ದಿನದ ಸುದ್ದಿ
ಮೈಸೂರು-ಮಡಿಕೇರಿ ಹೈಸ್ಪೀಡ್ ಎಕ್ಸ್ಪ್ರೆಸ್ ಹೈವೇ ಗೆ ‘ಭೂ ಸ್ವಾಧೀನ’ ಪ್ರಕ್ರಿಯೆ

ಸುದ್ದಿದಿನ, ಬೆಂಗಳೂರು : ಮೈಸೂರು-ಮಡಿಕೇರಿ ಹೈಸ್ಪೀಡ್ ಎಕ್ಸ್ಪ್ರೆಸ್ ಹೈವೇ ಯೋಜನೆಗಾಗಿ ಭೂಮಿ ಸ್ವಾಧೀನ ಕುರಿತು ಪೂರಕ ಪ್ರಕ್ರಿಯೆ ಕ್ಷಿಪ್ರಗತಿಯಲ್ಲಿ ನಡೆಯುತ್ತಿದೆ. ಕೇಂದ್ರ ಸರಕಾರ ಆಡಳಿತಾತ್ಮಕ ಅನುಮೋದನೆ ನೀಡಿರುವ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯದ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರವು ಕೈಗೆತ್ತಿಕೊಂಡಿರುವ ಮೈಸೂರು-ಮಡಿಕೇರಿ ಎಕ್ಸ್ಪ್ರೆಸ್ ಹೆದ್ದಾರಿ-275 ಯೋಜನೆಗಾಗಿ ಅಗತ್ಯವಿರುವ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಸಲುವಾಗಿ ಮೈಸೂರಿನ ರಾಮಸ್ವಾಮಿ ವೃತ್ತದ ಬಳಿ ಚಾಮರಾಜಪುರಂನ ಗೀತಾ ರಸ್ತೆಯಲ್ಲಿ ವಿಶೇಷ ಭೂಸ್ವಾಧೀನಾ ಧಿಕಾರಿ ಹಾಗೂ ಸಕ್ಷಮ ಪ್ರಾಧಿಕಾರದ ಕಚೇರಿಯನ್ನು ತೆರೆಯಲಾಗಿದೆ ಎಂದು ಸಂಸದ ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಪ್ರಸ್ತುತ ಇರುವ ಮೈಸೂರು-ಬಂಟ್ವಾಳ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಹೆಚ್ಚಾಗಿರುವದರಿಂದ ಹಾಗೂ ಅಲ್ಲಲ್ಲಿ ಬರುವ ತಾಲೂಕು, ಹೋಬಳಿ ಕೇಂದ್ರಗಳ ಮೇಲೆ ಹಾದುಹೋಗುವ ದರಿಂದ ಇನ್ನಷ್ಟು ವಾಹನ ದಟ್ಟಣೆಯಿಂದಾಗಿ ಮಡಿಕೇರಿ-ಮೈಸೂರು ನಡುವಿನ ಸಂಚಾರ ಸಮಯ ಹೆಚ್ಚಾಗಿದೆ. ಮಡಿಕೇರಿ-ಬೆಂಗಳೂರು ನಡುವೆ ಸಂಚರಿಸು ವವರು ಮೈಸೂರಿನ ಬರದೇ, ನೇರವಾಗಿ ಹೋಗಲು ಅನುವಾಗು ವಂತೆ ಈ ಹೊಸ ಹೆದ್ದಾರಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ.
ಒಟ್ಟು 116 ಕಿ.ಮೀ. ಉದ್ದ ಹಾಗೂ 14 ಮೀಟರ್ ಅಗಲದ 4 ಪಥದ ಈ ಹೆದ್ದಾರಿಯು ಶ್ರೀರಂಗಪಟ್ಟಣ ಸಮೀಪ ಪಶ್ಚಿಮ ವಾಹಿನಿ ಮತ್ತು ನಗುವನ ಹಳ್ಳಿ ನಡುವೆ ಬೆಂಗಳೂರು-ಮೈಸೂರು ಹೆದ್ದಾರಿಯಿಂದ ತಿರುವು ಪಡೆದು ಹುಣಸೂರು ಸಮೀಪ ಗೋಣಿಕೊಪ್ಪ ಲುವಿಗೆ ಹೋಗುವ ಡೀವಿಯೇಷನ್ ಬಳಿ ಕೂಡುತ್ತದೆ. ಮುಂದೆ ಕಳ್ಳಬೆಟ್ಟ, ಕಂಪಲಾಪುರ, ಬೈಲಕುಪ್ಪೆ, ಕೊಪ್ಪ, ಕುಶಾಲನಗರ, ಸುಂಟಿಕೊಪ್ಪ ಮೂಲಕ ಮಡಿಕೇರಿ ಸಂಪರ್ಕಿಸುತ್ತದೆ. ಮಧ್ಯೆ ಬರುವ ಪಟ್ಟಣಗಳು, ಹೋಬಳಿ ಕೇಂದ್ರಗಳ ಹೊರ ಭಾಗದಲ್ಲಿ ಬೈಪಾಸ್ ರಸ್ತೆಯಾಗುವದರಿಂದ ಯಾವದೇ ಅಡೆ-ತಡೆಯಿಲ್ಲದೆ ವಾಹನಗಳು ಅದೇ ವೇಗದಲ್ಲಿ ಚಲಿಸಬಹುದಾಗಿದೆ ಎಂದು ಹೇಳಿದ್ದಾರೆ ಪ್ರತಾಪ್ ಸಿಂಹ.
