ದಿನದ ಸುದ್ದಿ

ಕೆ ಎಸ್ ಆರ್ ಟಿ ಸಿ ಬಸ್ ಪ್ರಯಾಣಿಕರಿಗೆ ಇಲ್ಲಿದೆ ಶುಭ ಸುದ್ದಿ..!

Published

on

ಸುದ್ದಿದಿನ, ಬೆಂಗಳೂರು: ಕೊರೋನಾ ಪರಿಣಾಮವಾಗಿ, ಲಾಕ್​ಡೌನ್​ ಹಿನ್ನೆಲೆಯಲ್ಲಿ ಆರ್ಥಿಕ ನಷ್ಟದಲ್ಲಿರುವ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು, ವಾರದ ಕೊನೆಯ ದಿನ ಪಡೆಯಲಾಗುತ್ತಿರುವ ಶೇ.10 ಹೆಚ್ಚುವರಿ ಪ್ರಯಾಣದ ದರವನ್ನು ರದ್ದು ಮಾಡಿ ಆದೇಶ ಹೊರಡಿಸಿದೆ.

ನಿಗಮದ ಈ ಆದೇಶವು ಡಿ.31ರವರೆಗೆ ಜಾರಿಯಲ್ಲಿರುತ್ತದೆ. ಎರಡೂವರೆ ತಿಂಗಳ ಕಾಲ ಪ್ರಯಾಣಿಕರು ಶೇ‌ 10 ಹೆಚ್ಚುವರಿ ಹಣ ಪಾವತಿಸದೆ ವಾರದ ಕೊನೆಯಲ್ಲಿ ಪ್ರಯಾಣಿಸಬಹುದಾಗಿದೆ. ಈ ಹಿಂದೆ ಶುಕ್ರವಾರದಿಂದ ಭಾನುವಾರದವರೆಗೆ ನಿಗಮದ ವೈಭವ್, ರಾಜಹಂಸ, ಐರಾವತ ಬಸ್​ಗಳಲ್ಲಿ ಪ್ರಯಾಣ ದರವನ್ನು ಶೇ 10 ಹೆಚ್ಚಿಸಲಾಗಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version