Connect with us

ಸಿನಿ ಸುದ್ದಿ

ಕೊಡಗು ಸಂತ್ರಸ್ತರಿಗೆ ನೆರವಾಗೋಣ: ಕ್ರೇಜಿಸ್ಟಾರ್ ರವಿಚಂದ್ರನ್

Published

on

ಸುದ್ದಿದಿನ ಡೆಸ್ಕ್: ಸಿನಿಮಾ ನಟರ ಅಭಿಮಾನಿಗಳ ಸಂಘಟನೆಗಳು ರಾಜ್ಯದಲ್ಲಿ ನೂರಾರಿವೆ. ಅವುಗಳು ಕೇವಲ ಸಿನಿಮಾ ಪ್ರಚಾರಕ್ಕೆ ಮಾತ್ರ ಸೀಮಿತವಾಗದೆ ಅತಿವೃಷ್ಠಿ ಅನಾವೃಷ್ಟಿ, ಬರಗಾಲದಿಂದ ತತ್ತರಿಸಿದ ಪ್ರದೇಶಗಳ ದತ್ತು ಪಡೆದು ಸೇವಾ ಕಾರ್ಯ ಮಾಡಬೇಕು ಎಂದು ಅಖಿಲ ಕರ್ನಾಟಕ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿಮಾನಿಗಳ ಸಂಘದ ರಾಜ್ಯ ಉಪಾಧ್ಯಕ್ಷ ಹಾಗೂ ದಾವಣಗೆರೆ ಜಿಲ್ಲಾಧ್ಯಕ್ಷ ಎಂ.ಮನು ಹೇಳಿದರು.

ಚಿತ್ರದುರ್ಗ ನಗರದ ದುರ್ಗದ ಸಿರಿ ಹೋಟೆಲ್‍ನಲ್ಲಿ ಹಮ್ಮಿಕೊಂಡಿದ್ದ ಅಖಿಲ ಕರ್ನಾಟಕ ಕ್ರೇಜಿಸ್ಟಾರ್ ಅಭಿಮಾನಿಗಳ ಸಂಘದ ಸಭೆಯಲ್ಲಿ ಮಾತನಾಡಿ ಕೊಡಗು ಜಿಲ್ಲೆ ಜಲಪ್ರಳಯಕ್ಕೆ ಸಿಲುಕಿದಾಗ ರವಿಚಂದ್ರನ್ ಅಭಿಮಾನಿಗಳು ತೆರಳಿ ಅವರಿಗೆ ಬೇಕಾದ ಮೂಲಸೌಲಭ್ಯಗಳನ್ನು ನೀಡಿದ್ದೆವು. ಅದು ನಮ್ಮ ಸಂಘಟನೆ ಹೆಮ್ಮೆ. ನಾವು ಕೇವಲ ಖುಷಿಯನ್ನಷ್ಟೇ ಅನುಭವಿಸದೆ ಕಷ್ಟದಲ್ಲಿರುವವರನ್ನು ಕೈ ಹಿಡಿಯಬೇಕಾದುದು ನಮ್ಮ ಕರ್ತವ್ಯ ಎಂದರು.

ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಒಂದೆಡೆ ಹಿರಿಯ ನಟರಾಗಿದ್ದರೇ ಇನ್ನೊಂದೆಡೆ ಸದಾ ಪರಿಸರ ಜಾಗೃತಿ ಮೂಡಿಸುವ ಆಲೋಚನೆ ಹೊಂದಿದ್ಧಾರೆ, ಪ್ರಾಣಿ ಪಕ್ಷಿಗಳ ಬಗ್ಗೆ ಪ್ರೀತಿ ಹೊಂದಿದ್ದು ಅವರ ಆಶಯದಂತೆ ನಾವು ನಡೆಯೋಣ. ನಮ್ಮ ಸಂಘಟನೆಗಳ ಮೂಲದ ಜನೋಪಯೋಗಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದು ಅದು ಸಾಮಾಜಿಕವಾಗಿ ಬೆಳೆಯಬೇಕು ಎಂದರು.

ಚಿತ್ರದುರ್ಗ ಜಿಲ್ಲಾಧ್ಯಕ್ಷ ಜೆ.ಎಸ್. ಶಂಭು ಮಾತನಾಡಿ ಚಿತ್ರದುರ್ಗ ಕೋಟೆ ಐತಿಹಾಸಿಕವಾಗಿದ್ದು ಇಲ್ಲಿ ಅನೇಕ ಸಿನಿಮಾಗಳು ಚಿತ್ರೀಕರಣವಾಗಿವೆ ರವಿಚಂದ್ರನ್ ಸಾರಥ್ಯದಲ್ಲಿ ಪಡ್ಡೆಹುಲಿ ಸಿನಿಮಾ ಚಿತ್ರಿಕರಣವಾಗತ್ತಿದ್ದು ಮತ್ತು ಇದಕ್ಕಾಗಿ ಕೋಟೆಯನ್ನು ಕನ್ನಡದ ಬಾವುಟಗಳಿಂದ ಸಿಂಗಾರ ಮಾಡಿದ್ದು ಈ ಮೂಲಕ ಚಿತ್ರದುರ್ಗದ ಕೋಟೆ ನಾಡಿನ ಜನ ನೋಡುವಂತಾಗುತ್ತಿದೆ ಎಂದರು.

ಕರ್ನಾಟಕ ಯುವ ಪರಿಷತ್ತು ಅಧ್ಯಕ್ಷ ಮಾಲತೇಶ್ ಅರಸ್ ಮಾತನಾಡಿ ಇಂದು ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಇಲ್ಲದೆ ಬರ ಎದ್ದು ಕಾಣುತ್ತಿದೆ, ರೈತರು ಬೆಳೆ ಇಲ್ಲದೆ ಕಂಗಾಲಾಗಿದ್ದಾರೆ. 4 ತಾಲೂಕುಗಳನ್ನ ಮಾತ್ರ ಬರಕ್ಕೆ ಸೇರ್ಪಡೆ ಮಾಡಿದ್ದು ಇಂತಹ ವೇಳೆ ಜಿಲ್ಲೆಯ ಎಲ್ಲಾ ಸಂಘಟನೆಗಳು ಅದರಲ್ಲೂ ಸಿನಿಮಾ ನಟರ ಅಭಿಮಾನಿ ಸಂಘಟನೆಗಳು ಚಿತ್ರದುರ್ಗ ಜಿಲ್ಲೆಯನ್ನು ಪೂರ್ಣ ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಲು ಸರಕಾರದ ಮೇಲೆ ಒತ್ತಡ ಹಾಕ ಬೇಕಿದೆ ಎಂದರು.

ಈ ಸಂದರ್ಭದಲ್ಲಿ ಖ್ಯಾತನಟ ರವಿಚಂದ್ರನ್ ಅವರನ್ನು ಇದೇ ವೇಳೆ ಚಿತ್ರದುರ್ಗ ಜಿಲ್ಲಾ ಘಟಕದಿಂದ ಸನ್ಮಾನಿಸಲಾಯಿತು. ಪಡ್ಡೆಹುಲಿ ಸಿನಿಮಾ ನಿರ್ಮಾಪಕ ಕೆ.ಮಂಜು, ಚಿತ್ರದುರ್ಗ ಸದಸ್ಯರಾದ ಸಂದೀಪ್, ಕುಮಾರ್, ದಾವಣಗೆರೆ ಮಾಲಾ ಹನುಮಂತಪ್ಪ, ಮಂಜುಳ, ಗೀತಾ, ಕರ್ನಾಟಕ ಯುವ ಪರಿಷತ್ತು ಪಧಾದಿಕಾರಿಗಳು ಅಖಿಲ ಕರ್ನಾಟಕ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿಮಾನಿಗಳ ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಗವಹಿಸಿದ್ದರು.

ಪೊಟೋ: ಖ್ಯಾತನಟ ಕ್ರೇಜಿಸ್ಟಾರ್ ವಿ.ರವಿಚಂದ್ರನ್ ಅವರನ್ನು ಚಿತ್ರದುರ್ಗ ಜಿಲ್ಲಾ ಘಟಕದಿಂದ ಸನ್ಮಾನಿಸಲಾಯಿತು. ಪಡ್ಡೆಹುಲಿ ಸಿನಿಮಾ ನಿರ್ಮಾಪಕ ಕೆ.ಮಂಜು, ದಾವಣಗೆರೆ ಜಿಲ್ಲಾಧ್ಯಕ್ಷ ಮನು, ಚಿತ್ರದುರ್ಗ ಜಿಲ್ಲಾಧ್ಯಕ್ಷ ಜೆ.ಎಸ್. ಶಂಭು, ಕರ್ನಾಟಕ ಯುವ ಪರಿಷತ್ತು ಅಧ್ಯಕ್ಷ ಮಾಲತೇಶ್ ಅರಸ್ ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಶ್ರೀಲಂಕಾದಲ್ಲಿ ಕನ್ನಡ ಚಲನಚಿತ್ರೋತ್ಸವ

Published

on

ಸುದ್ದಿದಿನ, ಕೊಲೊಂಬೋ : ಶ್ರೀಲಂಕಾದ ರಾಜಧಾನಿ ಕೊಲೊಂಬೋದಲ್ಲಿನ ತರಂಗಿಣಿ ಸಿನಿಮಾ ಹಾಲ್‌ನಲ್ಲಿ ಏರ್ಪಡಿಸಿದ್ದ ಕನ್ನಡ ಚಲನಚಿತ್ರೋತ್ಸವಕ್ಕೆ ಮಂಗಳವಾರ ಚಾಲನೆ ದೊರೆಯಿತು.

ಶ್ರೀಲಂಕಾದಲ್ಲಿನ ಭಾರತೀಯ ರಾಯಭಾರಿ ಗೋಪಾಲ್ ಬಾಗ್ಳೆ, ಶ್ರೀಲಂಕಾದ ಬಹು ಮಾಧ್ಯಮ ಖಾತೆ ಸಚಿವ ಡಾ. ಬಂದೂಲ ಗುಣವರ್ಧನೆ ಹಾಗೂ ಸಂಸ್ಕೃತಿ ಖಾತೆ ಸಚೆವ ವಿಧುರವಿಕ್ರಮ ನಾಯಕ್ ಮುಂತಾದವರು ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ.

ಖ್ಯಾತ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ, ಕನ್ನಡ ಚಲನಚಿತ್ರರಂಗದ ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತರ ಮಾತನಾಡಿದ ಸಚಿವ ಡಾ.ಗುಣವರ್ಧನೆ, ಉಭಯ ದೇಶಗಳ ನಡುವೆ ಸಾಂಸ್ಕೃತಿಕ ವಿನಿಮಯ, ಚಲನಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ ಎಂದರು.

ಮನರಂಜನಾ ಮಾಧ್ಯಮವು ಅತ್ಯಂತ ಜನಪ್ರಿಯ ಮಾಧ್ಯಮವಾಗಿದ್ದು, ಪ್ರಾದೇಶಿಕ ಚಲಚಿನಚಿತ್ರಗಳು, ಅದರಲ್ಲಿಯೂ ಭಾರತದ ಚಲನಚಿತ್ರ ಸಂಸ್ಕೃತಿಯ ಜೊತೆಗೆ ದೇಶದ ಪರಂಪರೆ ಹಾಗೂ ಇತಿಹಾಸವನ್ನು ಪ್ರತಿಬಿಂಬಿಸುತ್ತಿದೆ. ಸಾಮಾಜಿಕ ವಲಯದಲ್ಲಿ ಪ್ರಾದೇಶಿಕ ಬಾಷೆಯಲ್ಲಿ ಬರುವ ಚಿತ್ರಗಳು, ಚಿತ್ರ ಪ್ರೇಮಿಗಳಿಗೆ ಅದರಲ್ಲಿಯೂ ವಿದ್ಯಾರ್ಥಿಗಳಿಗೆ, ಪಠ್ಯಕ್ರಮದ ಭಾಗವಾಗಿ ಹಲವು ಪ್ರದೇಶಗಳಲ್ಲಿ ಅಧ್ಯಯನಕ್ಕೂ ಅನುಕೂಲವಾಗಿದೆ. ಇತ್ತೀಚೆಗೆ ಶ್ರಿಲಂಕಾದ ವಿದ್ಯಾರ್ಥಿಗಳು ಇದರ ಅನುಭವವನ್ನು ಪಡೆದುಕೊಳ್ಳಲು ಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರ ಮಾರ್ಗದರ್ಶನ ಅನುಕೂಲವಾಗಿದೆ ಎಂದು ಅವರು ಹೇಳಿದರು.

ಶ್ರೀಲಂಕಾದ ವಿದ್ಯಾರ್ಥಿಗಳಿಗೆ ಪ್ರತಿ ವರ್ಷ 250 ರಿಂದ 300 ಚಲನಚಿತ್ರಗಳನ್ನು ವೀಕ್ಷಿಸಲು ಅವಕಾಶ ಕಲ್ಪಿಸಿದೆ. ಕಳೆದ ವರ್ಷ ನಾಲ್ಕನೇ ಬಹುದೊಡ್ಡ ಕಾರ್ಯಗಾರ ಆಯೋಜಿಸಲಾಗಿತ್ತು ಎಂದು ನಾಗತಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಶ್ರೀಲಂಕಾ ವಿದ್ಯಾರ್ಥಿಗಳಿಗೆ, ಚಲನಚಿತ್ರರಂಗದ, ತರಬೇತಿ, ವೀಕ್ಷಣೆ ಹಾಗೂ ನಿರ್ಮಾಣದ ಬಗ್ಗೆ ಹಲವು ರೀತಿ ಪ್ರಾತ್ಯಕ್ಷಿಕೆ ಮೂಲಕ ಕಾರ್ಯಕ್ರಮಗಳನ್ನು ಪ್ರತಿ ವರ್ಷ ಹಮ್ಮಿಕೊಳ್ಳಲಾಗುತ್ತಿದೆ ಎಂದರು. ಈ ವರ್ಷ ಅಮೆರಿಕ-ಅಮೆರಿಕ, ಇಷ್ಠಕಾಮ್ಯ, ಮಾತಾಡ್ ಮಾತಾಡ್ ಮಲ್ಲಿಗೆ ಹಾಗೂ ಕೊಟ್ರೇಶಿ ಕನಸು ಚಿತ್ರಗಳನ್ನು ಪ್ರದರ್ಶಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಏನಿದು ವಿಚಿತ್ರ | ನಟಿಯ ಡೈವೋರ್ಸ್ ಫೋಟೋಶೂಟ್..!

Published

on

ಸುದ್ದಿದಿನ ಡೆಸ್ಕ್ : ನಟಿ ಶಾಲಿನಿ ತಮಿಳು ಧಾರಾವಾಹಿಗಳಲ್ಲಿ ನಟಿಸಿ ಜನಮನಗೆದ್ದಿದ್ದಾರೆ. ಮೊದಲ ಮದುವೆಯ ವಿಚ್ಛೇದನದ ನಂತರ ಆಕೆ ಮೊಹಮ್ಮದ್‌ ಎಂಬುವವರನ್ನು ಮದುವೆಯಾಗಿದ್ದರು. ಆ ದಾಂಪತ್ಯದಲ್ಲಿ ಹಲವು ಸಮಸ್ಯೆಗಳಿಂದ ವಿಚ್ಛೇದನ ಪಡೆದರು. ಅದನ್ನು ಸಂಭ್ರಮಿಸಲು ಫೋಟೋಶೂಟ್‌ ಮಾಡಿ ಇನ್‌ಸ್ಟಾಗ್ರಾಂನಲ್ಲಿ ಹಾಕಿದ್ದಾರೆ.

ಮದುವೆಗೂ ಮುನ್ನ ತೆಗೆದಿರುವ ಫೋಟೋಶೂಟ್​​ಗಳು ಬಹಳಷ್ಟು ಬಂದಿವೆ. ಆದರೆ ವಿಚಿತ್ರ ರೀತಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಕ್ಕಾಗಿಯೇ ನಟಿ ಶಾಲಿನಿಫೋಟೋಗಳು ವೈರಲ್ ಆಗಿವೆ. ಡೈವೋರ್ಸ್ ಆಗಿದ್ದನ್ನೂ ಸಂಭ್ರಮಿಸುವ ಕಾರಣಕ್ಕಾಗಿ ಮಾಡಿದ ಈ ಫೋಟೋಶೂಟ್​ ಈಗ ಹಲವರ ಗಮನ ಸೆಳೆದಿದೆ.

ಜೀ ತಮಿಳು ಶೋ ಸೂಪರ್ ಮಾಮ್ ರಿಯಾಲಿಟಿ ಶೋನಲ್ಲಿ ಮಗಳೊಂದಿಗೆ ಶಾಲಿನಿ ಭಾಗವಹಿಸಿದ್ದರು. ಖುಷ್ಬು ಅಭಿನಯದ ಮೀರಾ ತಮಿಳು ಧಾರಾವಾಹಿಯಲ್ಲಿ ಕೂಡ ಆಕೆ ನಟಿಸಿದ್ದಾರೆ. ಈ ಧಾರಾವಾಹಿಯ ಮೂಲಕ ನಟಿ ಖುಷ್ಪು ಹಲವು ವರ್ಷಗಳ ನಂತರ ಕಿರುತೆರೆಯಲ್ಲಿ ನಟಿಸಿದ್ದಾರೆ.

ಮಹಿಳೆಯೊಬ್ಬರು ‘ಡೈವೋರ್ಸ್ಡ್’ ಎಂಬ ಫಲಕ ಹಿಡಿದ, ಪತಿಯೊಂದಿಗೆ ಇದ್ದ ಫೋಟೋದಲ್ಲಿನ ಪತಿಯ ಮುಖದ ಭಾಗವನ್ನು ಹರಿದು ಪ್ರತ್ಯೇಕಿಸಿದ, ಪತಿ-ಪತ್ನಿ ಇಬ್ಬರೂ ಜೊತೆಗಿದ್ದ ಫೋಟೋವನ್ನು ಚಪ್ಪಲಿ ಕಾಲಿನಲ್ಲಿ ತುಳಿದು ಹೊಸಕಿ ಹಾಕಿದಂಥ ಫೋಟೋಗಳು ಈ ಫೋಟೋಶೂಟ್​ನ ಪ್ರಮುಖ ಆಕರ್ಷಣೆ ಎನಿಸಿಕೊಂಡಿವೆ. ಅಲ್ಲದೆ, ‘ನನಗೆ 99 ಸಮಸ್ಯೆಗಳಿವೆ, ಆದರೆ ಪತಿ ಇಲ್ಲ!’ ಎಂಬ ಫಲಕವನ್ನು ಹಿಡಿದು ಸಂತಸದಿಂದ ಬೀಗುವಂಥ ಫೋಟೋ ಮೂಲಕ ‘ಪತಿ ಎಂಬ ಒಂದು ಸಮಸ್ಯೆಯನ್ನು ನಿವಾರಿಸಿಕೊಂಡಿದ್ದೇನೆ’ ಎಂಬ ಸಂದೇಶವನ್ನೂ ಈಕೆ ಸಾರಿದ್ದಾರೆ.

ಶಾಲಿನಿ ಇನ್ಸ್ಟಾ ಅಕೌಂಟ್ ಗಾಗಿ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ

https://instagram.com/shalu2626?igshid=YmMyMTA2M2Y=

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ದಿ ಕೇರಳ ಸ್ಟೋರಿ’ ವಿವಾದ| ಲವ್ ಜಿಹಾದ್ ಅನ್ನೋದು ಸುಳ್ಳು : ಕೇರಳ ಸಿಎಂ ಪಿಣರಾಯಿ

Published

on

ಸುದ್ದಿದಿನ, ಕೇರಳ : ‘ದಿ ಕೇರಳ ಸ್ಟೋರಿ’ ಸಿನೆಮಾ ಟ್ರೇಲರ್ ನೋಡಿ ಪ್ರತಿಕ್ರಿಯಿಸಿರುವ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಈ ಸಿನೆಮಾದಿಂದ ಕೇರಳಕ್ಕೆ ಕೆಟ್ಟ ಹೆಸರು ಬರಲಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಸಧ್ಯ ‘ದಿ ಕೇರಳ ಸ್ಟೋರಿ’ ಸಿನಿಮಾ ಟ್ರೇಲರ್ ಸೋಶಿಯಲ್ ಮೀಡಿಯಾದಲ್ಲಿ ಪರ- ವಿರೋಧ ಚರ್ಚೆಯನ್ನು ಹುಟ್ಟುಹಾಕಿದೆ. ಲವ್ ಜಿಹಾದ್ ವಿಚಾರವಿಟ್ಟುಕೊಂಡು ತಯಾರಾಗಿರುವ ಈ ಸಿನಿಮಾದಲ್ಲಿ ಐಸಿಸ್ ವಿಚಾರವನ್ನೂ ಹೇಳಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಚರ್ಚೆ ನಡೆಯುತ್ತಿದ್ದು, ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಚಿತ್ರದ ಟ್ರೇಲರ್ ಬಗ್ಗೆ ಅಸಮಾಧಾನಗೊಂಡಿದ್ದಾರೆ. ಕೇರಳದಲ್ಲಿ ಸಿನಿಮಾ ರಿಲೀಸ್‌ಗೆ ತಡೆ ಬಿದ್ದರೂ ಅಚ್ಚರಿ ಏನಿಲ್ಲ.

ಲವ್ ಜಿಹಾದ್ ಅನ್ನೋದು ಸುಳ್ಳು. ತನಿಖಾ ಸಂಸ್ಥೆ, ನ್ಯಾಯಾಲಯ ಮತ್ತು ಕೇಂದ್ರ ಗೃಹ ಸಚಿವಾಲಯದಿಂದ ಲವ್ ಜಿಹಾದ್ ಎಂಬ ವಿಚಾರ ತಿರಸ್ಕರಿಸಲ್ಪಟ್ಟಿದೆ. ಈಗ ಲವ್ ಜಿಹಾದ್ ವಿಚಾರನ್ನೇ ಚಿತ್ರದ ಥೀಮ್ ಮಾಡಿಕೊಂಡಿದ್ದಾರೆ. ರಾಜ್ಯದ ಬಗ್ಗೆ ಅಪಪ್ರಚಾರ ಮಾಡಲು ಸಂಘಪರಿವಾರ ಪ್ರಯತ್ನಿಸುತ್ತಿದೆ’ ಎಂದಿದ್ದಾರೆ ಪಿಣರಾಯಿ ವಿಜಯನ್.

ನೈಜ ಘಟನೆಗಳನ್ನು ಆಧಾರವಾಗಿಟ್ಟುಕೊಂಡು ತೆಗೆದ ಸಿನಿಮಾ ಇದು ಎಂದು ನಿರ್ದೇಶಕ ಸುದಿಪ್ಲೋ ಸೇನ್ ಹೇಳಿದ್ದಾರೆ. ಇರಾಕ್ ಮತ್ತು ಸಿರಿಯಾದಲ್ಲಿ ಉಗ್ರಗಾಮಿ ಸಂಘಟನೆಗಳಿಗೆ ಸೇರಿಕೊಂಡ ಕೇರಳದ 32,000 ಮಹಿಳೆಯರು ಕಣ್ಮರೆಯಾಗುವುದರ ಸುತ್ತ ಚಿತ್ರದ ಕಥೆ ಸಾಗುತ್ತದೆ. ಅದಾ ಶರ್ಮಾ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದು,ನಟಿ ಶ್ವೇತಾ ಮೆನನ್ ಕೂಡ ಮುಖ್ಯಪಾತ್ರದಲ್ಲಿ ನಟಿಸಿದ್ದಾರೆ.

‘ದಿ ಕೇರಳ ಸ್ಟೋರಿ’ ಸಿನಿಮಾ ಮೇ 5ರಂದು ರಿಲೀಸ್ ಆಗಲಿದೆ ಎಂದು ಚಿತ್ರತಂಡ ಹೇಳಿದೆ. ಸದ್ಯ ಸಿನಿಮಾ ರಿಲೀಸ್‌ಗೆ ಕೇರಳ ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿದೆ. ಹೀಗಾಗಿ, ಸಿನಿಮಾ ಮೇ5ಕ್ಕೆ ರಿಲೀಸ್ ಆಗಲಿದೆಯೇ ಅಥವಾ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.

ಟ್ರೇಲರ್

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending