Connect with us

ದಿನದ ಸುದ್ದಿ

ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ ಕೈವಾಡವಿದೆ : ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಕುರುಬರ ಎಸ್ಟಿ ಹೋರಾಟದ ಹಿಂದೆ ಆರ್‌ಎಸ್ಎಸ್‌ನ ಕೈವಾಡವಿದೆ. ಇದು ಕುರುಬ ಸಮುದಾಯವನ್ನು ಒಡೆಯುವ ಹುನ್ನಾರದ ಭಾಗ. ಆರ್‌ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಹಾಗೂ ಸಂತೋಷ್ ಅವರು ಈಶ್ವರಪ್ಪ ಅವರನ್ನು ಬಳಸಿಕೊಂಡು ಕುರುಬ ಸಮಾಜವನ್ನು ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಕರೆದರೂ ಕುರುಬರ ಎಸ್ಟಿ ಮೀಸಲಾತಿ ಹೋರಾಟದಲ್ಲಿ ಸಿದ್ದರಾಮಯ್ಯ ಅವರು ಭಾಗವಹಿಸುತ್ತಿಲ್ಲ ಎಂದು ಈಶ್ವರಪ್ಪ ಹೇಳಿದ್ದಾರೆ. ಅವರು ನನ್ನನ್ನು ಕರೆದೂ ಇಲ್ಲ, ನಾನು ಬರುತ್ತೇನೆ ಅಥವಾ ಬರುವುದಿಲ್ಲ ಎಂದು ಅವರಿಗೆ ಹೇಳಿಲ್ಲ. ಈಶ್ವರಪ್ಪ ಈ ವಿಚಾರದಲ್ಲಿ ಸುಳ್ಳು ಹೇಳಿದ್ದಾರೆ.

ಮೋದಿಯವರು ಪ್ರಧಾನಿಯಾಗಿ ಆರೂವರೆ ವರ್ಷಗಳಾದವು. ಗೊಂಡ, ರಾಜಗೊಂಡ ಸಮುದಾಯದವರು ಕಲಬುರ್ಗಿ, ಬೀದರ್, ಯಾದಗಿರಿ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಅವರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ. ಆ ಬಗ್ಗೆ ಈಶ್ವರಪ್ಪ ಅವರು ಏಕೆ ಆದೇಶ ಮಾಡಿಸಿಲ್ಲ‌ ಎಂದರು.

ಆರ್‌ಎಸ್ಎಸ್ ನವರು ಎಂದೂ ಮೀಸಲಾತಿ ಪರ ಇಲ್ಲ. ಹಾವನೂರು ಆಯೋಗ, ವೆಂಕಟಸ್ವಾಮಿ ಆಯೋಗ, ಚಿನ್ನಪ್ಪರೆಡ್ಡಿ ಆಯೋಗ ಮತ್ತು ಮಂಡಲ್ ವರದಿಯನ್ನು ಅವರು ಸ್ವಾಗತ ಮಾಡಿದರೇ? ಎಲ್ಲಾ ಸಂದರ್ಭದಲ್ಲಿಯೂ ವಿರೋಧ ಮಾಡಿದ್ದಾರೆ.

ಬಿಜೆಪಿ ಮತ್ತು ಆರ್‌ಎಸ್ಎಸ್ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿವೆ. ಆರ್ ಎಸ್ ಎಸ್ ಸ್ಥಾಪಕರಾದ ಹೆಡಗೆವಾರ್ ಆಗಲಿ, ಎಂ.ಎಸ್ ಗೋಲವಾಲ್ಕಾರ್ ಇಲ್ಲವೇ ಇತರ ಆರ್ ಎಸ್ ಎಸ್ ನಾಯಕರು ಎಂದಾದರೂ ಸಾಮಾಜಿಕ ನ್ಯಾಯ ಮತ್ತು ಮೀಸಲಾತಿ ಪರ ಹೋರಾಟ ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದರು.

ಕುರುಬರ ನಾಯಕ ನಾನೇ ಎಂದು ಈಶ್ವರಪ್ಪ ಹೇಳಿಕೊಳ್ಳಲಿ. ಅದಕ್ಕೆ ನನ್ನ ತಕರಾರು ಇಲ್ಲ. ನಾಯಕ ಯಾರೆಂದು ಜನ ತೀರ್ಮಾನ ಮಾಡುತ್ತಾರೆ, ನಾವೇ ಘೋಷಿಸಿಕೊಳ್ಳುವುದಲ್ಲ.

