ಬಹಿರಂಗ
ಬಾಬಾಸಾಹೇಬ್ ಅಂಬೇಡ್ಕರರ ಕಡೆಯ ಸಂದೇಶಗಳು

ಸಂದೇಶ: ಒಂದು
ನನ್ನ ಸಂದೇಶವೆಂದರೆ ಹೋರಾಟ, ಇನ್ನೂ ಹೆಚ್ಚಿನ ಹೋರಾಟ; ತ್ಯಾಗ, ಇನ್ನೂ ಹೆಚ್ಚಿನ ತ್ಯಾಗ, ಬಲಿದಾನ! ಹೋರಾಟ, ಹೌದು ಹೋರಾಟ ಮಾತ್ರ ತ್ಯಾಗ, ಬಲಿದಾನಗಳು ತಂದೊಡ್ಡುವ ಕಷ್ಟ ನಷ್ಟ ಪರಂಪರೆಗಳನ್ನು ಪರಿಗಣಿಸದೆಯೇ ಮುನ್ನುಗ್ಗುವ ಧೀರ ಹೋರಾಟ ಮಾತ್ರ ಅವರ ವಿಮೋಚನೆ ಸಾಧಿಸಬಲ್ಲದು ಬೇರೆ ಇನ್ನಾವುದು ಕೂಡ ಅಸ್ಪøಶ್ಯರ ಬಿಡುಗಡೆಯ ಮಾರ್ಗ ತೋರಲಾರದು.
ಸಂದೇಶ: ಎರಡು
ಅಸ್ಪøಶ್ಯರೆಲ್ಲರೂ ಒಂದು ಸಾಮೂಹಿಕ ಸಂಕಲ್ಪವನ್ನು ಅಂತರ್ಗತ ಮಾಡಿಕೊಳ್ಳಬೇಕು. ಅವರು ತಮ್ಮೊಳಗಿನ ಸಮಸ್ತ ಜಡತ್ವವನ್ನು ಕೊಡಹಿ ಘನಿಷ್ಠ ಐಕ್ಯತೆಯೊಂದಿಗೆ ಎದ್ದು ನಿಂತು ಪ್ರತಿಭಟಿಸುವುದನ್ನು ಕಲಿತುಕೊಳ್ಳಬೇಕು. ಜೊತೆಗೆ ತಾವು ಕೈಗೊಂಡಿರುವ ಮಹತ್ತರ ಕಾರ್ಯದ ಪಾವಿತ್ರ್ಯದ ಬಗ್ಗೆ ದೃಢವಾದ ನಂಬಿಗೆಯನ್ನು ಬೆಳೆಸಿಕೊಳ್ಳಬೇಕು. ಎಲ್ಲಕ್ಕೂ ಮಿಗಿಲಾಗಿ ತಾವು ಮುಟ್ಟಬೇಕಾದ ಗುರಿಯ ಬಗ್ಗೆ ಒಂದು ಸಮಷ್ಟಿ ನಿರ್ಧಾರವನ್ನು ಸೃಷ್ಟಿಸಿಕೊಳ್ಳಬೇಕು. ಅವರ ಕಾರ್ಯ ಎಷ್ಟು ಮಹತ್ವದ್ದಾಗಿದೆಯೆಂದರೆ, ಈ ಘನೋದ್ಧೇಶ ಎಷ್ಟು ಶ್ರೇಷ್ಠವಾದುದ್ದಾಗಿದೆಯೆಂದರೆ ಸಮಸ್ತ ಅಸ್ಪøಶ್ಯರು ಒಗ್ಗೂಡಿ ಒಕ್ಕೊರಲಿನಿಂದ ಈ ಪ್ರಾರ್ಥನೆಗೆ ದ್ವನಿಗೂಡಿಸಬೇಕು
“ತನ್ನ ಜನ, ಜನಾಂಗಗಳನ್ನು ಉದ್ಧರಿಸಬಲ್ಲ ಮಹತ್ತರ ಕಾರ್ಯಕ್ಕೆ ತನ್ನನ್ನು ತಾನು ತೊಡಗಿಸಿಕೊಂಡು ಜೀವಂತಿಕೆಯಿಂದ ಲವಲವಿಕೆಯಿಂದ ದುಡಿಯುವವನೆ ಧನ್ಯನು. ಗುಲಾಮಗಿರಿ ವ್ಯವಸ್ಥೆಯ ವಿರುದ್ಧ ಒಡ್ಡಲಾಗುವ ಪ್ರತಿಭಟನೆಗೆ ಶಕ್ತಿ ತುಂಬಿ ಸಂವರ್ಧಿಸಬಲ್ಲವರೇ ಧನ್ಯರು. ತಮ್ಮ ಬದುಕಿನ ಸರ್ವಸ್ವವನ್ನೇ ತನು, ಮನ, ಧನ ಮಿಗಿಲಾಗಿ ತನ್ನ ತನ್ನನ್ನೇ ಮುಡಿಪಾಗಿಟ್ಟು ತಮ್ಮ ಜನರನ್ನು ಶ್ರೇಯೋಭಿವೃದ್ಧಿಯ ಮಾರ್ಗದಲ್ಲಿ ನಡೆಸುವ ಪ್ರತಿಜ್ಞೆಗೈಯುವವರೇ ಧನ್ಯರು. ಮಾನಾಪಮಾನಗಳನ್ನು ಲೆಕ್ಕಿಸದೆ ಒಳ್ಳೆಯದೇ ಬರಲಿ, ಕೆಟ್ಟದ್ದೇ ಬರಲಿ, ಕೆಟ್ಟದ್ದೇ ಎದುರಾಗಲಿ, ಮಳೆ ಬರಲಿ, ಬಿಸಿಲಿರಲಿ ಭಯಂಕರ ಬಿರುಗಾಳಿಯೇ ದುರ್ದಾಳಿ ನಡೆಸಲಿ ಸಮಸ್ತ ಅಸ್ಪøಶ್ಯರು ಪರಿಪೂರ್ಣವಾದ ಪೌರುಷ್ಯವನ್ನು ಪುನಃ ಪಡೆದುಕೊಳ್ಳುವವರೆಗೆ ಎಲ್ಲಿಯೂ ನಿಲ್ಲದೆ ಅತುಲ ಧೈರ್ಯ ಧೀಮಂತಿಕೆಯೊಂದಿಗೆ ಮುನ್ನಡೆಯುವ ಅಚಲ ನಿರ್ಧಾರ ಕೈಗೊಳ್ಳುವವರೇ ಧನ್ಯ, ಧನ್ಯರು”
ಸಂದೇಶ: ಮೂರು
ನನ್ನನ್ನು ಕಾಡುತ್ತಿರುವ ಸಂಗತಿಗಳಾಗಲಿ, ನನ್ನನ್ನು ದುಃಖಕ್ಕೆ ದೂಡಿರುವ ವಿಷಯವಾಗಲಿ ನಿಮಗೆ ಅರ್ಥವಾಗುವುದಿಲ್ಲ. ನನಗೆ ಹಗಲಿರುಳು ಚುಚ್ಚಿ ನೋಯಿಸುತ್ತಿರುವ, ನನ್ನ ಚಿಂತೆಗೆ ಕಾರಣವಾಗಿರುವ ಮೊಟ್ಟಮೊದಲನೇ ಸಂಗತಿ ಎಂದರೆ, ನಾನು ನನ್ನ ಬದುಕಿನ ದ್ಯೇಯೋದ್ಧೇಶಗಳನ್ನು ಪೂರ್ಣಗೊಳಿಸಲು ಸಾಧ್ಯವಾಗಲಿಲ್ಲವಲ್ಲ ಎಂಬುವುದು. ನನ್ನ ಜನರು ಇತರ ಸಮುದಾಯಗಳೊಂದಿಗೆ ಸರ್ವ ಸಮಾನತೆಯನ್ನು ಸಾಧಿಸಿಕೊಂಡು ರಾಜಕೀಯ ಅಧಿಕಾರದ ಮೂಲಕ ಆಳುವ ವರ್ಗಗಳಾಗಿ ಮೇಲೇರುವುದನ್ನು ನಾನು ನೋಡಬಯಸಿದ್ದೆ. ಆದರೆ, ನಾನೀಗ ಅನಾರೋಗ್ಯದಿಂದ ನಿತ್ರಾಣನಾಗಿದ್ದೇನೆ. ನನಗೆ ಸಾಧಿಸಲು ಸಾಧ್ಯವಾಗಿರುವುದೆಲ್ಲವೂ ಕೆಲವೇ ಕೆಲವು ಸುಶಿಕ್ಷಿತರು ಮಾತ್ರ ಬಳಸುತ್ತಿದ್ದಾರೆ. ತಮ್ಮ ಬದುಕನ್ನು ಮಾತ್ರ ಹಸನು ಮಾಡಿಕೊಂಡು, ಆನಂದಾತಿರೇಕದಲ್ಲಿ ಓಲಾಡುತ್ತಿದ್ದಾರೆ. ತಮ್ಮ ಮೋಸ ತಟವಟದ ನಡೆ-ನುಡಿಗಳ ಮೂಲಕ ನಿರುಪಯುಕ್ತ ಜನರಾಗಿ ಪರಿಣಮಿಸಿದ್ದಾರೆ. ಇವರಿಗೆ ದಮನಕ್ಕೊಳಗಾದ ತಮ್ಮ ಬಂಧು ಬಾಂಧವರ ಬಗ್ಗೆ ಕಿಂಚಿತ್ ಕಾಳಜಿ ಇಲ್ಲ. ಇವರೊಳಗಿನ ಸಹಾನುಭೂತಿಯ ಸೆಲೆ ಶುಷ್ಕವಾಗಿದೆ. ಇವರೆಲ್ಲ ನನ್ನ ಕಲ್ಪನೆಯನ್ನು ಮೀರಿದ್ದಾರೆ. ವೈಯಕ್ತಿಕ ಗಳಿಕೆಗಳಿಗಾಗಿ ಹವಣಿಸುತ್ತಾ ತಮಗಾಗಿ ಮಾತ್ರ ಬದುಕುತ್ತಿದ್ದಾರೆ. ಇವರಲ್ಲಿಯ ಒಬ್ಬನೆ ಒಬ್ಬ ಕೂಡ ಸಾಮಾಜಿಕ ಕಾರ್ಯಕ್ಕೆ ತೊಡಗಲು ಸಿದ್ದನಿಲ್ಲ. ಸರ್ವರೂ ತಮ್ಮ ಸರ್ವನಾಶದ ದಾರಿಯನ್ನು ತುಳಿಯುತ್ತಿದ್ದಾರೆ. ನಾನೀಗ ನನ್ನ ಗಮನವನ್ನು ಗ್ರಾಮಾಂತರದಲ್ಲಿಯ ನಿರಕ್ಷರಕುಕ್ಷಿಗಳೆಡೆಗೆ ತಿರುಗಿಸಬಯಸಿದ್ದೆ. ಅವರೆಲ್ಲ ತಮ್ಮ ಆರ್ಥಿಕ ಸ್ಥಿತಿಗತಿಗಳಲ್ಲಿ ಯಾವುದೇ ಬದಲಾವಣೆ ಇಲ್ಲದೆ ಇನ್ನೂ ಕಷ್ಟ ಪರಂಪರೆಗೆ ಬಲಿಯಾಗುತ್ತಲೇ ಇದ್ದಾರೆ. ಆದರೆ ನನ್ನ ಜೀವನ ಕೊನೆಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ನನ್ನ ಉಳಿದ ಬದುಕು ತುಂಬಾ ಕಡಿಮೆಯಿದೆ ಎಂಬುದು ನನಗೆ ಗೊತ್ತು.
ನನ್ನ ಜೀವಮಾನ ಕಾಲದಲ್ಲಿಯೇ ದಮನಿತ ವರ್ಗಗಳೊಳಗಿಂದ ಯಾರಾದರೊಬ್ಬರು ಮುಂದೆ ಬಂದು ನಮ್ಮ ಆಂದೋಲನವನ್ನು ಮುನ್ನಡೆಸಿಕೊಂಡು ಹೋಗುವ ಭಾರವಾದ ಹೊಣೆಗೆ ಹೆಗಲು ಕೊಡಬಹುದೆಂದು ಆಶಿಸಿದ್ದೆ. ಆದರೆ ನಮ್ಮ ಈ ಸಂದರ್ಭದ ಸಮಸ್ಯೆಗೆ ಎದೆಗೊಟ್ಟು ಎದುರಿಸಬಲ್ಲ ಯಾರೊಬ್ಬರೂ ಮೇಲೆದ್ದು ಬರುವಂತೆ ಕಾಣುತ್ತಿಲ್ಲ. ನನ್ನ ಹಲವಾರು ಸ್ನೇಹಿತರಲ್ಲಿ ನನಗೆ ತುಂಬಾ ವಿಶ್ವಾಸವಿತ್ತು. ಇವರಲ್ಲಿ ಯಾರೊಬ್ಬರಾದರೂ ನನ್ನ ಅಭೀಪ್ಸೆಗೆ ಅನುಗುಣವಾಗಿ ನಡೆದುಕೊಳ್ಳಬಲ್ಲರೆಂಬ ಭರವಸೆ ಇತ್ತು. ಆದರೆ ತಮ್ಮ ಹೆಗಲೇರಲಿರುವ ಭಾರಿ ಜವಾಬ್ದಾರಿಯ ಭಾರದ ಕಿಂಚಿತ್ ಅರಿವಿಲ್ಲದೆ ಇವರೆಲ್ಲ ನಾಯಕತ್ವಕ್ಕಾಗಿ, ಅಧಿಕಾರಕ್ಕಾಗಿ ತಮ್ಮ ತಮ್ಮೊಳಗೆ ಬಡಿದಾಡುತ್ತಿದ್ದಾರೆ. ಹೊಣೆ ಹೊರಲು, ಆಂದೋಲನವನ್ನು ಯಶಸ್ವಿಯಾಗಿ ಮುಂದುವರೆಸಲು ಯಾರೂ ಅಣಿಯಾಗುತ್ತಿಲ್ಲ. ನಾನಿನ್ನು ನನ್ನ ದೇಶದ ಸೇವೆ ಮುಂದುವರೆಸಬೇಕೆಂಬ ಬಯಕೆಯ ಭಾರದ ಅಡಿಯಲ್ಲಿ ತತ್ತರಿಸುತ್ತಿದ್ದೇನೆ. ಕೊನೆಯ ಉಸಿರಿನವರೆಗೂ ದೇಶಕ್ಕೆ ನನ್ನ ಸೇವೆಯನ್ನು ಅರ್ಪಿಸಲು ಆಶಿಸುತ್ತಿದ್ದೇನೆ. ಆದರೆ ಜಾತೀಯತೆಯಿಂದ ತುಂಬಿ ತುಳುಕುತ್ತಿರುವ ಪೂರ್ವಗ್ರಹ ಪೀಡಿತ ಈ ದೇಶದಲ್ಲಿ ಹುಟ್ಟುವುದೇ ಒಂದು ಪಾಪ ಎನಿಸುತ್ತಿದೆ. ಸದ್ಯದ ವ್ಯವಸ್ಥೆಯಲ್ಲಿ ಎಲ್ಲರ ಕಿವಿಗಳು ಪ್ರಧಾನ ಮಂತ್ರಿಯ ಮಾತುಗಳಿಗೆ ಮೀಸಲಾಗಿರುವಂತೆ ತೋರುತ್ತಿವೆ. ಸದ್ಯಕ್ಕೆ ಪ್ರಧಾನ ಮಂತ್ರಿಯ ನೆಲೆ ನಿಲುವು, ಮಾತುಕತೆಗಳನ್ನು ಮನ್ನಣಿಸುವವರ ಮಾತನ್ನು ಮಾತ್ರ ಜನರ ಕಿವಿಗೊಟ್ಟು ಆಲಿಸುವ ಸ್ಥಿತಿಗೆ ಇಳಿದಿದ್ದಾರೆ. ಅವುಗಳಿಗೆ ಪರ್ಯಾಯವಾದ, ಭಿನ್ನವಾದ ಯಾವ ಮಾತುಗಳನ್ನೂ ಜನರು ಕೇಳದ ವಿಷಾಧನೀಯ ಸ್ಥಿತಿ ನಿರ್ಮಾಣವಾಗಿದೆ. ಇಂತಹ ವಾಸ್ತವದಲ್ಲಿ ದೇಶದ ವ್ಯವಹಾರದ ಬಗ್ಗೆ ಆಸಕ್ತಿ ಉಳಿಸಿಕೊಳ್ಳುವುದು ಅತ್ಯಂತ ಕಠಿಣ ಕೆಲಸವಾಗಿ ಪರಿಣಮಿಸಿದೆ. ಅಬ್ಬಾ! ಈ ದೇಶ ಎಂತಹ ಅಧಃಪತನಕ್ಕೆ ಪಾತ್ರವಾಗುತ್ತಿದೆಯಲ್ಲ!
ನಾನಕ್ ಚಂದ್ ಹೋಗು ನನ್ನ ಜನರಿಗೆ ಹೇಳು. ನಾನು ಏನೆಲ್ಲ ಮಾಡಿರುವೆನೋ, ತುಸು ಮಟ್ಟಿಗಾದರೂ ಸಾಧಿಸಿರುವೆನೋ ಅದೆಲ್ಲವನ್ನು ನಾನು ಏಕಾಗಿಯಾಗಿಯೇ ಮಾಡಿದ್ದೇನೆ. ನನ್ನನ್ನು ನುಚ್ಚು ನೂರು ಮಾಡುವ ಅನೇಕ ತೊಂದರೆ ಸಂಕಟಗಳ ಒಳಗಿಂದ ಹಾಯ್ದು ಬಂದಿದ್ದೇನೆ. ಉದ್ದಕ್ಕೂ ನನ್ನ ಜನರು ನನ್ನೆಡೆಗೆ ಎಸೆದ ಬಿರು ನುಡಿಗಳು, ಎಲ್ಲ ಧಿಕ್ಕಿನಿಂದಲೂ ಬಂದ ದೂಷಣೆಗಳು ಮಾತಿಗೂ ಮೀರಿದವು. ವಿಶೇಷವಾಗಿ, ಹಿಂದೂ ಪತ್ರಿಕಾ ಮಾದ್ಯಮಗಳಿಂದ ಬಂದೆರಗಿದ ನಿಂಧನೆಯ ನುಡಿಗಳು ನನ್ನನ್ನು ನೋಯಿಸಿವೆ. ಬದುಕಿನ ಉದ್ದಕ್ಕೂ ನಾನು ಇವರೆಲ್ಲರ ವಿರುದ್ಧ ಸೆಣೆಸಿದ್ದೇನೆ. ನನ್ನ ವಿರೋಧಿಗಳನ್ನು ಎದುರಿಸಿ ನಿಂತಿದ್ದೇನೆ. ಕೆಲವೇ ಕೆಲವು ಸ್ವಾರ್ಥದ ಉದ್ಧೇಶಗಳಿಗಾಗಿ ನನ್ನನ್ನು ಮೋಸ ಮಾಡಿದ ನಮ್ಮದೇ ಹಿಡಿಯಷ್ಟು ಜನರನ್ನು ಎದುರಿಸಿದ್ದೇನೆ. ಇದರೆಲ್ಲರ ಹೊರತಾಗಿಯೂ ನನ್ನ ಜೀವದ ಕೊನೆಯ ಉಸಿರಿನವರೆಗೂ ದಮನಿತರ ಸೇವೆಯನ್ನು ಮುಂದುವರೆಸಲು ನಿರ್ಧರಿಸಿದ್ದೇನೆ. ಯಾವುದೇ ಸಂಧರ್ಭದಲ್ಲಿಯೂ ನನ್ನ ದೇಶ ಬಾಂಧವರ ಕೈ ಬಿಡದಿರಲು ತಿರ್ಮಾನಿಸಿದ್ದೇನೆ. ಬಹು ಕಷ್ಟ ಪಟ್ಟು ನನ್ನ ಹೋರಾಟದ ರಥವನ್ನು ಇಲ್ಲಿಯವರೆಗೂ ಎಳೆದು ತಂದಿದ್ದೇನೆ. ಇದು ಹೀಗೆ ಮುನ್ನಡೆಯಬೇಕು. ಅದರ ಮಾರ್ಗದಲ್ಲಿ ಏನೆಲ್ಲ ಎಡರುತೊಡರುಗಳು ಎದುರಾಗಬಹುದು. ಅಡ್ಡಿ ಅಡಚಣೆಗಳು ಅಡ್ಡಬರಬಹುದು. ಚ್ಯುತಿ ನ್ಯೂನ್ಯತೆಗಳಂತಹ ಕಷ್ಟಗಳು ಅದರ ಮುನ್ನಡೆಗೆ ತೊಂದರೆ ಒಡ್ಡಬಹುದು. ಇವೆಲ್ಲವನ್ನು ಮೆಟ್ಟಿ ಮೀರಿ ನಿಲ್ಲುತ್ತಾ ಮುಂದೆ ಸಾಗಬೇಕು. ನನ್ನ ಜನರು ಈ ಸಂದರ್ಭದ ಸವಾಲನ್ನು ಸ್ವೀಕರಿಸುವ ಧೀಮಂತಿಕೆ ತೋರಬೇಕು. ಒಂದು ಗೌರವಾರ್ಹವಾದ ಮರ್ಯಾದೆಯ ಬದುಕು ಕಟ್ಟಿಕೊಳ್ಳಬೇಕೆಂದರೆ ಅವರೆಲ್ಲ ಇದಕ್ಕೆ ಸಿದ್ಧರಾಗಬೇಕು. ಒಂದು ವೇಳೆ ನನ್ನ ಜನರು ಹಾಗೂ ನನ್ನ ಕಟ್ಟಾ ಅನುಯಾಯಿಗಳು ಈ ಆಂದೋಲನದ ರಥವನ್ನು ಮುಂದೆ ನಡೆಸುವಲ್ಲಿ ವಿಫಲರಾದರೂ ಪರವಾಗಿಲ್ಲ. ಅವರು ಮಾಡಬಹುದಾದ ಉತ್ತಮ ಕೆಲಸವೆಂದರೆ ಅದು ಎಲ್ಲಿಗೆ ಬಂದಿದೆಯೋ ಅಲ್ಲಿಯೇ ನಿಲ್ಲುವಂತಾದರೂ ನೋಡಿಕೊಳ್ಳಬೇಕು. ಯಾವುದೇ ಸಂದರ್ಭದಲ್ಲಿಯೂ ಅದು ಹಿಂದಕ್ಕೆ ಹೋಗದಂತೆ ಎಚ್ಚರಿಕೆ ವಹಿಸಬೇಕು. ಇದು ನನ್ನ ಸಂದೇಶ. ಹೌದು ಪ್ರಾಯಶಃ ನನ್ನೆಲ್ಲಾ ಗಾಂಭೀರ್ಯದೊಂದಿಗೆ ನೀಡಲಾಗುತ್ತಿರುವ ಕೊನೆ ಸಂದೇಶ. ನನ್ನ ಈ ಮಾತಿಗೆ ಎಲ್ಲರೂ ಕಿವಿಗೊಡುವರೆಂಬ ವಿಶ್ವಾಸ ನನಗಿದೆ. ಹೋಗು ನನ್ನ ಈ ಪರಮ ವಿಶ್ವಾಸದ ಸಂದೇಶವನ್ನು ಅವರಿಗೆ ತಿಳಿಸು. ಹೋಗು ಈ ಸಂದೇಶವನ್ನು ಅವರಿಗೆ ಮುಟ್ಟಿಸು. ಹೋಗು ಈ ಸಂದೇಶವನ್ನು ಅವರಿಗೆ ತಲುಪಿಸು.
ಪುಸ್ತಕ :ಅಂಬೇಡ್ಕರ್ ಸ್ಮೃತಿ-ಸಂಸ್ಕೃ ತಿ
ಇಂಗ್ಲಿಷ್: ನಾನಕ್ ಚಂದ್ ರತ್ತು
ಕನ್ನಡಕ್ಕೆ: ರಾಹು
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಭಾರತದ ಜನಸಂಖ್ಯೆ ವರವೋ..? ಶಾಪವೋ..?

- ಅಂಬಿಕಾ. ಕೆ
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಬೆಂಗಳೂರು ವಿಶ್ವವಿದ್ಯಾಲಯ
ವಿಶ್ವ ಸಂಸ್ಥೆಯು ಪಾಪುಲೇಷನ್ ಫಂಡ್ ಮಾಡಿರುವ ಅಂದಾಜಿನ ಪ್ರಕಾರ ಭಾರತವು ಜಗತ್ತಿನ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ ಎನಿಸಿಕೊಂಡಿದೆ.
ದೇಶದ ಒಟ್ಟು ಜನಸಂಖ್ಯೆಯು 142.86 ಕೋಟಿಗೆ ಏರಿಕೆಯಾಗಿದ್ದು, ಚೀನಾ ಎರಡನೇ ಸ್ಥಾನಕ್ಕೆ ಇಳಿದಿದೆ, ಇಂತಹದೊಂದು ಹಿರಿಮೆಗೆ ಭಾರತವು ಪಾತ್ರವಾಗಲಿದೆ ಎಂಬುದರ ಅರಿವು ಹಿಂದೆಯೇ ಇತ್ತು. ಹೊಸ ಭಾರತದ ಜನಸಂಖ್ಯೆಯ ಸ್ವರೂಪವೇನು ಮತ್ತು ಯಾವ ವಯೋ ಮಾನದವರು ಎಷ್ಟಿದ್ದಾರೆ. ಆದಾಯ ಮಟ್ಟ ಹೇಗಿದೆ, ಆದಾಯ ಹಂಚಿಕೆ ಹೇಗಿದೆ ಎಂಬುದರ ಕುರಿತು ಕೂಡ ಚರ್ಚೆಗಳು ನಡೆಯುತ್ತಿವೆ. ಒಟ್ಟು ಜನಸಂಖ್ಯೆಯ ಜತೆಗೆ ಈ ಎಲ್ಲಾ ಅಂಶಗಳು ಕೂಡ ಸರ್ಕಾರದ ನೀತಿಗಳು ಮತ್ತು ಕಾರ್ಯಕ್ರಮ ರೂಪಿಸುವಿಕೆ ಮೇಲೆ ಪ್ರಭಾವ ಬೀರುತ್ತವೆ. ರಾಜಕೀಯ ಪಕ್ಷಗಳು ಮತ್ತು ಗುಂಪುಗಳು ರಾಜಕೀಯ ಹಾಗೂ ಸಾಮಾಜಿಕ ಸ್ಥಾನಗಳನ್ನು ನಿರ್ಧರಿಸುವಲ್ಲಿಯೂ ಈ ಅಂಶಗಳು ಪಾತ್ರವಹಿಸುತ್ತವೆ ಭಾರತದಲ್ಲಿ ಗರಿಷ್ಠ ಸಂಖ್ಯೆಯು ಯುವ ಜನರಿದ್ದಾರೆ.
ಹಾಗೆಯೇ ಮುಂದುವರೆಯಲಿದೆ 15 ರಿಂದ 24 ವರ್ಷದೊಳಗಿನವರ ಸಂಖ್ಯೆಯು 25.4 ಕೋಟಿ ಎಂದು ಅಂದಾಜಿಸಲಾಗಿದೆ ಇನ್ನು ದೀರ್ಘಕಾಲ ಭಾರತವು ಈ ಸ್ಥಿತಿ ಕಾಯ್ದುಕೊಳ್ಳಲಿದೆ ಎಂಬುದರಲ್ಲಿಯೂ ಅನುಮಾನ ಇಲ್ಲ ಜನಸಂಖ್ಯೆಯಲ್ಲಿ ಜಗತ್ತಿನಲ್ಲಿ ಮೊದಲ ಸ್ಥಾನಕ್ಕೆ ಏರುವುದು, ಗೌರವ ಏನು ಅಲ್ಲ ಬದಲಿಗೆ ಇದು ದೇಶಕ್ಕೆ ಹಲವು ಸವಾಲುಗಳನ್ನು ಹುಟ್ಟುತ್ತದೆ ಜತೆಗೆ ಅವಕಾಶಗಳ ಬಾಗಿಗಳನ್ನು ತೆರೆಯುತ್ತದೆ ಆದರೆ, ಜನರನ್ನು ಸಕಾಲಿಕವಾಗಿ ಮತ್ತು ಪರಿಣಾಮಕಾರಿಯಾಗಿ ಬಲಿಸಿಕೊಳ್ಳದೆ ಇದ್ದರೆ ಜನಸಂಖ್ಯೆಯೇ ಶಾಪವಾಗಿ ದೊಡ್ಡ ಸವಾಲಾಗಿ ಪರಿಣಮಿಸಬಹುದು. ದೇಶ ಪ್ರತಿ ವರ್ಷವೂ ಹೆಚ್ಚು ಹೆಚ್ಚು ಜನರಿಗೆ ಆಹಾರ ಬಟ್ಟೆ ಶಿಕ್ಷಣ ಆರೋಗ್ಯ ಸೇವೆ ಉದ್ಯೋಗಾವಕಾಶಗಳನ್ನು ಒದಗಿಸಬೇಕಾಗುತ್ತದೆ.
ಹೀಗೆ ಮುಂದುವರೆದರೆ ಉದ್ಯೋಗಾವಕಾಶಗಳು ದೊರೆಯದೆ ಜನರ ಜೀವನ ಮಟ್ಟ ಸುಧಾರಿಸಿಕೊಳ್ಳುವುದು ಕಷ್ಟವೇ ಸರಿ ಕೆಲಸ ಮಾಡುವ ವಯೋಮಾನದ ಜನರನ್ನು ಸಮಂಜಸವಾಗಿ ಬಳಸಿಕೊಂಡರೇ ಮಾತ್ರ ಜನಸಂಖ್ಯೆಯು ದೇಶದ ಅಭಿವೃದ್ಧಿಗೆ ಪೂರಕವಾಗಿ ಪರಿಣಮಿಸುತ್ತದೆ. ದೇಶದಲ್ಲಿ ದೊಡ್ಡ ಸಂಖ್ಯೆಯ ಜನರಿಗೆ ಈಗಲೂ ಮೂಲ ಸೌಲಭ್ಯಗಳನ್ನು ಒದಗಿಸಲು ಸಾಧ್ಯವಾಗಿಲ್ಲ ಆದ್ದರಿಂದ ಎಲ್ಲಾ ಕ್ಷೇತ್ರಗಳಲ್ಲಿಯೂ ಸಂಬಂಧಿಸಿದ ನೀತಿಗಳು ಮತ್ತು ಕಾರ್ಯತಂತ್ರ ಗಳಿಗೆ ಸಂಬಂಧಿಸಿದ ಪ್ರಯತ್ನಗಳನ್ನು ನಡೆಸದೇ ಇದ್ದರೆ ಜನಸಂಖ್ಯೆ ಹೆಚ್ಚಳದ ಲಾಭವು ದೊರೆಯದೆ ಹೋಗಬಹುದು ಇದರ ಪರಿಣಾಮವಾಗಿ ಲಾಭದ ಹೆಸರಿನಲ್ಲಿ ನಷ್ಟವೇ ಹೆಚ್ಚು ಅದುವೇ ಒಂದು ಹೊರೆಯುವಾಗಬಹುದು.
