Connect with us

ರಾಜಕೀಯ

ಭಾಷೆ, ರಾಜಕಾರಣ ಮತ್ತು ವ್ಯಾಕರಣ

Published

on

ಭಾಷೆಯೊಂದರ ಉಳಿವಿನ ಪ್ರಶ್ನೆ ಚಾಲ್ತಿಗೆ ಬಂದಾಗಲೆಲ್ಲ ಅಧಿಕಾರ ಕೇಂದ್ರವು ಪ್ರತಿಕ್ರಿಯಿಸುವ ಉತ್ಸಾಹವನ್ನೇನೋ ತೋರುತ್ತದೆ. ತಾನು ಈ ವಿಷಯದಲ್ಲಿ ಗಂಭೀರವಾಗಿರುವುದಾಗಿ ಸಂದೇಶ ರವಾನಿಸುತ್ತದೆ. ಭವಿಷ್ಯದಲ್ಲಿ ಭಾಷೆಯ ಬಳಕೆಗಳ ಬಗ್ಗೆ ಎಚ್ಚರ ಇರುವುದಾಗಿಯೂ ಸ್ಪಷ್ಟಪಡಿಸುತ್ತದೆ. ಎಲ್ಲ ಸಮುದಾಯಗಳ ಜನರೂ ಜಾಗತಿಕ ಮನ್ನಣೆ ಪಡೆದ ಪರಭಾಷೆಯ ಮೇಲೆ ಹಿಡಿತ ಸಾಧಿಸಿ ಸಾಮಾಜಿಕ ಪ್ರತಿಷ್ಠೆಯನ್ನು ಗಳಿಸಿಕೊಳ್ಳುವಂತಾಗಲಿ ಎಂಬ ಸದುದ್ದೇಶದೊಂದಿಗೆ ಹೆಜ್ಜೆಯಿರಿಸುತ್ತಿರುವುದಾಗಿ ಸಮಜಾಯಿಷಿ ನೀಡುತ್ತದೆ. ಆದರೆ, ನಮ್ಮದಲ್ಲದ ಭಾಷೆಯ ಮೇಲೆ ಹಿಡಿತ ಸಾಧಿಸಿ ಪ್ರತಿಷ್ಠೆ ಗಳಿಸಿಕೊಳ್ಳುವ ಉಮೇದು ಅತ್ಯಂತ ಸಂಕುಚಿತವಾದದ್ದು ಎಂಬುದು ಅದಕ್ಕೆ ಅರ್ಥವಾಗುವುದಿಲ್ಲ. ಇನ್ನೊಂದು ಭಾಷೆಯ ಮೇಲೆ ಹಿಡಿತ ಸಾಧಿಸುವುದಷ್ಟೇ ಮುಖ್ಯ ಎಂಬ ಸಾರ್ವತ್ರಿಕ ಭಾವನೆಯನ್ನೇ ಆಧರಿಸಿಕೊಂಡು ನಿರ್ಧಾರ ಕೈಗೊಳ್ಳುವುದರಲ್ಲಿಯೇ ಆಸಕ್ತಿ ತೋರುತ್ತದೆ.

ಪ್ರಾಯೋಗಿಕವಾಗಿ 1000 ಇಂಗ್ಲಿಷ್ ಮಾಧ್ಯಮ ಶಾಲೆಗಳನ್ನು ಆರಂಭಿಸುವ ಸರ್ಕಾರಿ ಪ್ರಸ್ತಾವವು ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ಇದೇ ಸಂದರ್ಭದಲ್ಲಿ ಆಯೋಜಿತವಾದ 84ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ತಾರ್ಕಿಕ ಚರ್ಚೆಯನ್ನೂ ಹುಟ್ಟುಹಾಕಿದೆ. ಈ ವೇದಿಕೆಯ ಮೂಲಕ ವ್ಯಕ್ತವಾದ ತಾರ್ಕಿಕ ಪ್ರಶ್ನೆಗಳು ಅಧಿಕಾರ ಕೇಂದ್ರದ ಪ್ರತಿನಿಧಿಗಳೊಳಗೆ ನಿಜವಾದ ಭಾಷಾ ಪ್ರಜ್ಞೆಯನ್ನು ಬಿತ್ತುವ ರೀತಿಯಲ್ಲಿಯೇ ಇವೆ. ಆದರೆ, ಇವು ಮುನ್ನೆಲೆಗೆ ತಂದ ಚರ್ಚೆಯು ಸಂವಾದವನ್ನು ಹುಟ್ಟುಹಾಕುವ ಬದಲು ವಿವಾದವನ್ನೇ ಸೃಷ್ಟಿಸಿದೆ. ಇದಕ್ಕೆ ಕಾರಣ ಚರ್ಚೆಯ ವೇಳೆ ವ್ಯಕ್ತವಾದ ಅಭಿಪ್ರಾಯಗಳನ್ನು ವಿಶಾಲವಾಗಿ ಗ್ರಹಿಸದೇ ಇರುವುದು.

ರಾಜಕೀಯ ಚಾಣಾಕ್ಷತೆ

ಈ ಬಗೆಯ ವಿವಾದ ಇದೇ ಮೊದಲೇನಲ್ಲ. ಭಾಷೆ ಕುರಿತಾದ ಸರ್ಕಾರಿ ನಿರ್ಧಾರ ವ್ಯಕ್ತವಾದಾಗ ಸಹಜವಾಗಿಯೇ ಗೊಂದಲಗಳು ಏರ್ಪಡುತ್ತವೆ. ಅಂಥದ್ದೊಂದು ಗೊಂದಲದ ವಾತಾವರಣ ಸೃಷ್ಟಿಯಾಗುವಂತೆ ಅಧಿಕಾರ ರಾಜಕಾರಣ ಅತ್ಯಂತ ಚಾಣಾಕ್ಷಯುತವಾಗಿ ನೋಡಿಕೊಳ್ಳುತ್ತದೆ. ಭಾಷಾ ಸಂಬಂಧಿ ಚರ್ಚೆಯನ್ನು ಸಂವಾದಕ್ಕೆ ತಿರುಗಿಸಿ ಮಹತ್ವಪೂರ್ಣ ಭಾಷಾ ಆಂದೋಲನಕ್ಕೆ ಪ್ರೇರಣೆ ನೀಡುವ ಬದಲು ವಿವಾದದ ಸೀಮಿತ ಚೌಕಟ್ಟಿನೊಳಗೆ ಕಟ್ಟಿಹಾಕುವ ವೈಚಿತ್ರ್ಯವನ್ನು ಸೃಷ್ಟಿಸುತ್ತದೆ. ಇಂಥ ಸಂದರ್ಭದಲ್ಲೆಲ್ಲಾ ಭಾಷೆಯ ಉಳಿವಿನ ಕುರಿತು ಧ್ವನಿಯೆತ್ತುವ ನಾಟಕವಾಡುವ ಸಂಘಟನೆಗಳ ಪ್ರತಿನಿಧಿಗಳು ಮೌನಪ್ರೇಕ್ಷಕರಾಗಿಯೇ ಉಳಿದುಬಿಡುತ್ತಾರೆ. ನಿಜವಾದ ಕಾಳಜಿಯೊಂದಿಗೆ ಧ್ವನಿಯೆತ್ತುವ ಬೆರಳೆಣಿಕೆಯ ಹೋರಾಟಗಾರರು, ಚಿಂತಕರು ಮತ್ತು ರಾಜಕೀಯ ವಲಯದ ಪ್ರತಿನಿಧಿಗಳ ನಡುವೆ ಮಾತಿನ ಸಮರವೇ ನಿರ್ಮಾಣವಾಗಿಬಿಡುತ್ತದೆ. ಇಂಥ ವೇಳೆ ಸಾಹಿತ್ಯ ಸಮ್ಮೇಳನಗಳಂಥ ವೇದಿಕೆಗಳು ಜನಸಮೂಹದಲ್ಲಿ ಸರಿಯಾಗಿ ಆಲೋಚಿಸುವ ಒತ್ತಡವನ್ನುಂಟುಮಾಡುತ್ತವೆ. ಈ ವಿಷಯದಲ್ಲಿ ಧಾರವಾಡದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ನಿಜವಾದ ಕಾಳಜಿಯನ್ನು ವ್ಯಕ್ತಪಡಿಸಿದೆ.

ತೀಕ್ಷ್ಣ ಪ್ರತಿಕ್ರಿಯೆ

ಒಂದು ಸಾವಿರ ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ನಿರ್ಧಾರ ಪ್ರಚುರಪಡಿಸಿ ಸಾರ್ವಜನಿಕ ಶಿಕ್ಷಣ ವಲಯವನ್ನು ಪ್ರತಿಷ್ಠಿತವಾಗಿಸುವ ಯೋಚನೆಗೆ ಪ್ರತಿಯಾಗಿ ಸಮ್ಮೇಳನವು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದೆ. ಉದ್ಘಾಟನೆಯ ದಿನದಿಂದಲೇ ಸ್ಪಷ್ಟ ಸಂದೇಶ ರವಾನಿಸಿದ ಸಮ್ಮೇಳನವು ಆಂಗ್ಲ ಮಾಧ್ಯಮ ಶಾಲೆಗಳನ್ನು ಆರಂಭಿಸುವ ನಿರ್ಧಾರವನ್ನು ಅನುಷ್ಠಾನಗೊಳಿಸಬಾರದು ಎಂಬ ಬಹುಮುಖ್ಯ ಆಗ್ರಹವನ್ನು ನಿರ್ಣಯದ ರೂಪದಲ್ಲಿ ಮುಂದಿಟ್ಟಿತು.

ಉದ್ಘಾಟನೆಯ ದಿನದಂದು ಸಾಹಿತಿ ಡಾ.ಚಂದ್ರಶೇಖರ ಪಾಟೀಲ್ ಅವರು ತಮ್ಮ ಎಂದಿನ ವ್ಯಂಗ್ಯದ ಧಾಟಿಯಲ್ಲಿ ಆಂಗ್ಲಮಾಧ್ಯಮ ಶಾಲೆಗಳ ಪರವಾದ ಪ್ರಸ್ತಾಪವನ್ನು ತರಾಟೆಗೆ ತೆಗೆದುಕೊಂಡಿದ್ದರು. ಇಂಗ್ಲಿಷ್ ಪರವಾದ ನಿರ್ಧಾರಗಳನ್ನು ಅನುಷ್ಠಾನಗೊಳಿಸುವ ಉತ್ಸಾಹವು ಕನ್ನಡದ ಮೇಲೆ ಬಹುದೊಡ್ಡ ಪ್ರಹಾರದ ಮುನ್ಸೂಚನೆ ಎಂಬರ್ಥದ ವಿಶ್ಲೇಷಣೆಯನ್ನು ನೀಡಿದ್ದರು. ಆದರೆ, ಅವರ ಮಾತುಗಳಲ್ಲಿನ ತಾರ್ಕಿಕತೆಯು ಹಿನ್ನೆಲೆಗೆ ಸರಿದು ವ್ಯಕ್ತಿಗತ ದೃಷ್ಟಿಕೋನಗಳು ಆದ್ಯತೆ ಪಡೆದು ಚರ್ಚೆಗೊಳಪಟ್ಟವು.

ಭಾಷೆಯ ಬಗ್ಗೆ ಚರ್ಚಿಸುವಾಗಲೆಲ್ಲಾ ವ್ಯಕ್ತಿಗತ ಬದ್ಧತೆಯ ಪ್ರಶ್ನೆಗಳು ನುಸುಳಿಕೊಂಡು ಸಂವಾದದ ಸಾಧ್ಯತೆಯನ್ನು ಮೊಟಕುಗೊಳಿಸುತ್ತವೆ. ನಿಮ್ಮ ಮಕ್ಕಳು, ಮೊಮ್ಮಕ್ಕಳನ್ನು ಇಂಗ್ಲಿಷ್ ಶಾಲೆಗಳಿಗೆ ಕಳುಹಿಸಿ ಉಳಿದವರ ಮಕ್ಕಳು ಕನ್ನಡವನ್ನು ಕಲಿಯಬೇಕು ಎಂಬ ವಾದವನ್ನು ಮಂಡಿಸುವುದು ಎಷ್ಟರ ಮಟ್ಟಿಗೆ ಸರಿ ಎಂಬ ವಾದವನ್ನು ಮುಂದಿಡಲಾಗುತ್ತದೆ. ಈ ಚಿಂತಕರು, ಬುದ್ಧಿಜೀವಿಗಳ ಜಾಯಮಾನವೇ ಹಾಗೆ ಎಂಬ ಉಡಾಫೆ ದೃಷ್ಟಿಕೋನದಲ್ಲಿ ಮಾತೃಭಾಷೆಯಲ್ಲಿನ ಪ್ರಾಥಮಿಕ ಶಿಕ್ಷಣದ ವ್ಯಾಪಕ ಪ್ರಯೋಜನಗಳ ಸಾಧ್ಯತೆಯನ್ನು ಅವಸರವಸರದಲ್ಲಿ ಅಲ್ಲಗಳೆಯಲಾಗುತ್ತದೆ.

ಗಟ್ಟಿತನದ ಅಡಿಪಾಯ

ಮಾತೃಭಾಷೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆಯುವುದನ್ನು ವ್ಯಕ್ತಿತ್ವವೊಂದು ಗಟ್ಟಿತನದ ಬೌದ್ಧಿಕ ಅಡಿಪಾಯ ರೂಪಿಸಿಕೊಳ್ಳುವ ಕ್ರಮ ಎಂದೇ ಪರಿಭಾವಿಸಿಕೊಳ್ಳಬೇಕು. ಪ್ರಾಥಮಿಕ ಸರ್ಕಾರಿ ಶಾಲೆಗಳನ್ನು ಈ ನೆಲೆಯಲ್ಲಿಯೇ ಬಲಪಡಿಸಬೇಕು. ಇಂಗ್ಲಿಷ್, ಹಿಂದಿ ಸೇರಿದಂತೆ ಇತರೆ ಭಾಷೆಗಳನ್ನು ಗ್ರಹಿಸಿಕೊಳ್ಳುವ ಶೈಕ್ಷಣಿಕ ಮಾದರಿಗಳನ್ನು ರೂಪಿಸಬೇಕು. ಅದಕ್ಕಾಗಿ ಶಿಕ್ಷಕ ಸಮುದಾಯವನ್ನು ಸಿದ್ಧಗೊಳಿಸಬೇಕು. ನೇಮಕಾತಿಯ ನಂತರ ಆಯಾ ಕಾಲದ ಅಗತ್ಯಗಳಿಗೆ ಅನುಗುಣವಾಗಿ ಆದ್ಯತೆ ಪಡೆಯುವ ಭಾಷಾ ಶಿಕ್ಷಣದ ಹೊಸ ಆಯಾಮಗಳನ್ನು ಪರಿಚಯಿಸಿ ಕನ್ನಡವೂ ಸೇರಿದಂತೆ ವಿವಿಧ ಭಾಷೆಗಳ ಮೇಲೆ ಹಿಡಿತ ಸಾಧಿಸುವ ಸರಳ ಕ್ರಮಗಳ ಕಲಿಕೆಯ ಕಡೆಗೆ ಗಮನವೀಯುವ ಸಮಗ್ರ ನೀತಿಯನ್ನು ವಿನ್ಯಾಸಗೊಳಿಸಿ ಜಾರಿಗೆ ತರುವ ಬದ್ಧತೆಯನ್ನು ಸರ್ಕಾರದ ಶೈಕ್ಷಣಿಕ ಸಚಿವಾಲಯ ತೋರ್ಪಡಿಸಬೇಕು.

ಬದ್ಧತೆಯ ಕೊರತೆ

ಇಂಥ ಬದ್ಧತೆಯ ಕೊರತೆಯ ಕಾರಣಕ್ಕಾಗಿಯೇ ಪ್ರಾಥಮಿಕ ಹಂತದಿಂದಲೇ ಸರ್ಕಾರಿ ಶಾಲೆಯ ಮಕ್ಕಳು ಭಾಷೆಗೆ ಸಂಬಂಧಿಸಿದಂತೆ ಹಲವಾರು ಸಂಕೀರ್ಣ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ. ಇಂಗ್ಲಿಷ್ ಕಲಿಯಲೇಬೇಕು, ಕಲಿಯದಿದ್ದರೆ, ಆ ವಿಷಯದಲ್ಲಿ ಅನುತ್ತೀರ್ಣರಾದರೆ ಟೀಕೆಗೆ ಗುರಿಯಾಗಬೇಕಾಗುತ್ತದೆ ಎಂಬ ಸಾಮಾಜಿಕ ಅಂಜಿಕೆಯು ಅವರೊಳಗೆ ಕೀಳರಿಮೆಯನ್ನು ಮೂಡಿಸುತ್ತದೆ. ಕಾನ್ವೆಂಟ್ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳನ್ನು ಉದಾಹರಿಸಿ ಅವರೊಂದಿಗೆ ಹೋಲಿಸಿ ‘ಅವರ ಮುಂದೆ ನೀವೇನೂ ಅಲ್ಲ’ ಎಂಬ ತಿವಿತದೊಂದಿಗಿನ ಸಂಬಂಧಿಕರು ಮತ್ತು ಹಿರಿಯರ ಮಾತುಗಳು ಅವರೊಳಗಿನ ಸಕಾರಾತ್ಮಕ ದೃಷ್ಟಿಕೋನಗಳನ್ನೇ ಕೊಂದುಬಿಡುತ್ತವೆ.

ಇಂಗ್ಲಿಷ್ ಭಾಷೆಯ ವ್ಯಾಮೋಹದ ಗುಂಗಿನಲ್ಲಿ ಕನ್ನಡವನ್ನು ತುಚ್ಛವಾಗಿ ನೋಡುವ ಈ ಮನುಷ್ಯಮಿತಿಯು ಕೌಟುಂಬಿಕ ಆದ್ಯತೆಯನ್ನು ಪಡೆಯಬಾರದು. ಅಷ್ಟೇ ಅಲ್ಲ, ಆ ಆದ್ಯತೆಯು ಸರ್ಕಾರಿ ವಲಯದ ಪ್ರಾಶಸ್ತ್ಯವನ್ನೂ ಪಡೆಯಬಾರದು. ಹಾಗಾದರೆ, ಒಂದು ಪೀಳಿಗೆಯ ಭಾಷಿಕ ಸಾಮಥ್ರ್ಯ ಮತ್ತು ವೈಚಾರಿಕ ವಿವೇಚನೆಯ ಬೆಳವಣಿಗೆಯ ತೀವ್ರತೆಗೆ ಕುಂದುಂಟಾಗುತ್ತದೆ.

ಕನ್ನಡ ಶೈಕ್ಷಣಿಕ ಸಂಸ್ಕಾರದ ಶ್ರೇಷ್ಠತೆ

ಪ್ರಾಥಮಿಕ ಶಾಲಾಹಂತದ ಮಕ್ಕಳಿಗೆ ಕನ್ನಡದಿಂದಲೇ ಶಿಕ್ಷಣದ ಸಂಸ್ಕಾರ ಪ್ರಾಪ್ತವಾಗಬೇಕು ಎಂಬ ಪ್ರತಿಪಾದನೆಯು ಕೇವಲ ಭಾವುಕ ಲೇಪವನ್ನಷ್ಟೇ ಹೊಂದಿಲ್ಲ. ಅದು ಮಕ್ಕಳ ಕಲಿಕೆಯ ಸಾಮಥ್ರ್ಯಕ್ಕೆ ಬೇಕಾದ ಆಶಾವಾದವನ್ನು ನೆಲೆಗೊಳಿಸುವ ವೈಜ್ಞಾನಿಕ ಮಾರ್ಗೋಪಾಯದ ಆಧಾರವನ್ನೂ ಹೊಂದಿರುವುದನ್ನು ಗಮನಿಸಲೇಬೇಕು.

ಮಗುವೊಂದು ಮತ್ತೊಂದು ಭಾಷೆಯೊಂದಿಗೆ ಸಂಪರ್ಕ ಸಾಧಿಸುವುದಕ್ಕೆ ಮುನ್ನ ತಾನಿರುವ ಕೌಟುಂಬಿಕ ಪರಿಸರದ ಭಾಷಿಕ ಸಂವಹನದ ಕ್ರಮಗಳ ಅರಿವು ಹೊಂದಿರಬೇಕಾಗುತ್ತದೆ. ನೇರವಾಗಿ ಅದು ಬೇರೊಂದು ಭಾಷೆಯ ಸಂಪರ್ಕ ಸಾಧಿಸಲು ಸಾಧ್ಯವಾಗುವುದಿಲ್ಲ. ಉದಾಹರಣೆ ಹಿಂದಿ ಅಥವಾ ಇಂಗ್ಲಿಷ್ ಭಾಷೆಗಳನ್ನು ಕನ್ನಡದ ಪರಿಸರದಲ್ಲಿ ಬೆಳೆದ ಮಕ್ಕಳು ಕನ್ನಡದ ಮೂಲಕವೇ ಕಂಡುಕೊಳ್ಳಬೇಕಾಗುತ್ತದೆ. ನೇರವಾಗಿ ಇಂಗ್ಲಿಷ್ ಪದಗಳನ್ನು ಹೇಳಿ ಅದೇ ಭಾಷೆಯ ವಾಕ್ಯಗಳನ್ನು ಉಲ್ಲೇಖಿಸಿ ಆ ಭಾಷೆಯನ್ನು ಕಲಿಸಲಾಗದು. ಮಾತೃಭಾಷೆಯ ನೆರವಿನೊಂದಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳ ವ್ಯಾಕರಣ ಮತ್ತು ಅಭಿವ್ಯಕ್ತಿ ವಿಧಾನಗಳನ್ನು ಗೊತ್ತುಮಾಡಿಕೊಂಡರೆ ಮಕ್ಕಳೊಳಗೆ ಭಾಷಿಕ ಪ್ರಬುದ್ಧತೆ ಭಿನ್ನವಾಗಿ ನೆಲೆಯೂರುತ್ತದೆ. ಮಾತೃಭಾಷೆಯಲ್ಲಿ ಮಾತನಾಡುವ, ಮಾತನಾಡಿದ್ದನ್ನು ಸ್ಪಷ್ಟವಾಗಿ ಗ್ರಹಿಸುವ, ಗ್ರಹಿಸಿಕೊಂಡಿದ್ದನ್ನು ವಿವೇಚಿಸಿ ಅಭಿವ್ಯಕ್ತಿಸುವ ಕ್ರಮಗಳೊಂದಿಗೆ ಗುರುತಿಸಿಕೊಳ್ಳಲು ಅನುವಾಗುತ್ತದೆ. ಇದು ಪರಭಾಷೆಗಳ ಕಲಿಕೆಯಲ್ಲಿ ಗಮನಾರ್ಹ ಪಾತ್ರವಹಿಸುತ್ತದೆ.

ಭಾಷಾ ಸಂಕೀರ್ಣತೆಯ ಸವಾಲು

ಈ ಸೂಕ್ಷ್ಮವನ್ನು ಅರಿಯದೇ ಇದ್ದರೆ ಹೊಸ ಪೀಳಿಗೆಯ ಮಕ್ಕಳು ಭಾಷಾ ಸಂಕೀರ್ಣತೆಯನ್ನು ಎದುರಿಸುತ್ತಾರೆ. ಮುಂದಾಗುವ ಅಪಾಯವನ್ನು ಈಗಲೇ ಗ್ರಹಿಸಿರುವ ಕಾರಣಕ್ಕಾಗಿಯೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನವು ಉಳಿದೆಲ್ಲ ಪ್ರಚಲಿತ ಸಮಸ್ಯೆಗಳನ್ನು ಗಣನೆಗೆ ತೆಗೆದುಕೊಳ್ಳದೇ ಕೇವಲ ಭಾಷಿಕ ಸಮಸ್ಯೆಯನ್ನಷ್ಟೇ ಕಾಡಿಸಿಕೊಂಡು ಮಹತ್ವದ ಸಂದೇಶವನ್ನು ಸಾರುವಲ್ಲಿ ಯಶಸ್ವಿಯಾಗಿದೆ. ಸಾವಿರ ಆಂಗ್ಲಮಾಧ್ಯಮ ಶಾಲೆಗಳನ್ನು ಆರಂಭಿಸುವ ಯೋಚನೆಯನ್ನು ಅನುಷ್ಠಾನಗೊಳಿಸಬಾರದು ಎಂಬ ಸಮ್ಮೇಳನದ ಆಗ್ರಹ, ಪ್ರಾಥಮಿಕ ಶಿಕ್ಷಣವನ್ನು ರಾಷ್ಟ್ರೀಕರಣಗೊಳಿಸುವಂತೆ ಮುಂದಿಟ್ಟಿರುವ ಅದರ ಸಲಹಾತ್ಮಕ ನಿರ್ಣಯ ಮಹತ್ವಪೂರ್ಣ. ಆ ಮೂಲಕ ಸಮ್ಮೇಳನವು ಭಾಷೆಯ ಉಳಿವಿನ ಕುರಿತಾದ ತನ್ನ ಕಾಳಜಿ ಮತ್ತು ಬದ್ಧತೆಯನ್ನು ಸಾಬೀತುಪಡಿಸಿದೆ.

ಇಡೀ ಜಗತ್ತು ವಾಣಿಜ್ಯಿಕ ಲಾಭದ ಗುಂಗಿನೊಂದಿಗಿದ್ದಾಗ ಭಾಷೆ, ಸಂಸ್ಕøತಿ ಉಳಿವಿನ ಪ್ರಶ್ನೆಗಳು ಹಿನ್ನೆಲೆಗೆ ಸರಿಯುತ್ತವೆ. ಹಾಗೆ ಹಿನ್ನೆಲೆಗೆ ಸರಿಸುವ ಉದ್ದೇಶಪೂರ್ವಕ ಹುನ್ನಾರಗಳು ನಡೆದುಬಿಡುತ್ತವೆ. ವಾಣಿಜ್ಯಿಕ ಹಿತಾಸಕ್ತಿ ಮತ್ತು ಸಂಕುಚಿತ ರಾಜಕಾರಣದ ವಿಕಾರಗಳ ವಿಜೃಂಭಣೆಯ ಕಾರಣಕ್ಕಾಗಿಯೇ ಕನ್ನಡವು ಆಡಳಿತಾತ್ಮಕ ಆದ್ಯತೆಯ ಆವರಣದಿಂದ ಕ್ರಮೇಣ ಮರೆಯಾಗುವ ಮುನ್ಸೂಚನೆಗಳು ದೊರಕುತ್ತಲೇ ಇವೆ. ಈ ಹಿನ್ನೆಲೆಯಲ್ಲಿ ಸಮ್ಮೇಳನದ ಭಾಷಿಕ ನಿರ್ಣಯಗಳನ್ನು ಸಕಾಲಿಕ ಎಂದೇ ಪರಿಗಣಿಸಬೇಕಾಗುತ್ತದೆ.

ಮಾತೃಭಾಷೆಯೊಂದಿಗಿನ ಕಲಿಕಾನಂಟು

ಕಲಿಕೆಯು ಅತ್ಯಂತ ಸಹಜ ಪ್ರಕ್ರಿಯೆ. ಮಗುವಿನ ಬೆಳವಣಿಗೆಯ ವೇಳೆ ಕ್ರಮಾನಗುತವಾಗಿ ಆಂತರ್ಯದಲ್ಲಿ ಅಂತಸ್ಥಗೊಳ್ಳುವ ಪರಿಕಲ್ಪನೆ. ಇದನ್ನು ಒಳಗೊಳ್ಳುವ ಹಂಬಲದೊಂದಿಗೆ ಹೆಜ್ಜೆಯಿರಿಸುವ ಮಗು ಹಂತಹಂತವಾಗಿ ಪ್ರಬುದ್ಧತೆಯ ಹಾದಿಯನ್ನು ಕ್ರಮಿಸಲು ಸಾಧ್ಯವಾಗುತ್ತದೆ. ಈ ಹಾದಿಯಲ್ಲಿ ಮಾತೃಭಾಷೆಯದ್ದು ಅತ್ಯಂತ ಪ್ರಭಾವೀ ಪಾತ್ರ. ಆದರೆ, ಇದನ್ನು ನಿರ್ಲಕ್ಷಿಸಿ ಬೇರೊಂದು ಭಾಷೆಯನ್ನು ಮಕ್ಕಳ ಮನೋಲೋಕದಲ್ಲಿ ಒತ್ತಾಯಪೂರ್ವಕವಾಗಿ ಸೇರ್ಪಡೆಗೊಳಿಸುವ ಪ್ರಯತ್ನವು ಆಘಾತಕಾರಿ ಪರಿಣಾಮಗಳನ್ನು ಉಂಟುಮಾಡುತ್ತದೆ. ಸಮಗ್ರ ತಿಳುವಳಿಕೆಯನ್ನು ದಾಟಿಸುವುದಕ್ಕೆ ದಾರಿಮಾಡಿಕೊಡುವ ಕಲಿಕೆಯು ಭಾಷೆಯ ಪ್ರಸ್ತುತಿಯ ನೆರವಿನೊಂದಿಗೇ ಏರ್ಪಡಬೇಕಾಗುತ್ತದೆ.

ಮಗು ತನ್ನದಲ್ಲದ ಬೇರೊಂದು ಭಾಷೆಗೆ ಆರಂಭದಲ್ಲಿಯೇ ಒಗ್ಗಿಕೊಳ್ಳುವುದಿಲ್ಲ. ಅಪರಿಚಿತರನ್ನು ಕಂಡಾಕ್ಷಣ ಆತಂಕಗೊಳ್ಳುವ ಮನಸ್ಥಿತಿಯೇ ಬೇರೊಂದು ಭಾಷೆಯ ಅಭಿವ್ಯಕ್ತಿ ಎದುರುಗೊಂಡಾಗ ಪುನರಾವರ್ತಿತವಾಗುತ್ತದೆ. ಆಗ ಭಯ, ಆತಂಕ, ಅರ್ಥಕ್ಕೆಟುಕ್ಕುತ್ತಿಲ್ಲ ಎಂಬ ಕೊರಗುಗಳೆಲ್ಲವೂ ಒಟ್ಟಿಗೇ ದಾಳಿಗೈದು ಉದ್ದೇಶಿತ ಕಲಿಕೆ ಸಾಧ್ಯವಾಗುವುದೇ ಇಲ್ಲ. ಈ ಸೂಕ್ಷ್ಮತೆ ಅರಿತುಕೊಳ್ಳಲು ಭಾರೀ ಸಂಶೋಧನೆಯನ್ನೇನೋ ಕೈಗೊಳ್ಳಬೇಕಿಲ್ಲ. ಇಂಗ್ಲಿಷ್‍ನಿಂದಲೇ ಮಗುವಿನ ಕಲಿಕೆ ಆರಂಭವಾಗಬೇಕು ಎಂದು ವಾದಿಸುವ ಕನ್ನಡಿಗರು ತಮ್ಮ ತಮ್ಮ ಪ್ರಾಥಮಿಕ ಶಾಲಾ ದಿನಗಳನ್ನು ನೆನಪಿಸಿಕೊಂಡರೆ ಈ ಸೂಕ್ಷ್ಮ ಗಮನಕ್ಕೆ ಬರುತ್ತದೆ.

ಅಪಾಯದ ಮುನ್ಸೂಚನೆ

ಇಂಥ ಯಾವ ಸೂಕ್ಷ್ಮತೆಗಳನ್ನು ಪರಿಗಣಿಸದೇ ಪ್ರತಿಷ್ಠೆಯನ್ನಷ್ಟೇ ಕಾಡಿಸಿಕೊಂಡು ಮಕ್ಕಳ ಉದ್ಧಾರಕ್ಕೆ ಇಂಗ್ಲಿಷ್ ಮೂಲಕವೇ ಕಲಿಕೆಯ ಯಾನ ಶುರುವಾಗಬೇಕು ಎಂದು ಪ್ರತಿಪಾದಿಸುವುದು ತಾರ್ಕಿಕವೆನ್ನಿಸಿಕೊಳ್ಳುವುದಿಲ್ಲ. ಸಾಹಿತ್ಯ ಸಮ್ಮೇಳನಗಳಂಥ ವೇದಿಕೆಯ ಮೂಲಕ ಹೊರಹೊಮ್ಮುವ ಅಮೂಲ್ಯ ಚಿಂತನೆಗಳನ್ನು ಪರಿಗಣಿಸುವ ಆಡಳಿತಾತ್ಮಕ ಬದ್ಧತೆಯ ಕೊರತೆ ಎದ್ದುಕಾಣುತ್ತಿರುವಾಗ ಇಂಥ ವಿತಂಡವಾದಿ ದೃಷ್ಟಿಕೋನಗಳು ಕನ್ನಡದ ಮಕ್ಕಳ ಕಲಿಕಾ ಸಾಮಥ್ರ್ಯವನ್ನು ಮೊಟಕುಗೊಳಿಸುತ್ತವೆ. ಪ್ರಾಥಮಿಕ ಶಾಲೆಯಲ್ಲಿ ಓದುತ್ತಿದ್ದಾಗ ನಮಗೆ ನಾಡಿನ ಕುರಿತಾದ ಹೆಮ್ಮೆಯ ಭಾವ ಮೂಡಿಸುವಂಥ ಗೀತೆಗಳನ್ನು ಶಿಕ್ಷಕರು ರಾಜ್ಯೋತ್ಸವದ ಸಂದರ್ಭದಲ್ಲಿ ಪರಿಚಯಿಸುತ್ತಿದ್ದರು.

ಕನ್ನಡದ ಕಲಿಕೆಯ ಜೊತೆಜೊತೆಗೇ ಇಂಥ ಪರಿಚಯಾತ್ಮಕ ಪ್ರಯತ್ನಗಳು ನಾಡಿನ ಕುರಿತಾದ ಹೆಮ್ಮೆಯನ್ನೂ ಹೆಚ್ಚಿಸುತ್ತಿದ್ದವು. ‘ಜಯ ಭಾರತ ಜನನಿಯ ತನುಜಾತೆ ಜಯಹೇ ಕರ್ನಾಟಕ ಮಾತೆ’ ಕವಿತೆಯು ನಾಡಗೀತೆಯ ಆಡಳಿತಾತ್ಮಕ ಮನ್ನಣೆ ಪಡೆದು ಕಡ್ಡಾಯ ನಿಯಮಾವಳಿಯ ವ್ಯಾಪ್ತಿಗೆ ಬರುವುದಕ್ಕಿಂತ ಮುಂಚೆಯೇ ಕರ್ನಾಟಕದ ಶಾಲೆಗಳಲ್ಲಿ ಕನ್ನಡದ ವೈವಿಧ್ಯಮಯ ಜಗತ್ತು ಅದರ ಭಾಷಿಕ ಸೊಗಡಿನೊಂದಿಗೇ ಪರಿಚಿತವಾಗುತ್ತಿತ್ತು. ಈಗ ಪ್ರಾಥಮಿಕ ಶಿಕ್ಷಣ ಹಂತದಿಂದಲೇ ಇಂಗ್ಲಿಷ್ ಮಾಧ್ಯಮದ ಆವರಣದ ಕೂಪಕ್ಕೆ ಮಕ್ಕಳನ್ನು ತಳ್ಳುವ ಪ್ರಯೋಗಾರ್ಥ ಪ್ರಯತ್ನದ ಹೆಜ್ಜೆಗಳು ಅಂಥ ವಾತಾವರಣವನ್ನು ಇಲ್ಲವಾಗಿಸುವ ಆತಂಕವನ್ನು ಮೂಡಿಸಿವೆ. ಮಕ್ಕಳ ಭಾಷಿಕ ಸಾಮಥ್ರ್ಯಕ್ಕೆ ಕೊಡಲಿಪೆಟ್ಟು ನೀಡುವ ಸುಳಿವು ನೀಡಿವೆ.

ಕಂಬಾರರ ಮೌಲಿಕ ಚಿಂತನೆ

ಸಮ್ಮೇಳನದ ಅಧ್ಯಕ್ಷರಾದ ಡಾ.ಚಂದ್ರಶೇಖರ ಕಂಬಾರ ಅವರ ನುಡಿಗಳಲ್ಲಿಯೇ ಆಡಳಿತವು ಕನ್ನಡ ಭಾಷೆಯ ಕುರಿತು ಯಾವ ನಿಲುವುಗಳನ್ನು ತಳೆಯಬೇಕು ಎಂಬ ಸ್ಪಷ್ಟ ಮಾರ್ಗದರ್ಶನವಿದೆ.“ಮಾತೃಭಾಷೆಯು ಬದುಕನ್ನು ಅಥಪೂರ್ಣಗೊಳಿಸುತ್ತದೆ. ಸಾಂಸ್ಕøತಿಕ ನಂಬಿಕೆ ಮತ್ತು ಮೌಲ್ಯಗಳು ಮಾತೃಭಾಷೆಯೊಂದಿಗೆ ತಳುಕುಹಾಕಿಕೊಂಡಿರುತ್ತವೆ. ಕನ್ನಡವನ್ನು ಸರಿಯಾಗಿ ಕಲಿಯುವುದರಿಂದ ಇಂಗ್ಲಿಷ್ ಸೇರಿದಂತೆ ಉಳಿದ ಭಾಷೆಗಳನ್ನು ಕಲಿಯುವುದಕ್ಕೂ ಸಹಾಯಕವಾಗುತ್ತದೆ” ಎಂಬ ಅವರ ನಿಲುವುಗಳು ಕೇವಲ ತಾತ್ವಿಕ ಚೌಕಟ್ಟನ್ನಷ್ಟೇ ಹೊಂದಿಲ್ಲ. ಸಮಸ್ತ ಕನ್ನಡಿಗರ ಅನುಭವಕ್ಕೆ ಬಂದ ಮೌಲಿಕ ಅಂಶಗಳನ್ನಾಗಿಯೂ ನಾವು ಅವುಗಳನ್ನು ಗ್ರಹಿಸಬೇಕು.

ಈ ರೀತಿಯಾಗಿ ಗ್ರಹಿಸುವ ಸಂಯಮ ಆಡಳಿತಾತ್ಮಕ ವಲಯದಿಂದ ವ್ಯಕ್ತವಾದರೆ ಕನ್ನಡ ಭಾಷೆಯು ಭವಿಷ್ಯದಲ್ಲಿ ಆತಂಕ ಎದುರಿಸುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ವಾಣಿಜ್ಯಿಕ ಹಿತಾಸಕ್ತಿಯ ಪ್ರಲೋಭನೆಗೆ ಒಳಗಾಗಿ ಭಾಷೆಗೆ ಸಂಬಂಧಿಸಿದಂತೆ ಅತಾರ್ಕಿಕವಾದ, ಪ್ರಾಯೋಗಿಕವಲ್ಲದ ತೀರ್ಮಾನಗಳು ಪ್ರಕಟವಾಗುವುದಿಲ್ಲ.

ಇಂಗ್ಲಿಷ್ ಗುಂಗಿನ ಕೃತಕತೆ

ಇಂಗ್ಲಿಷ್ ಪ್ರತಿಷ್ಠೆಯನ್ನು ಹೆಚ್ಚಿಸಿಕೊಳ್ಳುವ ಭಾಷೆಯಾಗಿ ನಮ್ಮೊಳಗೆ ಬೆರೆತುಹೋಗಬೇಕಿಲ್ಲ. ಆ ಭಾಷೆಯನ್ನು ಬಲವಂತವಾಗಿ ಪ್ರಾಥಮಿಕ ಹಂತದಿಂದಲೇ ಮಕ್ಕಳೊಳಗೆ ಬೆರೆಸುವ ಪ್ರಯತ್ನವು ಅವರ ಬೆಳವಣಿಗೆಯ ಸಹಜತೆಗೆ ಕಡಿವಾಣ ಬಿಗಿಯುತ್ತದೆ. ಆ ಸಹಜತೆಯ ಜಾಗವನ್ನು ಕೃತಕತೆ ಆವರಿಸಿಕೊಂಡುಬಿಡುತ್ತದೆ.

ಇಂಗ್ಲಿಷ್ ಗುಂಗಿನ ಕೃತಕ ಚೌಕಟ್ಟಿನೊಳಗೆ ಬಂಧಿಯಾಗಿ ಕನ್ನಡದ ಬಗ್ಗೆ ಕೀಳರಿಮೆ ರೂಪುಗೊಳ್ಳುತ್ತದೆ. ಇಂಗ್ಲಿಷ್ ಶ್ರೇಷ್ಠ ಎಂಬ ತಪ್ಪುಕಲ್ಪನೆಯನ್ನೇ ಮಕ್ಕಳು ಪರಮ ಆದರ್ಶವನ್ನಾಗಿ ಸ್ವೀಕರಿಸುತ್ತಾರೆ. ಹಾಗಾದಾಗ ಮಾತೃಭಾಷೆ, ಅದರೊಂದಿಗಿನ ಕರಳುಬಳ್ಳಿಯ ಸಂಬಂಧ, ಸಂಸ್ಕøತಿಯ ವೈವಿಧ್ಯಮಯ ಸ್ವರೂಪ ಅವರಿಂದ ಕ್ರಮೇಣ ದೂರವಾಗುತ್ತಾ ಹೋಗುತ್ತದೆ. ಅವರನ್ನು ಹೀಗೆ ಉದ್ದೇಶಪೂರ್ವಕವಾಗಿ ಕನ್ನಡದ್ದೇ ಪರಂಪರೆಯ ಬೇರುಗಳಿಂದ ಬೇರ್ಪಡಿಸುವಂಥ ಹೆಜ್ಜೆಗಳು ಭಾಷಿಕ ಸಂದಿಗ್ಧತೆಯನ್ನೇ ಸೃಷ್ಟಿಸುತ್ತವೆ.

ಕರುಳುಬಳ್ಳಿಯ ಸಂಬಂಧ

ಮಕ್ಕಳು ಕನ್ನಡದೊಂದಿಗಿನ ಕರುಳುಬಳ್ಳಿಯ ಸಂಬಂಧ ಕಡಿದುಕೊಂಡರೆ ಏನಾಗುತ್ತದೆ? ಬೆಳೆದು ದೊಡ್ಡವರಾದಾಗ ಕನ್ನಡದ ಭಾಷಿಕ ಸೊಗಡನ್ನೇ ವ್ಯಂಗ್ಯಕ್ಕೀಡುಮಾಡುತ್ತಾರೆ. ಕನ್ನಡದ ಉಳಿವಿನ ಕುರಿತು ಜನಪ್ರಿಯ ಶೈಲಿಯಲ್ಲಿ ಸಿನಿಮಾ ಹೀರೋಗಳು ಹೇಳುವ ಡೈಲಾಗ್‍ಗಳನ್ನಷ್ಟೇ ಕೇಳಿ ಚಪ್ಪಾಳೆ ಹೊಡೆದು ಆ ಕ್ಷಣಕ್ಕೇ ಮರೆತುಬಿಡುವ ಮನಃಸ್ಥಿತಿಗೆ ಪಕ್ಕಾಗಿಬಿಡುತ್ತಾರೆ. ಇಂಗ್ಲಿಷ್ ಮಾತನಾಡಿದರಷ್ಟೇ ಮರ್ಯಾದೆ ಎಂದುಕೊಂಡು ಪ್ರತಿಷ್ಠೆ ಮೆರೆಯುವ ಕೃತಕತೆಯನ್ನೇ ಗುಣಸ್ವಭಾವವನ್ನಾಗಿಸಿಕೊಳ್ಳುತ್ತಾರೆ.

ಕನ್ನಡದಲ್ಲೇ ಲಭ್ಯವಾಗುವ ಅದೆಷ್ಟೋ ಜ್ಞಾನ ಮಾದರಿಗಳ ಸಂಪರ್ಕದಿಂದ ದೂರವೇ ಉಳಿದುಬಿಡುತ್ತಾರೆ. ಎಲ್ಲದಕ್ಕೂ ಇಂಗ್ಲಿಷ್‍ನ್ನೇ ನೆಚ್ಚಿಕೊಂಡು ಅದರ ಮೂಲಕ ಹರಿದುಬರುವ ಮಾಹಿತಿಗಳನ್ನು ಮೇಲ್ನೋಟಕ್ಕಷ್ಟೇ ಗ್ರಹಿಸುವ ಅವಸರದ ಮಾದರಿಯನ್ನೇ ಅನುಸರಿಸುತ್ತಾರೆ. ವಿವಿಧ ಭಾಷೆಗಳಲ್ಲಿ ಲಭ್ಯವಾಗುವ ಮಾಹಿತಿಗಳನ್ನುಜ್ಞಾನಸಂಪನ್ಮೂಲವಾಗಿಸಿಕೊಳ್ಳುವ ಸಂಯಮ ರೂಢಿಸಿದ ಕನ್ನಡ ಓದಿನ ಸೊಗಡು ಸವಿಯುವ ಅಪೂರ್ವ ಅವಕಾಶದಿಂದ ಅವರು ವಂಚಿತರಾಗುತ್ತಾರೆ.ಮುಂದೆ ಎದುರಾಗಲಿರುವ ಅಂಥದ್ದೊಂದು ಸನ್ನಿವೇಶದಿಂದ ಕನ್ನಡದ ಮಕ್ಕಳನ್ನು ಪಾರುಮಾಡಬೇಕಿದೆ. ಸಮ್ಮೇಳನದ ನಿರ್ಣಯಗಳನ್ನು ಗಂಭೀರವಾಗಿ ಪರಿಗಣಿಸಿ ಕನ್ನಡಕ್ಕಿರುವ ಉಜ್ವಲ ಭವಿಷ್ಯವನ್ನು ವಿಸ್ತರಿಸುವ ನಿಟ್ಟಿನಲ್ಲಿ ಯೋಚಿಸಬೇಕಾಗಿದೆ. ಭಾಷೆಗೆ ಸಂಬಂಧಿಸಿದಂತೆ ಕವಲು ಹಾದಿ ತುಳಿಯುವ ರಾಜಕಾರಣದ ಸಂಕುಚಿತ ವ್ಯಾಕರಣವನ್ನುಭಗ್ನಗೊಳಿಸಬೇಕಿದೆ.

-ಡಾ.ಎನ್.ಕೆ.ಪದ್ಮನಾಭ

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

Published

on

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.

“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

ದಿನದ ಸುದ್ದಿ4 days ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ5 days ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ5 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ5 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ5 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ7 days ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ7 days ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ1 week ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ1 week ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

Trending