ಈ ಯೋಜನೆಗೆ ಸುಮಾರು 516 ಹೆಕ್ಟೇರ್ ಭೂಮಿ ಅಗತ್ಯವಿದ್ದು, ಸರಕಾರಿ ಜಮೀನು ಹಾಗೂ ಬಳಸಿಕೊಳ್ಳಬಹುದಾದ ಪ್ರಸ್ತುತ ಹೆದ್ದಾರಿಯನ್ನು ಹೊರತುಪಡಿಸಿ ಉಳಿದಂತೆ ಖಾಸಗಿ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲು ಭಾರತ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ರೂ. 6000 ಕೋಟಿಗಳ ಪರಿಹಾರ ಕೊಡಬೇಕಾಗಬಹುದೆಂದು ಅಂದಾಜಿಸಿದೆ. ಬೆಂಗಳೂರು-ಮೈಸೂರು ಹೆದ್ದಾರಿಯನ್ನು 10 ಪಥದ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸುತ್ತಿರು ವದರಿಂದ ಕಣ್ಣೂರು, ಮಡಿಕೇರಿ, ಸುಳ್ಯ, ಹೊಸ ನರಸೀಪುರ ಕಡೆಯಿಂದ ಬೆಂಗಳೂರಿಗೆ ಹೋಗುವವರಿಗೆ ಈ ಹೊಸ ಹೆದ್ದಾರಿಯು ಅನುಕೂಲ ವಾಗಲಿದೆ.
ವಿಶೇಷ ಭೂಸ್ವಾಧೀನಾ ಧಿಕಾರಿ ಎ. ದೇವರಾಜು, ಯೋಜನಾ ನಿರ್ದೇಶಕ ಬಿ.ಟಿ. ಶ್ರೀಧರ್, ವ್ಯವಸ್ಥಾಪಕ ಎನ್. ವೆಂಕಟಾಚಲಪ್ಪ, ಆಯಾ ತಾಲೂಕಿನ ತಹಶೀಲ್ದಾರರು ಹಾಗೂ ಕಂದಾಯ ಇಲಾಖೆ ಸಿಬ್ಬಂದಿಗಳೊಂದಿಗೆ ಸಮನ್ವಯ ಸಾಧಿಸಿ, ಭೂಸ್ವಾಧೀನ ಪ್ರಕ್ರಿಯೆಯನ್ನು ನಡೆಸುತ್ತಿದ್ದಾರೆ.
ಭೂಸ್ವಾಧೀನ ಪ್ರಕ್ರಿಯೆ ಮುಗಿಯುತ್ತಿದ್ದಂತೆಯೇ ಹೆದ್ದಾರಿ ಲೇನ್ ಅಲೈನ್ಮೆಂಟ್ ಸಿದ್ಧಪಡಿಸಿ, ಸರಕಾರದಿಂದ ಅನುಮೋದನೆ ಪಡೆದು ನಂತರ ರಸ್ತೆ ನಿರ್ಮಾಣಕ್ಕೆ ಅಂದಾಜು ಪಟ್ಟಿ ಮತ್ತು ಸಮಗ್ರ ಯೋಜನಾ ವರದಿ ತಯಾರಿಸಿ ಹಣಕಾಸು ಮತ್ತು ತಾಂತ್ರಿಕ ಅನುಮೋದನೆ ಪಡೆದು ಯೋಜನೆಗೆ ಟೆಂಡರ್ ಕರೆಯ ಬೇಕಾಗುತ್ತದೆ ಎಂದು ಪ್ರತಾಪ್ ಸಿಂಹ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.
ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago
ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ
-
ದಿನದ ಸುದ್ದಿ3 days ago
ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಬಿಗಿ ಬಂದೋಬಸ್ತ್ : ಪೊಲೀಸ್ ಕಮೀಷನರ್ ದಯಾನಂದ್
-
ದಿನದ ಸುದ್ದಿ1 day ago
ಉಚಿತ ಲ್ಯಾಪ್ಟಾಪ್ ಪಡೆಯಲು ಅರ್ಜಿ ಆಹ್ವಾನ
-
ದಿನದ ಸುದ್ದಿ2 days ago
ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