ಲೈಫ್ ಸ್ಟೈಲ್
ಕೃಷ್ಣ ನೀ ಬೇಗನೆ ಬಾರೋ…!
ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಸಡಗರ ದೇಶದೆಲ್ಲೆಡೆ ಮನೆಮಾಡಿರುವ ಬೆನ್ನಲ್ಲೇ, ಫ್ಯಾಷನ್ ಲೋಕದಲ್ಲೂ ಕೃಷ್ಣ ನ ಕೊಳಲಿನ ದನಿ ಕೇಳಿಬರುತ್ತಿದೆ. ಶ್ರೀ ಕೃಷ್ಣ ಜನ್ಮಾಷ್ಟಮಿಗೆ ಮತ್ತಷ್ಟು ಗ್ಲಾಮರಸ್ ಲುಕ್ ನೀಡಲು ಒಂದು ಚೆಂದದ ಕೃಷ್ಣಾವತಾರದ ಸೀರೆ ಹಾಗೂ ರವಿಕೆ ಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ. ಕೃಷ್ಣ ಪ್ರಿಂಟ್ ಫ್ಯಾಷನ್ ಸೀರೆಗಳು ಮಾನಿನಿಯರ ಹಬ್ಬದ ಫೇವರಿಟ್ ಔಟ್ ಫಿಟ್ ಎನಿಸಿಕೊಂಡಿದೆ. ರವಿಕೆಯ ಮೇಲಿನ ರಾಧಾಕೃಷ್ಣ ಎಂಬ್ರಾಯ್ಡರಿ ಹಬ್ಬಕ್ಕೆ ಮತ್ತಷ್ಟು ಕಳೆ ಕಟ್ಟಿದೆ.
ಕೇವಲ ವಸ್ತ್ರ ಗಳಿಗೆ ಮಾತ್ರ ಸೀಮಿತವಾಗಿರದೆ, ಕೃಷ್ಣನ ಕೆತ್ತನೆ ಇರುವ ಆಕ್ಸಿಡೈಸ್ಡ್ ಆಭರಣಗಳು, ಚಿನ್ನದ ಪದಕ,ಹಾರ, ಓಲೆ, ಕೃಷ್ಣನ ಪೇಂಟಿಂಗ್ ಇರುವ ಟೆರಕೋಟಾ ಆಭರಣಗಳು ಮುದ್ದು ಕೃಷ್ಣನ ಹಬ್ಬಕ್ಕೆ ಟ್ರೆಂಡ್ ಆಗುತ್ತಿರುವ ಲೇಟೆಸ್ಟ್ ಟ್ರೆಂಡ್ ಸೆಟ್ಟರ್ ಆಭರಣಗಳಾಗಿವೆ.
ಕೇವಲ ವಸ್ತ್ರಾಭರಣಗಳಿಗೆ ಸೀಮಿತವಾಗಿದ್ದ ಕೃಷ್ಣ ಫ್ಯಾಷನ್ ಟ್ರೆಂಡ್ ಈಗ ನೈಲ್ ಆರ್ಟ್ ರೂಪ ತಾಳಿದ್ದು.. ಕೈ ಉಗುರಿನ ಮೇಲೆ ಲಲನಲೋಹನ , ಮುದ್ದು ಕೃಷ್ಣನ ನೈಲ್ ಆರ್ಟ್ ಸೋಷಿಯಲ್ ಮೀಡಿಯಾ ದಲ್ಲಿ ಈಗ ಟ್ರೆಂಡಿಂಗ್. ಹಬ್ಬಕ್ಕೆಂದೇ, ರಾಧಾ ಕೃಷ್ಣ ರ ಮೆಹಂದಿ ಲಲನೆಯರ ಕೈ ಕಾಯಿಲೆಗಳಲ್ಲಿ ಅರಳಿದ್ದು, ಹಬ್ಬದ ರಂಗು ಗರಿಗೆದರಿದೆ.
ಹಾಗಾದರೆ ನಮ್ಮ ಮುದ್ದು ಕೃಷ್ಣ ನ ಹಬ್ಬಕ್ಕೆ ,ನೀವೂ ಕೃಷ್ಣಾವತಾರಂ ಫ್ಯಾಷನ್ ನಾದಕ್ಕೆ , ತಲೆದೂಗೋಣ ಬನ್ನಿ.
–ಚಿತ್ರಶ್ರೀ ಹರ್ಷ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025
ದಿನದ ಸುದ್ದಿ
ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.
ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.
ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕವಿತೆ | ಮತ್ತಿನ ಕುಣಿಕೆ

- ಗುರು ಸುಳ್ಯ
ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ
ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ
ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…
ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ
ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ
ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days ago
ಇ-ಸ್ವತ್ತು ಸಮಸ್ಯೆ ಪರಿಹಾರಕ್ಕಾಗಿ ಕಾರ್ಯನಿರ್ವಹಣಾ ಸಮಿತಿ ರಚನೆ
-
ದಿನದ ಸುದ್ದಿ7 days ago
‘ವಿದ್ಯಾಸಿರಿ’ ಯೋಜನೆಯಡಿ ವಿದ್ಯಾರ್ಥಿ ವೇತನ ಪರಿಷ್ಕರಣೆಗೆ ಒತ್ತು : ಸಿಎಂ ಸಿದ್ದರಾಮಯ್ಯ
-
ಅಂಕಣ5 days ago
ಕವಿತೆ | ಅವಳೀಗ ಕಾಯುವುದಿಲ್ಲ
-
ದಿನದ ಸುದ್ದಿ6 days ago
ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆಯಾಗಿ 50 ವರ್ಷ; ನೆಹರು ತಾರಾಲಯದಲ್ಲಿ ವಿಶೇಷ ಕಾರ್ಯಕ್ರಮ
-
ದಿನದ ಸುದ್ದಿ6 days ago
ಬಳ್ಳಾರಿ ಪೊಲೀಸ್ ಅಧಿಕಾರಿಗಳ ಪಡಿತರ ಅಕ್ಕಿ ಕಳ್ಳಾಟ : ಠಾಣೆ ಮುಂದೆ ಇದ್ದ ಲಾರಿ ಮಾಯ ; ಈ ಸ್ಟೋರಿ ಓದಿ..!
-
ದಿನದ ಸುದ್ದಿ6 days ago
ಜೆಇಇ ಮೇನ್ಸ್ ಫಲಿತಾಂಶ ಪ್ರಕಟ : 24 ವಿದ್ಯಾರ್ಥಿಗಳಿಗೆ ನೂರಕ್ಕೆ ನೂರು ಅಂಕ
-
ದಿನದ ಸುದ್ದಿ4 days ago
ಆಸ್ತಿ ಕಲಹವೇ ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆಗೆ ಕಾರಣವಾಯ್ತಾ..?
-
ದಿನದ ಸುದ್ದಿ4 days ago
ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