ದಿನದ ಸುದ್ದಿ
ಕುರುಬ ಎಸ್ ಟಿ ಹೋರಾಟ | ಪಾದಯಾತ್ರೆಯಲ್ಲಿ ಕಾಗಿನೆಲೆ ಶ್ರೀ ಸರ್ಕಾರಕ್ಕೆ ಕೊಟ್ರು ಡೆಡ್ ಲೈನ್..!
ಸುದ್ದಿದಿನ, ದಾವಣಗೆರೆ : ರಾಜ್ಯ ಸರ್ಕಾರಕ್ಕೆ ಒಂದರ ಮೇಲೊಂದು ತಲೆ ನೋವು ಶುರುವಾಗ್ತಿದೆ. ಒಂದು ಕಡೆ ಪಂಚಮಸಾಲಿ ಹೋರಾಟ, ಮತ್ತೊಂದೆಡೆ ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿ ಆಗ್ರಹ. ಕಾಗಿನೆಲೆ ಶ್ರೀ ಗಳ ನೇತೃತ್ವದಲ್ಲಿ ಹೊರಟಿರುವ ಪಾದಯಾತ್ರೆ ಬೆಣ್ಣೆನಗರಿಗೆ ಬಂದು ತಲುಪಿದ್ದು, ಮೊದಲ ಭಾರೀಗೆ ಸರ್ಕಾರಕ್ಕೆ ಕಾಗಿನೆಲೆ ಶ್ರೀಗಳು ಖಡಕ್ ವಾರ್ನಿಂಗ್ ನೀಡುವ ಡೆಡ್ ಲೈನ್ ನೀಡಿದ್ದಾರೆ.
ಆ ಒಂದು ಪಾದಯಾತ್ರೆಯಲ್ಲಿ ಕೇಳಿದ್ದು ಒಂದೇ ಘೋಷಣೆ ವಾಕ್ಯ ಬೇಕೆ ಬೇಕು ಎಸ್ ಟಿ ಬೇಕು, ಬೇಕೆ ಬೇಕು ಎಸ್ ಟಿ ಬೇಕು. ಹೌದು., ಸಾಗರೋಪಾದಿಯಲ್ಲಿ ಜನ ಆ ಒಬ್ಬ ಸ್ವಾಮಿಜಿ ಜೊತೆ ಕೈಗೊಡಿಸಿದ್ದರು, ಕುರುಬ ಸಮಾಜಕ್ಕೆ ಎಸ್ ಟಿ ಮೀಸಲಾತಿ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಸದ್ಯ ತೀವ್ರ ಸ್ವರೂಪ ಪಡೆದುಕೊಂಡಿದೆ.
ಮಕರ ಸಂಕ್ರಾಂತಿಗೆ ಸೂರ್ಯ ತನ್ನ ದಿಕ್ಕು ಬದಲಿಸುವಂತೆ ನಿರಂಜನಾನಂದಪುರಿ ಸ್ವಾಮೀಜಿ ಕುರುಬ ದಿಕ್ಕು ಬದಲಿಸುವ ಪಣ ತೊಟ್ಟಿದ್ದಾರೆ. ಅದಕ್ಕೆ ಜನವರಿ ೧೫ ರಂದೆ ಹಾವೇರಿಯ ಕಾಗಿನೆಲೆ ಪೀಠದಿಂದ ಪಾದಯಾತ್ರೆ ಆರಂಭಿಸಿದ್ದು ಸದ್ಯ ಪಾದಯಾತ್ರೆ ದಾವಣಗೆರೆಗೆ ಬಂದು ತಲುಪಿದೆ, ಡೊಳ್ಳು ಕುಣಿತ, ಕುಂಬಮೇಳದ ಸ್ವಾಗತದೊಂದಿಗೆ ಜನರು ಸಾಗರೋಪಾದಿಯಲ್ಲಿ ಬಂದು ಜೈ ಎಂದಿದ್ದು, ಇದು ಎಸ್ ಟಿ ಹೋರಾಟಕ್ಕೆ ಮತ್ತುಷ್ಟು ಬಲ ನೀಡಿದೆ.
ಈ ವೇಳೆ ಹೋರಾಟವನ್ನುದ್ದೇಶಿಸಿ ಮಾತನಾಡಿದ ಕಾಗಿನೆಲೆ ಶ್ರೀ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ನಮ್ಮ ಎಸ್ ಟಿ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ ಶಾಂತಿಯುತವಾಗಿ ನಡೆಯುತ್ತಿದೆ. ಒಂದು ವೇಳೆ ನಮ್ಮ ಹೋರಾಟಕ್ಕೆ ಸರಿಯಾದ ಬೆಲೆ ಸಿಗದೆ ಹೋದಲ್ಲಿ ನಮ್ಮ ಹೋರಾಟ ತೀವ್ರಗೊಳ್ಳಲಿದೆ, ಟಗರು ಗುದ್ದಿದರೆ ಸಂಸತ್ ಭವನ ನಡುಗಲಿದೆ ಅಂತ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ದಾವಣಗೆರೆಯ ಬೀರಲಿಂಗೇಶ್ವರ ದೇವಸ್ಥಾನದ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಹದಿನೈದು ಸಾವಿರಕ್ಕೂ ಹೆಚ್ಚು ಸೇರಿದ್ದು ಪಾದಯಾತ್ರೆಗೆ ಮತ್ತಷ್ಟು ಶಕ್ತಿ ತುಂಬಿತು.. ಇನ್ನೂ ಸಮಾವೇಶಕ್ಕೆ ಸಚಿವ ಕೆ ಎಸ್ ಈಶ್ವರಪ್ಪ ಆಗಮಿಸಿ, ಸಿದ್ದರಾಮಯ್ಯ ವಿರುದ್ದ ಗುಡುಗಿದ್ರು, ಸಿದ್ದರಾಮಯ್ಯ ಕೇವಲ ನಾಲ್ಕು ಜಿಲ್ಲೆಗೆ ಶಿಫಾರಸ್ಸು ಮಾಡಿದ್ರು, ಈಗ ನಾವು ಇಡೀ ಕರ್ನಾಟಕಕ್ಕೆ ST ಕೇಳುತ್ತಿದ್ದೇವೆ, ಕೈಮುಗಿದು ಕೇಳುತ್ತೇನೆ ಇದರಲ್ಲಿ ರಾಜಕೀಯ ಮಾಡಬೇಡಿ ಎಂದು ಪರೋಕ್ಷವಾಗಿ ಸಿದ್ದರಾಮಯ್ಯ ನವರಿಗೆ ಟಾಂಗ್ ಕೊಟ್ರು.
|ನಿರಂಜನಾನಂದಪುರಿ ಸ್ವಾಮೀಜಿ, ಕನಕಗುರು ಪೀಠ
ಒಟ್ಟಾರೆ ಈಗಾಗಲೇ ಸಂಪುಟ ವಿಸ್ತರಣೆಯಿಂದ ಇಕ್ಕಟ್ಟಿನಲ್ಲಿ ಸಿಲುಕಿರುವ ಸರ್ಕಾರಕ್ಕೆ ಇದೀಗ ST ಹೋರಾಟ ಮತ್ತಷ್ಟು ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಅದರಲ್ಲೂ ಆಡಳಿತ ಪಕ್ಷದವರೆ ಆದ ಕೆಎಸ್ ಈಶ್ವರಪ್ಪ, ಎಂ ಟಿಬಿ ನಾಗರಾಜ್, ಆರ್ ಶಂಕರ್, ಎಚ್ ವಿಶ್ವನಾಥ್ ಹೋರಾಟಕ್ಕೆ ದುಮುಕಿದ್ದು, ಸರ್ಕಾಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸಿದೆ.
| ಕೆ.ಎಸ್. ಈಶ್ವರಪ್ಪ, ಸಚಿವರು
ಸುದ್ದಿದಿನ.ಕಾಂ|ವಾಟ್ಸಾಪ್|9980346243