Connect with us

ದಿನದ ಸುದ್ದಿ

ಭವಿಷ್ಯನಿಧಿ 2ನೇ ಬಾರಿ ಮುಂಗಡ ಹಣ ಪಡೆಯಲು ಅವಕಾಶ

Published

on

ಸುದ್ದಿದಿನ,ದಾವಣಗೆರೆ: ಪ್ರಸ್ತುತ ಕೋವಿಡ್ 2ನೇ ಅಲೆಯ ಪರಿಸ್ಥಿತಿಯಲ್ಲಿ ಭವಿಷ್ಯನಿಧಿ ಸದಸ್ಯರಿಗೆ 2ನೇ ಬಾರಿ ಮುಂಗಡ ಹಣವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಅಗತ್ಯವಿರುವ ಭವಿಷ್ಯನಿಧಿ ಸದಸ್ಯರು ಇದರ ಪ್ರಯೋಜನ ಪಡೆಯಬಹುದಾಗಿದೆ.

ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯಲ್ಲಿ ಭವಿಷ್ಯನಿಧಿ ಸದಸ್ಯರ ಹಣಕಾಸಿನ ತೊಂದರೆಗಳನ್ನು ಕಡಿಮೆ ಮಾಡಲು, ಭವಿಷ್ಯನಿಧಿ ಸಂಸ್ಥೆಯು ಚಂದಾದಾರರಿಗೆ ಕೋವಿಡ್-19ರ ಅಡಿಯಲ್ಲಿ ವಿಶೇಷ ಮುಂಗಡ ಸೌಲಭ್ಯವನ್ನು ಒದಗಿಸಿತ್ತು. ಸಾಮಾಜಿಕ ಭದ್ರತೆ 2020ರ ಸಂಹಿತೆಯ ಸೆಕ್ಷನ್-142ನ್ನು ಮೇ 30 ರಿಂದ ಅನ್ವಯಗೊಳಿಸಲಾಗಿದ್ದು, ಸಂಹಿತೆಯ ನಿಬಂಧನೆಗಳನುಸಾರ ಫಲಾನುಭವಿಯ ಗುರುತನ್ನು ಸ್ಥಾಪಿಸಲು ಆಧಾರ್ ಸಂಖ್ಯೆ ಅವಶ್ಯಕವಾಗಿರುತ್ತದೆ.

ಇದನ್ನೂ ಓದಿ | ದಾವಣಗೆರೆ | ಲಾಕ್‌ಡೌನ್ ಅವಧಿಯಲ್ಲಿ ಅಕ್ರಮ ಮದ್ಯ ಮಾರಾಟ ತಡೆಗೆ ಕ್ರಮ ; 67 ಪ್ರಕರಣ ದಾಖಲು, 4.63 ಲಕ್ಷ ರೂ. ಮೌಲ್ಯದ ಅಕ್ರಮ ಮದ್ಯ, ವಾಹನ ವಶ

ಭವಿಷ್ಯನಿಧಿ ಸಂಸ್ಥೆಯು ಜೂ.1 ರಿಂದ ಇಸಿಆರ್ ಸಲ್ಲಿಸಲು ಸದಸ್ಯರ ಆಧಾರ್ ಅನ್ನು ಕಡ್ಡಾಯವಾಗಿ ಯುಎಎನ್ ಸಂಖ್ಯೆಯೊಂದಿಗೆ ಲಿಂಕ್ ಮಾಡಲು ಆದೇಶಿಸಲಾಗಿದ್ದು, ಎಲ್ಲಾ ಉದ್ಯೋಗದಾತರು ಜೂ.1 ರಿಂದ ಇಸಿಆರ್ ಫೈಲ್ ಮಾಡಲು ಭವಿಷ್ಯನಿಧಿ ಸದಸ್ಯರ ಆಧಾರ್ ಅನ್ನು ಯುಎಎನ್ ಸಂಖ್ಯೆಯೊಂದಿಗೆ ಜೋಡಿಸುವುದು ಕಡ್ಡಾಯವಾಗಿರುತ್ತದೆ ಎಂದು ಭವಿಷ್ಯನಿಧಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದಲ್ಲಿ ನಿಷೇಧ ; ತೆರವುಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ

Published

on

ಸುದ್ದಿದಿನಡೆಸ್ಕ್:ಕರ್ನಾಟಕದ ತೋತಾಪುರಿ ಮಾವಿನ ಹಣ್ಣುಗಳಿಗೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲಾಧಿಕಾರಿ ವಿಧಿಸಿರುವ ನಿಷೇಧ ಆದೇಶ ರದ್ದು ತೆರವುಗೊಳಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಪತ್ರ ಮೂಲಕ ಮನವಿ ಮಾಡಿದ್ದಾರೆ.

ಇದು ಮುಂದಿನ ದಿನಗಳಲ್ಲಿ ತರಕಾರಿಗಳು ಮತ್ತು ಇತರ ಕೃಷಿ ಸರಕುಗಳ ಅಂತಾರಾಜ್ಯ ಸಾಗಾಣೆಗೆ ಅಡ್ಡಿ ಉಂಟುಮಾಡುವ ಸಾಧ್ಯತೆಯಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಈ ನಿರ್ಬಂಧವು ಸಾವಿರಾರು ರೈತರ ಜೀವನ ಉಪಾಯದ ಮೇಲೆ ನೇರ ಪರಿಣಾಮ ಬೀರಲಿದೆ ಎಂದು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಐಎಎಸ್ – ಐಪಿಎಸ್ ಅಧಿಕಾರಿಗಳ ವರ್ಗಾವಣೆ ; ಆದೇಶ

Published

on

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರ ಇಂದು ಕೆಲವು ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಐಪಿಎಸ್ ಅಧಿಕಾರಿ ಡಿ. ರೂಪಾ ಅವರನ್ನು ಬೆಂಗಳೂರು ಮೆಟ್ರೋ ಪಾಲಿಟನ್ ಟಾಸ್ಕ್‌ಪೋರ್ಸ್ ಎಡಿಜಿಪಿ ಯಾಗಿ ವರ್ಗಾವಣೆ ಮಾಡಿದೆ.

ಕೆಎಸ್‌ಆರ್‌ಟಿಸಿ ಮಹಾನಿರ್ದೆಶಕರನ್ನಾಗಿ ಅಕ್ರಂ ಪಾಶಾ ಅವರನ್ನು ನೇಮಕ ಮಾಡಲಾಗಿದೆ. ಇದೇ ವೇಳೆ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಕಾರ್ಮಿಕ ಇಲಾಖೆಯ ಕಾರ್ಯದರ್ಶಿ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಂಗಳೂರು ನಗರ ಕಾರ್ಯಪಡೆಯ ಎಡಿಜಿಪಿಯಾಗಿ ನೇಮಕಗೊಂಡಿರುವ ಐಪಿಎಸ್‌ ಅಧಿಕಾರಿ ರೂಪಾ ಡಿ. ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಕಾಲ್ತುಳಿತ ಪ್ರಕರಣ ; ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಧ್ಯಪ್ರವೇಶಕ್ಕೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮನವಿ

Published

on

ಸುದ್ದಿದಿನಡೆಸ್ಕ್:ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣದ ಬಗ್ಗೆ ಮಧ್ಯಸ್ಥಿಕೆ ವಹಿಸುವಂತೆ ವಿರೋಧ ಪಕ್ಷದ ನಾಯಕ ಆರ್. ಅಶೋಕ, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಪತ್ರ ಬರೆದಿದ್ದಾರೆ. ಸಂತ್ರಸ್ಥರು ಮತ್ತು ಅವರ ಕುಟುಂಬಗಳಿಗೆ ಪಾರದರ್ಶಕತೆ ನ್ಯಾಯ ದೊರಕುವಂತಾಗಲು ತನಿಖೆಯ ಮೇಲ್ವಿಚಾರಣೆ ನಡೆಸುವಂತೆ ಒತ್ತಾಯಿಸಿದ್ದಾರೆ.

ಸಂತ್ರಸ್ಥರಿಗೆ ನ್ಯಾಯ ಒದಗಿಸುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ತಡೆಯುವುದು ಎಲ್ಲರ ಕರ್ತವ್ಯವಾಗಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ನಡುವೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ ಸಮಸ್ಯೆಗೆ ಒಳಗಾದ ಮಕ್ಕಳ ವಿವರವನ್ನು ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.

ಸಾರ್ವಜನಿಕ ದೂರು ಆಧರಿಸಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ ಈ ಬಗ್ಗೆ ಹೆಚ್ಚಿನ ನಿಖರ ಮಾಹಿತಿ ನೀಡುವಂತೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending