Connect with us

ರಾಜಕೀಯ

ಭಾಷೆ, ರಾಜಕಾರಣ ಮತ್ತು ವ್ಯಾಕರಣ

Published

on

ಭಾಷೆಯೊಂದರ ಉಳಿವಿನ ಪ್ರಶ್ನೆ ಚಾಲ್ತಿಗೆ ಬಂದಾಗಲೆಲ್ಲ ಅಧಿಕಾರ ಕೇಂದ್ರವು ಪ್ರತಿಕ್ರಿಯಿಸುವ ಉತ್ಸಾಹವನ್ನೇನೋ ತೋರುತ್ತದೆ. ತಾನು ಈ ವಿಷಯದಲ್ಲಿ ಗಂಭೀರವಾಗಿರುವುದಾಗಿ ಸಂದೇಶ ರವಾನಿಸುತ್ತದೆ. ಭವಿಷ್ಯದಲ್ಲಿ ಭಾಷೆಯ ಬಳಕೆಗಳ ಬಗ್ಗೆ ಎಚ್ಚರ ಇರುವುದಾಗಿಯೂ ಸ್ಪಷ್ಟಪಡಿಸುತ್ತದೆ. ಎಲ್ಲ ಸಮುದಾಯಗಳ ಜನರೂ ಜಾಗತಿಕ ಮನ್ನಣೆ ಪಡೆದ ಪರಭಾಷೆಯ ಮೇಲೆ ಹಿಡಿತ ಸಾಧಿಸಿ ಸಾಮಾಜಿಕ ಪ್ರತಿಷ್ಠೆಯನ್ನು ಗಳಿಸಿಕೊಳ್ಳುವಂತಾಗಲಿ ಎಂಬ ಸದುದ್ದೇಶದೊಂದಿಗೆ ಹೆಜ್ಜೆಯಿರಿಸುತ್ತಿರುವುದಾಗಿ ಸಮಜಾಯಿಷಿ ನೀಡುತ್ತದೆ. ಆದರೆ, ನಮ್ಮದಲ್ಲದ ಭಾಷೆಯ ಮೇಲೆ ಹಿಡಿತ ಸಾಧಿಸಿ ಪ್ರತಿಷ್ಠೆ ಗಳಿಸಿಕೊಳ್ಳುವ ಉಮೇದು ಅತ್ಯಂತ ಸಂಕುಚಿತವಾದದ್ದು ಎಂಬುದು ಅದಕ್ಕೆ ಅರ್ಥವಾಗುವುದಿಲ್ಲ. ಇನ್ನೊಂದು ಭಾಷೆಯ ಮೇಲೆ ಹಿಡಿತ ಸಾಧಿಸುವುದಷ್ಟೇ ಮುಖ್ಯ ಎಂಬ ಸಾರ್ವತ್ರಿಕ ಭಾವನೆಯನ್ನೇ ಆಧರಿಸಿಕೊಂಡು ನಿರ್ಧಾರ ಕೈಗೊಳ್ಳುವುದರಲ್ಲಿಯೇ ಆಸಕ್ತಿ ತೋರುತ್ತದೆ.

ಪ್ರಾಯೋಗಿಕವಾಗಿ 1000 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಸರ್ಕಾರಿ ಪ್ರಸ್ತಾವವು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಆಯೋಜಿತವಾದ 84ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ತಾರ್ಕಿಕ ಚರ್ಚೆಯನ್ನೂ ಹುಟ್ಟುಹಾಕಿದೆ. ಈ ವೇದಿಕೆಯ ಮೂಲಕ ವ್ಯಕ್ತವಾದ ತಾರ್ಕಿಕ ಪ್ರಶ್ನೆಗಳು ಅಧಿಕಾರ ಕೇಂದ್ರದ ಪ್ರತಿನಿಧಿಗಳೊಳಗೆ ನಿಜವಾದ ಭಾಷಾ ಪ್ರಜ್ಞೆಯನ್ನು ಬಿತ್ತುವ ರೀತಿಯಲ್ಲಿಯೇ ಇವೆ. ಆದರೆ, ಇವು ಮುನ್ನೆಲೆಗೆ ತಂದ ಚರ್ಚೆಯು ಸಂವಾದವನ್ನು ಹುಟ್ಟುಹಾಕುವ ಬದಲು ವಿವಾದವನ್ನೇ ಸೃಷ್ಟಿಸಿದೆ. ಇದಕ್ಕೆ ಕಾರಣ ಚರ್ಚೆಯ ವೇಳೆ ವ್ಯಕ್ತವಾದ ಅಭಿಪ್ರಾಯಗಳನ್ನು ವಿಶಾಲವಾಗಿ ಗ್ರಹಿಸದೇ ಇರುವುದು.

ರಾಜಕೀಯ ಚಾಣಾಕ್ಷತೆ

ಈ ಬಗೆಯ ವಿವಾದ ಇದೇ ಮೊದಲೇನಲ್ಲ. ಭಾಷೆ ಕುರಿತಾದ ಸರ್ಕಾರಿ ನಿರ್ಧಾರ ವ್ಯಕ್ತವಾದಾಗ ಸಹಜವಾಗಿಯೇ ಗೊಂದಲಗಳು ಏರ್ಪಡುತ್ತವೆ. ಅಂಥದ್ದೊಂದು ಗೊಂದಲದ ವಾತಾವರಣ ಸೃಷ್ಟಿಯಾಗುವಂತೆ ಅಧಿಕಾರ ರಾಜಕಾರಣ ಅತ್ಯಂತ ಚಾಣಾಕ್ಷಯುತವಾಗಿ ನೋಡಿಕೊಳ್ಳುತ್ತದೆ. ಭಾಷಾ ಸಂಬಂಧಿ ಚರ್ಚೆಯನ್ನು ಸಂವಾದಕ್ಕೆ ತಿರುಗಿಸಿ ಮಹತ್ವಪೂರ್ಣ ಭಾಷಾ ಆಂದೋಲನಕ್ಕೆ ಪ್ರೇರಣೆ ನೀಡುವ ಬದಲು ವಿವಾದದ ಸೀಮಿತ ಚೌಕಟ್ಟಿನೊಳಗೆ ಕಟ್ಟಿಹಾಕುವ ವೈಚಿತ್ರ್ಯವನ್ನು ಸೃಷ್ಟಿಸುತ್ತದೆ. ಇಂಥ ಸಂದರ್ಭದಲ್ಲೆಲ್ಲಾ ಭಾಷೆಯ ಉಳಿವಿನ ಕುರಿತು ಧ್ವನಿಯೆತ್ತುವ ನಾಟಕವಾಡುವ ಸಂಘಟನೆಗಳ ಪ್ರತಿನಿಧಿಗಳು ಮೌನಪ್ರೇಕ್ಷಕರಾಗಿಯೇ ಉಳಿದುಬಿಡುತ್ತಾರೆ. ನಿಜವಾದ ಕಾಳಜಿಯೊಂದಿಗೆ ಧ್ವನಿಯೆತ್ತುವ ಬೆರಳೆಣಿಕೆಯ ಹೋರಾಟಗಾರರು, ಚಿಂತಕರು ಮತ್ತು ರಾಜಕೀಯ ವಲಯದ ಪ್ರತಿನಿಧಿಗಳ ನಡುವೆ ಮಾತಿನ ಸಮರವೇ ನಿರ್ಮಾಣವಾಗಿಬಿಡುತ್ತದೆ. ಇಂಥ ವೇಳೆ ಸಾಹಿತ್ಯ ಸಮ್ಮೇಳನಗಳಂಥ ವೇದಿಕೆಗಳು ಜನಸಮೂಹದಲ್ಲಿ ಸರಿಯಾಗಿ ಆಲೋಚಿಸುವ ಒತ್ತಡವನ್ನುಂಟುಮಾಡುತ್ತವೆ. ಈ ವಿಷಯದಲ್ಲಿ ಧಾರವಾಡದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ನಿಜವಾದ ಕಾಳಜಿಯನ್ನು ವ್ಯಕ್ತಪಡಿಸಿದೆ.

