ದಿನದ ಸುದ್ದಿ
ವೈಫೈ ಬಳಸಿ ಕೆಪಿಎಸ್ಸಿ ಪಾಸಾದ; ಹೇಗೆಂದು ಗೊತ್ತಾ?
![](https://suddidina.com/wp-content/uploads/2018/05/Kerala-suddidina.jpg)
ಸುದ್ದಿದಿನ ಡೆಸ್ಕ್: ಉಚಿತ ವೈಫೈ ಸಿಕ್ಕರೆ ಹಾಡು, ಸಿನಿಮಾ, ಗೇಮ್, ಚಾಟ್ ಮಾಡಲು ಬಳಸಿಕೊಳ್ಳುತ್ತಾರೆ. ಆದರೆ, ರೈಲ್ವೆ ನಿಲ್ದಾಣದಲ್ಲಿ ಕೂಲಿ ಮಾಡುವ ಯುವಕನೊಬ್ಬ ಸರ್ಕಾರಿ ನೌಕರಿ ಗಿಟ್ಟಿಸಿಕೊಂಡಿದ್ದಾನೆ.
ಹೆಸರು ಶ್ರೀನಾಥ್, ಬಡ ಕುಟುಂಬದ ಯುವಕ. ಕೇರಳದ ಎರ್ನಾಕುಲಂನ ರೈಲ್ವೆ ಜಂಕ್ಷನ್ ನಲ್ಲಿ ಐದು ವರ್ಷಗಳಿಂದ ಲಗೇಜ್ ಹೊತ್ತೊಯ್ಯುವ ಕೂಲಿಕಾರ. ಆದರೆ, ಅವನ ಕಿವಿಯಲ್ಲಿ ಇಯರ್ ಫೋನ್ ಸಿಕ್ಕಿಸಿಕೊಂಡಿರುತ್ತದೆ. ಇದೆ ಶ್ರೀನಾಥನ ಯಶಸ್ಸಿನ ಸಾಧನ.
ಯಾರಿಗಾದರೂ ಒಂದು ಕೆಲಸ ಸಿಕ್ಕಿಬಿಟ್ಟರೆ ಅದನ್ನು ಬೆಟ್ಟದಂತೆ ಭಾವಿಸುತ್ತಾರೆ, ಅದನ್ನು ನಿಭಾಯಿಸುವುದರಲ್ಲೇ ಹೈರಾಣರಾಗಿದ್ದೇವೆ ಎಂಬಂತೆ ಶೋ ಮಾಡುತ್ತಾರೆ. ಆದರೆ, ಶ್ರೀನಾಥ್ ಹಾಗೆ ಮಾಡದೇ ಕೆಲಸ ಮಧ್ಯೆ ಓದುತ್ತಿದ್ದನೆಂದರೆ ನೀವು ನಂಬಲೇಬೇಕು. ಹೇಳಿ ಕೇಳಿ ಎರ್ನಾಕುಲಂ ನಗರ, ರೈಲ್ವೆ ಜಂಕ್ಷನ್ ಬೇರೆ ಆಗಿದೆ. ಈ ರೈಲ್ವೆ ನಿಲ್ದಾಣದಲ್ಲಿ ವೈಫೈ ಉಚಿತವಾಗಿದೆ. ಯಾರಾಬೇಕಾದರೂ ಬಳಸಿಕೊಳ್ಳಬಹುದು.
ಕೆಲಸ ಬಿಟ್ಟು ಓದುತ್ತಾ ಕುಳಿತರೆ ತನ್ನ ನಂಬಿದ ಕುಟುಂಬ ಉಪವಾಸ ಬೀಳಬೇಕಾಗುತ್ತದೆ ಎಂಬ ಆತಂಕದಲ್ಲಿ ಕೈಯಲ್ಲಿ ಪುಸ್ತಕ ಹಿಡಿಯದೇ ಕಿವಿಗೆ ಇಯರ್ ಫೋನ್ ಹಾಕಿಕೊಂಡು ಈ ವೈಫೈಯನ್ನು ಶ್ರೀನಾಥ್ ಸ್ಟಡಿ ಮೆಟಿರಿಯಲ್ ಆಗಿ ಬಳಸಿಕೊಂಡು ಅಭ್ಯಾಸ ನಿರತನಾದ.
