Connect with us

ದಿನದ ಸುದ್ದಿ

ನನ್ನೂರು ಕೂಡ್ಲಿಗಿ ಮತ್ತು ಮಹಾತ್ಮ ಗಾಂಧೀಜಿಯವರ ಚಿತಾಭಸ್ಮ

Published

on

  • ಕೆ.ಶ್ರೀಧರ್ (ಕೆ.ಸಿರಿ)

ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹೆಸರು ಅಜರಾಮರ. ಶ್ರೀಯುತರನ್ನು ಇಡೀ ವಿಶ್ವವೇ ‘ಪೂಜ್ಯನೀಯ’ ಭಾವನೆಯಿಂದ ಗೌರವಿಸುತ್ತದೆ.

ವಿಶ್ವದ ದಿಗ್ಗಜ ನಾಯಕರುಗಳು ಹಾಗೂ ವಿದ್ವಾಂಸರು, ವಿವಿಧ ಸಂಪನ್ಮೂಲ ವ್ಯಕ್ತಿಗಳಾದ ಮಾರ್ಟಿನ್ ಲೂಥರ್ ಕಿಂಗ್, ಆಲ್ಬರ್ಟ್‌ ಐನ್‌ಸ್ಟೈನ್‌,ನೆಲ್ಸನ್‌ ಮಂಡೇಲಾ,ವಿಲ್‌ ಡ್ಯುರಾಂಟ್‌,ಅಟೆನ್‌ಬರೋ,ಹೋ ಚಿ ಮಿನ್‌,ಬರಾಕ್‌ ಒಬಾಮ,ಆಂಗ್‌ ಸಾನ್‌ ಸೂಕಿ,ದಲಾಯಿ ಲಾಮ ರವರು “ನಾವು ಮಹಾತ್ಮ ಗಾಂಧೀಜಿಯವರ ಅನುಯಾಯಿಗಳು” ಎಂದು ಮುಕ್ತಕಂಠದಿಂದ ಅರ್ಪಿತಗೊಳಿಸಿಕೊಂಡಿದ್ದಾರೆ.

ಈ ನಿಟ್ಟಿನಲ್ಲಿ ನೋಡುವುದಾದರೆ ಮಹಾತ್ಮ ಗಾಂಧೀಜಿಯವರು ವಿಶ್ವಮಾನವರಂತೆ ಕಾಣುತ್ತಾರೆ. ಇದು ನಮ್ಮ ಭಾರತ ದೇಶದ ಹೆಮ್ಮೆ.ಗಾಂಧೀಜಿಯವರು ಒಬ್ಬ ವ್ಯಕ್ತಿಯಲ್ಲ ನಮ್ಮ ದೇಶದ ಶಕ್ತಿ, ತಮ್ಮ ಜೀವನದುದ್ದಕ್ಕೂ ಅಹಿಂಸಾತ್ಮಕ ಮಾರ್ಗದ ಮೂಲಕ ಸ್ವಾತಂತ್ರ್ಯ ಚಳುವಳಿ, ವರ್ಣಭೇದ ನೀತಿ ವಿರೋಧಿಸಿ ಉಪವಾಸ ಸತ್ಯಾಗ್ರಹದಿಂದಲೇ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ಚೇತನ ನಮ್ಮ ಬಾಪೂಜಿ.

ಕೂಡ್ಲಿಗಿ ತಾಲೂಕು ಬಳ್ಳಾರಿಯ ವಿಭಜಿತ ವಿಜಯನಗರ ಜಿಲ್ಲೆಯ ಕರ್ನಾಟಕದ ಎರಡನೆಯ ಅತೀದೊಡ್ಡ ತಾಲ್ಲೂಕು ಹಾಗೂ ಹಿಂದುಳಿದ ತಾಲ್ಲೂಕು. ಮುಖ್ಯವಾಗಿ ಇಲ್ಲಿ ಹಿಂದುಳಿದಿರುವುದು ನಮ್ಮ ತಾಲ್ಲೂಕಲ್ಲ ತಾಲ್ಲೂಕಿನಲ್ಲಿರುವ ಮನಸ್ಸುಗಳು ಅಭಿವೃದ್ಧಿ ಪಥದಲ್ಲಿ ಹಿಂದುಳಿದಿವೆ ಈ ಹಿಂದುಳಿದ ತಾಲ್ಲೂಕು ಎಂಬ ಹಣೆಪಟ್ಟಿಯನ್ನು ಯಾರು ಹಾಕಿದ್ದಲ್ಲ ನಮಗೇ ನಾವೇ ಹಿಂದುಳಿದ ತಾಲ್ಲೂಕು ಹಿಂದುಳಿದ ತಾಲ್ಲೂಕು ಎಂದೇಳಿ ಹಿಂದೆಯೇ ಉಳಿಸುವ ಪ್ರಯತ್ನದಲ್ಲಿದ್ದೇವೆ.

ಜಾತಿ ಜಾತಿಗಳ ಪ್ರಾಬಲ್ಯ ಸ್ಥಾಪಿಸುವ ಜಿದ್ದಿನಲ್ಲಿ ತಾಲ್ಲೂಕು ಸಾಂಸ್ಕೃತಿಕವಾಗಿ, ಆರ್ಥಿಕವಾಗಿ, ರಾಜಕೀಯವಾಗಿ ವೈಫಲ್ಯ ಹೊಂದಿದೆ. ಇಲ್ಲಿ ದುಡಿಯುವವರು ದುಡಿಯುತ್ತಲೇ ಇದ್ದಾರೆ, ಕುಣಿಯುವವರು ಕುಣಿಯುತ್ತಲೇ ಇದ್ದಾರೆ, ಕುಣಿಯುತ್ತಿರುವುದು ಜಾತಿಯ ಅಮಲು, ಇಷ್ಟೆಲ್ಲಾ ನ್ಯೂನ್ಯತೆಗಳು ತಾಲ್ಲೂಕು ಹಿಂದುಳಿದಿದೆ ಎಂದು ಹೇಳುವ ನಮ್ಮ ಮನಸ್ಸುಗಳಲ್ಲಿಯೇ ಇವೆ ಈ ನ್ಯೂನತೆಗಳನ್ನು ಬದಿಗಿರಿಸಿ ಕೂಡ್ಲಿಗಿ ತಾಲೂಕಿನ ಚಾರಿತ್ರಿಕ ಹಿನ್ನೆಲೆ ಒಮ್ಮೆ ಅವಲೋಕನ ಮಾಡಿದರೆ ನಿಜಕ್ಕೂ ಹಿಂದುಳಿದಿರುವುದು ತಾಲ್ಲೂಕ? ಅಥವಾ ತಾಲ್ಲೂಕಿನಲ್ಲಿರುವ ನಮ್ಮ ಮನಸ್ಸುಗಳೇ? ಎಂದು ನಮಗೆ ತಿಳಿಯುತ್ತದೆ.

ಕೂಡ್ಲಿಗಿ ತಾಲೂಕನ್ನು ಮೌರ್ಯರು, ಶಾತವಾಹನರು, ಪಲ್ಲವರು, ಕದಂಬರು, ಚಾಲುಕ್ಯರು ಹಾಗೂ ವಿಜಯನಗರದ ಅರಸರು ಆಳ್ವಿಕೆ ನಡೆಸಿದ್ದಾರೆ. ಅಲ್ಲದೇ ಬಳ್ಳಾರಿ ಜಿಲ್ಲೆಗೆ ಮಹಾತ್ಮ ಗಾಂಧೀಜಿಯವರು 2 ಕಾರಣಗಳಿಂದಾಗಿ 1934 ರ ಮಾರ್ಚ್ 3 ರಂದು ಭೇಟಿ ನೀಡಿರುವುದು ಇತಿಹಾಸದ ಪುಟಗಳಿಂದ ತಿಳಿದು ಬರುತ್ತದೆ.

1- ಸ್ವಾತಂತ್ರ್ಯ ಸಂಗ್ರಾಮದ ಹೋರಾಟದ ರೂಪುರೇಷೆಗಳಿಗೆ ಆರ್ಥಿಕ ನೆರವು ಕೇಳಲು.

2-ಸಂಡೂರು ತಾಲ್ಲೂಕಿನ ಬೆಟ್ಟ ಗುಡ್ಡಗಳಲ್ಲಿ ನೆಲೆಸಿರುವ ಕುಮಾರಸ್ವಾಮಿ ದೇವಾಲಯಕ್ಕೆ ದಲಿತ ಸಮುದಾಯದವರಿಗೆ ಪ್ರವೇಶಾತಿ ನೀಡಿದ್ದ ಅಂದಿನ ಮಹಾರಾಜರಿಗೆ ಅಭಿನಂದನೆ ಸಲ್ಲಿಸಲು.

ಸಂಡೂರಿಗೆ ಭೇಟಿ ನೀಡಿದ ಮಹಾತ್ಮ ಗಾಂಧೀಜಿಯವರು ಅಲ್ಲಿ ಪ್ರಾಕೃತಿಕ ಸೌಂದರ್ಯಕ್ಕೆ ಮನಸೋತು ‘ಓಯಾಸಿಸ್’ ಎಂದು ಕರೆಯುವುದಲ್ಲದೆ ಸೆಪ್ಟೆಂಬರ್ ತಿಂಗಳಲ್ಲಿ ಸಂಡೂರು ನೋಡು (See Sundur in September) ಎಂದು ಹೇಳಿದ ವಾಕ್ಯ ಈಗಲೂ ಮಾನಸ ಸರೋವರದ ಬಳಿ ಬರುವ ರಸ್ತೆಯ ಇಕ್ಕೆಲದಲ್ಲಿನ ಕಲ್ಲುಬಂಡೆಯ ಮೇಲೆ ಬರೆದಿರುವುದು ಈಗಲೂ ಇದೆ ಇದೊಂದು ಇತಿಹಾಸ ಈ ಸಂಡೂರು ತಾಲೂಕು ಕೂಡ್ಲಿಗಿ ಪಕ್ಕದ ತಾಲ್ಲೂಕಾಗಿದೆ.

ಇದು ಅಲ್ಲದೇ 1921 ರ ಅಕ್ಟೋಬರ್ 1 ರಂದು ಧಾರವಾಡಕ್ಕೆ ಹೋಗಲು ಗಾಂಧೀಜಿಯವರು ಬಳ್ಳಾರಿಗೆ ಬಂದಿದ್ದರು ಹಾಗೂ ಅಲ್ಲಿ ತೆಲುಗು ಹಾಗೂ ಕನ್ನಡ ಭಾಷಿಕ ಕಾಂಗ್ರೆಸ್ ಮುಖಂಡರು ನಮ್ಮಲ್ಲಿ ಬರಬೇಕೆಂದು ದುಂಬಾಲು ಬಿದ್ದಾಗ ಎತ್ತ ಕಡೆ ಹೋಗದೆ 8 ಗಂಟೆಗಳ ಕಾಲ ಬಳ್ಳಾರಿ ರೈಲು ನಿಲ್ದಾಣದಲ್ಲಿಯೇ ಇದ್ದರೆಂಬುದು ಅಧ್ಯಯನದಿಂದ ತಿಳಿದು ಬರುತ್ತದೆ.

ಒಟ್ಟು ಕರ್ನಾಟಕಕ್ಕೆ ಮಹಾತ್ಮ ಗಾಂಧೀಜಿಯವರು 18 ಬಾರಿ ಆಗಮಿಸಿದ್ದರು ಅದರಲ್ಲಿ ನಮ್ಮ ಜಿಲ್ಲೆಗೆ ಎರಡು ಬಾರಿ ಬಂದಿದ್ದರು ಎಂಬುದು ನಮ್ಮ ಹೆಮ್ಮೆಯ ವಿಚಾರ. ಹೀಗೆ ಅಹಿಂಸಾತ್ಮಕ ಹಾಗೂ ಹಿಂಸಾತ್ಮಕ ಮಾರ್ಗದ ಮೂಲಕ ಆಗಸ್ಟ್ 15 1947 ರಂದು ನಮ್ಮ ಭಾರತ ದೇಶಕ್ಕೆ ಮಹಾತ್ಮ ಗಾಂಧೀಜಿ ಹಾಗೂ ದೇಶಭಕ್ತರ ತಂಡ ಸ್ವಾತಂತ್ರ್ಯ ತಂದುಕೊಟ್ಟಿತು.

ಈ ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿಯವರ ಪಾತ್ರ ಹಿರಿತನದ್ದು. ಸ್ವಾತಂತ್ರ್ಯ ಬಂದು ಕೆಲವೇ ದಿನಗಳಲ್ಲಿ ಮಹಾತ್ಮ ಗಾಂಧೀಜಿಯವರನ್ನು ನಾಥೂರಾಮ್ ಗೋಡ್ಸೆ ಗುಂಡಿಟ್ಟು ಕೊಂದೆ ಬಿಟ್ಟರು.! ಗಾಂಧೀಜಿಯವರ ಚಿತಾಭಸ್ಮವನ್ನು ಬಳ್ಳಾರಿ ನಗರದ ಗಾಂಧಿ ಭವನದ ಮಲ್ಲಸಜ್ಜನ ವ್ಯಾಯಾಮ ಶಾಲೆಯ ಆವರಣದಲ್ಲಿ 24 ಗಂಟೆಗಳ ಕಾಲ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿತ್ತು.

