Connect with us

ಲೈಫ್ ಸ್ಟೈಲ್

ಕೃಷ್ಣ ನೀ ಬೇಗನೆ ಬಾರೋ…!

Published

on

ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಸಡಗರ ದೇಶದೆಲ್ಲೆಡೆ ಮನೆಮಾಡಿರುವ ಬೆನ್ನಲ್ಲೇ, ಫ್ಯಾಷನ್ ಲೋಕದಲ್ಲೂ ಕೃಷ್ಣ ನ ಕೊಳಲಿನ ದನಿ ಕೇಳಿಬರುತ್ತಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಮತ್ತಷ್ಟು ಗ್ಲಾಮರಸ್ ಲುಕ್ ನೀಡಲು ಒಂದು ಚೆಂದದ ಕೃಷ್ಣಾವತಾರದ ಸೀರೆ ಹಾಗೂ ರವಿಕೆ ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಕೃಷ್ಣ ಪ್ರಿಂಟ್ ಫ್ಯಾಷನ್ ಸೀರೆಗಳು ಮಾನಿನಿಯರ ಹಬ್ಬದ ಫೇವರಿಟ್ ಔಟ್ ಫಿಟ್ ಎನಿಸಿಕೊಂಡಿದೆ. ರವಿಕೆಯ ಮೇಲಿನ ರಾಧಾಕೃಷ್ಣ ಎಂಬ್ರಾಯ್ಡರಿ ಹಬ್ಬಕ್ಕೆ ಮತ್ತಷ್ಟು ಕಳೆ ಕಟ್ಟಿದೆ.

ಕೇವಲ ವಸ್ತ್ರ ಗಳಿಗೆ ಮಾತ್ರ ಸೀಮಿತವಾಗಿರದೆ, ಕೃಷ್ಣನ ಕೆತ್ತನೆ ಇರುವ ಆಕ್ಸಿಡೈಸ್ಡ್ ಆಭರಣಗಳು, ಚಿನ್ನದ ಪದಕ,ಹಾರ, ಓಲೆ, ಕೃಷ್ಣನ ಪೇಂಟಿಂಗ್ ಇರುವ ಟೆರಕೋಟಾ ಆಭರಣಗಳು ಮುದ್ದು ಕೃಷ್ಣನ ಹಬ್ಬಕ್ಕೆ ಟ್ರೆಂಡ್ ಆಗುತ್ತಿರುವ ಲೇಟೆಸ್ಟ್ ಟ್ರೆಂಡ್ ಸೆಟ್ಟರ್ ಆಭರಣಗಳಾಗಿವೆ.

ಕೇವಲ ವಸ್ತ್ರಾಭರಣಗಳಿಗೆ ಸೀಮಿತವಾಗಿದ್ದ ಕೃಷ್ಣ ಫ್ಯಾಷನ್ ಟ್ರೆಂಡ್ ಈಗ ನೈಲ್ ಆರ್ಟ್ ರೂಪ ತಾಳಿದ್ದು.. ಕೈ ಉಗುರಿನ ಮೇಲೆ ಲಲನಲೋಹನ , ಮುದ್ದು ಕೃಷ್ಣನ ನೈಲ್ ಆರ್ಟ್ ಸೋಷಿಯಲ್ ಮೀಡಿಯಾ ದಲ್ಲಿ ಈಗ ಟ್ರೆಂಡಿಂಗ್. ಹಬ್ಬಕ್ಕೆಂದೇ, ರಾಧಾ ಕೃಷ್ಣ ರ ಮೆಹಂದಿ ಲಲನೆಯರ ಕೈ ಕಾಯಿಲೆಗಳಲ್ಲಿ ಅರಳಿದ್ದು, ಹಬ್ಬದ ರಂಗು ಗರಿಗೆದರಿದೆ.