ಕೋರ್ಸ್ ಮೆಟರಿಯಲ್ ಇಯರ್ ಫೋನ್ ಮೂಲಕ ಕೇಳುತ್ತಿದ್ದ. ಮನಸ್ಸಿನಲ್ಲೇ ಸಮಸ್ಯೆ ಬಗೆಹರಿಸಿಕೊಳ್ಳುತ್ತಿದ್ದ. ಹೀಗೆ ಉಚಿತ ವೈಫೈಯನ್ನು ಸದ್ಬಳಕೆ ಮಾಡಿಕೊಂಡು ಕೇರಳ ಪಬ್ಲಿಕ್ ಸರ್ವೀಸ್ ಕಮಿಷನ್ ಪರೀಕ್ಷೆಗೆ ತಯಾರಿ ನಡೆಸಿದ. ಶ್ರಮ ಪಟ್ಟರೆ ತಕ್ಕ ಫಲ ಸಿಗುತ್ತದೆ ಎಂಬುದಕ್ಕೆ ಈ ಯುವಕನೇ ಸೂಕ್ತ ನಿದರ್ಶನ.
ರೈಲ್ವೆ ನಿಲ್ದಾಣದಲ್ಲಿ ಲಭಿಸುತ್ತಿದ್ದ 20-40 MBPS ವೇಗದ ಇಂಟರ್ನೆಟ್ ಬಳಸಿಕೊಂಡು ಪ್ರಶ್ನಾವಳಿ, ಪುಸ್ತಕ, ಆನ್ ಲೈನ್ ಸ್ಟಡಿ ಮೆಟಿರಿಯಲ್ ಡೌನ್ಲೋಡ್ ಮಾಡಿಕೊಳ್ಳುತ್ತಿದ್ದ. ಇದರಿಂದ ಶ್ರೀನಾಥಗೆ ಹಣ ಉಳಿತಾಯವಾಗುತ್ತಿತ್ತು. ಈಗ ಶ್ರೀನಾಥ್ ಕೇರಳ ಸರ್ಕಾರದ ಭೂ ಕಂದಾಯ ಇಲಾಖೆಯಲ್ಲಿ ವಿಲೇಜ್ ಫೀಲ್ಡ್ ಅಸಿಸ್ಟೆಂಟ್ ಆಫೀಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದಾನೆ.
(ಕೃಪೆ-NDTV)
ಸುದ್ದಿದಿನ.ಕಾಂ|ವಾಟ್ಸಾಪ್|9986715401
![](https://suddidina.com/wp-content/uploads/2022/04/20210226_111406.jpg)
ಕ್ರೀಡೆ
Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು
![](https://suddidina.com/wp-content/uploads/2024/07/suddidina_paris_Olympic.jpg)
ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.
ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.
ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
![](https://suddidina.com/wp-content/uploads/2024/06/judges_suddidina.jpg)
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
ದಿನದ ಸುದ್ದಿ
KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ
![](https://suddidina.com/wp-content/uploads/2024/05/application_invitation_arji_suddidina.jpg)
ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
![](https://suddidina.com/wp-content/uploads/2022/04/20210226_111406.jpg)
-
ದಿನದ ಸುದ್ದಿ6 days ago
ಆತ್ಮಕತೆ | ಹೊಸದಾಗಿ ಬಂದ ಹಳೆಯ ಗುರುಗಳು
-
ದಿನದ ಸುದ್ದಿ3 days ago
K-SET| ಕೆಸೆಟ್ ಪರೀಕ್ಷೆ ; ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ
-
ದಿನದ ಸುದ್ದಿ6 days ago
ಶಿರೂರು ಗುಡ್ಡಕುಸಿತ ಪ್ರದೇಶಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ
-
ದಿನದ ಸುದ್ದಿ5 days ago
ಅತಿಥಿ ಉಪನ್ಯಾಸಕ ಹುದ್ದೆ ; ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ದಾವಣಗೆರೆ ಭಾರೀ ಮಳೆ | ಬೆಳೆ ನಷ್ಟವಾಗಿದ್ದೆಷ್ಟು..?
-
ದಿನದ ಸುದ್ದಿ6 days ago
ಕೃಷಿ ಪಂಡಿತ್, ಆತ್ಮಶ್ರೇಷ್ಠ ಕೃಷಿಕ ಪ್ರಶಸ್ತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ನಾಳೆಯಿಂದ ಸಂಸತ್ತಿನ ಬಜೆಟ್ ಅಧಿವೇಶನ
-
ದಿನದ ಸುದ್ದಿ4 days ago
ಬಲ್ಲಿರೇನು ಕೊಬ್ಬರಿ ಎಣ್ಣೆ ಮಹಿಮೆ..!