ಕೂಡ್ಲಿಗಿ ತಾಲೂಕಿನ ಶಿಕ್ಷಕರಾದ ಬಿಂದು ಮಾಧವ್ ರಾಯ್ ಹಾಗೂ ಮಹಾತ್ಮ ಗಾಂಧೀಜಿಯವರ ಅಭಿಮಾನಿಗಳ ತಂಡ ಗಾಂಧೀಜಿಯವರ ಚಿತಾಭಸ್ಮ ತಂದು ಕೂಡ್ಲಿಗಿ ತಾಲೂಕಿನ ಮಹಾದೇವ ಮೈಲಾರ ಕ್ರೀಡಾಂಗಣದಲ್ಲಿ ದೆಹಲಿಯ ರಾಜ್ ಘಾಟ್ ನಂತೆಯೇ ಇರುವ ಬಾಪೂಜಿಯವರನ್ನು ನೆನಪಿಸುವ ಸ್ಮಾರಕವನ್ನು ಚಿತಾಭಸ್ಮವನ್ನು ಇಡುವ ಮೂಲಕ ಹುತಾತ್ಮರ ಸ್ಮಾರಕ ನಿರ್ಮಿಸಲಾಗಿದೆ.

1950 ರೆ ದಶಕದಲ್ಲಿ ಸ್ಥಾಪಿಸಲಾದ ಈ ಚಿತಾಭಸ್ಮ ಸ್ಮಾರಕ ನಿರ್ಮಾಣ ಕಾರ್ಯವನ್ನು ಮಾಜಿ ಪ್ರಧಾನಿ P.V ನರಸಿಂಹರಾವ್ ಅವರ ಗುರುಗಳಾದ ರಮಾನಂದ ತೀರ್ಥರು ಉದ್ಘಾಟಿಸಿದರು. ಇಂತಹ ಮಹಾನ್ ಚೇತನರ ಚಿತಾಭಸ್ಮ ನಮ್ಮ ಕೂಡ್ಲಿಗಿ ತಾಲ್ಲೂಕಿನಲ್ಲಿ ಇರುವುದು ಒಂದು ಐತಿಹಾಸಿಕ ವಿಷಯ ಈ ಮೂಲಕ ನಮ್ಮ ಬಳ್ಳಾರಿ ಜಿಲ್ಲೆಗೂ ಸ್ವಾತಂತ್ರ್ಯ ಸಂಗ್ರಾಮಕ್ಕೂ ನಂಟಿದೆ.

ಇತ್ತೀಚೆಗೆ ಕೂಡ್ಲಿಗಿ ತಾಲೂಕಿನ ಚಿತಾಭಸ್ಮದ ಬಳಿ ‘ಚಿಂತನಾ ಚೇತನ’ ವೇದಿಕೆಗಳು ಸಾಂಸ್ಕೃತಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವುದು ಸಂತೋಷದ ವಿಚಾರವಾಗಿದೆ‌. ಕೂಡ್ಲಿಗಿ ತಾಲೂಕಿನಲ್ಲಿ ಹೇಳಿಕೊಳ್ಳುವಂತಹ ಯಾವ ಪ್ರೇಕ್ಷಣೀಯ ಸ್ಥಳಗಳು ಇಲ್ಲದಿದ್ದರೂ ಮಹಾತ್ಮ ಗಾಂಧೀಜಿಯವರಂತಹ ಚಿತಾಭಸ್ಮ ಹುತಾತ್ಮರ ಸ್ಮಾರಕ ಇರುವುದು ನಮ್ಮ ತಾಲ್ಲೂಕಿನ ಪುಣ್ಯ ಈ ಚಿತಾಭಸ್ಮ ತಂದು ಹುತಾತ್ಮರ ಸ್ಮಾರಕ ನಿರ್ಮಿಸಲು ಶ್ರಮಿಸಿದ ಸರ್ವರಿಗೂ ದೀರ್ಘದಂಡ ನಮಸ್ಕಾರಗಳು.

ಹೀಗೆ ನನ್ನೂರು ಕೂಡ್ಲಿಗಿ ತಾಲೂಕಿನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ನೆನಪು ಹುತಾತ್ಮರ ಸ್ಮಾರಕದ ಮೂಲಕ ಅಚಂದ್ರಾರ್ಕಸ್ಥಾಯಿಯಾಗಿದೆ ಸರ್ವರಿಗೂ ಮಹಾತ್ಮ ಗಾಂಧೀಜಿಯವರ ದಿನಾಚರಣೆಯ ಶುಭಾಶಯಗಳು.

(ಕೆ.ಶ್ರೀಧರ್ (ಕೆ.ಸಿರಿ)
ಯುವ ಸಾಹಿತಿ
ಚಾಮರಾಜನಗರ
9741270125)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending