ದಿನದ ಸುದ್ದಿ
ನಾಳೆಯಿಂದ ಕೆ.ಆರ್.ಮಾರ್ಕೆಟ್ ಓಪನ್
ಸುದ್ದಿದಿನ, ಬೆಂಗಳೂರು:ಕೊರೋನಾ ಸೋಂಕು ಪ್ರಕರಣ ಹೆಚ್ಚುತ್ತವೆ ಎಂಬ ಭೀತಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಈ ಹಿಂದೆ ಬೆಂಗಳೂರಿನ ಕೆ.ಆರ್.ಮಾರುಕಟ್ಟೆಯನ್ನು ಮುಚ್ಚಿತ್ತು. ಸದ್ಯ ಎಲ್ಲವೂ ನಿಯಂತ್ರಣಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಮಾರುಕಟ್ಟೆಯನ್ನು ನಾಳೆಯಿಂದಲೇ ತೆರೆಯಲು ಪಾಲಿಕೆ ತೀರ್ಮಾನಿಸಿದೆ.
ಬಿಬಿಎಂಪಿ ಸಿಬ್ಬಂದಿ ಈಗಾಗಲೇ ಮಾರುಕಟ್ಟೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದು, ಸ್ಯಾನಿಟೈಸ್ ಮಾಡುತ್ತಿದ್ದಾರೆ. ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಗಳನ್ನೂ ಹಾಕುತ್ತಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243