ದಿನದ ಸುದ್ದಿ
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ 190 ನೇ ಪುಣ್ಯ ಸ್ಮರಣೆಯ ಈ ಹೊತ್ತಿನಲ್ಲಿ..!

- ದಿವ್ಯಶ್ರೀ. ವಿ, ಬೆಂಗಳೂರು
ಇಂದು ಭಾರತದ ಧೀರ ಮತ್ತು ಅತ್ಯಂತ ಶ್ರೇಷ್ಠ ಸ್ವಾತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ 190 ನೇ ಪುಣ್ಯ ಸ್ಮರಣೆ. ಇವರು 15 ರಂದು ಆಗಸ್ಟ್ 1796 ರಲ್ಲಿ ಸಂಗೊಳ್ಳಿ ಎಂಬ ಗ್ರಾಮದಲ್ಲಿ ಅಂದರೆ ಇಂದಿನ ಬೆಳಗಾವಿಯಲ್ಲಿ ಜನಿಸಿದರು. ಬ್ರಿಟಿಷರ ಆಡಳಿತದ ವಿರುದ್ಧ ಹೋರಾಡಿದ ಪ್ರಮುಖರಲ್ಲಿ ಇವರೊಬ್ಬರು.
ಇವರ ತಂದೆ ಭರಮಪ್ಪ ರೋಗಣ್ಣವರ ತಾಯಿ ಕೆಂಚವ್ವ ರೋಗಣ್ಣವರ. ಧೀರ, ವೀರ,ಶೂರ, ಕ್ರಾಂತಿವೀರ ಹೀಗೆ ಅನೇಕ ಹೆಸರುಗಳು ರಾಯಣ್ಣನಿಗೆ ಇದೆ. ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮನವರ ಬಲಗೈ ಬಂಟನಾಗಿದ್ದರು ರಾಯಣ್ಣ. ಕಿತ್ತೂರಾಣಿ ಚೆನ್ನಮ್ಮನ ಆಸ್ಥಾನದಲ್ಲಿ ಇದ್ದ ರಾಯಣ್ಣನಿಗೆ ಅಲ್ಲಿನ ಜನರೆಲ್ಲರು ರಾಯ ಎಂದು ಕರೆಯುತ್ತಿದ್ದರು.
ಬ್ರಿಟಿಷರ ವಿರುದ್ಧ ಗೆರಿಲ್ಲಾ ಯುದ್ಧ ಮಾದರಿಯನ್ನು ಅನುಸರಿಸಿ ಹೋರಾಟ ನಡೆಸಿದ ವೀರ. 1824 ನೇ ಇಸವಿಯಲ್ಲಿ ಭಾರತ ದೇಶವನ್ನು ಅಕ್ರಮಿಸಿಕೊಂಡಿದ್ದ ಬ್ರಿಟಿಷರ ವಿರುದ್ಧ ಕೆಚ್ಚೆದೆಯ ಹೋರಾಟ ನಡೆಸಿದ ವ್ಯಕ್ತಿ ನಮ್ಮ ರಾಯಣ್ಣ. ಕಿತ್ತೂರು ರಾಣಿ ಚೆನ್ನಮ್ಮರಿಗೆ ಬೆನ್ನೆಲುಬಾಗಿ ನಿಂತು ರಾಜ್ಯವನ್ನು ಬ್ರಿಟೀಷರಿಂದ ರಕ್ಷಣೆ ಮಾಡಲು ರಾಯಣ್ಣ ಹೋರಾಟ ನಡೆಸಿದರು.
ಯುದ್ದದಲ್ಲಿ ಮೋಸದಿಂದ ರಾಯಣ್ಣನನ್ನು ಬ್ರಿಟಿಷರು ಸರೆ ಗೊಳಿಸಿದ್ದರು. ಸಂಗೊಳ್ಳಿ ರಾಯಣ್ಣನನ್ನು ಬ್ರಿಟಿಷರು ಬಂದಿಸಿ ನಂದಗಡದಲ್ಲಿ. ಜನವರಿ 26, 1831ರಂದು ಗಲ್ಲಿಗೇರಿಸಿದರು. ದೇಶದ ಸ್ವಾತಂತ್ರ್ಯ ಇತಿಹಾಸದಲ್ಲಿ ಕ್ರಾಂತಿವೀರನದು ತನ್ನದೇ ಆದ ವೈಶಿಷ್ಟತೆ ಇತಿಹಾಸವೂ ಇದೆ. ಬರಿ ಬೆಳಗಾವಿಯಲ್ಲಿ ಅಷ್ಟೇ ಅಲ್ಲದೆ ರಾಜ್ಯದ ಒಂದೊಂದು ಜಿಲ್ಲೆಯಲ್ಲಿ ಕೂಡ ಕ್ರಾಂತಿವೀರನ ಪ್ರತಿಮೆ ಪ್ರತಿಷ್ಠಾಪನೆ ಮಾಡಲೇಬೇಕು ಇದು ಪ್ರತಿಯೊಬ್ಬ ಕನ್ನಡಿಗನ ಆಸೆಯು ಮತ್ತು ಕನಸು ಕೂಡ ಹೌದು.
