ದಿನದ ಸುದ್ದಿ
22 ಲಕ್ಷ ಮೌಲ್ಯದ ಬಂಗಾರ, ಬೆಳ್ಳಿ, ಕಾರು ಖಾಕಿ ಜಪ್ತಿ ; ಮೂವರು ಆರೋಪಿಗಳ ಬಂಧನ
- ಗಿರೀಶ್ ಕುಮಾರ್ ಗೌಡ, ಬಳ್ಳಾರಿ
ಸುದ್ದಿದಿನಡೆಸ್ಕ್:ಕೂಡ್ಲಿಗಿ ಹಾಗೂ ಹಗರಿಬೊಮ್ಮನಹಳ್ಳಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣಗಳ ಪತ್ತೆ ಆಗಿದೆ. ಮೂವರು ಆರೋಪಿಗಳಿಂದ 22 ಲಕ್ಷ ಮೌಲ್ಯದ ಬಂಗಾರ, ಬೆಳ್ಳಿ, ಕಾರು ಖಾಕಿ ಜಪ್ತಿಮಾಡಿದ ವಿಜಯನಗರ ಜಿಲ್ಲೆಯ ಖಾಕಿ ಪಡೆ.
ಮೂರು ಆರೋಪಿಗಳ ಬಂಧನ, 10 ರಿಂದ 15 ವಾರೆಂಟ್ ಗಳು ಬಾಕಿ
ಎಂ. ಇಂದ್ರ ಮತ್ತು ಜಿ. ಸತೀಶ ಗೌಡ , ವಲ್ಲಿ @ ಸುಭಾಷ ಈ ಮೂರು ಆರೋಪಿತರು ರಾಜ್ಯದ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿದ್ದು 10-15 ಠಾಣೆಗಳಲ್ಲಿ ವಾರೆಂಟ್ಗಳು ಬಾಕಿಯಿರುತ್ತವೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇವರುಗಳನ್ನು ದಸ್ತಗಿರಿ ಮಾಡಿದ ಪೊಳಲೀಸರು ಇವರಿಂದ ಕೂಡ್ಲಿಗಿ ಠಾಣೆಯ -2 ಹಾಗೂ ಹಗರಿಬೊಮ್ಮನಹಳ್ಳಿ ಠಾಣೆಯ -2 ಒಟ್ಟು 4 ಮನೆ ಕಳ್ಳತನ ಪ್ರಕರಣಗಳಲ್ಲಿ ಆರೋಪಿತರಿಂದ ಒಟ್ಟು 215 ಬಂಗಾರದ ಆಭರಣ, 2 ಕೆ.ಜಿ.ಬೆಳ್ಳಿ ಆಭರಣ, ಒಂದು ಸ್ವಿಫ್ಟ್ ಡಿಜೈರ್ ಕಾರು ಅಂದಾಜು ಬೆಲೆ 2 ಲಕ್ಷ ರೂಪಾಯಿಗಳ ಮೌಲ್ಯದ ಒಟ್ಟು 22,00,750/- ರೂ [ ಇಪ್ಪತ್ತೆರೆಡು ಲಕ್ಷದ ಏಳುನೂರ ಐವತ್ತು ರೂಗಳು] ಬೆಲೆ ಬಾಳುವ ವಸ್ತುಗಳನ್ನು ಪೊಲೀಸರು ಜಪ್ತು ಮಾಡಿದ್ದಾರೆ.
ಹಿರಿಯ ಅಧಿಕಾರಿಗಳು ಮಾರ್ಗದರ್ಶನ
ಶ್ರೀ.ಹರಿಬಾಬು, ಐ.ಪಿ.ಎಸ್, ಪೊಲೀಸ್ ಅಧೀಕ್ಷಕರು, ಸಲೀಂ ಪಾಷ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ವಿಜಯನಗರ ಜಿಲ್ಲೆ ಮತ್ತು ಮಲ್ಲೇಶ ದೊಡ್ಡಮನಿ, ಡಿ.ಎಸ್.ಪಿ.ಕೂಡ್ಲಿಗಿ ಉಪ-ವಿಭಾಗ ರವರ ಸೂಕ್ತ ಮಾರ್ಗದರ್ಶನದಲ್ಲಿ ಪ್ರಹ್ಲಾದ.ಆರ್.ಚನ್ನಗಿರಿ ಸಿ.ಪಿ.ಐ ಕೂಡ್ಲಿಗಿ ವೃತ್ತ, ಶ್ರೀ.ವಿಕಾಸ.ಪಿ.ಲಮಾಣಿ ಸಿಪಿಐ ಹೆಚ್.ಬಿ.ಹಳ್ಳಿ ವೃತ್ತ, ಹಾಗೂ ಕೂಡ್ಲಿಗಿ ಠಾಣೆಯ ಪಿ.ಎಸ್.ಐ .ಪ್ರಕಾಶ ಮತ್ತು ಸಿಬ್ಬಂದಿಯವರು ಪತ್ತೆ ಕಾರ್ಯವನ್ನು ಕೈಗೊಂಡು ಆರೋಪಗಳನ್ನು ಪತ್ತೆ ಹಚ್ಚಲು ಮಾರ್ಗದರ್ಶನ ನೀಡಿದ್ದಾರೆ.
ಕಾರ್ಯಾಚರಣೆ ಮಾಡಿದ ಮಲ್ಲೇಶ ದೊಡ್ಡಮನಿ, ಡಿ.ಎಸ್.ಪಿ ಕೂಡ್ಲಿಗಿ ಉಪ-ವಿಭಾಗ,ಪ್ರಲ್ಟಾದ.ಆರ್.ಚನ್ನಗಿರಿ, ಸಿ.ಪಿ.ಐ ಕೂಡ್ಲಿಗಿ ವೃತ್ತ, ವಿಕಾಸ.ಪಿ.ಲಮಾಣಿ, ಸಿಪಿಐ ಹೆಚ್.ಬಿ.ಹಳ್ಳಿ ವೃತ್ತ, ಪ್ರಕಾಶ.ಸಿ. ಪಿ.ಎಸ್.ಐ (ಕಾ&ಸು) ಕೂಡ್ಲಿಗಿ ಠಾಣೆ, ಹಾಗು ಸಿಬ್ಬಂದಿಯಗಳಾದ ಮುಜಾವರ ಬಾಷಾ ಎಎಸ್ಐ, ತಿಪ್ಪೇಸ್ವಾಮಿ, ಬಸಪ್ಪ ಬದ್ದಿ , ಬಂಡೆ ರಾಘವೇಂದ್ರ, .ಮಂಜುನಾಥ, ಬಸವರಾಜ, ಕುಮಾರ ಪತ್ರಿ , ಶ್ರೀ.ರಾಜೇಂದ್ರಪ್ರಸಾದ, ಹಸನುಲ್ಲಾ, ಇರ್ಷಾದ, ಅಂಜಿನಪ್ಪ, .ಕೊಟ್ರೇಶ್, ಶ್ರೀ.ಹಂಪಣ್ಣ, ಮಲ್ಲಿಕಾರ್ಜುನ, ಪ್ರೇಮಲತಾ, ಬಾಗಳಿ ಕೊಟ್ರೇಶ ಇವರುಗಳಿಗೆ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶ್ಲಾಘಿಸಿ ಬಹುಮಾನ ಘೋಷಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


