ದಿನದ ಸುದ್ದಿ

ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಶ್ವೇತಪತ್ರ ಹೊರಡಿಸಲು ಎಚ್.ಡಿ. ಕುಮಾರಸ್ವಾಮಿ ಆಗ್ರಹ

Published

on

ಸುದ್ದಿದಿನ, ಬೆಂಗಳೂರು : ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಶ್ವೇತಪತ್ರ ಹೊರಡಿಸಬೇಕೆಂದು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಯೋಜನೆಯ ಫಲ ಎಷ್ಟು ಜನರಿಗೆ ಲಭ್ಯವಾಗಿದೆ, ಆರ್ಥಿಕವಾಗಿ ಎಷ್ಟು ಹೊರೆಬಿದ್ದಿದೆ, ಇದುವರೆಗೆ ಫಲಾನುಭವಿಗಳ ಖಾತೆಗೆ ಎಷ್ಟು ಹಣ ಜಮೆಯಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಅವರು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದಾರೆ.

ಸರ್ಕಾರದ ಗ್ಯಾರಂಟಿ ಯೋಜನೆಗಳು ವಿಫಲವಾಗಿದೆ, ಸಮರ್ಪಕವಾಗಿ ಜಾರಿಯಾಗುತ್ತಿಲ್ಲ, ಈ ಬಗ್ಗೆ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಪ್ರಸ್ತಾಪಿಸುವುದಾಗಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version