ದಿನದ ಸುದ್ದಿ
ವೈಫೈ ಬಳಸಿ ಕೆಪಿಎಸ್ಸಿ ಪಾಸಾದ; ಹೇಗೆಂದು ಗೊತ್ತಾ?
ಸುದ್ದಿದಿನ ಡೆಸ್ಕ್: ಉಚಿತ ವೈಫೈ ಸಿಕ್ಕರೆ ಹಾಡು, ಸಿನಿಮಾ, ಗೇಮ್, ಚಾಟ್ ಮಾಡಲು ಬಳಸಿಕೊಳ್ಳುತ್ತಾರೆ. ಆದರೆ, ರೈಲ್ವೆ ನಿಲ್ದಾಣದಲ್ಲಿ ಕೂಲಿ ಮಾಡುವ ಯುವಕನೊಬ್ಬ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡಿದ್ದಾನೆ.
ಹೆಸರು ಶ್ರೀನಾಥ್, ಬಡ ಕುಟುಂಬದ ಯುವಕ. ಕೇರಳದ ಎರ್ನಾಕುಲಂನ ರೈಲ್ವೆ ಜಂಕ್ಷನ್ ನಲ್ಲಿ ಐದು ವರ್ಷಗಳಿಂದ ಲಗೇಜ್ ಹೊತ್ತೊಯ್ಯುವ ಕೂಲಿಕಾರ. ಆದರೆ, ಅವನ ಕಿವಿಯಲ್ಲಿ ಇಯರ್ ಫೋನ್ ಸಿಕ್ಕಿಸಿಕೊಂಡಿರುತ್ತದೆ. ಇದೆ ಶ್ರೀನಾಥನ ಯಶಸ್ಸಿನ ಸಾಧನ.
ಯಾರಿಗಾದರೂ ಒಂದು ಕೆಲಸ ಸಿಕ್ಕಿಬಿಟ್ಟರೆ ಅದನ್ನು ಬೆಟ್ಟದಂತೆ ಭಾವಿಸುತ್ತಾರೆ, ಅದನ್ನು ನಿಭಾಯಿಸುವುದರಲ್ಲೇ ಹೈರಾಣರಾಗಿದ್ದೇವೆ ಎಂಬಂತೆ ಶೋ ಮಾಡುತ್ತಾರೆ. ಆದರೆ, ಶ್ರೀನಾಥ್ ಹಾಗೆ ಮಾಡದೇ ಕೆಲಸ ಮಧ್ಯೆ ಓದುತ್ತಿದ್ದನೆಂದರೆ ನೀವು ನಂಬಲೇಬೇಕು. ಹೇಳಿ ಕೇಳಿ ಎರ್ನಾಕುಲಂ ನಗರ, ರೈಲ್ವೆ ಜಂಕ್ಷನ್ ಬೇರೆ ಆಗಿದೆ. ಈ ರೈಲ್ವೆ ನಿಲ್ದಾಣದಲ್ಲಿ ವೈಫೈ ಉಚಿತವಾಗಿದೆ. ಯಾರಾಬೇಕಾದರೂ ಬಳಸಿಕೊಳ್ಳಬಹುದು.
ಕೆಲಸ ಬಿಟ್ಟು ಓದುತ್ತಾ ಕುಳಿತರೆ ತನ್ನ ನಂಬಿದ ಕುಟುಂಬ ಉಪವಾಸ ಬೀಳಬೇಕಾಗುತ್ತದೆ ಎಂಬ ಆತಂಕದಲ್ಲಿ ಕೈಯಲ್ಲಿ ಪುಸ್ತಕ ಹಿಡಿಯದೇ ಕಿವಿಗೆ ಇಯರ್ ಫೋನ್ ಹಾಕಿಕೊಂಡು ಈ ವೈಫೈಯನ್ನು ಶ್ರೀನಾಥ್ ಸ್ಟಡಿ ಮೆಟಿರಿಯಲ್ ಆಗಿ ಬಳಸಿಕೊಂಡು ಅಭ್ಯಾಸ ನಿರತನಾದ.
ಕೋರ್ಸ್ ಮೆಟರಿಯಲ್ ಇಯರ್ ಫೋನ್ ಮೂಲಕ ಕೇಳುತ್ತಿದ್ದ. ಮನಸ್ಸಿನಲ್ಲೇ ಸಮಸ್ಯೆ ಬಗೆಹರಿಸಿಕೊಳ್ಳುತ್ತಿದ್ದ. ಹೀಗೆ ಉಚಿತ ವೈಫೈಯನ್ನು ಸದ್ಬಳಕೆ ಮಾಡಿಕೊಂಡು ಕೇರಳ ಪಬ್ಲಿಕ್ ಸರ್ವೀಸ್ ಕಮಿಷನ್ ಪರೀಕ್ಷೆಗೆ ತಯಾರಿ ನಡೆಸಿದ. ಶ್ರಮ ಪಟ್ಟರೆ ತಕ್ಕ ಫಲ ಸಿಗುತ್ತದೆ ಎಂಬುದಕ್ಕೆ ಈ ಯುವಕನೇ ಸೂಕ್ತ ನಿದರ್ಶನ.
ರೈಲ್ವೆ ನಿಲ್ದಾಣದಲ್ಲಿ ಲಭಿಸುತ್ತಿದ್ದ 20-40 MBPS ವೇಗದ ಇಂಟರ್ನೆಟ್ ಬಳಸಿಕೊಂಡು ಪ್ರಶ್ನಾವಳಿ, ಪುಸ್ತಕ, ಆನ್ ಲೈನ್ ಸ್ಟಡಿ ಮೆಟಿರಿಯಲ್ ಡೌನ್ಲೋಡ್ ಮಾಡಿಕೊಳ್ಳುತ್ತಿದ್ದ. ಇದರಿಂದ ಶ್ರೀನಾಥಗೆ ಹಣ ಉಳಿತಾಯವಾಗುತ್ತಿತ್ತು. ಈಗ ಶ್ರೀನಾಥ್ ಕೇರಳ ಸರ್ಕಾರದ ಭೂ ಕಂದಾಯ ಇಲಾಖೆಯಲ್ಲಿ ವಿಲೇಜ್ ಫೀಲ್ಡ್ ಅಸಿಸ್ಟೆಂಟ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ.
(ಕೃಪೆ-NDTV)
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