ಕುರುಬರನ್ನು ಎಸ್ಟಿಗೆ ಸೇರಿಸುವ ಮೊದಲು ಎಸ್ಟಿ ಮೀಸಲಾತಿಯನ್ನು ಶೇ. 3ರಿಂದ ಕನಿಷ್ಠ ಶೇ. 20ಕ್ಕೆ ಹೆಚ್ಚಿಸಬೇಕು. ಅದಕ್ಕೂ ಹೋರಾಟ ಮಾಡಬೇಕಿದೆ. ವಾಲ್ಮೀಕಿ ಸಮುದಾಯದವರು ಮೀಸಲಾತಿಯನ್ನು ಶೇ.7.5ಕ್ಕೆ ಹೆಚ್ಚಿಸುವಂತೆ ಹೋರಾಟ ಮಾಡುತ್ತಿದ್ದಾರೆ. ಮೀಸಲು ಪ್ರಮಾಣ ಶೇ. 3ರಷ್ಟೇ ಇದ್ದರೆ ಕುರುಬ ಸಮುದಾಯವನ್ನು ಎಸ್‌ಟಿ ಗೆ ಸೇರಿಸಿದರೆ ಏನು ಲಾಭ?

ಕುರುಬ ಸಮುದಾಯದ ಬಗ್ಗೆ ಬಿಜೆಪಿಯವರಿಗೆ ಕಾಳಜಿ ಇದ್ದರೆ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ಸಿದ್ಧಪಡಿಸಿರುವ ಸಾಮಾಜಿಕ, ಶೈಕ್ಷಣಿಕ ಗಣತಿ ಆಧಾರಿತ ವರದಿಯನ್ನು ರಾಜ್ಯ ಬಿಜೆಪಿ ಸರ್ಕಾರ ಒಪ್ಪಿಕೊಳ್ಳಲಿ. ಕುರುಬರ ಬಗ್ಗೆ ಈಶ್ವರಪ್ಪ ಅವರಿಗೆ ಇದ್ದಕ್ಕಿದ್ದಂತೆ ಕಾಳಜಿ ಬಂದಿದೆ. ಕಾಗಿನೆಲೆ ಮಠ ಸ್ಥಾಪನೆ ಸಂದರ್ಭದಲ್ಲಿ ಈಶ್ವರಪ್ಪ ಅವರು ಎಲ್ಲಿದ್ದರು. ಆಗ ಅವರು ಪತ್ತೆಯೇ ಇರಲಿಲ್ಲ. ಈಗ ಸ್ವಾಮೀಜಿಗಳನ್ನು ಕರೆದುಕೊಂಡು ಹೋರಾಟ ನಡೆಸುತ್ತಿದ್ದಾರೆ. ಮಠದ ಉದ್ಘಾಟನಾ ಸಭೆಗೂ ಅವರು ಆಗ ಬಂದಿರಲಿಲ್ಲ.

ಉಡುಪಿಯ ಕನಕ ಗೋಪುರ ಕೆಡವಿದಾಗ ಈಶ್ವರಪ್ಪ ಎಲ್ಲಿ ಹೋಗಿದ್ದರು? ಯಾವ ಮೀಸಲಾತಿ ಪರ ಅವರು ಹೋರಾಟ ಮಾಡಿದ್ದಾರೆ? ರಾಜ್ಯ ಸಭಾ ಸದಸ್ಯರಾಗಿದ್ದ ರಾಮಾ ಜೋಯಿಸರು ಹಿಂದುಳಿದ ವರ್ಗದವರ ಮೀಸಲು ವಿರೋಧಿಸಿದಾಗ ಎಲ್ಲಿದ್ದರು. ಬಿಜೆಪಿಯಲ್ಲಿ ಆಗ ಈಶ್ವರಪ್ಪ ಇದ್ದರಲ್ಲವೇ? ಏಕೆ ವಿರೋಧ ಮಾಡಲಿಲ್ಲ?

ಈಗ ಇದ್ದಕ್ಕಿಂದ್ದರೆ ಈಶ್ವರಪ್ಪ ಅವರಿಗೆ ಕುರುಬರ ಮೇಲೆ ಪ್ರೀತಿ ಬಂದಿದೆ. ಅವರು ಹೋರಾಟ ಮಾಡಲಿ. ಬೇಡ ಎನ್ನುವುದಿಲ್ಲ. ಮೊದಲು ಬೀದರ್, ಕಲಬರಗಿ, ಯಾದಗಿರಿಯ ಗೊಂಡ, ರಾಜಗೊಂಡ ಸಮುದಾಯವನ್ನು ಎಸ್ಟಿಗೆ ಸೇರಿಸುವ ಕುರಿತು ಆದೇಶ ಜಾರಿ ಮಾಡಿಸಲಿ.

ಈಶ್ವರಪ್ಪ ಅವರು ಎಂದೂ ಮೀಸಲಾತಿ ಪರ ಹೋರಾಟ ಮಾಡಿದವರಲ್ಲ. ಸದನದಲ್ಲಿಯೂ ಧ್ವನಿ ಎತ್ತಿದವರಲ್ಲ. ಸಂಗೊಳ್ಳಿ ರಾಯಣ್ಣ ಬ್ರಿಗೇಡ್‌ನ ಈಶ್ವರಪ್ಪ ಅವರು ಎಲ್ಲಿ ಬಿಟ್ಟರು? ಹೀಗೆ ಸ್ವಾರ್ಥಕ್ಕಾಗಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡಬಾರದು. ಕುರುಬ ಸಮುದಾಯವನ್ನು ಒಡೆಯಲು ಆರ್‌ಎಸ್ಎಸ್ ನವರು ಈಶ್ವರಪ್ಪ ಅವರನ್ನು ಬಳಸಿಕೊಳ್ಳುತ್ತಿದ್ದಾರೆ. ಆರಂಭದಲ್ಲಿ ಆರ್ ಎಸ್ ಎಸ್ ಕೈವಾಡದ ಬಗ್ಗೆ ನನಗೆ ಗೊತ್ತಿರಲಿಲ್ಲ. ಈಶ್ವರಪ್ಪ ಅವರೇ ಹೇಳಿದ ಮೇಲೆ ನನಗೂ ತಿಳಿದದ್ದು. ಈಶ್ವರಪ್ಪ ಅವರು ಸ್ವಂತ ಬುದ್ಧಿಯಿಂದ ಹೋರಾಟ ಶುರು ಮಾಡಿದ್ದಲ್ಲ, ಆರ್ ಎಸ್ ಎಸ್, ಬಿಜೆಪಿಯವರ ಹುನ್ನಾರವಿದೆ.

ಗೋಹತ್ಯೆ ನಿಷೇಧ ಕಾಯ್ದೆಯನ್ನು ಬಿಜೆಪಿ ಆಡಳಿತವಿರುವ ಗೋವಾದಲ್ಲಿ ಏಕೆ ಜಾರಿಗೊಳಿಸಿಲ್ಲ? ಕರ್ನಾಟಕದಲ್ಲಿಯೇ ಏಕೆ? ಕಾಯ್ದೆ ಜಾರಿಯಾದರೆ ತಾವು ಕಷ್ಟ ನಷ್ಟಕ್ಕೆ ಈಡಾಗುತ್ತೇವೆ ಎಂಬ ಭಯದಿಂದ ಮುಸ್ಲಿಂ ಸಮುದಾಯದ ಮುಖಂಡರು ನನ್ನ ಬಳಿಗೆ ಬಂದಿದ್ದರು. ಅಧಿವೇಶನದಲ್ಲಿ ಈ ವಿಚಾರ ಚರ್ಚೆಗೆ ಬಂದಲ್ಲಿ ನಾವು ವಿರೋಧಿಸಲಿದ್ದೇವೆ.

ಉತ್ತರ ಪ್ರದೇಶದಲ್ಲಿ ಜಾರಿಯಿರುವ ಲವ್ ಜಿಹಾದ್ ತಡೆ ಕಾನೂನು ಅಸಂವಿಧಾನಿಕ. ನಿಗದಿತ ವಯೋಮಾನಕ್ಕೆ ಮೇಲ್ಪಟ್ಟ ಪ್ರತಿಯೊಬ್ಬರಿಗೂ ತಮಗೆ ಇಷ್ಟವಾಗುವ ವ್ಯಕ್ತಿಯನ್ನು ಮಧುವೆಯಾಗುವ ಸ್ವಾತಂತ್ರ್ಯ ಇದೆ. ಯಾವುದೇ ಒಂದು ಜಾತಿ ಇಂತಹುದೇ ಜಾತಿ – ಧರ್ಮದ ಹುಡುಗ ಅಥವಾ ಹುಡುಗಿಯನ್ನು ವಿವಾಹವಾಗಬೇಕೆಂಬ ಕಾನೂನು ನಮ್ಮ ಸಂವಿಧಾನದಲ್ಲಿ ಇಲ್ಲ.

