ದಿನದ ಸುದ್ದಿ
ಚುನಾವಣೆ ರವಾನಿಸಿದ ಪಾಠಗಳು: ಡಾ.ಎನ್.ಕೆ.ಪದ್ಮನಾಭ್
ಕರ್ನಾಟಕ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಸ್ತುತ ಮಾಧ್ಯಮಗಳ ಜವಾಬ್ದಾರಿತನ,ಹಾಗೂ ಇಂದಿನ ಪತ್ರಕರ್ತರ ಬದ್ಧತೆ ಕುರಿತು ಉಜಿರೆ ಎಸ್.ಡಿ.ಎಂ ಕಾಲೇಜಿನ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಪ್ರಾಧ್ಯಾಪಕ ಡಾ. ಎನ್. ಕೆ. ಪದ್ಮನಾಭ್ ಅವರ ಅನಿಸಿಕೆಗಳು.
- ಸುದ್ದಿ ಮಾಧ್ಯಮಗಳನ್ನು ಮುಗ್ಧವಾಗಿ ನಂಬಬಾರದು.ನಂಬುವ ಮುನ್ನ ಯೋಚಿಸಬೇಕು.
- ಸುದ್ದಿ ವಾಹಿನಿಗಳು ರಾಜಕೀಯ ಪಕ್ಷಗಳ ಹಣದ ಹಂಗಿನ ಅಮಲಿನಲ್ಲಿ ಮುಳುಗಿದಾಗ ನಾವು ಎಚ್ಚರವಾಗಿರಬೇಕು.
- ಮುಖಪುಟಗಳಲ್ಲಿ ಜಾಹಿರಾತುಗಳು ಬಂದಾಕ್ಷಣ ರಾಜಕೀಯ ಪಕ್ಷಗಳನ್ನು ಆರಾಧಿಸಬಾರದು.
- ಟಿವಿಯಲ್ಲಿ ಕಾಣಿಸಿಕೊಳ್ಳುವ ಆ್ಯಂಕರ್ ಗಳ ಬಾಲ್ಯಾವಸ್ಥೆಯ ಅಪ್ರಬುದ್ಧ ಮಾತುಗಳು ಮತ್ತು ಪ್ರಶ್ನೆಗಳ ಮೋಡಿಗೆ ಒಳಗಾಗಬಾರದು.
- ಸುದ್ದಿ, ಸಂಪಾದಕೀಯ ಮತ್ತಿತರ ಬರಹಗಳನ್ನು ವಿವೇಕದೊಂದಿಗೆ ಗಮನಿಸಬೇಕು.
- ಟಿವಿಯವರ ಆವೇಶಭರಿತ ಮಾತುಗಳಲ್ಲಿನ ಟೊಳ್ಳುತನವನ್ನು ತಕ್ಷಣವೇ ಪತ್ತೆ ಹಚ್ಚಬೇಕು.
- ಹಿಂದಿನ ಸಕಾರಾತ್ಮಕ ಮಾದರಿಗಳ ಬಗ್ಗೆ ತಿಳಿದುಕೊಂಡ, ಸಮಗ್ರ ಓದು ತಮ್ಮದಾಗಿಸಿಕೊಂಡವರ ವಿಶ್ಲೇಷಣೆಯ ನಿರೀಕ್ಷೆಯೊಂದಿಗಿರಬೇಕು.
- ಓದಿಕೊಳ್ಳದೇ, ತಿಳಿದುಕೊಳ್ಳದೇ ಬಾಯಿಗೆ ಬಂದಂತೆ ಒದರುವದು ಮಾಧ್ಯಮ ವೃತ್ತಿಪರ ಲಕ್ಷಣವಲ್ಲ ಎಂದು ಸ್ಪಷ್ಟಪಡಿಸಿಕೊಳ್ಳಬೇಕು.
- ಜನರ ಹೆಸರಲ್ಲಿ ಕೂಗುವ, ಚೀರುವ, ಜಗಳಕ್ಕೆಳೆಸುವ ವಿತಂಡವಾದಿಗಳು ಟಿವಿಯಲ್ಲಿ ಕಾಣಿಸಿಕೊಂಡಾಕ್ಷಣ ಚಾನಲ್ ಚೇಂಜ್ ಮಾಡಬೇಕು.
- ಪತ್ರಿಕೆಗಳ ಪುಟಗಳು ಅಧಿಕಾರ ರಾಜಕಾರಣದ ಹುನ್ನಾರಗಳಿಗೀಡಾಗಿ ಕಲುಷಿತಗೊಂಡಾಗ ಧಿಕ್ಕರಿಸುವ ವಿವೇಚನೆ ಪ್ರದರ್ಶಿಸಬೇಕು.
- ಚುನಾವಣೆಯ ಕಣ ಎಂದರೆ ಮನರಂಜನೆಯ ಅಖಾಡ ಅಲ್ಲ ಎಂಬುದನ್ನು ಮುಂದಿನ ಚುನಾವಣೆಗೆ ಮುನ್ನವೇಗೊತ್ತುಮಾಡಿಕೊಳ್ಳಬೇಕು.

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


