಬ್ಯಾಟಿಂಗ್‌ನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 200 ರನ್‌ಗಳ ಬೃಹತ್ ಮೊತ್ತ ಪೇರಿಸಿತು. ಇದಕ್ಕೆ ಪ್ರತ್ಯೂತ್ತರವಾಗಿ ಬ್ಯಾಟ್ ಬೀಸಿದ ಆತೀಥೇಯ ರಾಯಲ್ ಚಾಲೇಂಜರ್‍ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ ಕೇವಲ 179 ರನ್ ಗಳಿಸಿ ಎದುರಾಳಿ ತಂಡಕ್ಕೆ 21 ರನ್‌ಗಳಿಂದ ಶರಣಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ4 hours ago

ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ; ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಉಚಿತ ಪ್ರಯಾಣ

ಸುದ್ದಿದಿನ ಡೆಸ್ಕ್ : ಇದೇ 12 ರಿಂದ 19 ರವರೆಗೆ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ...

ದಿನದ ಸುದ್ದಿ6 hours ago

ಕನ್ನಡ ಸಾಹಿತ್ಯ ಪರಿಷತ್ | ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟ

ಸುದ್ದಿದಿನ, ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ದತ್ತಿ ಪ್ರಶಸ್ತಿ ಪ್ರಕಟವಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ...

ದಿನದ ಸುದ್ದಿ14 hours ago

ಮುಂಗಾರು ಹಂಗಾಮಿನ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ

ಸುದ್ದಿದಿನ ಡೆಸ್ಕ್ : 2023-24ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯ ಆರ್ಥಿಕ ವ್ಯವಹಾರಗಳ ಕುರಿತ ಸಚಿವ...

ದಿನದ ಸುದ್ದಿ15 hours ago

ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡಲು ಒತ್ತಾಯ

ಸುದ್ದಿದಿನ ಡೆಸ್ಕ್ : ಆರ್ಥಿಕತೆಯಲ್ಲಿ ಸಾಮಾನ್ಯ ಸ್ಥಿತಿ ಮರಳುವವರೆಗೆ ವಿದ್ಯುತ್ ಬಳಕೆ ಶುಲ್ಕ ಹೆಚ್ಚಳವನ್ನು ಮುಂದೂಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ಸರ್ಕಾರವನ್ನು ಒತ್ತಾಯಿಸಿದೆ. ಪ್ರಸ್ತುತ...

ದಿನದ ಸುದ್ದಿ15 hours ago

ಗೃಹಜ್ಯೋತಿ ಯೋಜನೆ | ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯ : ಸಚಿವ ಕೆ.ಜೆ. ಜಾರ್ಜ್

ಸುದ್ದಿದಿನ, ಬೆಂಗಳೂರು : ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ಉಚಿತ ವಿದ್ಯುತ್, ಮನೆ ಮಾಲೀಕರು ಮತ್ತು ಬಾಡಿಗೆದಾರರಿಗೂ ಅನ್ವಯಿಸಲಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ....

ದಿನದ ಸುದ್ದಿ19 hours ago

ಪದವಿ ಮತ್ತು ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ

ಸುದ್ದಿದಿನ,ದಾವಣಗೆರೆ : ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಅಂಗ ಸಂಸ್ಥೆಯಾಗಿರುವ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು ರಾಮನ್ ಸಂಶೋಧನಾ ಸಂಸ್ಥೆಯ 75 ನೇ ವಾರ್ಷಿಕೋತ್ಸದ ಅಂಗವಾಗಿ...

ದಿನದ ಸುದ್ದಿ1 day ago

ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ನಿಗದಿ

ಸುದ್ದಿದಿನ ಡೆಸ್ಕ್ : ವಿಧಾನ ಪರಿಷತ್ ಸದಸ್ಯರಾಗಿದ್ದ ಬಾಬುರಾವ್ ಚಿಂಚನಸೂರು, ಆರ್.ಶಂಕರ್ ಹಾಗೂ ಲಕ್ಷ್ಮಣ್ ಸವದಿ, ರಾಜೀನಾಮೆಯಿಂದ ತೆರವಾಗಿದ್ದ ಮೂರು ಸ್ಥಾನಗಳಿಗೆ ಕೇಂದ್ರ ಚುನಾವಣಾ ಆಯೋಗ ದಿನಾಂಕ...

ದಿನದ ಸುದ್ದಿ1 day ago

ಮೀಸಲಾತಿ ಹೆಚ್ಚಳ ; ಸಂವಿಧಾನದ 9ನೇ ಶೆಡ್ಯುಲ್‌ನಲ್ಲಿ ಸೇರಿಸಲು ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಒತ್ತಾಯ

ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಶಿಕ್ಷಣ ಮತ್ತು ಉದ್ಯೋಗದಲ್ಲಿ ಪರಿಶಿಷ್ಟ ಸಮುದಾಯದವರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಸಂವಿಧಾನದ 9ನೇ ಶೆಡ್ಯಲ್‌ನಲ್ಲಿ ಸೇರ್ಪಡೆಗೊಳಿಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಮುಖ್ಯಮಂತ್ರಿ...

ದಿನದ ಸುದ್ದಿ2 days ago

ನೈತಿಕ ಪೊಲೀಸ್‍ಗಿರಿಗೆ ಅವಕಾಶ ಇಲ್ಲ ; ಸಿ.ಎಂ. ಸಿದ್ದರಾಮಯ್ಯ ಎಚ್ಚರಿಕೆ

ಸುದ್ದಿದಿನ,ದಾವಣಗೆರೆ : ಪ್ರಜಾಪ್ರಭುತ್ವದಲ್ಲಿ ಜನರೇ ಮಾಲಿಕರಾಗಿದ್ದು ಜನರ ಆಶೋತ್ತರಗಳಿಗೆ ಸ್ಪಂಧಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸೂಚನೆ ನೀಡಿದರು. ಅವರು ಸೋಮವಾರ ದಾವಣಗೆರೆ ಜಿಲ್ಲಾ ಪಂಚಾಯಿತಿ...

ದಿನದ ಸುದ್ದಿ3 days ago

ಗೋ ಹತ್ಯೆ ನಿಷೇಧ ಕಾಯ್ದೆ ; ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ : ಸಿಎಂ ಸಿದ್ದರಾಮಯ್ಯ

ಸುದ್ದಿದಿನ, ದಾವಣಗೆರೆ : ಗೋ ಹತ್ಯೆ ನಿಷೇಧ ಕಾಯ್ದೆ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಮಾಡಿ ಅಂತಿಮ ತೀರ್ಮಾನ ಕೈ ಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

Trending