ಹಾಗಾದರೆ  ನಮ್ಮ ಮುದ್ದು ಕೃಷ್ಣ ನ ಹಬ್ಬಕ್ಕೆ ,ನೀವೂ  ಕೃಷ್ಣಾವತಾರಂ ಫ್ಯಾಷನ್ ನಾದಕ್ಕೆ , ತಲೆದೂಗೋಣ ಬನ್ನಿ.

ಚಿತ್ರಶ್ರೀ ಹರ್ಷ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025

Published

on

Photo Gallery: ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025'

ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ (ಮಾರ್ಚ್-22) ‘ಜಾನಪದ ಉತ್ಸವ – 2025″ ಅದ್ದೂರಿಯಾಗಿ ನಡೆಯಿತು.

ಜಾನಪದ ತಜ್ಞ, ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ, ಅವರು ಉತ್ಸವಕ್ಕೆ ಚಾಲನೆ ನೀಡಿದರು.

ಎತ್ತಿನ ಬಂಡಿಯಲ್ಲಿ ಅಧ್ಯಾಪಕರು, ಅತಿಥಿಗಳ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೀರು ತುಂಬಿದ ಪೂರ್ಣ ಕುಂಭಗಳನ್ನು ಹೊತ್ತು ಅತಿಥಿಗಳನ್ನು ಸ್ವಾಗತಿಸಿದರು.
 

ಅಂದು ಕಾಲೇಜಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ವರ್ಷದಲ್ಲಿ ಬರುವ ಯುಗಾದಿ, ಸಂಕ್ರಾಂತಿ, ಶಿವರಾತ್ರಿ, ಕ್ರಿಸ್ ಮಸ್, ರಂಜಾನ್, ದಸರಾ, ಭೂಮಿ ಹುಣ್ಣಿಮೆ, ರಾಶಿ ಪೂಜೆ ಸೇರಿದಂತೆ, ಬಳೆಗಾರ, ಕಣಿಹೇಳುವ, ಚೌಕಾಬಾರಾ, ಗುರುಕುಲ, ಆಯುರ್ವೇದ, ಗೋ ಪೂಜೆ ಎಲ್ಲವೂ ಜಾನಪದ ಸಂಸ್ಕೃತಿಯನ್ನು ಪುನರ್ ನಿರ್ಮಾಣಮಾಡಿದ್ದವು.

ಉತ್ಸವದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು, ಪಂಚೆ, ಅಂಗಿ, ಕುರ್ತಾ, ಲಂಗಾದಾವಣಿ, ಸೀರೆ ಉಟ್ಟು ,ಬುರ್ಕಾ, ತೊಟ್ಟು ಸಡಗರ ಸಂಭ್ರಮದಿಂದ ಕುಣಿದಾಡಿದರು.

ರಾಮನವಮಿಯ ಬೆಲ್ಲದ ಪಾನಕ – ಕೋಸಂಬರಿ, ಕ್ರಿಸ್ಮಸ್ ನ ಕೇಕ್, ರಂಜಾನ್ ಹಬ್ಬದ ಇಪ್ತಾರ್ ಕೂಟದ ಫಲಾಹಾರ, ಗಣಪತಿ ಹಬ್ಬದ ಕಡುಬು, ಯುಗಾದಿಯ ಹೋಳಿಗೆ, ಭೂಮಿ‌ಪೂಜೆಯ ಪಾಯಸ ಹೀಗೆ ವಿವಿಧ ಬಗೆಯ ತಿಂಡಿತಿನಿಸುಗಳು 30 ಜಿಲ್ಲೆಗಳ ವಿಶೇಷ ಖಾಧ್ಯಗಳು ಹಬ್ಬದ ಸಡಗರವನ್ನು ಇಮ್ಮಡಿಗೊಳಿಸಿದವು.

 

ವಸ್ತು ಪ್ರದರ್ಶನ

 

ಸುಮಾರು ವರ್ಷಗಳ ಹಿಂದೆ ಬಳಕೆಯಲ್ಲಿದ್ದ ಬೀಸು ಕಲ್ಲು, ಒನಕೆ, ಸೌದೆ ಒಲೆ, ಕೊಡಲಿ, ಮಚ್ಚು, ಬರ್ಜಿ, ಚನ್ನೆಮಣೆ, ಕೀಲುಗೊಂಬೆ, ಪಾರಂಪರಿಕ ಔಷಧಿ, ಕುಡುಗೋಲು, ಬಂಡಿ,ನಾಣ್ಯಗಳು,ಸೇರು, ಒಳಕಲ್ಲು, ಶಹನಾಯಿ,ಮಜ್ಜಿಗೆಯ ಕಡೆಗೋಲು, ತಾಳ, ಹಾರ್ಮೊನಿಯಂ, ಗಂಡುಕೊಡಲಿ,ಶಾವಿಗೆ ಒತ್ತು,ಹುತ್ತದ ಮಾದರಿ,ವಿಭಿನ್ನ ಬಗೆಯ ರಂಗವಲ್ಲಿ, ವಿವಿಧ ಧಾನ್ಯದ ರಾಶಿ,ಕಳಸ, ದಸರಾ ಗೊಂಬೆಗಳು, ನವರಾತ್ರಿಯ ಮಾತೃದೇವತೆ, ಕುರಾನ್ ಪ್ರತಿ, ಜಾನಮಾಜ್,ಕ್ರಿಸ್ತನ ಜನನದ ಗೋದರಿ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಮಾದರಿ ಚಿತ್ರಗಳು ವಸ್ತುಪ್ರದರ್ಶನದಲ್ಲಿದ್ದವು.

 

ದೇಸೀ ಆಟಗಳು

 

ದೇಸೀ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಬುಗುರಿ, ಕುಂಟೋಬಿಲ್ಲೆ ಹಾಗೂ ಜನಪದ ನೃತ್ಯ-ಹಾಡು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಂತಸದಿಂದ ಭಾಗವಹಿಸಿದರು.

ಉತ್ಸವದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಬಿ.ಜಿ.ಅಮೃತೇಶ್ವರ ಅವರು ವಹಿಸಿಕೊಂಡಿದ್ದರು. ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಪಕ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಷ್ಮುಖಪ್ಪ ಕೆ.ಹೆಚ್, ಐಕ್ಯುಎಸಿ ಸಂಚಾಲಕ ಪ್ರೊ.ವಿಜಯ್ ಕುಮಾರ್, ಉತ್ಸವದ ಕ್ರೀಡೆಗಳ ಆಯೋಜಕ ಹಾಗೂ ದೈಹಿಕ ನಿರ್ದೇಶಕರಾದ ಕಲ್ಲೇಶಪ್ಪ ಎಸ್.ಜಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಗೂ ಬೋಧಕೇತರ ಸಿಬಂದಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

Janapada Utsava Channagiri Govt collage (24)
Continue Reading

ದಿನದ ಸುದ್ದಿ

ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

Published

on

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.

ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ಮತ್ತಿನ ಕುಣಿಕೆ

Published

on

  • ಗುರು ಸುಳ್ಯ

ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ

ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ

ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…

ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ

ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ

ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)

ಕವಿ : ಗುರು ಸುಳ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ51 minutes ago

ಬಾಹ್ಯಾಕಾಶ ವಿಜ್ಞಾನಿ ಡಾ. ಕೆ. ಕಸ್ತೂರಿ ರಂಗನ್ ನಿಧನ ; ಭಾನುವಾರ ಅಂತಿಮ ದರ್ಶನ ವ್ಯವಸ್ಥೆ

ಸುದ್ದಿದಿನಡೆಸ್ಕ್:ಭಾರತೀಯ ಬಾಹ್ಯಾಕಾಶ ವಿಜ್ಞಾನಿ, ಇಸ್ರೋದ ಮುಖ್ಯಸ್ಥರಾಗಿದ್ದ ಡಾ. ಕೆ. ಕಸ್ತೂರಿ ರಂಗನ್ ಅವರು ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಅವರು...

ದಿನದ ಸುದ್ದಿ4 hours ago

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಗಾಂಧಿ ಭಾರತ’ ಕಾರ್ಯಕ್ರಮ

ಸುದ್ದಿದಿನ,ಚನ್ನಗಿರಿ:ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಾಂಸ್ಕೃತಿಕ ವೇದಿಕೆ ಮತ್ತು ಐ ಕ್ಯು ಎ ಸಿ ವತಿಯಿಂದ ಗುರುವಾರ ‘ಗಾಂಧಿ ಭಾರತ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.’...

ದಿನದ ಸುದ್ದಿ6 hours ago

ಹೊಸಪೇಟೆ | ಹಣ ದುರ್ಬಳಕೆ ; ನಿವೃತ್ತ ಪ್ರಾಂಶುಪಾಲ ಡಾ.ಬಿ.ಜಿ.ಕನಕೇಶಮೂರ್ತಿ ವಿರುದ್ಧ ದೂರು

ಸುದ್ದಿದಿನ,ಹೊಸಪೇಟೆ:ನಗರದ ಶ್ರೀ ಶಂಕರ್ ಆನಂದ್‌ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರೇ ಸರ್ಕಾರಿ ಖಾತೆ ಹಣವನ್ನು ಅನ್ಯ ಉದ್ದೇಶಗಳಿಗೆ ಬಳಕೆ ಮಾಡಿಕೊಂಡು ವಂಚಿಸಿರುವ ಪ್ರಕರಣವನ್ನು ತನಿಖೆಗೆ ಒಳಪಡಿಸಿ,...

ದಿನದ ಸುದ್ದಿ1 day ago

ದಾವಣಗೆರೆ | ಭ್ರಷ್ಟಾಚಾರದಲ್ಲಿ ಪುರುಷರನ್ನು ಮೀರಿಸಿದ ಮಹಿಳೆಯರು.!

ಸುದ್ದಿದಿನ,ದಾವಣಗೆರೆ:ಸಮಾನತೆ ಪಡೆದ ಮಹಿಳೆಯರು ಸದ್ಯ ಎಲ್ಲ ರಂಗಗಲ್ಲೂ ಪುರುಷರಿಗೆ ಸಮಾನವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ರ್ದುದೈವದ ಸಂಗತಿ ಎಂದರೆ ಪುರಷರನ್ನು ಮೀರಿ ಮಹಿಳಾ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ. ಉಪಲೊಕಾಯಕ್ತನಾಗಿ...

ದಿನದ ಸುದ್ದಿ1 day ago

ಅಧಿಕಾರಿಗಳ ಮೇಲೆ ಸುಳ್ಳು ಕೇಸು ದಾಖಲಿಸಿದರೆ 3 ವರ್ಷಗಳ ಜೈಲು ಶಿಕ್ಷೆ : ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ

ಸುದ್ದಿದಿನ,ದಾವಣಗೆರೆ:ಸ್ವಾರ್ಥಕ್ಕಾಗಿ ಕೆಲ ವ್ಯಕ್ತಿ ಹಾಗೂ ಸಂಘಟನೆಗಳು, ಅಧಿಕಾರಿಗಳ ಮೇಲೆ ಸುಳ್ಳು ಕೇಸು ದಾಖಲಿಸುತ್ತಿರುವುದು ಭ್ರಷ್ಟಾಚಾರ ಆರೋಪ ಪ್ರಕರಣಗಳ ವಿಚಾರಣೆ ವೇಳೆ ಲೋಕಾಯುಕ್ತ ಗಮನಕ್ಕೆ ಬರುತ್ತಿವೆ. ಲೋಕಾಯುಕ್ತ ಕಾಯ್ದೆ...

ದಿನದ ಸುದ್ದಿ1 day ago

ಉಗ್ರರನ್ನು ಸದೆಬಡಿಯಲು ಕೇಂದ್ರಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಪಹಲ್ಗಾಮ್ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಬೆಂಗಳೂರಿನ ಭರತ್ ಭೂಷಣ್ ಅವರ ಪಾರ್ಥಿವ ಶರೀರವನ್ನು ಮತ್ತಿಕೆರೆಯ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್,...

ದಿನದ ಸುದ್ದಿ1 day ago

ಅರಿವಿನ ವಿಸ್ತಾರದ ಪ್ರಕ್ರಿಯೆಯೇ ಸಂಶೋಧನೆ : ಡಾ.ಚಿತ್ತಯ್ಯ

ಸುದ್ದಿದಿನ,ಚನ್ನಗಿರಿ:ಭೂತದ ಮಾಹಿತಿ ಕೆದಕುತ್ತಾ ವರ್ತಮಾನಕ್ಕೆ ಹೊಸ ಹೊಳಹು ನೀಡುವ ಕ್ರಮ ಮತ್ತು ಅರಿವಿನ ವಿಸ್ತಾರದ ಪ್ರಕ್ರಿಯೆಯನ್ನೇ ನಾವು ಸಂಶೋಧನೆ ಎಂದು ಕರೆಯುತ್ತೇವೆ ಎಂದು ಚಳ್ಳಕೆರೆ ಸರ್ಕಾರಿ ಪ್ರಥಮ...

ದಿನದ ಸುದ್ದಿ1 day ago

ಬಳ್ಳಾರಿ ಕಿಷ್ಕಿಂದ ವಿಶ್ವವಿದ್ಯಾಲಯದಲ್ಲಿ ಹಗಲು ದರೋಡೆ ; ಹಣ ಕೊಡದಿದ್ರೆ ಪರೀಕ್ಷೇಲಿ ಫೇಲ್ ..! ವಿದ್ಯಾರ್ಥಿಗಳ ಗೋಳು ಕೇಳೋರ್ ಯಾರು..? ಓದಿ ಈ ಸ್ಟೋರಿ..!

ವಿಶೇಷ ವರದಿ : ಗಿರೀಶ್ ಕುಮಾರ್, ಬಳ್ಳಾರಿ ಸುದ್ದಿದಿನಡೆಸ್ಕ್:ಗಣಿನಾಡು ಬಳ್ಳಾರಿ ನಗರದ ಕಿಷ್ಕಿಂದ ವಿಶ್ವವಿದ್ಯಾಲಯ ಆರಂಭವಾಗಿ ಎರಡು ವರ್ಷ ಕಳೆದಿಲ್ಲ, ಆಗಾಲೇ ವಿದ್ಯಾರ್ಥಿಗಳಿಗೆ ಡೋನೇಷನ್ ಹಾವಾಳಿ ಹೆಚ್ಚಾಗಿದೆ....

ದಿನದ ಸುದ್ದಿ4 days ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ:ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಏಪ್ರಿಲ್ 24 ಮತ್ತು 25 ರಂದು ಆಯೋಜಿಸಲಾಗಿದೆ. ಆಸಕ್ತ ರೈತರು ಆಧಾರ್...

ದಿನದ ಸುದ್ದಿ4 days ago

ಆಸ್ತಿ ಕಲಹವೇ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆಗೆ ಕಾರಣವಾಯ್ತಾ..?

ಸುದ್ದಿದಿನಡೆಸ್ಕ್:ಭಾನುವಾರ ಹತ್ಯೆಯಾದ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಹಿಂದೆ ಆಸ್ತಿ ಕಲಹವಿರಬಹುದು ಎಂಬ ಆರೋಪಗಳು ಕೇಳಿ ಬರುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕೋಟ್ಯಂತರ ಮೌಲ್ಯದ...

Trending