ಯುವ ಜನರಿಗೆ ಸೌಲಭ್ಯಗಳು ಮತ್ತು ಅವಕಾಶಗಳನ್ನು ಸೃಷ್ಟಿಸುವುದರ ಜೊತೆಗೆ ಹೆಚ್ಚುತ್ತಲೇ ಇರುವ ಹಿರಿಯ ನಾಗರಿಕರ ಹಾರೈಕೆಯು ವ್ಯವಸ್ಥೆ ಮಾಡಬೇಕಿದೆ ಅವಕಾಶಗಳನ್ನು ಸದುಪಯೋಗ ಮಾಡಿಕೊಳ್ಳುವುದು ಮತ್ತು ಸವಾಲುಗಳನ್ನು ಎದುರಿಸುವುದು ಭಾರತೀಯರ ಹೊರೆಗಾರಿಕೆ ದೇಶದ ಜನರ ಅಗತ್ಯಗಳನ್ನು ಪೂರೈಸಲು ವಿಫಲವಾದರೆ, ಸಾಮಾಜಿಕ ಸಂಘರ್ಷ ಮತ್ತು ರಾಜಕೀಯ ದೃಷ್ಟಿ ಉಂಟಾಗಿ ಅದು ಗಂಭೀರ ಪರಿಣಾಮಗಳಿಗೆ ಕಾರಣವಾಗಬಹುದು. ಮುಂದೆ ಜನಸಂಖ್ಯಾ ಸ್ಫೋಟವಾದರೂ ಆಶ್ಚರ್ಯ ಪಡಬೇಕಾಗಿಲ್ಲ ಈಗಿನ ಸನ್ನಿವೇಶದಲ್ಲಿ ದೊರಕುತ್ತಿರುವ ಸಂಪನ್ಮೂಲಗಳ ಗರಿಷ್ಠ ಬಳಕೆ ಮತ್ತು ಪರಿಣಾಮಕಾರಿ ಬಳಕೆ ಬಹಳ ಮಹತ್ವವಾಗಿದೆ.
ಮೀಸಲಾತಿ, ವಲಸೆ , ರಾಜಕೀಯ ಪ್ರಾತಿನಿಧ್ಯ ಸಂಪನ್ಮೂಲಗಳ ಹಂಚಿಕೆ ಮತ್ತು ಇದರ ವಿಚಾರಗಳು ಚರ್ಚೆಗೆ ಒಳಗಾಗುವ ಸಾಧ್ಯತೆ ಇದೆ ಸಮಾಜದ ಎಲ್ಲಾ ವರ್ಗಗಳನ್ನು ಸಮಾನವಾಗಿ ಒಳಗೊಳ್ಳುವ ಆರ್ಥಿಕ ಪ್ರಗತಿಯು ಸಾಧ್ಯವಾದರೆ ಜನಸಂಖ್ಯೆ ಏರಿಕೆ ಸವಾಲಾಗಿ ಪರಿಣಮಿಸಬಹುದು ಮಾನವ ಅಭಿವೃದ್ಧಿಯೇ ಅತ್ಯುತ್ತಮ ಕುಟುಂಬ ಕಲ್ಯಾಣ ಯೋಜನೆ ಇದರಿಂದ ಜನಸಂಖ್ಯೆಯ ಏರಿಕೆಯನ್ನು ನಿಯಂತ್ರಣದಲ್ಲಿ ಇರಿಸಿಕೊಳ್ಳಬಹುದು ಜನಸಂಖ್ಯೆ ಹೆಚ್ಚಳ ಯಾವುದೋ ಒಂದು ಸಮುದಾಯ ಕಾರಣ ಎಂದು ದೂಷಿಸುವ ಪ್ರವೃತ್ತಿಗೆ ಜ್ಞಾನದಾದ ಆಧಾರ ಇಲ್ಲದ ಪೂರ್ವಗ್ರಹ ಕಾರಣದಿಂದ ಮತ್ತು ಇದು ತಪ್ಪು ನಡವಳಿಕೆಯ ಜನಸಂಖ್ಯೆಗೆ ಸಂಬಂಧಿಸಿದ ಸವಾಲುಗಳನ್ನು ಉತ್ತಮವಾಗಿ ಮತ್ತು ಜಾಣ್ಮೆಯಿಂದ ನಿರ್ವಹಿಸಿದರೆ ಈ ಶತಮಾನವನ್ನು ಭಾರತದ ಶತಮಾನವನ್ನಾಗಿ ಪರಿವರ್ತಿಸುವ ಅವಕಾಶ ನಮ್ಮ ಮುಂದೆ ಇದೆ ಜನರೇ ನಮ್ಮ ದೇಶದ ಸಂಪನ್ಮೂಲವನ್ನಾಗಿ ಮಾರ್ಪಾಡು ಮಾಡಿಕೊಳ್ಳುವ ಅವಕಾಶ ನಮ್ಮ ನಿಮ್ಮೆಲ್ಲರ ಮೇಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಬಾಬಾ ಸಾಹೇಬ ಅಂಬೇಡ್ಕರರ ‘ಧ್ಯಾನ’ ಗಾಯನ ; ವಿನೂತನ

- ವೆನ್ನೆಲಾ ಕೆ.
ಎಂ.ಎ. ಪ್ರಥಮ ವರ್ಷದ ವಿದ್ಯಾರ್ಥಿನಿ,
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ,
ಬೆಂಗಳೂರು ವಿಶ್ವವಿದ್ಯಾಲಯ,ಬೆಂಗಳೂರು
ಇತ್ತೀಚೆಗೆ ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದ 132ನೇ ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ರವರ ಜನುಮ ನಿಮಿತ್ತವಾಗಿ “ಧಾನ್ಯ” ‘ಗಾಯನವು’ ವಿನೂತನವಾದ ಈ ಕಾರ್ಯಕ್ರಮವು 5 ಘಂಟೆ, 1ನಿಮಿಷ, 14 ಸೆಕೆಂಡ್ ಗೆ ಆರಂಭವಾಗಿದ್ದು ಅವಿಸ್ಮರಣೀಯವಾದ ದಿನ, ಇದೊಂದು ಭಾರತ ಇತಿಹಾಸದ ಪುಟದ ಚರಿತ್ರೆಯಲ್ಲೇ ಹೊಸ ದಾಖಲೆಯೂ ಅಂತ ಹೇಳಬಹುದು.
ಈ ಕಾರ್ಯಕ್ರಮವನ್ನು ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ವು ಇಡೀ ಭಾರತದಲ್ಲೇ ಯಾರು ಮಾಡಿರದ ಈ ವಿನೂತವಾದ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರು ನಗರದಲ್ಲಿರುವ ಗಾಂಧಿ ಭವನದ ಆವರಣದಲ್ಲಿ ‘ಅನನ್ಯ ಸಂಸ್ಥೆ’ ವತಿಯಿಂದ 132 ನೇ ‘ವಿಶ್ವದ ವೀರ ವಿದ್ಯಾರ್ಥಿ ಹುಟ್ಟಿದ ದಿನ’ ಹಾಗೂ ‘ರಾಷ್ಟ್ರದ ಸ್ಫೂರ್ತಿಯ ದಿನ’ ‘ಸರ್ವ ಸಮುದಾಯದ ಶಕ್ತಿಯ ದಿನ’ ಇದೊಂದು ನಮ್ಮೆಲ್ಲರ ಹಬ್ಬದ ದಿನ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಇಂತಹ ಮೇರು ಶಿಖರ ಟ್ಯಾಗ್ ಲೈನ್ ಗಳಿಂದ ಅದ್ಭುತವಾಗಿ
ಆಯೋಜಿಸಿದ ಕಾರ್ಯಕ್ರಮಕ್ಕೆ ರಾಜ್ಯ ಕಂಡ ಪ್ರಸಿದ್ಧ ಐಪಿಎಸ್ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು, ಸಿನಿಮಾ ಸೆಲೆಬ್ರಿಟಿಗಳು, ಸಮಸ್ತ ವಿದ್ಯಾರ್ಥಿ ಸಮೂಹ, ಸಾಮಾಜಿಕ ನ್ಯಾಯದ ವಿಚಾರಶೀಲರು, ಬರಹಗಾರರು, ಪತ್ರಕರ್ತರು ಇನ್ನೂ ಅನೇಕ ಮುಂತಾದವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಇದಕ್ಕೆ ಮುಖ್ಯ ಕಾರಣಕರ್ತರಾದ ಅನನ್ಯ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಶ್ರೀ ರಾಂಪುರ ರಾಜೇಶ್ ರವರ ನಿರ್ದೇಶನದಲ್ಲಿ ಇಂತಹ ಕಾರ್ಯಕ್ರಮ ಆಯೋಜಿಸಿದ್ದು ಹೆಮ್ಮೆಯ ವಿಷಯ.
ಇದರ ಹಿನ್ನೆಲೆ: ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ದಲ್ಲಿ ಅತ್ಯುತ್ತಮ ಹಾಗೂ ಅತ್ಯಂತ ತುಂಬಾ ಮನಸ್ಸಿನಿಂದಲ್ಲೇ ವಿಶೇಷವಾದ ಆಸಕ್ತಿಯನ್ನು ಅಂಬೇಡ್ಕರ್ ರವರು ಸಂಗೀತ ಪ್ರಿಯರು ಹಾಗೂ ಅಂಬೇಡ್ಕರ್ ರವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು. ಹಾಗೇಯೆ ಇವರಿಗೆ ಚಿತ್ರಕಲೆಯೂ ಸಹ ಒಲಿದಿತ್ತು ಎಂಬುದು ಗಮನಾರ್ಹ ಸಂಗತಿ. ಇಂತಹ ವಿಷಯವನ್ನು ಯಾರು ಸಹ ಬೆಳಕು ಚೆಲ್ಲುವ ಸಾಹಸಕ್ಕೆ ಕೈ ಹಾಕಿ ಇರಲಿಲ್ಲ. ಇದೊಂದು ಅನನ್ಯ ಸಂಸ್ಥೆ ವತಿಯಿಂದ ಇಂತಹ ಕಾರ್ಯಕ್ರಮ ನಡೆಸಿಕೊಟ್ಟಿದ್ದು ಐತಿಹಾಸಿಕ ಚರಿತ್ರೆಗೆ ಮುನ್ನುಡಿವಾಗಿದೆ.
ಅಂಬೇಡ್ಕರ್ ರವರಿಗೆ ತಮ್ಮ ಬಿಡುವಿನ ವೇಳೆಯಲ್ಲಿ ಅದ್ಭುತವಾದ ಒಬ್ಬ ಸಂಗೀತ ಪ್ರಿಯರಾಗಿದ್ದರು. ಇವರು ಸುಶ್ರಾವ್ಯವಾಗಿ ವಯಲಿನ್ ನುಡಿಸುತ್ತಿದ್ದರು ಹಾಗೂ ವಿಶೇಷವಾಗಿ ಚಿತ್ರಕಲೆ ಸಹ ಸರಳವಾಗಿ ಮಾಡುವ ಮೂಲಕ ತಮ್ಮ ಮನದಲ್ಲಿ ಆಸಕ್ತಿ ಹೊಂದಿದ್ದರು. ಇನ್ನು ಹಲವಾರು ವಿಷಯದಲ್ಲಿ ಅಂದರೆ ಅಂಬೇಡ್ಕರ್ ರವರಿಗೆ ವಿಶೇಷವಾದ ಇವುಗಳಲ್ಲಿ ಆಸಕ್ತಿ ಮತ್ತು ಅಭಿರುಚಿಯನ್ನು ಹೊಂದಿದ್ದರು ಎಂಬುದನ್ನು ಮನಗಂಡ ಅನನ್ಯ ಸಂಸ್ಥೆಯ ವತಿಯಿಂದ ಆಯೋಜಿಸಿದ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಅತ್ಯುತ್ತಮವಾಗಿ ಮೂಡಿಬಂದಿದೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ವಿಶೇಷವಾಗಿ ದಕ್ಷಿಣ ಭಾರತದ ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಚಿತ್ರ ಸಾಹಿತ್ಯಗಳು, ಅಂಬೇಡ್ಕರ್ ವಾದಿಗಳು ಮತ್ತು ಚಿತ್ರರಂಗದ ಬಹುಮುಖ ಪ್ರತಿಭೆ, ಮಹಾಗುರುಗಳಾದ ಡಾ. ಹಂಸಲೇಖ ರವರು ಹೊಸದಾಗಿ ಹಾಡನ್ನು ಬರೆದದ್ದು ತುಂಬಾ ಅವಿಸ್ಮರಣೀಯ ಅಂತ ಹೇಳಬಹುದು. ಇವರು ಇದೇ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರೊತ್ಸಾಹ ನೀಡಿದ್ದು, ಸರ್ವ ಸಮುದಾಯದಕ್ಕೆ ಹೊಸ ಶಕ್ತಿ ತುಂಬಿದ್ದು ಮೇರು ವ್ಯಕ್ತಿಯಾಗಿದ್ದಾರೆ.
ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮದಲ್ಲಿ ಮುಖ್ಯವಾದ ಅಂಶವೆಂದರೆ ಇದರಲ್ಲಿ ಒಟ್ಟು ನಾಲ್ಕು ಭಗವಾನ್ ಬುದ್ಧ, ಅಂಬೇಡ್ಕರ್, ಬಸವೇಶ್ವರ ಮುಂತಾದರವರನ್ನು ವಿಷಯಗಳನ್ನು ಪರಿಗಣಿಸಿ ಅಂಬೇಡ್ಕರ್ ಧ್ಯಾನ ಹಾಡುಗಳ ರಚಿಸಿವುದರಲ್ಲಿ ಪ್ರಮುಖವಾಗಿ ರಾಜ್ಯದ ಹೆಸರಾಂತ ಸಾಹಿತಿ, ಪ್ರಗತಿಪರ ಚಿಂತಕರು ಹಾಗೂ ಮಾಜಿ ಅಧ್ಯಕ್ಷರಾದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಬೆಂಗಳೂರಿನ ಪ್ರೊ.ಎಸ್.ಜಿ.ಸಿದ್ದರಾಮಯ್ಯನವರ
‘ಧೀ ಶಕ್ತಿಯೇ … ಜ್ಞಾನ ಪರ್ವತದ … ಧೀಮಂತ ಧೀಶಕ್ತಿಯೇ …
ಇಂತಹ ಸಾಲುಗಳನ್ನು, ಡಾ. ಕೈ.ವೈ.ನಾರಾಯಣಸ್ವಾಮಿರವರ ದೀಪಾ …. ಎಲ್ಲರೆದೆಯಲಿ … ಹಚ್ಚಿದ ದೀಪಾ .. ಭೂಪಾ … ಭೂಪಾ … ಭೀಮಾ ಭೂಪಾ .. ಬಾಬಾ .. ಸಾಹೇಬ್.. ಜೀವಸ್ವರವೇ … ಬಾಬಾ.. ಹಾಗೂ ರವಿ ಮರಿಯಪ್ಪರವರ ಹತ್ತು ಸಾವಿರ ವಯಲಿನನ್ನು … ವೀಣೆಗಳು ನೂರೆಂಟು … ಕೋಟಿ ಕೋಟಿ ಎದೆ ಸದ್ದಿನ ಡೊಳ್ಳು … ಸಂಯೋಜಿಸಿದರೇ .. ಸಂವಿಧಾನಾ … ಮತ್ತು ಚಿತ್ರ ಸಾಹಿತಿ, ಹೆಸರಾಂತ ಸಂಗೀತ ನಿರ್ದೇಶಕರು ಡಾ. ಹಂಸಲೇಖ ರವರು ನಿನ್ನ ಮೌನಾ … ದೀನ ಗಾನಾ… ನಿನ್ನ ಧ್ಯಾನಾ .. ಸಂವಿಧಾನಾ … ಈ ನಾಲ್ಕು ಅಂಬೇಡ್ಕರ್ ಧ್ಯಾನ ರಚನೆಗೆ ಇವರುಗಳ ಬರೆದಿರುವ ಅದ್ಭುತವಾದ ಅಂಬೇಡ್ಕರ್ ರವರ ಧ್ಯಾನ ಹಾಡುಗಳನ್ನು ನಮ್ಮ ಹಿಂದುಸ್ತಾನಿ ಸಂಗೀತ ಹಾಡುಗಳ ಮೂಲಕ ಕನ್ವರ್ಟ್ ಮಾಡುವ ಮೂಲಕ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಿತು.
ಹಾಗೆಯೇ ಅಂಬೇಡ್ಕರ್ ರವರ “ಧ್ಯಾನ” ‘ಗಾಯನ’ ಕಾರ್ಯಕ್ರಮವು ಬಹಳಷ್ಟು ಯಶಸ್ವಿಯಾಗಬೇಕಾದರೆ ಈ ಮೊದಲು ಪುಟ್ಟರಾಜ ಗವಾಯಿಗಳ ಆಪ್ತ ಶಿಷ್ಯರಲ್ಲಿ ಒಬ್ಬರಾದ ವಿದ್ವಾನ್ ಶ್ರೀ ಡಿ. ಕುಮಾರ್ ದಾಸ್ ಅವರ ವಿದ್ವತ್ ಶರೀರದಲ್ಲಿ ‘ಧ್ಯಾನ ಗಾಯನ’ ಹಾಗೂ ಇವರ ತಂಡದ ವತಿಯಿಂದ ನಡೆಸಿಕೊಟ್ಟ ಅದ್ಭತವಾದ ಅಂಬೇಡ್ಕರ್ ರವರ ಧ್ಯಾನವು ಹಿಂದುಸ್ತಾನಿ ಸಂಗೀತದ ಕನ್ವರ್ಟ್ ಮಾಡುವ ಮುಖಾಂತರ ಈ ಹಾಡುಗಳನ್ನು ಬಹಳ ಸೊಗಸಾಗಿ ಮೂಡಿಬಂದಿದ್ದು ಹೊಸ ದಾಖಲೆಗೆ ಸೇರ್ಪಡೆಯಾಗಿದೆ.
ಇನ್ನು ಮುಂಬರುವ ದಿನಗಳಲ್ಲಿ ಅದಷ್ಟು ಹಲವಾರು ವಿನೂತನವಾದ ಭಗವಾನ್ ಬುದ್ಧರ, ಬಸವೇಶ್ವರರ ಹಾಗೂ ವಿಶ್ವದ ವೀರ ವಿದ್ಯಾರ್ಥಿಯಾದ ಮೇರು ರಾಷ್ಟ್ರದ
ನಾಯಕರಾದ ಬಾಬಾಸಾಹೇಬ್ ಡಾ. ಬಿ.ಆರ್.ಅಂಬೇಡ್ಕರ್ ರವರ ಹಲವಾರು ಹಾಡುಗಳನ್ನು
ಅನನ್ಯ ಮಾಧ್ಯಮ ಮತ್ತು ಬೆಳ್ಳಿತೆರೆ ಸಂಸ್ಥೆಯ ವತಿಯಿಂದ ಆಯೋಜಿಸಿದರೆ ಇನ್ನುಷ್ಟು ಭಾರತದ ಇತಿಹಾಸದ ಪುಟಗಳಲ್ಲಿ ಮರೆತು ಹೋಗಿರುವ ಹಲವು ಬಗ್ಗೆ ದಾಖಲೆ ಇಲ್ಲದ ನೈಜ ಸಂಗತಿಗಳನ್ನು ಪುನಃ ಹೊಸ ದಾಖಲೆಗೆ ಉಪಯುಕ್ತವಾದ ವಿಶಿಷ್ಟವಾದ ಮೇರು ನಾಯಕನ
ಅಂಬೇಡ್ಕರ್ ರವರ ವಿಚಾರ ಧಾರೆಗಳು ತಾವು ಅನುಭವಿಸಿದ ನೋವು, ನಲಿವು, ಭಾರತದ ರಾಜ್ಯಾಂಗದ ಶಿಲ್ಪಿಯನ್ನು ಮುಂಬರುವ ದಿನಗಳಲ್ಲಿ ಹೊಸ ಪೀಳಿಗೆಯ ಪರಿಚಯಿಸುವ ಕೀರ್ತಿದಾಯಿಕವಾಗಲಿ ಮತ್ತು ಅದಷ್ಟು ಮುಂಬರುವ ದಿನಗಳಲ್ಲಿ ಅಂಬೇಡ್ಕರ್ ರವರ ಆಸಕ್ತಿದಾಯಕ ವಿಚಾರಗಳು ಹಾಗೂ ಸಂಗೀತದ ಬಗ್ಗೆ ಹಲವಾರು ಮಾಹಿತಿಗಳು ಸಮಸಮಸಮಾಜಕ್ಕೆ ತಲುಪುವ ವ್ಯವಸ್ಥೆಗೆ ಸಾಕ್ಷಿಯಾಗಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಬಹಿರಂಗ
ರಷ್ಯಾದಲ್ಲಿ ಓಂ – ಭರತಾಸ್- ರಾಮ – ರಾವಣ ಲಂಕೇಶ – ಮಾರೀಚ – ಸೀತ ನದಿಗಳು..!

- ಲಕ್ಷ್ಮೀಪತಿ ಕೋಲಾರ, ಸಂಶೋಧಕರು, ಸಂಸ್ಕೃತಿ ಚಿಂತಕರು, ಬೆಂಗಳೂರು
ಸ್ಲಾವ್ ಸಮುದಾಯದ ಲಿತುವೇನಿಯ, ಲಾತ್ವಿಯ, ಬೆಲಾರಸ್,ಉಕ್ರೇನ್ ಮತ್ತು ರಷಿಯಾದಂತಹ ದೇಶಗಳ ನದಿ,ನಗರಗಳು ಸಂಸ್ಕೃತ ಮೂಲದ ಹೆಸರುಗಳನ್ನೆ ಇಂದಿಗು ಉಳಿಸಿಕೊಂಡಿರುವುದು ಆ ಭಾಷೆ ಮತ್ತು ಸಂಬಂಧಿತ ಸಂಸ್ಕೃತಿಯೊಂದಿಗೆ ಅವು ಹಿಂದೊಮ್ಮೆ ಹೊಂದಿದ್ದ ಬಲವಾದ ನಂಟಿಗೆ ಸಾಕ್ಷಿಯಾಗಬಲ್ಲವು.
ಇದರೊಂದಿಗೆ ಉತ್ತರ ಭಾರತದ ಆರ್ಯ ವೈದಿಕರ ಭಾಷೆ ಸಂಸ್ಕೃತಿಯೊಂದಿಗೆ ಸ್ಲಾವ್ ಸಮುದಾಯಕ್ಕೆ ಎಷ್ಟು ನಿಕಟ ಸಂಬಂಧವಿತ್ತೆಂಬುದನ್ನು ಮತ್ತು ನಾಲ್ಕೈದು ಸಾವಿರ ವರ್ಷಗಳ ಹಿಂದೆ ಈ ಎಲ್ಲ ಆರ್ಯ ಸಮುದಾಯಗಳು ಒಟ್ಟಿಗೆ ಒಂದೆಡೆಯೇ ಕಳ್ಳುಬಳ್ಳಿಗಳಾಗಿ ಜೀವಿಸಿದ್ದರೆಂಬುದನ್ನ ಈ ಹಿನ್ನೆಲೆಯಲ್ಲಿ ನಾವು ಗ್ರಹಿಸಬಹುದಾಗಿದೆ.
ಅದರಲ್ಲು ವಿಶೇಷವಾಗಿ ಲಿತುವೇನಿಯ ಮತ್ತು ರಷಿಯಾದ ನದಿಗಳ ಹೆಸರುಗಳು ಎಷ್ಟು ಸಂಸ್ಕೃತಮಯವು (ಇಂಡೋ – ಯುರೋಪಿಯನ್ ಭಾಷಾಮೂಲದ) ಮತ್ತು ವೈದಿಕರ ಪುರಾಣ ಮೂಲದವು ಆಗಿವೆ ಎಂದರೆ, ನಂಬಲಿಕ್ಕು ಅಸಾಧ್ಯ ಎಂಬಂತಿವೆ. ಇದರರ್ಥ ಸ್ಲಾವ್ ಜನರು ವೈದಿಕರ ಪುರಾಣಗಳಿಂದ ಪ್ರೇರಿತಗೊಂಡಿದ್ದಾರೆ ಎಂಬುದಲ್ಲ.
ಬದಲಿಗೆ ವೈದಿಕರ ಇಂದಿನ ಪುರಾಣ – ಸಂಸ್ಕೃತಿ – ಭಾಷೆಗಳು ವೈದಿಕರಿಗೆ ಎಷ್ಟು ಸಂಬಂಧಿಸಿದ್ದೋ ಅದಕ್ಕು ಹೆಚ್ಚಿನದಾಗಿ ಸ್ಲಾವ್ ಸಮುದಾಯಕ್ಕೂ ಸಂಬಂಧಿಸಿದ್ದಾಗಿದ್ದವು. ಹಾಗೆ ನೋಡಿದರೆ ಬ್ರಹ್ಮ – ವೇದ ಮೂಲವು ಕೂಡ ಸ್ಲಾವ್ ಸಮುದಾಯದ ಉತ್ತರ ಧ್ರುವ ಪ್ರದೇಶಕ್ಕೆ ಹೋಗಿ ನಿಲ್ಲುತ್ತದೆ ಎಂಬುದು ಸೋಜಿಗವಾದರು ನಿರ್ವಿವಾದವಾಗಿ ಚಾರಿತ್ರಿಕ ಸತ್ಯವಾಗಿದೆ. 12 – 13 ನೇ ಶತಮಾನಗಳಲ್ಲಿ ಸ್ಲಾವ್ ಜನರು ಕ್ರೈಸ್ತರಾಗಿ ಪರಿವರ್ತಿತರಾಗುವವರೆಗು ಅವರು ಶತಾಂಶ ಮತ್ತು ಥೇಟ್ ಶ್ರೇಷ್ಟ ಆರ್ಯ ವೈದಿಕರೆ ಆಗಿದ್ದರು.
ರಷ್ಯ ಮತ್ತು ಲಿತುವೇನಿಯಾಗಳಲ್ಲಿ ಭರತಾಸ್, ಓಂ, ರಾಮ, ಸೀತ, ಲಂಕೇಶ, ರಾವಣ, ಮಾರೀಚ, ನೆಮುನ (ಯಮುನ), ಕಾಮ, ಯಂತ್ರ, ಶ್ವೇತೆ, ದ್ರವ, ಮೋಕ್ಷ, ಋಗ್ವೇದದ ದಾನವ ಮಾತೆ ದನು ನೆನಪಿನ ದನುಬೆ ಮುಂತಾದ ನದಿಗಳು ಮತ್ತು ನಾರದ (ಈಗ ನರೋದ್ನಯ ಎಂದಿದ್ದರು ಸ್ಥಳೀಯರು ನಾರದ ಬೆಟ್ಟ ಎಂದೇ ಕರೆಯುತ್ತಾರೆ) ಹೆಸರಿನ ಬೆಟ್ಟವು ಇವೆ ಎಂದರೆ ಯಾರೂ ಅಚ್ಚರಿಪಡುವಂತದ್ದೆ.
ಯಾರಿಗಾದರು ಈ ಸಂಗತಿಗಳಲ್ಲಿ ಅನುಮಾನ ಹುಟ್ಟುವುದು ಸಹಜವೆ. ಯಾಕೆಂದರೆ ಸ್ಲಾವ್ – ವೈದಿಕ ಆರ್ಯರ ಮೂಲ ಪ್ರದೇಶವೆ ಉತ್ತರ ದ್ರುವ ಪ್ರದೇಶವಾಗಿತ್ತು ಎಂಬ ಚರಿತ್ರೆಯನ್ನೇ ನಮ್ಮಿಂದ ಮರೆಮಾಚಲಾಗಿತ್ತು ಮತ್ತು ಅದು ಬಹುದೊಡ್ಡ ಸಾಂಸ್ಕೃತಿಕ ರಾಜಕಾರಣವೂ ಆಗಿತ್ತು. ಆದರೆ ತಿಲಕರು ತಮ್ಮ “Arctic Home In the Vedas” ಎಂಬ ಪುಸ್ತಕದಲ್ಲಿ ಉತ್ತರ ಭಾರತದ ವೈದಿಕ ಆರ್ಯರ ತವರು ನೆಲ ಉತ್ತರ ದ್ರುವ ಪ್ರದೇಶವೆ, ಅಂದರೆ ಇಂದಿನ ಲಿತುವೇನಿಯ, ಲಾತ್ವಿಯ, ಬೆಲಾರಸ್ ಪ್ರದೇಶಗಳೇ ಆಗಿದ್ದವು ಎಂದು ಸಮರ್ಥ ಸಾಕ್ಷಾಧಾರಗಳೊಂದಿಗೆ ನಿರೂಪಿಸಿದ್ದಾರೆ.
ರಷ್ಯಾದಲ್ಲಿ ಸಂಸ್ಕೃತ ಭಾಷಾಮೂಲದ ನೂರಾರು ನದಿಗಳಿವೆ. ಭಾರತದಲ್ಲಿ ಕೆಲವು ನದಿಗಳನ್ನ ಹೊರತುಪಡಿಸಿದರೆ ಆ ಪ್ರಮಾಣದ ವೈದಿಕ ಪುರಾಣ ಮೂಲದ ನದಿ ಹೆಸರುಗಳು ಈ ನೆಲದಲ್ಲಿ ಇಲ್ಲವೆಂಬುದು ಪ್ರಾಚೀನ ಕಾಲದಿಂದಲು ಆರ್ಯ ವೈದಿಕರು ಇಲ್ಲಿರಲಿಲ್ಲವೆಂಬುದನ್ನೇ ಸೂಚಿಸುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago
ಚನ್ನಗಿರಿ | ಅತಿಥಿ ಉಪನ್ಯಾಸಕರಿಂದ ಅನಿರ್ದಿಷ್ಟಾವಧಿ ಮುಷ್ಕರ ; ತಹಶೀಲ್ದಾರರಿಗೆ ಮನವಿ
-
ದಿನದ ಸುದ್ದಿ6 days ago
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
-
ದಿನದ ಸುದ್ದಿ2 days ago
ಭಾರತೀಯರೆಲ್ಲರ ಪವಿತ್ರಗ್ರಂಥ ಭಾರತದ ಸಂವಿಧಾನ : ಡಾ.ಕೆ.ಎ.ಓಬಳೇಶ್
-
ದಿನದ ಸುದ್ದಿ4 days ago
ಸರ್ಕಾರಕ್ಕೆ ಸೆಡ್ಡು ಹೊಡೆದ ದಾವಣಗೆರೆ ರೈತರು
-
ದಿನದ ಸುದ್ದಿ1 day ago
ಮಹಿಳೆಗೆ ಮೀಸಲಾತಿ ಬೇಡ, ಸಮಾನ ಪ್ರಾತಿನಿಧ್ಯ ಕೊಡಿ : ಡಾ.ಜ್ಯೋತಿ ಟಿ.ಬಿ