Connect with us

ದಿನದ ಸುದ್ದಿ

ಕುವೆಂಪು ವಿರಚಿತ ನಾಡಗೀತೆ ವಿಕೃತಗೊಳಿಸಿರುವ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ; ಪಠ್ಯ ಪುಸ್ತಕ ಪರಿಷ್ಕರಣೆ ಸಮಿತಿ ವಿಸರ್ಜನೆ ; ಸಿಎಂ ಬೊಮ್ಮಾಯಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳ ಅಲ್ಪ ಪರಿಷ್ಕರಣೆಯನ್ನು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶ್ರೀ ಶ್ರೀ ಶ್ರೀ ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳನ್ನು ಮಾಡಿರುತ್ತಾರೆ, ಬಸವಣ್ಣನವರ ಇದೇ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ. ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು.

ಆದಿಚುಂಚನಗಿರಿ ಪೀಠದ ಶ್ರೀ ಶ್ರೀ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಹಾಗೂ ಇತರರ ಆಶಯದಂತೆ: ರಾಷ್ಟ್ರಕವಿ ಕುವೆಂಪುರವರು ವಿರಚಿತ ನಾಡಗೀತೆಯನ್ನು ವಿಕೃತಗೊಳಿಸುವ ರೀತಿಯಲ್ಲಿ ನಾಡಗೀತೆಯ ದಾಟಿಯಲ್ಲಿ ಮೂಲ ಕವನವನ್ನು ಬರೆದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸೈಬರ್ ಕ್ರೈಮ್ ಬೆಂಗಳೂರು ಇವರಿಗೆ ತನಿಖೆಯನ್ನು ನಡೆಸಲು ಸೂಚಿಸಲಾಗಿದೆ.

ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧಿಸಿದಂತೆ ಬಂದಿರುವ ಆರೋಪ / ಅಕ್ಷೇಪಣೆಗಳಿಗೆ ಸ್ಪಷ್ಟಿಕರಣಗಳನ್ನು ಒಳಗೊಂಡ ಟಿಪ್ಪಣಿ ಲಗತ್ತಿಸಿದೆ. ಹಲವಾರು ಅಂಶಗಳಿಗೆ ವಾಸ್ತವ ಅಂಶಗಳಿಂದ ಸ್ಪಷ್ಟಿಕರಣವನ್ನು ಕೊಡಲಾಗಿದೆ. ಪ್ರಸ್ತುತ ಅಕ್ಷೇಪ ಮಾಡಿರುವಂತೆ ಮಹಾನ್ ವ್ಯಕ್ತಿಗಳ ಯಾವುದೇ ಪಾಠವನ್ನು ಕೈಬಿಡಲಾಗಿಲ್ಲ ಎಂದು ತಿಳಿಸಿದ್ದಾರೆ.

ಈ ಕೆಳಕಂಡ ನಿರ್ಧಾರವನ್ನು ಸರ್ಕಾರವು ತೆಗೆದುಕೊಂಡಿದೆ

  1. ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದೆ.
  2. ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರವು ಹೊಂದಿದೆ, ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಿದಂತೆ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ.
  3. ರಾಷ್ಟ್ರಕವಿ ಕುವೆಂಪುರವರ ನಾಡಗೀತೆಯನ್ನು ಆಕ್ಷೇಪಾರ್ಹವಾಗಿ ವಿಕೃತಿಗೊಳಿಸಿದ ಅಂಶವು ಪಠ್ಯಪುಸ್ತಕಗಳಲ್ಲಿ ಉಲ್ಲೇಖಗೊಳ್ಳದಿದ್ದರೂ, ಇದರ ಮೂಲಕವನ ಬರೆದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆಯ ಕ್ರಮವನ್ನು ಸರ್ಕಾರವು ತೆಗೆದುಕೊಂಡಿದೆ.
  4. ಪ್ರೊ.ಬರಗೂರು ರಾಮಚಂದ್ರಪ್ಪರವರ ಅಧ್ಯಕ್ಷತೆಯ ಸಮಿತಿಯು ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ರಾಷ್ಟ್ರಕವಿ ಕುವೆಂಪುರವರ ಕುರಿತಾದ 7 (ಏಳು) ಗದ್ಯ/ಪದ್ಯಗಳಿಗೆ ಸೀಮಿತವಾಗಿದ್ದನ್ನು, ಪ್ರಸ್ತುತ ಪರಿಷ್ಕರಣಾ ಸಮಿತಿ ರಚಿಸಿರುವ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ 10 (ಹತ್ತು) ಕ್ಕೇರಿಸಿದ.
  5. ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತಾದ ಪಾಠವನ್ನು ಹೊಸದಾಗಿ ಸೇರ್ಪಡೆ ಮಾಡಿದೆ.
  6. ಈ ಹಿಂದಿನ ಪಠ್ಯಪುಸ್ತಕಗಳಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆ ಹಿಂದೂ ಧರ್ಮದ ವಿಷಯವನ್ನೂ ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ.

ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ.

ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), ಯೋಗ, ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಕಳಿಸಲಾಗುವುದು.

ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ ಶೇ.40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಅಧೀಕ್ಷರಾದ ಗಂಗಾಧರಪ್ಪ.ಹೆಚ್.ಎನ್ ಮೊ.ಸಂ: 9984534883, 08182-250442 ಸಂಪರ್ಕಿಸಬಹುದೆAದು ಇಲಾಖೆಯ ಅಧೀಕ್ಷಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಎಪ್ರಿಲ್‌ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೆರವಣಿಗೆ ಮಾರ್ಗ

ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

Published

on

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.

ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ‌ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆ‌ಎಸ್‌ಟಿ‌ಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending