ದಿನದ ಸುದ್ದಿ
ಕೆಎಸ್ಆರ್ಟಿಸಿ | 300 ಹೊಸ ಬಸ್ ಖರೀದಿಗೆ ಸರ್ಕಾರ ನಿರ್ಧಾರ
ಸುದ್ದಿದಿನಡೆಸ್ಕ್:ರಾಜ್ಯದಲ್ಲಿ ಈಗಾಗಲೇ 375ಬಸ್ ಗಳನ್ನು ಖರೀದಿ ಮಾಡಲಾಗಿದೆ. ಮತ್ತೆ 300 ಹೊಸ ಬಸ್ ಗಳನ್ನ ಖರೀದಿ ಮಾಡಲಾಗುವುದು ಎಂದು ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ಹಾಗೂ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಬಸ್ ಸಮಸ್ಯೆ ಉಂಟಾಗಿದ್ದು ಈ ಬಗ್ಗೆ ಸರಕಾರದ ಗಮನಕ್ಕೂ ತರಲಾಗಿದೆ ಎಂದರು. ಮುಂದಿನ ದಿನಗಳಲ್ಲಿ ನಗರಕ್ಕಿಂತ ಹಳ್ಳಿಗಳಿಗೆ ಸಾರಿಗೆ ವ್ಯವಸ್ಥೆಯ ಅನುಕೂಲ ಮಾಡಲಾಗುವುದು. ಕಾನೂನು ಪ್ರಕಾರ ಹತ್ತು ಲಕ್ಷ ಕಿಲೋಮೀಟರ್ ಚಲಿಸಿದ ಬಸ್ ಗಳ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಹೇಳಿದ್ದಾರೆ. ಸುದ್ದಿದಿನ.ಕಾಂ|ವಾಟ್ಸಾಪ್|9980346243