ಕರ್ನಾಟಕ ರಕ್ಷಣಾ ವೇದಿಕೆಗೆ ಸಂಗೊಳ್ಳಿ ರಾಯಣ್ಣ ಮಾದರಿ ಮತ್ತು ಸ್ಪೂರ್ತಿ.ಹೇಗೆ ಸಂಗೊಳ್ಳಿ ರಾಯಣ್ಣ ಅವರು ನಮ್ಮ ದೇಶಕ್ಕೆ ಹೋರಾಡಿದರು ಅದೇ ರೀತಿ ಎಲ್ಲ ಕನ್ನಡಿಗರು ಕೂಡ ತನ್ನ ದೇಶಕ್ಕೆ ಮತ್ತು ರಾಜ್ಯಕ್ಕೆ ಯಾವಾಗಲೂ ಹೋರಾಡಬೇಕು ಎನ್ನುವ ನಿಲುವು ನಮ್ಮ ಕರವೇ ದು. ಸಂಗೊಳ್ಳಿ ರಾಯಣ್ಣನ ಹುತಾತ್ಮ ದಿನಾಚರಣೆಯನ್ನು ಕರವೇ ಯು ಜನವರಿ 30ರಂದು ಬೆಂಗಳೂರಿನ ವಿಜಯನಗರ ಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಎಲ್ಲಾ ಕರವೇ ಕಾರ್ಯಕರ್ತರ ಪಾಲ್ಗೊಳ್ಳುತ್ತಿದ್ದಾರೆ. ಕ್ರಾಂತಿವೀರನ ದೇಶದ ಭಕ್ತಿ ಕಿಚ್ಚನ್ನು ಪ್ರತಿಯೊಬ್ಬ ಭಾರತೀಯನು ಅಳವಡಿಸಿಕೊಳ್ಳಬೇಕು. ರಾಯಣ್ಣನ ಹೋರಾಟದ ಬದುಕು ಇನ್ನೂ ಸಾವಿರ ವರ್ಷವಾದರೂ ಅಮರ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜಯಲಕ್ಷ್ಮಿ ಕಾರಂತ್ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.
ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ
ಕವಿತೆ | ಅಲರ್ಟ್..!

- ಸುನೀತ ಕುಶಾಲನಗರ
ನದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.
ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .
ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.
ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.
ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು
ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!
ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.
ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days ago
ಕ್ಯೂ-ಸ್ಪೈಡರ್ಸ್ ವತಿಯಿಂದ ಉಚಿತ ಉದ್ಯೋಗದರಿತ ಕೌಶಲ್ಯ ತರಬೇತಿ ಆಯ್ಕೆ ಪ್ರಕ್ರಿಯೆ
-
ದಿನದ ಸುದ್ದಿ7 days ago
ಅಮಾನವೀಯ ಕೃತ್ಯ | ಹೆಣ್ಣು ಮಗು ಮಾರಾಟ ಮಾಡಿದ ಪೋಷಕರು
-
ಅಂಕಣ7 days ago
ಸಿದ್ಧಾಂತ ಮತ್ತು ಪತ್ರಿಕೋದ್ಯಮ
-
ದಿನದ ಸುದ್ದಿ7 days ago
ದಾವಣಗೆರೆ | ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭ, 81 ಕೇಂದ್ರಗಳಲ್ಲಿ 22579 ವಿದ್ಯಾರ್ಥಿಗಳು
-
ದಿನದ ಸುದ್ದಿ6 days ago
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್
-
ಅಂಕಣ4 days ago
ಕವಿತೆ | ಅಲರ್ಟ್..!
-
ದಿನದ ಸುದ್ದಿ2 days ago
ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಜಯಲಕ್ಷ್ಮಿ ಕಾರಂತ್ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