ರಾಜಕೀಯ
ಸೋತ ಬಳಿಕ ಸಿದ್ದು ಹುಚ್ಚರಾಗಿದ್ದಾರೆ : ನಾಲಿಗೆ ಹರಿಬಿಟ್ಟ ಈಶ್ವರಪ್ಪ
ಸುದ್ದಿದಿನ ಡೆಸ್ಕ್: ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಮತ್ತೊಮ್ಮೆ ನಾಲೆಗೆ ಹರಿಬಿಟ್ಟಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹುಚ್ಚಾಗಿದ್ದರೆ ಎಂದು ಟೀಕೆ ಮಾಡುವ ಮೂಲಕ ಸಿದ್ದು ಅಭಿಮಾನಗಳಿಂದ ಟೀಕೆಗೆ ಒಳಗಾಗಿದ್ದಾರೆ.
ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಸೋತಿದ್ದಾರೆ, ಸೋತ ಬಳಿಕ ಹುಚ್ಚರಂತೆ ಆಗಿದ್ದಾರೆ, ಇಂತವರನ್ನು ರಾಷ್ಟ್ರೀಯ ನಾಯಕರನ್ನಾಗಿ ಮಾಡಲು ಕಾಂಗ್ರೆಸ್ ನಾಯಕರು ಹೊರಟಿದ್ದಾರೆ ಎಂದು ಬಿಜೆಪಿ ನಾಯಕ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ಇಂದು ಮೈಸೂರಿನಲ್ಲಿ ಮಾತನಾಡಿದ ಅವರು, 2013 ರ ವಿಧಾನಸಭೆ ಚುನಾವಣೆಯಲ್ಲಿ ಪರಮೇಶ್ವರ್ ಅವರನ್ನು ಸೋಲಿಸಿದ್ದು ಸಿದ್ದರಾಮಯ್ಯ, ಹೀಗಾಗಿ ಈ ಬಾರಿಯ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನರು ಅವರನ್ನು ಸೋಲಿಸಿದ್ದಾರೆ ಎಂದು ಆರೋಪಿಸಿದ್ದಾರೆ.