ತೀಕ್ಷ್ಣ ಪ್ರತಿಕ್ರಿಯೆ

ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ನಿರ್ಧಾರ ಪ್ರಚುರಪಡಿಸಿ ಸಾರ್ವಜನಿಕ ಶಿಕ್ಷಣ ವಲಯವನ್ನು ಪ್ರತಿಷ್ಠಿತವಾಗಿಸುವ ಯೋಚನೆಗೆ ಪ್ರತಿಯಾಗಿ ಸಮ್ಮೇಳನವು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಉದ್ಘಾಟನೆಯ ದಿನದಿಂದಲೇ ಸ್ಪಷ್ಟ ಸಂದೇಶ ರವಾನಿಸಿದ ಸಮ್ಮೇಳನವು ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ನಿರ್ಧಾರವನ್ನು ಅನುಷ್ಠಾನಗೊಳಿಸಬಾರದು ಎಂಬ ಬಹುಮುಖ್ಯ ಆಗ್ರಹವನ್ನು ನಿರ್ಣಯದ ರೂಪದಲ್ಲಿ ಮುಂದಿಟ್ಟಿತು.

ಉದ್ಘಾಟನೆಯ ದಿನದಂದು ಸಾಹಿತಿ ಡಾ.ಚಂದ್ರಶೇಖರ ಪಾಟೀಲ್ ಅವರು ತಮ್ಮ ಎಂದಿನ ವ್ಯಂಗ್ಯದ ಧಾಟಿಯಲ್ಲಿ ಆಂಗ್ಲಮಾಧ್ಯಮ ಶಾಲೆಗಳ ಪರವಾದ ಪ್ರಸ್ತಾಪವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇಂಗ್ಲಿಷ್ ಪರವಾದ ನಿರ್ಧಾರಗಳನ್ನು ಅನುಷ್ಠಾನಗೊಳಿಸುವ ಉತ್ಸಾಹವು ಕನ್ನಡದ ಮೇಲೆ ಬಹುದೊಡ್ಡ ಪ್ರಹಾರದ ಮುನ್ಸೂಚನೆ ಎಂಬರ್ಥದ ವಿಶ್ಲೇಷಣೆಯನ್ನು ನೀಡಿದ್ದರು. ಆದರೆ, ಅವರ ಮಾತುಗಳಲ್ಲಿನ ತಾರ್ಕಿಕತೆಯು ಹಿನ್ನೆಲೆಗೆ ಸರಿದು ವ್ಯಕ್ತಿಗತ ದೃಷ್ಟಿಕೋನಗಳು ಆದ್ಯತೆ ಪಡೆದು ಚರ್ಚೆಗೊಳಪಟ್ಟವು.

ಭಾಷೆಯ ಬಗ್ಗೆ ಚರ್ಚಿಸುವಾಗಲೆಲ್ಲಾ ವ್ಯಕ್ತಿಗತ ಬದ್ಧತೆಯ ಪ್ರಶ್ನೆಗಳು ನುಸುಳಿಕೊಂಡು ಸಂವಾದದ ಸಾಧ್ಯತೆಯನ್ನು ಮೊಟಕುಗೊಳಿಸುತ್ತವೆ. ನಿಮ್ಮ ಮಕ್ಕಳು, ಮೊಮ್ಮಕ್ಕಳನ್ನು ಇಂಗ್ಲಿಷ್ ಶಾಲೆಗಳಿಗೆ ಕಳುಹಿಸಿ ಉಳಿದವರ ಮಕ್ಕಳು ಕನ್ನಡವನ್ನು ಕಲಿಯಬೇಕು ಎಂಬ ವಾದವನ್ನು ಮಂಡಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬ ವಾದವನ್ನು ಮುಂದಿಡಲಾಗುತ್ತದೆ. ಈ ಚಿಂತಕರು, ಬುದ್ಧಿಜೀವಿಗಳ ಜಾಯಮಾನವೇ ಹಾಗೆ ಎಂಬ ಉಡಾಫೆ ದೃಷ್ಟಿಕೋನದಲ್ಲಿ ಮಾತೃಭಾಷೆಯಲ್ಲಿನ ಪ್ರಾಥಮಿಕ ಶಿಕ್ಷಣದ ವ್ಯಾಪಕ ಪ್ರಯೋಜನಗಳ ಸಾಧ್ಯತೆಯನ್ನು ಅವಸರವಸರದಲ್ಲಿ ಅಲ್ಲಗಳೆಯಲಾಗುತ್ತದೆ.

ಗಟ್ಟಿತನದ ಅಡಿಪಾಯ

ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವುದನ್ನು ವ್ಯಕ್ತಿತ್ವವೊಂದು ಗಟ್ಟಿತನದ ಬೌದ್ಧಿಕ ಅಡಿಪಾಯ ರೂಪಿಸಿಕೊಳ್ಳುವ ಕ್ರಮ ಎಂದೇ ಪರಿಭಾವಿಸಿಕೊಳ್ಳಬೇಕು. ಪ್ರಾಥಮಿಕ ಸರ್ಕಾರಿ ಶಾಲೆಗಳನ್ನು ಈ ನೆಲೆಯಲ್ಲಿಯೇ ಬಲಪಡಿಸಬೇಕು. ಇಂಗ್ಲಿಷ್, ಹಿಂದಿ ಸೇರಿದಂತೆ ಇತರೆ ಭಾಷೆಗಳನ್ನು ಗ್ರಹಿಸಿಕೊಳ್ಳುವ ಶೈಕ್ಷಣಿಕ ಮಾದರಿಗಳನ್ನು ರೂಪಿಸಬೇಕು. ಅದಕ್ಕಾಗಿ ಶಿಕ್ಷಕ ಸಮುದಾಯವನ್ನು ಸಿದ್ಧಗೊಳಿಸಬೇಕು. ನೇಮಕಾತಿಯ ನಂತರ ಆಯಾ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಆದ್ಯತೆ ಪಡೆಯುವ ಭಾಷಾ ಶಿಕ್ಷಣದ ಹೊಸ ಆಯಾಮಗಳನ್ನು ಪರಿಚಯಿಸಿ ಕನ್ನಡವೂ ಸೇರಿದಂತೆ ವಿವಿಧ ಭಾಷೆಗಳ ಮೇಲೆ ಹಿಡಿತ ಸಾಧಿಸುವ ಸರಳ ಕ್ರಮಗಳ ಕಲಿಕೆಯ ಕಡೆಗೆ ಗಮನವೀಯುವ ಸಮಗ್ರ ನೀತಿಯನ್ನು ವಿನ್ಯಾಸಗೊಳಿಸಿ ಜಾರಿಗೆ ತರುವ ಬದ್ಧತೆಯನ್ನು ಸರ್ಕಾರದ ಶೈಕ್ಷಣಿಕ ಸಚಿವಾಲಯ ತೋರ್ಪಡಿಸಬೇಕು.

ಬದ್ಧತೆಯ ಕೊರತೆ

ಇಂಥ ಬದ್ಧತೆಯ ಕೊರತೆಯ ಕಾರಣಕ್ಕಾಗಿಯೇ ಪ್ರಾಥಮಿಕ ಹಂತದಿಂದಲೇ ಸರ್ಕಾರಿ ಶಾಲೆಯ ಮಕ್ಕಳು ಭಾಷೆಗೆ ಸಂಬಂಧಿಸಿದಂತೆ ಹಲವಾರು ಸಂಕೀರ್ಣ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇಂಗ್ಲಿಷ್ ಕಲಿಯಲೇಬೇಕು, ಕಲಿಯದಿದ್ದರೆ, ಆ ವಿಷಯದಲ್ಲಿ ಅನುತ್ತೀರ್ಣರಾದರೆ ಟೀಕೆಗೆ ಗುರಿಯಾಗಬೇಕಾಗುತ್ತದೆ ಎಂಬ ಸಾಮಾಜಿಕ ಅಂಜಿಕೆಯು ಅವರೊಳಗೆ ಕೀಳರಿಮೆಯನ್ನು ಮೂಡಿಸುತ್ತದೆ. ಕಾನ್ವೆಂಟ್ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳನ್ನು ಉದಾಹರಿಸಿ ಅವರೊಂದಿಗೆ ಹೋಲಿಸಿ ‘ಅವರ ಮುಂದೆ ನೀವೇನೂ ಅಲ್ಲ’ ಎಂಬ ತಿವಿತದೊಂದಿಗಿನ ಸಂಬಂಧಿಕರು ಮತ್ತು ಹಿರಿಯರ ಮಾತುಗಳು ಅವರೊಳಗಿನ ಸಕಾರಾತ್ಮಕ ದೃಷ್ಟಿಕೋನಗಳನ್ನೇ ಕೊಂದುಬಿಡುತ್ತವೆ.

ಇಂಗ್ಲಿಷ್ ಭಾಷೆಯ ವ್ಯಾಮೋಹದ ಗುಂಗಿನಲ್ಲಿ ಕನ್ನಡವನ್ನು ತುಚ್ಛವಾಗಿ ನೋಡುವ ಈ ಮನುಷ್ಯಮಿತಿಯು ಕೌಟುಂಬಿಕ ಆದ್ಯತೆಯನ್ನು ಪಡೆಯಬಾರದು. ಅಷ್ಟೇ ಅಲ್ಲ, ಆ ಆದ್ಯತೆಯು ಸರ್ಕಾರಿ ವಲಯದ ಪ್ರಾಶಸ್ತ್ಯವನ್ನೂ ಪಡೆಯಬಾರದು. ಹಾಗಾದರೆ, ಒಂದು ಪೀಳಿಗೆಯ ಭಾಷಿಕ ಸಾಮಥ್ರ್ಯ ಮತ್ತು ವೈಚಾರಿಕ ವಿವೇಚನೆಯ ಬೆಳವಣಿಗೆಯ ತೀವ್ರತೆಗೆ ಕುಂದುಂಟಾಗುತ್ತದೆ.

ಕನ್ನಡ ಶೈಕ್ಷಣಿಕ ಸಂಸ್ಕಾರದ ಶ್ರೇಷ್ಠತೆ

ಪ್ರಾಥಮಿಕ ಶಾಲಾಹಂತದ ಮಕ್ಕಳಿಗೆ ಕನ್ನಡದಿಂದಲೇ ಶಿಕ್ಷಣದ ಸಂಸ್ಕಾರ ಪ್ರಾಪ್ತವಾಗಬೇಕು ಎಂಬ ಪ್ರತಿಪಾದನೆಯು ಕೇವಲ ಭಾವುಕ ಲೇಪವನ್ನಷ್ಟೇ ಹೊಂದಿಲ್ಲ. ಅದು ಮಕ್ಕಳ ಕಲಿಕೆಯ ಸಾಮಥ್ರ್ಯಕ್ಕೆ ಬೇಕಾದ ಆಶಾವಾದವನ್ನು ನೆಲೆಗೊಳಿಸುವ ವೈಜ್ಞಾನಿಕ ಮಾರ್ಗೋಪಾಯದ ಆಧಾರವನ್ನೂ ಹೊಂದಿರುವುದನ್ನು ಗಮನಿಸಲೇಬೇಕು.

ಮಗುವೊಂದು ಮತ್ತೊಂದು ಭಾಷೆಯೊಂದಿಗೆ ಸಂಪರ್ಕ ಸಾಧಿಸುವುದಕ್ಕೆ ಮುನ್ನ ತಾನಿರುವ ಕೌಟುಂಬಿಕ ಪರಿಸರದ ಭಾಷಿಕ ಸಂವಹನದ ಕ್ರಮಗಳ ಅರಿವು ಹೊಂದಿರಬೇಕಾಗುತ್ತದೆ. ನೇರವಾಗಿ ಅದು ಬೇರೊಂದು ಭಾಷೆಯ ಸಂಪರ್ಕ ಸಾಧಿಸಲು ಸಾಧ್ಯವಾಗುವುದಿಲ್ಲ. ಉದಾಹರಣೆ ಹಿಂದಿ ಅಥವಾ ಇಂಗ್ಲಿಷ್ ಭಾಷೆಗಳನ್ನು ಕನ್ನಡದ ಪರಿಸರದಲ್ಲಿ ಬೆಳೆದ ಮಕ್ಕಳು ಕನ್ನಡದ ಮೂಲಕವೇ ಕಂಡುಕೊಳ್ಳಬೇಕಾಗುತ್ತದೆ. ನೇರವಾಗಿ ಇಂಗ್ಲಿಷ್ ಪದಗಳನ್ನು ಹೇಳಿ ಅದೇ ಭಾಷೆಯ ವಾಕ್ಯಗಳನ್ನು ಉಲ್ಲೇಖಿಸಿ ಆ ಭಾಷೆಯನ್ನು ಕಲಿಸಲಾಗದು. ಮಾತೃಭಾಷೆಯ ನೆರವಿನೊಂದಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳ ವ್ಯಾಕರಣ ಮತ್ತು ಅಭಿವ್ಯಕ್ತಿ ವಿಧಾನಗಳನ್ನು ಗೊತ್ತುಮಾಡಿಕೊಂಡರೆ ಮಕ್ಕಳೊಳಗೆ ಭಾಷಿಕ ಪ್ರಬುದ್ಧತೆ ಭಿನ್ನವಾಗಿ ನೆಲೆಯೂರುತ್ತದೆ. ಮಾತೃಭಾಷೆಯಲ್ಲಿ ಮಾತನಾಡುವ, ಮಾತನಾಡಿದ್ದನ್ನು ಸ್ಪಷ್ಟವಾಗಿ ಗ್ರಹಿಸುವ, ಗ್ರಹಿಸಿಕೊಂಡಿದ್ದನ್ನು ವಿವೇಚಿಸಿ ಅಭಿವ್ಯಕ್ತಿಸುವ ಕ್ರಮಗಳೊಂದಿಗೆ ಗುರುತಿಸಿಕೊಳ್ಳಲು ಅನುವಾಗುತ್ತದೆ. ಇದು ಪರಭಾಷೆಗಳ ಕಲಿಕೆಯಲ್ಲಿ ಗಮನಾರ್ಹ ಪಾತ್ರವಹಿಸುತ್ತದೆ.

ಭಾಷಾ ಸಂಕೀರ್ಣತೆಯ ಸವಾಲು

ಈ ಸೂಕ್ಷ್ಮವನ್ನು ಅರಿಯದೇ ಇದ್ದರೆ ಹೊಸ ಪೀಳಿಗೆಯ ಮಕ್ಕಳು ಭಾಷಾ ಸಂಕೀರ್ಣತೆಯನ್ನು ಎದುರಿಸುತ್ತಾರೆ. ಮುಂದಾಗುವ ಅಪಾಯವನ್ನು ಈಗಲೇ ಗ್ರಹಿಸಿರುವ ಕಾರಣಕ್ಕಾಗಿಯೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ಉಳಿದೆಲ್ಲ ಪ್ರಚಲಿತ ಸಮಸ್ಯೆಗಳನ್ನು ಗಣನೆಗೆ ತೆಗೆದುಕೊಳ್ಳದೇ ಕೇವಲ ಭಾಷಿಕ ಸಮಸ್ಯೆಯನ್ನಷ್ಟೇ ಕಾಡಿಸಿಕೊಂಡು ಮಹತ್ವದ ಸಂದೇಶವನ್ನು ಸಾರುವಲ್ಲಿ ಯಶಸ್ವಿಯಾಗಿದೆ. ಸಾವಿರ ಆಂಗ್ಲಮಾಧ್ಯಮ ಶಾಲೆಗಳನ್ನು ಆರಂಭಿಸುವ ಯೋಚನೆಯನ್ನು ಅನುಷ್ಠಾನಗೊಳಿಸಬಾರದು ಎಂಬ ಸಮ್ಮೇಳನದ ಆಗ್ರಹ, ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸುವಂತೆ ಮುಂದಿಟ್ಟಿರುವ ಅದರ ಸಲಹಾತ್ಮಕ ನಿರ್ಣಯ ಮಹತ್ವಪೂರ್ಣ. ಆ ಮೂಲಕ ಸಮ್ಮೇಳನವು ಭಾಷೆಯ ಉಳಿವಿನ ಕುರಿತಾದ ತನ್ನ ಕಾಳಜಿ ಮತ್ತು ಬದ್ಧತೆಯನ್ನು ಸಾಬೀತುಪಡಿಸಿದೆ.

ಇಡೀ ಜಗತ್ತು ವಾಣಿಜ್ಯಿಕ ಲಾಭದ ಗುಂಗಿನೊಂದಿಗಿದ್ದಾಗ ಭಾಷೆ, ಸಂಸ್ಕøತಿ ಉಳಿವಿನ ಪ್ರಶ್ನೆಗಳು ಹಿನ್ನೆಲೆಗೆ ಸರಿಯುತ್ತವೆ. ಹಾಗೆ ಹಿನ್ನೆಲೆಗೆ ಸರಿಸುವ ಉದ್ದೇಶಪೂರ್ವಕ ಹುನ್ನಾರಗಳು ನಡೆದುಬಿಡುತ್ತವೆ. ವಾಣಿಜ್ಯಿಕ ಹಿತಾಸಕ್ತಿ ಮತ್ತು ಸಂಕುಚಿತ ರಾಜಕಾರಣದ ವಿಕಾರಗಳ ವಿಜೃಂಭಣೆಯ ಕಾರಣಕ್ಕಾಗಿಯೇ ಕನ್ನಡವು ಆಡಳಿತಾತ್ಮಕ ಆದ್ಯತೆಯ ಆವರಣದಿಂದ ಕ್ರಮೇಣ ಮರೆಯಾಗುವ ಮುನ್ಸೂಚನೆಗಳು ದೊರಕುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಸಮ್ಮೇಳನದ ಭಾಷಿಕ ನಿರ್ಣಯಗಳನ್ನು ಸಕಾಲಿಕ ಎಂದೇ ಪರಿಗಣಿಸಬೇಕಾಗುತ್ತದೆ.

ಮಾತೃಭಾಷೆಯೊಂದಿಗಿನ ಕಲಿಕಾನಂಟು

ಕಲಿಕೆಯು ಅತ್ಯಂತ ಸಹಜ ಪ್ರಕ್ರಿಯೆ. ಮಗುವಿನ ಬೆಳವಣಿಗೆಯ ವೇಳೆ ಕ್ರಮಾನಗುತವಾಗಿ ಆಂತರ್ಯದಲ್ಲಿ ಅಂತಸ್ಥಗೊಳ್ಳುವ ಪರಿಕಲ್ಪನೆ. ಇದನ್ನು ಒಳಗೊಳ್ಳುವ ಹಂಬಲದೊಂದಿಗೆ ಹೆಜ್ಜೆಯಿರಿಸುವ ಮಗು ಹಂತಹಂತವಾಗಿ ಪ್ರಬುದ್ಧತೆಯ ಹಾದಿಯನ್ನು ಕ್ರಮಿಸಲು ಸಾಧ್ಯವಾಗುತ್ತದೆ. ಈ ಹಾದಿಯಲ್ಲಿ ಮಾತೃಭಾಷೆಯದ್ದು ಅತ್ಯಂತ ಪ್ರಭಾವೀ ಪಾತ್ರ. ಆದರೆ, ಇದನ್ನು ನಿರ್ಲಕ್ಷಿಸಿ ಬೇರೊಂದು ಭಾಷೆಯನ್ನು ಮಕ್ಕಳ ಮನೋಲೋಕದಲ್ಲಿ ಒತ್ತಾಯಪೂರ್ವಕವಾಗಿ ಸೇರ್ಪಡೆಗೊಳಿಸುವ ಪ್ರಯತ್ನವು ಆಘಾತಕಾರಿ ಪರಿಣಾಮಗಳನ್ನು ಉಂಟುಮಾಡುತ್ತದೆ. ಸಮಗ್ರ ತಿಳುವಳಿಕೆಯನ್ನು ದಾಟಿಸುವುದಕ್ಕೆ ದಾರಿಮಾಡಿಕೊಡುವ ಕಲಿಕೆಯು ಭಾಷೆಯ ಪ್ರಸ್ತುತಿಯ ನೆರವಿನೊಂದಿಗೇ ಏರ್ಪಡಬೇಕಾಗುತ್ತದೆ.

ಮಗು ತನ್ನದಲ್ಲದ ಬೇರೊಂದು ಭಾಷೆಗೆ ಆರಂಭದಲ್ಲಿಯೇ ಒಗ್ಗಿಕೊಳ್ಳುವುದಿಲ್ಲ. ಅಪರಿಚಿತರನ್ನು ಕಂಡಾಕ್ಷಣ ಆತಂಕಗೊಳ್ಳುವ ಮನಸ್ಥಿತಿಯೇ ಬೇರೊಂದು ಭಾಷೆಯ ಅಭಿವ್ಯಕ್ತಿ ಎದುರುಗೊಂಡಾಗ ಪುನರಾವರ್ತಿತವಾಗುತ್ತದೆ. ಆಗ ಭಯ, ಆತಂಕ, ಅರ್ಥಕ್ಕೆಟುಕ್ಕುತ್ತಿಲ್ಲ ಎಂಬ ಕೊರಗುಗಳೆಲ್ಲವೂ ಒಟ್ಟಿಗೇ ದಾಳಿಗೈದು ಉದ್ದೇಶಿತ ಕಲಿಕೆ ಸಾಧ್ಯವಾಗುವುದೇ ಇಲ್ಲ. ಈ ಸೂಕ್ಷ್ಮತೆ ಅರಿತುಕೊಳ್ಳಲು ಭಾರೀ ಸಂಶೋಧನೆಯನ್ನೇನೋ ಕೈಗೊಳ್ಳಬೇಕಿಲ್ಲ. ಇಂಗ್ಲಿಷ್‍ನಿಂದಲೇ ಮಗುವಿನ ಕಲಿಕೆ ಆರಂಭವಾಗಬೇಕು ಎಂದು ವಾದಿಸುವ ಕನ್ನಡಿಗರು ತಮ್ಮ ತಮ್ಮ ಪ್ರಾಥಮಿಕ ಶಾಲಾ ದಿನಗಳನ್ನು ನೆನಪಿಸಿಕೊಂಡರೆ ಈ ಸೂಕ್ಷ್ಮ ಗಮನಕ್ಕೆ ಬರುತ್ತದೆ.

ಅಪಾಯದ ಮುನ್ಸೂಚನೆ

ಇಂಥ ಯಾವ ಸೂಕ್ಷ್ಮತೆಗಳನ್ನು ಪರಿಗಣಿಸದೇ ಪ್ರತಿಷ್ಠೆಯನ್ನಷ್ಟೇ ಕಾಡಿಸಿಕೊಂಡು ಮಕ್ಕಳ ಉದ್ಧಾರಕ್ಕೆ ಇಂಗ್ಲಿಷ್ ಮೂಲಕವೇ ಕಲಿಕೆಯ ಯಾನ ಶುರುವಾಗಬೇಕು ಎಂದು ಪ್ರತಿಪಾದಿಸುವುದು ತಾರ್ಕಿಕವೆನ್ನಿಸಿಕೊಳ್ಳುವುದಿಲ್ಲ. ಸಾಹಿತ್ಯ ಸಮ್ಮೇಳನಗಳಂಥ ವೇದಿಕೆಯ ಮೂಲಕ ಹೊರಹೊಮ್ಮುವ ಅಮೂಲ್ಯ ಚಿಂತನೆಗಳನ್ನು ಪರಿಗಣಿಸುವ ಆಡಳಿತಾತ್ಮಕ ಬದ್ಧತೆಯ ಕೊರತೆ ಎದ್ದುಕಾಣುತ್ತಿರುವಾಗ ಇಂಥ ವಿತಂಡವಾದಿ ದೃಷ್ಟಿಕೋನಗಳು ಕನ್ನಡದ ಮಕ್ಕಳ ಕಲಿಕಾ ಸಾಮಥ್ರ್ಯವನ್ನು ಮೊಟಕುಗೊಳಿಸುತ್ತವೆ. ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದಾಗ ನಮಗೆ ನಾಡಿನ ಕುರಿತಾದ ಹೆಮ್ಮೆಯ ಭಾವ ಮೂಡಿಸುವಂಥ ಗೀತೆಗಳನ್ನು ಶಿಕ್ಷಕರು ರಾಜ್ಯೋತ್ಸವದ ಸಂದರ್ಭದಲ್ಲಿ ಪರಿಚಯಿಸುತ್ತಿದ್ದರು.

ಕನ್ನಡದ ಕಲಿಕೆಯ ಜೊತೆಜೊತೆಗೇ ಇಂಥ ಪರಿಚಯಾತ್ಮಕ ಪ್ರಯತ್ನಗಳು ನಾಡಿನ ಕುರಿತಾದ ಹೆಮ್ಮೆಯನ್ನೂ ಹೆಚ್ಚಿಸುತ್ತಿದ್ದವು. ‘ಜಯ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ’ ಕವಿತೆಯು ನಾಡಗೀತೆಯ ಆಡಳಿತಾತ್ಮಕ ಮನ್ನಣೆ ಪಡೆದು ಕಡ್ಡಾಯ ನಿಯಮಾವಳಿಯ ವ್ಯಾಪ್ತಿಗೆ ಬರುವುದಕ್ಕಿಂತ ಮುಂಚೆಯೇ ಕರ್ನಾಟಕದ ಶಾಲೆಗಳಲ್ಲಿ ಕನ್ನಡದ ವೈವಿಧ್ಯಮಯ ಜಗತ್ತು ಅದರ ಭಾಷಿಕ ಸೊಗಡಿನೊಂದಿಗೇ ಪರಿಚಿತವಾಗುತ್ತಿತ್ತು. ಈಗ ಪ್ರಾಥಮಿಕ ಶಿಕ್ಷಣ ಹಂತದಿಂದಲೇ ಇಂಗ್ಲಿಷ್ ಮಾಧ್ಯಮದ ಆವರಣದ ಕೂಪಕ್ಕೆ ಮಕ್ಕಳನ್ನು ತಳ್ಳುವ ಪ್ರಯೋಗಾರ್ಥ ಪ್ರಯತ್ನದ ಹೆಜ್ಜೆಗಳು ಅಂಥ ವಾತಾವರಣವನ್ನು ಇಲ್ಲವಾಗಿಸುವ ಆತಂಕವನ್ನು ಮೂಡಿಸಿವೆ. ಮಕ್ಕಳ ಭಾಷಿಕ ಸಾಮಥ್ರ್ಯಕ್ಕೆ ಕೊಡಲಿಪೆಟ್ಟು ನೀಡುವ ಸುಳಿವು ನೀಡಿವೆ.

ಕಂಬಾರರ ಮೌಲಿಕ ಚಿಂತನೆ

ಸಮ್ಮೇಳನದ ಅಧ್ಯಕ್ಷರಾದ ಡಾ.ಚಂದ್ರಶೇಖರ ಕಂಬಾರ ಅವರ ನುಡಿಗಳಲ್ಲಿಯೇ ಆಡಳಿತವು ಕನ್ನಡ ಭಾಷೆಯ ಕುರಿತು ಯಾವ ನಿಲುವುಗಳನ್ನು ತಳೆಯಬೇಕು ಎಂಬ ಸ್ಪಷ್ಟ ಮಾರ್ಗದರ್ಶನವಿದೆ.“ಮಾತೃಭಾಷೆಯು ಬದುಕನ್ನು ಅಥಪೂರ್ಣಗೊಳಿಸುತ್ತದೆ. ಸಾಂಸ್ಕøತಿಕ ನಂಬಿಕೆ ಮತ್ತು ಮೌಲ್ಯಗಳು ಮಾತೃಭಾಷೆಯೊಂದಿಗೆ ತಳುಕುಹಾಕಿಕೊಂಡಿರುತ್ತವೆ. ಕನ್ನಡವನ್ನು ಸರಿಯಾಗಿ ಕಲಿಯುವುದರಿಂದ ಇಂಗ್ಲಿಷ್ ಸೇರಿದಂತೆ ಉಳಿದ ಭಾಷೆಗಳನ್ನು ಕಲಿಯುವುದಕ್ಕೂ ಸಹಾಯಕವಾಗುತ್ತದೆ” ಎಂಬ ಅವರ ನಿಲುವುಗಳು ಕೇವಲ ತಾತ್ವಿಕ ಚೌಕಟ್ಟನ್ನಷ್ಟೇ ಹೊಂದಿಲ್ಲ. ಸಮಸ್ತ ಕನ್ನಡಿಗರ ಅನುಭವಕ್ಕೆ ಬಂದ ಮೌಲಿಕ ಅಂಶಗಳನ್ನಾಗಿಯೂ ನಾವು ಅವುಗಳನ್ನು ಗ್ರಹಿಸಬೇಕು.

ಈ ರೀತಿಯಾಗಿ ಗ್ರಹಿಸುವ ಸಂಯಮ ಆಡಳಿತಾತ್ಮಕ ವಲಯದಿಂದ ವ್ಯಕ್ತವಾದರೆ ಕನ್ನಡ ಭಾಷೆಯು ಭವಿಷ್ಯದಲ್ಲಿ ಆತಂಕ ಎದುರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ವಾಣಿಜ್ಯಿಕ ಹಿತಾಸಕ್ತಿಯ ಪ್ರಲೋಭನೆಗೆ ಒಳಗಾಗಿ ಭಾಷೆಗೆ ಸಂಬಂಧಿಸಿದಂತೆ ಅತಾರ್ಕಿಕವಾದ, ಪ್ರಾಯೋಗಿಕವಲ್ಲದ ತೀರ್ಮಾನಗಳು ಪ್ರಕಟವಾಗುವುದಿಲ್ಲ.

ಇಂಗ್ಲಿಷ್ ಗುಂಗಿನ ಕೃತಕತೆ

ಇಂಗ್ಲಿಷ್ ಪ್ರತಿಷ್ಠೆಯನ್ನು ಹೆಚ್ಚಿಸಿಕೊಳ್ಳುವ ಭಾಷೆಯಾಗಿ ನಮ್ಮೊಳಗೆ ಬೆರೆತುಹೋಗಬೇಕಿಲ್ಲ. ಆ ಭಾಷೆಯನ್ನು ಬಲವಂತವಾಗಿ ಪ್ರಾಥಮಿಕ ಹಂತದಿಂದಲೇ ಮಕ್ಕಳೊಳಗೆ ಬೆರೆಸುವ ಪ್ರಯತ್ನವು ಅವರ ಬೆಳವಣಿಗೆಯ ಸಹಜತೆಗೆ ಕಡಿವಾಣ ಬಿಗಿಯುತ್ತದೆ. ಆ ಸಹಜತೆಯ ಜಾಗವನ್ನು ಕೃತಕತೆ ಆವರಿಸಿಕೊಂಡುಬಿಡುತ್ತದೆ.

ಇಂಗ್ಲಿಷ್ ಗುಂಗಿನ ಕೃತಕ ಚೌಕಟ್ಟಿನೊಳಗೆ ಬಂಧಿಯಾಗಿ ಕನ್ನಡದ ಬಗ್ಗೆ ಕೀಳರಿಮೆ ರೂಪುಗೊಳ್ಳುತ್ತದೆ. ಇಂಗ್ಲಿಷ್ ಶ್ರೇಷ್ಠ ಎಂಬ ತಪ್ಪುಕಲ್ಪನೆಯನ್ನೇ ಮಕ್ಕಳು ಪರಮ ಆದರ್ಶವನ್ನಾಗಿ ಸ್ವೀಕರಿಸುತ್ತಾರೆ. ಹಾಗಾದಾಗ ಮಾತೃಭಾಷೆ, ಅದರೊಂದಿಗಿನ ಕರಳುಬಳ್ಳಿಯ ಸಂಬಂಧ, ಸಂಸ್ಕøತಿಯ ವೈವಿಧ್ಯಮಯ ಸ್ವರೂಪ ಅವರಿಂದ ಕ್ರಮೇಣ ದೂರವಾಗುತ್ತಾ ಹೋಗುತ್ತದೆ. ಅವರನ್ನು ಹೀಗೆ ಉದ್ದೇಶಪೂರ್ವಕವಾಗಿ ಕನ್ನಡದ್ದೇ ಪರಂಪರೆಯ ಬೇರುಗಳಿಂದ ಬೇರ್ಪಡಿಸುವಂಥ ಹೆಜ್ಜೆಗಳು ಭಾಷಿಕ ಸಂದಿಗ್ಧತೆಯನ್ನೇ ಸೃಷ್ಟಿಸುತ್ತವೆ.

ಕರುಳುಬಳ್ಳಿಯ ಸಂಬಂಧ

ಮಕ್ಕಳು ಕನ್ನಡದೊಂದಿಗಿನ ಕರುಳುಬಳ್ಳಿಯ ಸಂಬಂಧ ಕಡಿದುಕೊಂಡರೆ ಏನಾಗುತ್ತದೆ? ಬೆಳೆದು ದೊಡ್ಡವರಾದಾಗ ಕನ್ನಡದ ಭಾಷಿಕ ಸೊಗಡನ್ನೇ ವ್ಯಂಗ್ಯಕ್ಕೀಡುಮಾಡುತ್ತಾರೆ. ಕನ್ನಡದ ಉಳಿವಿನ ಕುರಿತು ಜನಪ್ರಿಯ ಶೈಲಿಯಲ್ಲಿ ಸಿನಿಮಾ ಹೀರೋಗಳು ಹೇಳುವ ಡೈಲಾಗ್‍ಗಳನ್ನಷ್ಟೇ ಕೇಳಿ ಚಪ್ಪಾಳೆ ಹೊಡೆದು ಆ ಕ್ಷಣಕ್ಕೇ ಮರೆತುಬಿಡುವ ಮನಃಸ್ಥಿತಿಗೆ ಪಕ್ಕಾಗಿಬಿಡುತ್ತಾರೆ. ಇಂಗ್ಲಿಷ್ ಮಾತನಾಡಿದರಷ್ಟೇ ಮರ್ಯಾದೆ ಎಂದುಕೊಂಡು ಪ್ರತಿಷ್ಠೆ ಮೆರೆಯುವ ಕೃತಕತೆಯನ್ನೇ ಗುಣಸ್ವಭಾವವನ್ನಾಗಿಸಿಕೊಳ್ಳುತ್ತಾರೆ.

ಕನ್ನಡದಲ್ಲೇ ಲಭ್ಯವಾಗುವ ಅದೆಷ್ಟೋ ಜ್ಞಾನ ಮಾದರಿಗಳ ಸಂಪರ್ಕದಿಂದ ದೂರವೇ ಉಳಿದುಬಿಡುತ್ತಾರೆ. ಎಲ್ಲದಕ್ಕೂ ಇಂಗ್ಲಿಷ್‍ನ್ನೇ ನೆಚ್ಚಿಕೊಂಡು ಅದರ ಮೂಲಕ ಹರಿದುಬರುವ ಮಾಹಿತಿಗಳನ್ನು ಮೇಲ್ನೋಟಕ್ಕಷ್ಟೇ ಗ್ರಹಿಸುವ ಅವಸರದ ಮಾದರಿಯನ್ನೇ ಅನುಸರಿಸುತ್ತಾರೆ. ವಿವಿಧ ಭಾಷೆಗಳಲ್ಲಿ ಲಭ್ಯವಾಗುವ ಮಾಹಿತಿಗಳನ್ನುಜ್ಞಾನಸಂಪನ್ಮೂಲವಾಗಿಸಿಕೊಳ್ಳುವ ಸಂಯಮ ರೂಢಿಸಿದ ಕನ್ನಡ ಓದಿನ ಸೊಗಡು ಸವಿಯುವ ಅಪೂರ್ವ ಅವಕಾಶದಿಂದ ಅವರು ವಂಚಿತರಾಗುತ್ತಾರೆ.ಮುಂದೆ ಎದುರಾಗಲಿರುವ ಅಂಥದ್ದೊಂದು ಸನ್ನಿವೇಶದಿಂದ ಕನ್ನಡದ ಮಕ್ಕಳನ್ನು ಪಾರುಮಾಡಬೇಕಿದೆ. ಸಮ್ಮೇಳನದ ನಿರ್ಣಯಗಳನ್ನು ಗಂಭೀರವಾಗಿ ಪರಿಗಣಿಸಿ ಕನ್ನಡಕ್ಕಿರುವ ಉಜ್ವಲ ಭವಿಷ್ಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ಯೋಚಿಸಬೇಕಾಗಿದೆ. ಭಾಷೆಗೆ ಸಂಬಂಧಿಸಿದಂತೆ ಕವಲು ಹಾದಿ ತುಳಿಯುವ ರಾಜಕಾರಣದ ಸಂಕುಚಿತ ವ್ಯಾಕರಣವನ್ನುಭಗ್ನಗೊಳಿಸಬೇಕಿದೆ.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.

ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.

‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.

ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.

ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.

ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ ಮತ್ತು ನಿಸಾರ್ ಅಹಮದ್ ಬಿನ್ ಮಹಮ್ಮದ್ ಅಬಿದ್ ಮತ್ತು ಇನ್ನೊಬ್ಬರು, ಬೇತೂರು ರೋಡ್, ಸಿದ್ಧರಾಮೇಶ್ವರ ಬಡಾವಣೆ ಇವರು ತಮ್ಮ ಮಗ ತಾಜು @ ತಾಜುದ್ದೀನ್ ಇವರು ಸ್ವಿಮ್ಮಿಂಗ್ ಪೂಲ್‌ನಲ್ಲಿ ಈಜಾಡುವ ಸಂಧರ್ಭದಲ್ಲಿ ಮರಣ ಹೊಂದಿರುತ್ತಾರೆ.

ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 4ನೇ ಎದುರುದಾರರಾದ ಸದಾನಂದ ವಗಲೆ ಹಾಗೂ 1 ರಿಂದ 3ನೇ ಎದುರುದಾರರ ವಿರುದ್ಧ, ತಮ್ಮ ಸೇವೆಯಲ್ಲಿನ ನಿರ್ಲಕ್ಷತೆಯಿಂದ ಘಟನೆ ಸಂಭವಿಸಿದ್ದು ಎಂಬ ತೀರ್ಮಾನಕ್ಕೆ ಆಯೋಗವು ಬಂದಿದ್ದು, ಈಗಾಗಲೇ, 1 ರಿಂದ 3ನೇ ಎದುರುದಾರರು, ದೂರುದಾರರಿಗೆ ರೂ.500,000/- ಲಕ್ಷವನ್ನು ಪರಿಹಾರವಾಗಿ ಈಗಾಗಲೆ ಕೊಟ್ಟಿದ್ದು, ಆದ್ದರಿಂದ 1 ರಿಂದ 3ನೇ ಎದುರುದಾರರ ವಿರುದ್ಧ ಪ್ರಕರಣವನ್ನು ವಜಾ ಮಾಡಿದೆ.

4ನೇ ಎದುರುದಾರರಾದ ಸದಾನಂದ ವಗಲೆ, ಕಾಂಟ್ರಕ್ಟರ್, ಇವರು ಈ ಎರಡು ಪ್ರಕರಣದ ದೂರುದಾರರಿಗೆ ಆದೇಶಿಸಿದ ದಿನದಿಂದ ಒಂದು ತಿಂಗಳೊಳಗೆ ಆದೇಶದ ಪ್ರಕಾರ ಪಾವತಿಸುವಂತೆ ಮೇ.19 ರಂದು ಆದೇಶಿಸಿ ರೂ. 5 ಲಕ್ಷಗಳನ್ನು ಶೇಕಡಾ 6 ವಾರ್ಷಿಕ ಬಡ್ಡಿಯೊಂದಿಗೆ ಹಾಗೂ ದೂರು ಖರ್ಚು ಹಾಗೂ ಮಾನಸಿಕ ಯಾತನೆಗೆ ತಲಾ ರೂ.5 ಸಾವಿರದಂತೆ, ಒಟ್ಟು ರೂ.10,000/-ಗಳನ್ನು ಪರಿಹಾರ ರೂಪವಾಗಿ ದೂರುದಾರರಿಗೆ ನೀಡುವಂತೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪ್ರತ್ಯೇಕವಾಗಿ ಪಾವತಿಸುವಂತೆ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಹೆಚ್.ಎನ್.ಮೀನಾ ಮತ್ತು ಸದಸ್ಯರಾದ ಸಿ.ಎಸ್. ತ್ಯಾಗರಾಜನ್ ಆದೇಶಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

Published

on

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ವಿಜಯಕುಮಾರ್ ಎ.ಬಿ. ವಹಿಸಿದ್ದರು.

ಮುಖ್ಯ ಉಪನ್ಯಾಸಕರಾಗಿ ಕರ್ನಾಟಕ ಲೋಕಾಯುಕ್ತ, ದಾವಣಗೆರೆ ಇವರ ಪೋಲಿಸ್ ಇನ್ಸ್‌ಪೆಕ್ಟರ್ ಶ್ರೀ ಪ್ರಭು ಬಿ. ಸೂರಿನ ಭಾಗವಹಿಸಿ “ಕರ್ನಾಟಕ ಲೋಕಾಯುಕ್ತ ಕಾಯ್ದೆ ಮತ್ತು ಭ್ರಷ್ಟಾಚಾರ ನಿಗ್ರಹ ಕಾಯ್ದೆ” ಕುರಿತು ಸಮಗ್ರ ಮಾಹಿತಿ ನೀಡಿದರು. ಕರ್ನಾಟಕ ಲೋಕಾಯುಕ್ತದ ಸ್ಥಾಪನೆ ಮತ್ತು ಹಿನ್ನೆಲೆ, ಸಂಸ್ಥೆಯ ವ್ಯಾಪ್ತಿ, ದೂರು ಸಲ್ಲಿಸುವ ವಿಧಾನ, ವಿಚಾರಣೆ ಕ್ರಮ, ಭ್ರಷ್ಟಾಚಾರ ತಡೆ ಕಾಯ್ದೆಯ ಪ್ರಮುಖ ಅಂಶಗಳು, ಲೋಕಾಯುಕ್ತ ಸಂಸ್ಥೆಯ ವೈಶಿಷ್ಟ್ಯತೆಗಳು, ಹಗರಣಗಳ ತನಿಖಾ ವಿಧಾನ ಹಾಗೂ ಸರ್ಕಾರಿ ಹಣದ ದುರುಪಯೋಗ ತಡೆ ಕ್ರಮಗಳ ಬಗ್ಗೆ ವಿವರಿಸಿದರು. ಉಪನ್ಯಾಸದ ಅಂತ್ಯದಲ್ಲಿ ವಿದ್ಯಾರ್ಥಿಗಳ ಪ್ರಶ್ನೆಗಳಿಗೆ ಉತ್ತರ ನೀಡಿದರು.

ಜಿಲ್ಲಾ ನೋಡಲ್ ಅಧಿಕಾರಿಗಳಾದ ಡಾ. ಹೆಚ್.ಆರ್. ತಿಪ್ಪೇಸ್ವಾಮಿ ಅವರು ಯುವಜನತೆ ಹಾಗೂ ಸಾಮಾಜಿಕ ಸಾಮರಸ್ಯ ಕುರಿತು ಪ್ರೇರಣಾದಾಯಕ ಸಂದೇಶ ನೀಡಿದರು.

ಶಿಬಿರಾಧಿಕಾರಿಗಳಾದ ಡಾ. ರಾಘವೇಂದ್ರ ಮತ್ತು ಡಾ. ಪ್ರವೀಣಕುಮಾರ್, ದೈಹಿಕ ನಿರ್ದೇಶಕರಾದ ಧನಂಜಯ್, ಗ್ರಾಮದವರಾದ ಬಸವರಾಜ್, ಹಾಲಪ್ಪ, ಮಹದೇವಪ್ಪ, ಕುರಿಯರ್ ದುರುಗಪ್ಪ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಕಾನೂನು ಜಾಗೃತಿ ಹಾಗೂ ಭ್ರಷ್ಟಾಚಾರ ವಿರೋಧಿ ಮನೋಭಾವ ಬೆಳೆಸುವಲ್ಲಿ ಯಶಸ್ವಿಯಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ...

ದಿನದ ಸುದ್ದಿ3 days ago

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

ಗಿರೀಶ್ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ...

ದಿನದ ಸುದ್ದಿ3 days ago

ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ

~ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ...

ಅಂಕಣ3 days ago

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ....

ದಿನದ ಸುದ್ದಿ4 days ago

ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ‌ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ

ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ...

ದಿನದ ಸುದ್ದಿ4 days ago

ದಾವಣಗೆರೆ | ಇದೇ 22 ರಂದು ಕರ್ನಾಟಕ ಎಜುಕೇಶನ್ ಎಕ್ಸ್ ಪೋ – 2026 ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಬೆಂಗಳೂರಿನ ಜಿಎಂಕೆ ಎಡು ಟೆಕ್ ರಾಜ್ಯದ ಸಮಸ್ತ ಖಾಸಗಿ ಅನುದಾನರಹಿತ ಶಾಲಾ ಮುಖ್ಯಸ್ಥರು, ಆಡಳಿತ ಮಂಡಳಿಯ ಸದಸ್ಯರು ಹಾಗೂ ಶಿಕ್ಷಣ ಕ್ಷೇತ್ರದ ಆಸಕ್ತರಿಗಾಗಿ ನಾಳೆ (ಮೇ22) ರಂದು...

ದಿನದ ಸುದ್ದಿ6 days ago

ಈಜುಕೊಳದಲ್ಲಿ ಸಾವು ; ಪರಿಹಾರಕ್ಕೆ ಆದೇಶ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಮೊಹಮ್ಮದ್ ಮುಕ್ತಿಯಾರ್ ಬಿನ್ ಎಸ್. ಆರ್ ಸಮೀವುಲ್ಲ ಇವರ ಮಗ ಮೊಹಮ್ಮದ್ ಮುಬಾರಕ್ @ ಮುಬಾರಕ್ ಈತ...

ದಿನದ ಸುದ್ದಿ7 days ago

ಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

ಸುದ್ದಿದಿನ,ಬನ್ನಿಕೋಡು:ಮಾ.ಸ.ಬ. ಕಾಲೇಜ್, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೊ....

ದಿನದ ಸುದ್ದಿ7 days ago

ಲೋಕಾಯುಕ್ತ ಪೋಲಿಸ್ ಇನ್ಸ್‌ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು

ಸುದ್ದಿದಿನ,ಬನ್ನಿಕೋಡು: ಮಾ.ಸ.ಬ. ಕಾಲೇಜು, ದಾವಣಗೆರೆ ಹಾಗೂ ಬನ್ನಿಕೋಡು ಗ್ರಾಮದ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್‌.ಎಸ್‌.ಎಸ್‌. (ರಾಷ್ಟ್ರೀಯ ಸೇವಾ ಯೋಜನೆ) ವಿಶೇಷ ಶಿಬಿರದ ಅಧ್ಯಕ್ಷತೆಯನ್ನು ಮಾ.ಸ.ಬ. ಕಾಲೇಜಿನ ವಾಣಿಜ್ಯ...

ದಿನದ ಸುದ್ದಿ1 week ago

ತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್

ಸುದ್ದಿದಿನ ವಿಶೇಷ – ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ : ಕಂಪ್ಯೂಟರ್ ತರಬೇತುದಾರರೊಬ್ಬರು ತನ್ನ ಕಂಪ್ಯೂಟರ್ ತರಬೇತಿ ಕೇಂದ್ರಕ್ಕೆ ಬರುವ ಶಿಭಿರಾರ್ಥಿ ಗಳಿಗೆ ಕೇವಲ ಕಂಪ್ಯೂಟರ್ ತರಬೇತಿ ಮಾತ್ರವಲ್ಲದೆ...

Trending