ಲವ್ ಜಿಹಾದ್ ನಿಷೇಧದಂತಹ ಕಾನೂನು ಜಾರಿಗೊಳಿಸಲು ಸಂವಿಧಾನ ಅವಕಾಶ ನೀಡಲ್ಲ, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದರೆ ಕಾಯ್ದೆ ವಜಾಗೊಳ್ಳಲಿದೆ. ಇಂತಹಾ ಕಾಯ್ದೆಗಳಿಗೆ ಅವಕಾಶವಿಲ್ಲ ಎಂದು ಅಲಹಾಬಾದ್ ಹಾಗೂ ಕರ್ನಾಟಕದ ಉಚ್ಚ ನ್ಯಾಯಾಲಯಗಳು ಹೇಳಿವೆ. ಹಾಗಾಗಿ ಕಾಯ್ದೆ ಜಾರಿ ಅಸಾಧ್ಯ.

ನನ್ನನ್ನು ಕಾಂಗ್ರೆಸ್ ಸೇರಿಸಿದ್ದು ವಿಶ್ವನಾಥ್ ಎಂಬುದೇ ಶುದ್ಧ ಸುಳ್ಳು. ನನ್ನನ್ನು ಕರೆದುಕೊಂಡು ಹೋಗಿ ಕಾಂಗ್ರೆಸ್‌ ‌ನ ಯಾವ ನಾಯಕರನ್ನು ಭೇಟಿ ಮಾಡಿಸಿದ್ದರು ಅಂತ ವಿಶ್ವನಾಥ್ ಅವರನ್ನೇ ಕೇಳಿ. ನಾನು ಕಾಂಗ್ರೆಸ್ ಸೇರಲು ಪಿರನ್ ಹಾಗೂ ಅಹಮದ್ ಪಟೇಲ್ ಕಾರಣರೇ ಹೊರತು ಕರ್ನಾಟಕದ ಯಾವೊಬ್ಬ ನಾಯಕರಲ್ಲ. ವಿಶ್ವನಾಥ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಅಷ್ಟೊಂದು ಪ್ರಭಾವಶಾಲಿಯಾಗಿದ್ದರೆ ಅವರು ಯಾಕೆ ಕಾಂಗ್ರೆಸ್ ಬಿಟ್ಟರಂತೆ? ಅವರ ಈಗಿನ ಮಾತು ಮತ್ತು ನಡವಳಿಕೆಗಳನ್ನು ನೋಡಿದರೆ ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರುವುದನ್ನು ಒಳಗಿಂದೊಳಗೆ ವಿರೋಧಿಸಿರಬಹುದೇ ಎಂಬ ಸಂಶಯ ನನ್ನನ್ನು ಕಾಡುತ್ತಿದೆ.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಯೂ ಸೇರಿದಂತೆ ಬಿಜೆಪಿ ಹಾಗೂ ಆರ್.ಎಸ್.ಎಸ್ ನಾಯಕರು ನಮ್ಮಲ್ಲಿರುವ ಮಾನವೀಯತೆಯನ್ನು ನೋಡಿ ಕಲಿಯಬೇಕು. ಡಿ.ಕೆ ಶಿವಕುಮಾರ್ ಅವರಿಗೆ ನೀವು ಕಿವಿಮಾತು ಹೇಳುವುದೇನೋ ಸರಿ, ಆದರೆ ಅವರು ಯಾವಾಗ ಮಾನವೀಯತೆ, ಮನುಷ್ಯತ್ವವನ್ನು ಕಲಿಯುವುದು?

ನಾನೂ ಸಗಣಿ ಬಾಚಿದ್ದೇನೆ, ಗಂಜಲ ಎತ್ತಿದ್ದೇನೆ. ಬಿಜೆಪಿಯ ಯಾವ ನಾಯಕರು ಈ ಕೆಲಸ ಮಾಡಿದ್ದಾರೆ? ಪಶು ಸಾಕಾಣಿಕೆ ಬಗ್ಗೆ ಅವರಿಗೇನು ಗೊತ್ತಿದೆ? ಹಸು- ಎತ್ತುಗಳಿಗೆ ವಯಸ್ಸಾದ ಮೇಲೆ ಅವನ್ನು ರೈತರು ಏನು ಮಾಡಬೇಕು? ಬಿಜೆಪಿಯವರ ಮನೆ ಬಾಗಿಲಿಗೆ ಕೊಂಡುಹೋಗಿ ಬಿಟ್ಟು ಬರಬೇಕೇ? ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO) ಡಾ. ಪ್ರೀತಿ ಅವರು ರಾಷ್ಟ್ರ ಮಟ್ಟದ ಪ್ರತಿಷ್ಠಿತ “Param Bhushan National Excellence Award – 2026” ಪ್ರಶಸ್ತಿಯನ್ನು ಪಡೆದಿದ್ದಾರೆ.

ಶಿಕ್ಷಣ, ಆಡಳಿತ, ಮಾನವ ಸಂಪನ್ಮೂಲ ಅಭಿವೃದ್ಧಿ, ಉದ್ಯಮಶೀಲತೆ ಹಾಗೂ ಸಮಾಜಸೇವೆಯಲ್ಲಿ ನೀಡಿದ ಅತ್ಯುತ್ತಮ ಕೊಡುಗೆಗಳನ್ನು ಪರಿಗಣಿಸಿ Jivran Foundation ವತಿಯಿಂದ ಈ ರಾಷ್ಟ್ರೀಯ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಡಾ. ಪ್ರೀತಿ ಅವರು ವಿದೇಶಿ ವೈದ್ಯಕೀಯ ಶಿಕ್ಷಣ (MBBS Abroad), ಉದ್ಯೋಗ ಮಾರ್ಗದರ್ಶನ, ಶಿಕ್ಷಣ ಸಲಹಾ ಸೇವೆಗಳು, ಕೌಶಲ್ಯಾಭಿವೃದ್ಧಿ ಹಾಗೂ ಯುವಜನರ ಸಬಲೀಕರಣ ಕ್ಷೇತ್ರಗಳಲ್ಲಿ ಗಮನಾರ್ಹ ಸೇವೆ ಸಲ್ಲಿಸುತ್ತಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪ್ರಶಸ್ತಿ ಅವರ ಸಾಧನೆಗೆ ಮಾತ್ರವಲ್ಲದೆ, ಕರ್ನಾಟಕದ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರಕ್ಕೂ ರಾಷ್ಟ್ರೀಯ ಮಟ್ಟದಲ್ಲಿ ದೊರೆತ ಗೌರವವಾಗಿದೆ.

ಈ ಸಂದರ್ಭದಲ್ಲಿ ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಸಮಾಜದ ಗಣ್ಯರು, ಉದ್ಯಮಿಗಳು ಹಾಗೂ ವಿದ್ಯಾರ್ಥಿಗಳು ಡಾ. ಪ್ರೀತಿ ಅವರಿಗೆ ಅಭಿನಂದನೆ ಸಲ್ಲಿಸಿ, ಮುಂದಿನ ದಿನಗಳಲ್ಲಿ ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲೆಂದು ಶುಭ ಹಾರೈಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

Published

on

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು ರಾಯ್ ಅವರು ‘ಟೇಕ್ ಕೇರ್ ಭಾಲೋಬಾಸ’ ಚಿತ್ರದ ಮೂಲಕ ಬಂಗಾಳಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಈ ಚಿತ್ರದಲ್ಲಿ ಅವರು ‘ಜಾಯ್’ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ, ಇದು ಸ್ನೇಹ, ಸಂಬಂಧಗಳು ಮತ್ತು ಕಾಲಾನುಕ್ರಮದಲ್ಲಿ ವಿಕಸನಗೊಳ್ಳುವ ಭಾವನೆಗಳ ಸುತ್ತ ಕೇಂದ್ರೀಕೃತವಾಗಿರುವ ಕಥೆಯಲ್ಲಿನ ಒಬ್ಬ ಸ್ನೇಹಿತ.

ನಿರ್ದೇಶಕ ಪಿಜೂಷ್ ಸಾಹಾ ಅವರ ಮಾರ್ಗದರ್ಶನದಲ್ಲಿ ಸುಶೋಭನ್ ಅವರ ಅಭಿನಯ ಪ್ರಯಾಣವು ಪ್ರಾರಂಭವಾಯಿತು, ಅಲ್ಲಿ ಅವರು ಸುಮಾರು ಎರಡು ವರ್ಷಗಳ ಕಾಲ ಅಭಿನಯ ಕಾರ್ಯಾಗಾರಗಳಲ್ಲಿ ಭಾಗವಹಿಸಿದರು. ನಿಯಮಿತ ಆಡಿಷನ್ಗಳ ನಂತರ, 2019 ರಲ್ಲಿ ಅವರು ಆಕಾಶ್ ಆಠ್ ಚಾನೆಲ್ನ ‘ಆನಂದಮಯೀ ಮಾ’ ಧಾರಾವಾಹಿಯ ಮೂಲಕ ತಮ್ಮ ಟೆಲಿವಿಷನ್ ಚೊಚ್ಚಲ ಪ್ರವೇಶವನ್ನು ಮಾಡಿದರು, ಇದನ್ನು ಮರಣೋತ್ತರ ನಿರ್ದೇಶಕ ದೇವಿದಾಸ್ ಭಟ್ಟಾಚಾರ್ಯ ನಿರ್ದೇಶಿಸಿದ್ದರು, ಅದರಲ್ಲಿ ಅವರು ವೈಷ್ಣವ ಭಕ್ತನ ಪಾತ್ರವನ್ನು ನಿರ್ವಹಿಸಿದರು. ನಂತರ ಅವರು ಸ್ಟಾರ್ ಜಲ್ಸಾದ ‘ಮೋಹರ್’, ‘ಕೋರಾಪಾಖಿ’, ‘ತಿತ್ಲಿ’ ಮತ್ತು ‘ಖೇಲಾಘರ್’, ಜೊತೆಗೆ ಜೀ ಬಂಗ್ಲಾದ ‘ಜಮುನಾ ಢಾಕಿ’ ಧಾರಾವಾಹಿಗಳಲ್ಲಿ ಕಾಣಿಸಿಕೊಂಡರು, ಹೀಗೆ ಬಂಗಾಳಿ ಟೆಲಿವಿಷನ್ನಲ್ಲಿ ತಮ್ಮ ಕೆಲಸವನ್ನು ಮುಂದುವರೆಸಿದರು.

COVID-19 ಸಾಂಕ್ರಾಮಿಕ ಸಮಯದಲ್ಲಿ, ಅಭಿನಯದ ಕೆಲಸಗಳು ಸೀಮಿತವಾದಾಗ, ಸುಶೋಭನ್ ಮಾಡೆಲಿಂಗ್ಗೆ ತಿರುಗಿದರು. 2023 ರಿಂದ ಪ್ರಾರಂಭಿಸಿ, ಅವರು ಹಾಲಿಡೇ ಇನ್ ಹೋಟೆಲ್, ಡಾಬರ್, ಟೈಟಾನ್ ಐ+, ವೆಲಾಸಿಟಿ ಐವೇರ್, ಅಮೆಜಾನ್, ಸ್ಪೆನ್ಸರ್ಸ್, ಕ್ಯಾಂಪಸ್ ಶೂಸ್, ಬಿಗ್ ಬಜಾರ್, ಬಯೋಟಿಕ್ ಮತ್ತು ಫಿಯಾಮಾ ಡಿ ವಿಲ್ಸ್ ಸೇರಿದಂತೆ ಹಲವಾರು ಬ್ರಾಂಡ್ಗಳೊಂದಿಗೆ ಕೆಲಸ ಮಾಡಿದರು. 2025 ರಲ್ಲಿ, ಕೋಲ್ಕತ್ತಾದಲ್ಲಿ ನಡೆದ ‘ಎತ್ನಿಕ್ ಎಲಿಗನ್ಸ್ 2025’ ಸೌಂದರ್ಯ ಸ್ಪರ್ಧೆಯಲ್ಲಿ ಅವರು ಪ್ರಥಮ ರನ್ನರ್-ಅಪ್ ಆಗಿ ಆಯ್ಕೆಯಾದರು.

ಹೌರಾದಲ್ಲಿ ಜನಿಸಿ ಕೋಲ್ಕತ್ತಾದಲ್ಲಿ ಬೆಳೆದ ಸುಶೋಭನ್, ಸುಮಾರು ಮೂರೂವರೆ ವರ್ಷದ ವಯಸ್ಸಿನಲ್ಲಿ ತಂದೆಯನ್ನು ಕಳೆದುಕೊಂಡ ನಂತರ ತಾಯಿಯಿಂದ ಬೆಳೆಸಲ್ಪಟ್ಟರು. ಅವರು ಕೋಲ್ಕತ್ತಾದಲ್ಲಿ ತಮ್ಮ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು ಮತ್ತು 2016 ರಲ್ಲಿ ದಮ್ ದಮ್ ಮೋತಿಜೀಲ್ ರವೀಂದ್ರ ಮಹಾವಿದ್ಯಾಲಯದಿಂದ ವಾಣಿಜ್ಯದಲ್ಲಿ ಬಿ.ಕಾಮ್ ಪದವಿಯನ್ನು ಪಡೆದರು. ಅಭಿನಯವನ್ನು ಮುಂದುವರಿಸುವ ಮೊದಲು, ಅವರು ಸುಮಾರು ಎರಡು ವರ್ಷಗಳ ಕಾಲ ಪಾಶ್ಚಾತ್ಯ ನೃತ್ಯದಲ್ಲಿ ತರಬೇತಿ ಪಡೆದರು ಮತ್ತು ರಂಗ ಪ್ರದರ್ಶನಗಳಲ್ಲಿ ಭಾಗವಹಿಸಿದರು.

‘ಟೇಕ್ ಕೇರ್ ಭಾಲೋಬಾಸ’ ಸುಶೋಭನ್ ಅವರ ಮೊದಲ ಬಂಗಾಳಿ ಫೀಚರ್ ಫಿಲ್ಮ್ನಲ್ಲಿ ಕಾಣಿಸಿಕೊಳ್ಳುವುದನ್ನು ಸೂಚಿಸುತ್ತದೆ. ಈ ಚಿತ್ರದಲ್ಲಿ, ಜಾಯ್ ಅವರು ಕೆಲವೊಮ್ಮೆ ಸಂಯಮದಿಂದಿರುವ, ಆದರೆ ಉಷ್ಣತೆ, ಸ್ನೇಹಪರತೆ ಮತ್ತು ಸಹಜತೆಯನ್ನು ಪ್ರದರ್ಶಿಸುವ ಪಾತ್ರವಾಗಿ ಚಿತ್ರಿಸಲಾಗಿದೆ, ಇದು ಸಂಬಂಧಗಳು ಮತ್ತು ದೈನಂದಿನ ಭಾವನೆಗಳ ಅನ್ವೇಷಣೆಗೆ ಕೊಡುಗೆ ನೀಡುತ್ತದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

Published

on

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7 ಕೋಟಿ ಅನುದಾನದಲ್ಲಿನ ಅವ್ಯವಹಾರವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಾಗೆ ದೂರು ನೀಡಲಾಗಿದೆ ಎಂದು ವಕೀಲ ಕೆ.ಎ.ಓಬಳಪ್ಪ ಅವರು ತಿಳಿಸಿದರು.

ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಕಛೇರಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಅವರು ಮಾತನಾಡಿದರು.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಒಟ್ಟು 4 ಹಂತದಲ್ಲಿ 7 ಕೋಟಿ ರೂಪಾಯಿಗಳನ್ನು ಚಿತ್ರದುರ್ಗ ಜಿಲ್ಲೆಯ 06 ತಾಲ್ಲೂಕುಗಳಿಗೆ ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ಮಾಹಿತಿ ತಿಳಿದಿದೆ ಎಂದರು.

ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ 06 ತಾಲ್ಲೂಕುಗಳ ಉಪವಿಭಾಗಗಳಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ ಮಾಹಿತಿ ಕೋರಿದಾಗ, ಯಾವುದೇ ಉಪವಿಭಾಗಗಳ ಅಧಿಕಾರಿಗಳು ಸೂಕ್ತ ಮಾಹಿತಿ ನೀಡದ ಕಾರಣ ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ ಅರ್ಜಿ ಸಲ್ಲಿಸಿ, ‘2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಳ್ಳಕೆರೆ, ಚಿತ್ರದುರ್ಗ, ಹೊಸದುರ್ಗ, ಹೊಳಲ್ಕೆರೆ, ಹಿರಿಯೂರು, ಮೊಳಕಾಲ್ಮೂರು ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ’ ದೂರು ನೀಡಲಾಗಿತ್ತು ಎಂದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ನಮ್ಮ ದೂರು ಅರ್ಜಿಯನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿ, ಸೂಕ್ತ ಕ್ರಮವಹಿಸಿ ಕಛೇರಿಗೆ ವರದಿ ಸಲ್ಲಿಸಲು ಸೂಚಿಸಿರುತ್ತಾರೆ. ಅದರಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರು ವಿಚಾರಣೆ ನಡೆಸಿ, ಅರ್ಜಿದಾರರಿಗೆ ಕಡತ ವೀಕ್ಷಣೆ ಮಾಡಲು ಅವಕಾಶ ನೀಡಿ, ದಾಖಲೆ ನೀಡುವಂತೆ ಆದೇಶ ಹೊರಡಿಸಿರುತ್ತಾರೆ ಎಂದು ತಿಳಿಸಿದರು.

ಕಾರ್ಯಪಾಲಕ ಅಭಿಯಂತರರ ಆದೇಶದಂತೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ, ಚಿತ್ರದುರ್ಗ, ಚಳ್ಳಕೆರೆ, ಹೊಳಲ್ಕೆರೆ, ಹೊಸದುರ್ಗ, ಹಿರಿಯೂರು ಇವರುಗಳು ವಿವಿಧ ದಿನಾಂಕಗಳAದು ಉಪವಿಭಾಗಗಳಿಗೆ ಆಹ್ವಾನಿಸಿ, ಕಡತ ಪರಿಶೀಲನೆ ಮಾಡಿಕೊಳ್ಳುವಂತೆ ತಿಳಿಸಿದ ಕಾರಣ ಉಪವಿಭಾಗಗಳ ಕಾರ್ಯಪಾಲಕ ಅಭಿಯಂತರರುಗಳು ನಿಗಧಿಪಡಿಸಿದ ದಿನಾಂಕದಂದು ಉಪವಿಭಾಗಗಳ ಕಛೇರಿಗೆ ಭೇಟಿ ನೀಡಿದಾಗ ಕಂಡುಬಂದ ಅಂಶಗಳೆಂದರೆ;

1. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಿತ್ರದುರ್ಗ ಇಲ್ಲಿ ಒಟ್ಟು 80 ಕಾಮಗಾರಿಗಳು ನಡೆದಿದ್ದು, ಇದರಲ್ಲಿ ಕೇವಲ 23 ಕಾಮಗಾರಿಗಳ (ಅಂದಾಜು ಮೊತ್ತ ರೂ. 37.88 ಲಕ್ಷ) ಕಡತಗಳನ್ನು ತೋರಿಸಿದ್ದು, ಉಳಿದ ಕಾಮಗಾರಿಯ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಕಡತ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

2. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಚಳ್ಳಕೆರೆ ಇಲ್ಲಿ ಒಟ್ಟು 80 ಕಾಮಗಾರಿಗಳ ಕಡತಗಳಲ್ಲಿ 28 ಕಾಮಗಾರಿಗಳ ಕಡತಗಳನ್ನು ತೋರಿಸಿದ್ದು, ಉಳಿದ 52 ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬ ನಮ್ಮ ಪರಿಶೀಲನೆ ಪತ್ರಕ್ಕೆ ದೃಢೀಕರಣ ನೀಡಿರುತ್ತಾರೆ.

3. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗ ಹಿರಿಯೂರು, ಹೊಸದುರ್ಗ, ಹೊಳಲ್ಕೆರೆ, ಇಲ್ಲಿಗೆ ಭೇಟಿ ನೀಡಿದ ಸಮಯದಲ್ಲಿ ಈ ಕಛೇರಿಗಳಲ್ಲಿ ಯಾವುದೇ ಕಡತಗಳು ಲಭ್ಯವಿರುವುದಿಲ್ಲ. ಕಛೇರಿಯ ಸಿಬ್ಬಂದಿಗಳು ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ಕಡತಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ ಎಂಬುದಾಗಿ ದೃಢೀಕರಣ ನೀಡಿರುತ್ತಾರೆ ಎಂದು ತಿಳಿಸಿದರು.

ಕಡತ ಪರಿಶೀಲನೆಯ ತರುವಾಯ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ದೂರು ನೀಡಿ, ನಾವು ಕೋರಿದ ಅಗತ್ಯ ದಾಖಲೆಗಳನ್ನು ಒದಗಿಸಿಕೊಡುವಂತೆ ಕೋರಲಾಗಿತ್ತು. ಆದರೆ ಕಾರ್ಯಪಾಲಕ ಅಭಿಯಂತರರು ಇವರು ಮಾಹಿತಿ ಕೊಡಿಸುವಲ್ಲಿ ಮತ್ತು ತನಿಖಾ ವರದಿ ನೀಡುವಲ್ಲಿ ವಿಫಲರಾಗಿದ್ದಾರೆ. ಈ ಬಗ್ಗೆ ಹಾಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಅವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಾಗಿರುತ್ತದೆ ಎಂದರು.

ಈ ಎಲ್ಲಾ ಅಂಶಗಳನ್ನು ಆಧಾರವಾಗಿಟ್ಟುಕೊಂಡು ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ 6 ಉಪವಿಭಾಗಗಳಲ್ಲಿ ಕಾರ್ಯನಿರ್ವಹಿಸಿರುವ 23 ಸಹಾಯಕ ಕಾರ್ಯಪಾಲಕ ಅಭಿಯಂತರರು, 13 ಸಹಾಯಕ ಕಾರ್ಯಪಾಲಕ ಅಭಿಯಂತರರು, ಕಿರಿಯ ಅಭಿಯಂತರರು, ಅಂದಿನ ಕಾರ್ಯಪಾಲಕ ಅಭಿಯಂತರರಾದ ಬಸವನಗೌಡ ಪಾಟೀಲ್ ಹಾಗೂ ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಸೋಮಶೇಖರ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸುದ್ದಿಗೋಷ್ಟಿಯಲ್ಲಿ ಹಿರಿಯ ವಕೀಲರಾದ ನಾಗರಾಜ ಪೂಜಾರ್, ಪತ್ರಕರ್ತ ಅಶೋಕ್, ಹನುಮಂತಪ್ಪ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending