ರಾಜಕೀಯ
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ’ಗೆ ಬಂಡಾಯ ನಾಯಕ ಏಕನಾಥ್ ಶಿಂಧೆ ಬಹಿರಂಗ ಪತ್ರ
ಸುದ್ದಿದಿನ,ಗುವಾಹಟಿ: ಮಹಾರಾಷ್ಟ್ರ ಸರ್ಕಾರದಲ್ಲಿ ಆದ ರಾಜಕೀಯ ಅಲ್ಲೋಲ ಕಲ್ಲೋಲ ನಡುವೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಬಹಿರಂಗ ಪತ್ರ ಬರೆದಿದ್ದಾರೆ. ಇದನ್ನು ಟ್ವೀಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಕೆಲವು ವರ್ಷಗಳಿಂದ ಸಿಎಂ ಅವರನ್ನು ಭೇಟಿಯಾಗಬೇಕಾದರೆ ಅಂಗಲಾಚುವ ಪರಿಸ್ಥಿತಿ ನಿರ್ಮಾಣವಾಗಿದೆ. ಅವರ ಸುತ್ತಮುತ್ತಲಿನ ಅಧಿಕಾರಿಗಳು ಹಾಗೂ ಕಾಂಗ್ರೆಸ್, ಎನ್.ಸಿ.ಪಿ ನಾಯಕರುಗಳು ವಿರೋಧ ಪಕ್ಷದ ನಾಯಕರುಗಳಂತೆ ನಮ್ಮನ್ನು ನಡೆಸಿಕೊಳ್ಳುತ್ತಿದ್ದರು ಎಂದು ಬಂಡಾಯ ನಾಯಕ ಕಿಡಿಕಾರಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243