ದಿನದ ಸುದ್ದಿ
ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಎಲ್ಐಸಿ ನೌಕರರ ಮತ್ತು ನಿವೃತ್ತ ನೌಕರರ ಹಿತರಕ್ಷಣಾ ವೇದಿಕೆ ಉದ್ಘಾಟನೆ
ಸುದ್ದಿದಿನ,ದಾವಣಗೆರೆ:ಹೋಟೆಲ್ ಓಷನ್ ಪಾರ್ಕ್ನ ಆನೆಕೊಂಡ ಹನುಮಂತಪ್ಪ ಕನ್ವೆನ್ಷನ್ ಹಾಲ್ನಲ್ಲಿ ಆಯೋಜಿಸಿದ್ದ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಎಲ್ಐಸಿ ನೌಕರರ ಮತ್ತು ನಿವೃತ್ತ ನೌಕರರ ಹಿತರಕ್ಷಣಾ ವೇದಿಕೆ ಉದ್ಘಾಟನಾ ಕಾರ್ಯಕ್ರಮವನ್ನು ವಾಲ್ಮೀಕಿ ಜಗದ್ಗುರು ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ ಉದ್ಘಾಟಿಸಿದರು.
ಸಮಾಜದ ಹಿತಕ್ಕಾಗಿ ಸಂಘಟನೆ ಅತ್ಯಗತ್ಯ, ಏಕೆಂದರೆ ಅದು ಸಮ ಸಮಾಜ ನಿರ್ಮಾಣ, ಆರ್ಥಿಕ ಸಬಲೀಕರಣ, ಅಭಿವೃದ್ಧಿ ಮತ್ತು ಸಮಸ್ಯೆಗಳ ಪರಿಹಾರಕ್ಕೆ ಸಹಕಾರಿಯಾಗುತ್ತದೆ. ಸಂಘಟನೆಯಿಂದ ಸಮುದಾಯ ತಮ್ಮ ಹಕ್ಕುಗಳನ್ನು ಪಡೆಯಲು ಶಕ್ತಿಯನ್ನು ನೀಡುತ್ತದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಜಗದ್ಗುರು ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಕರೆ ನೀಡಿದರು.
ನಗರದ ಪಿ.ಬಿ.ರಸ್ತೆಯ ಹೋಟೆಲ್ ಓಷನ್ ಪಾರ್ಕ್ನ ಆನೆಕೊಂಡ ಹನುಮಂತಪ್ಪ ಕನ್ವೆನ್ಷನ್ ಹಾಲ್ನಲ್ಲಿ ಶನಿವಾರ ಆಯೋಜಿಸಿದ್ದ ಅಖಿಲ ಕರ್ನಾಟಕ ಮಹರ್ಷಿ ವಾಲ್ಮೀಕಿ ನಾಯಕ ಎಲ್ಐಸಿ ನೌಕರರ ಮತ್ತು ನಿವೃತ್ತ ನೌಕರರ ಹಿತರಕ್ಷಣಾ ವೇದಿಕೆ ಉದ್ಘಾಟನಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ…
Bank Holidays: 2026ರ ಮೊದಲ ತಿಂಗಳಲ್ಲೇ ಸಾಲು ಸಾಲು ರಜೆ, ಕರ್ನಾಟಕದ ಬ್ಯಾಂಕ್ ಆಧಾರಿತ ರಜೆ ಎಷ್ಟು?
ಸಮಾನತೆ ಮತ್ತು ನ್ಯಾಯ ಆಧಾರಿತ ಸಮಾಜವನ್ನು ರೂಪಿಸಲು ಸಂಘಟಿತ ಹೋರಾಟ ಮುಖ್ಯ. ಸಮಾಜವನ್ನು ಆರ್ಥಿಕವಾಗಿ ಸದೃಢಗೊಳಿಸಲು, ಶಿಕ್ಷಣ ಮತ್ತು ಇತರ ಸೌಲಭ್ಯಗಳನ್ನು ಪಡೆಯಲು ಸಂಘಟನೆ ಸಹಕಾರಿ. ಈ ನಿಟ್ಟಿನಲ್ಲಿ ಎಲ್ಐಸಿ ನೌಕರರು ಸಂಘ ಸ್ಥಾಪಿಸುವ ಮೂಲಕ ಸಂಘಟಿತರಾಗುತ್ತಿರುವುದು ಸಂತಸದ ವಿಷಯವಾಗಿದೆ ಎಂದರು.
ದಾವಣಗೆರೆಯಲ್ಲಿ ಆರಂಭವಾಗಿರುವ ನಿಮ್ಮ ಸಂಘಟನೆ ಕೇವಲ ದಾವಣಗೆರೆಗೆ ಸೀಮಿತವಾಗದೆ ರಾಜ್ಯಾದ್ಯಂತ ಸಂಘಟನೆ ಆಗಬೇಕು. ಇಲ್ಲಿಂದಲೇ ನಿರ್ಣಯ ತೆಗೆದುಕೊಂಡು ರಾಜ್ಯದ ೩೦ ಜಿಲ್ಲೆಗಳಲ್ಲಿ ಸಭೆ, ಸಮಾರಂಭಗಳನ್ಬು ಅಯೋಜಿಸುವ ಮೂಲಕ ಸಮಾಜಮುಖಿ ಕಾರ್ಯಗಳಲ್ಲಿ ಸಂಘಟನೆಯನ್ನು ತೊಡಗಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು.
ನಿವೃತ್ತ ಪ್ರಾಂಶುಪಾಲ ಡಾ.ಎಂ.ಮಂಜಣ್ಣ ಮಾತನಾಡಿ, ಯಾವುದೇ ಸಂಘಟನೆ ನೊಂದವರಿಗೆ ದನಿಯಾಗಬೇಕು. ಸಂಘಟನೆ ಜೊತೆಗೆ ಮಕ್ಕಳಲ್ಲಿ ಜವಾಬ್ದಾರಿಗಳನ್ನು ಬೆಳೆಸಬೇಕೆಂದು ಸಲಹೆ ನೀಡಿದರು.
ನಟ, ನಿರ್ದೇಶಕ ಮತ್ತು ನಿರ್ಮಾಪಕ ರಾಧಾಕೃಷ್ಣ ಪಲ್ಲಕ್ಕಿ ಮಾತನಾಡಿ, ಯೋಚನೆ ಮತ್ತು ಉದ್ದೇಶಗಳು ಸರಿಯಾಗಿದ್ದರೆ, ಯಾವುದೇ ಒಂದು ವೇದಿಕೆ ಅತ್ಯಲ್ಪ ಕಾಲದಲ್ಲಿ ಅತ್ಯುತ್ತಮ ಸ್ಥಾನ ಗಳಿಸುತ್ತದೆ ಎಂಬುದಕ್ಕೆ ಈ ಸಂಘಟನೆ ಉದಾಹರಣೆಯಾಗಿದೆ. ಸಂಘಟನೆ ಮತ್ತು ಒಗ್ಗಟ್ಟು ಇಲ್ಲದಿದ್ದರೆ ಯಾವುದೇ ಸಮಾಜ ಮತ್ತು ಪುಣ್ಯ ಪುರಷರು ಇತಿಹಾಸದಲ್ಲಿ ಮಣ್ಣಾಗಿ ಹೋಗುತ್ತಾರೆ. ಪಾಳೆಗಾರರ ಆಳ್ವಿಕೆ ಕುರಿತ ಐತಿಹಾಸಿಕ ವಿಚಾರಗಳನ್ನು ತಿಳಿಸಿದರು.
ಸಂಘದ ಸಂಸ್ಥಾಪಕ ಅಧ್ಯಕ್ಷ ಬಿ.ಟಿ.ಬಸವರಾಜ ಅಧ್ಯಕ್ಷತೆ ವಹಿಸಿದ್ದರು. ಗೌರವಾಧ್ಯಕ್ಷ ರಾಮಚಂದ್ರಪ್ಪ, ಉಪಾಧ್ಯಕ್ಷ ಶಂಭು ನಾಯಕ, ಶ್ರೀನಿವಾಸ, ಶಿವಣ್ಣ, ವೆಂಕಟೇಶ್ ಎನ್.ಪೂಜಾರ್, ನಂದೀಶ್ ವಿ.ಬ್ಯಾಡಗಿ, ದಿವಾಕರ, ಸರಸ್ವತಿ, ಡಿ.ಬೊಮ್ಮಾಯಿ, ವೆಂಕಪ್ಪ ನಾಯಕ, ದೊರೆಸ್ವಾಮಿ ನಾಯಕ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಎಲ್ಐಸಿ ದಾವಣಗೆರೆ-೨ ಕಚೇರಿಯ ಅಭಿವೃದ್ಧಿ ಅಧಿಕಾರಿ ಸಿ.ರವಿ ಸೇರಿದಂತೆ ರಾಜ್ಯದಿಂದ ಆಗಮಿಸಿದ್ದ ವಿವಿಧ ಜಿಲ್ಲೆಗಳ ಎಲ್ಐಸಿ ಅಭಿವೃದ್ಧಿ ಅಧಿಕಾರಿಗಳನ್ನು ಸನ್ಮಾನಿಸಲಾಯಿತು. ಆರ್.ಗೌತಮಿ ಪ್ರಾರ್ಥಿಸಿದರು.
‘ಯಾವುದೇ ಸಮಾಜದ ಪ್ರಗತಿ ಮತ್ತು ಅಭಿವೃದ್ಧಿಗೆ ಸಂಘಟನೆ ಒಂದು ಮೂಲಾಧಾರ.ಸಂಘಟನೆಯಿಂದ ಸಮಾಜ ಬೆಳೆಯುತ್ತದೆ. ವ್ಯಕ್ತಿಗಳು ಹಾಗೂ ಇಲಾಖೆಗಳ ಪರಿಚಯ, ಸರ್ಕಾರದ ಯೋಜನೆಗಳು, ಸಮಾಜದಲ್ಲಿ ನಡೆಯುತ್ತಿರುವ ಕಾರ್ಯಕ್ರಮಗಳು, ಬೆಳವಣಿಗೆ ಮೊದಲಾದವುಗಳನ್ನು ಹಂಚಿಕೊಳ್ಳಬಹುದು. ಸಂಘಟನೆ ಸಮಾಜದ ಶಕ್ತಿಯಾಗಿರುತ್ತದೆ’.
| ಶ್ರೀಪ್ರಸನ್ನಾನಂದಪುರಿ ಸ್ವಾಮೀಜಿ, ಜಗದ್ಗುರು, ವಾಲ್ಮೀಕಿ ಗುರುಪೀಠ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮೆಗಾ ಉದ್ಯೋಗ ಮೇಳ ವಿದ್ಯಾಭ್ಯಾಸದೊಂದಿಗೆ ಕೌಶಲ್ಯತೆಗೂ ಆದ್ಯತೆ ನೀಡಿ : ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್
ಸುದ್ದಿದಿನ,ದಾವಣಗೆರೆ:ಮಕ್ಕಳಿಗೆ ಸರಿಯಾದ ವಿದ್ಯಾಭ್ಯಾಸದ ಜೊತೆಗೆ ಕೌಶಲ್ಯ ಶಿಕ್ಷಣಕ ಕಲಿಸಬೇಕು. ಯುವ ಜನತೆ ವಿದ್ಯಾರ್ಥಿ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಎಂದು ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ಸೋಮವಾರ(ಫೆ.23) ರಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಷ್ಟಿçÃಯ ಗ್ರಾಮೀಣ ಜೀವನೋಪಾಯ ಅಭಿಯಾನ, ಮಹಾನಗರಪಾಲಿಕೆ, ಜಿಲ್ಲಾ ಕೌಶಲ್ಯಾ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದ ಅವರು
ಯುವನಿಧಿ ಯೋಜನೆಯಡಿ ರಾಜ್ಯದಲ್ಲಿ 3,62,000 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, ಜಿಲ್ಲೆಯಲ್ಲಿ 10,404 ಪದವಿಧರರು, 226 ಡಿಪ್ಲೋಮ ಆದವರು ಯುವನಿಧಿಯ ಸೌಲಭ್ಯ ಪಡೆಯುತ್ತಿದ್ದಾರೆ. ಇದರಲ್ಲಿ 2326 ಯುವಕ, ಯುವತಿಯರಿಗೆ ಬೇರೆ ಬೇರೆ ಉದ್ಯೋಗ ಮೇಳದಲ್ಲಿ ಉದ್ಯೋಗ ದೊರತಿದೆ. 2024-25ನೇ ಸಾಲಿನಲ್ಲಿ ಸುಮಾರು 33 ಕೋಟಿ, 22 ಲಕ್ಷ ಹಣ ಸಂದಾಯವಾಗಿದೆ. ರಾಜ್ಯದಲ್ಲಿ ಕೌಶಲ್ಯಾಭಿವೃದ್ದಿ ಯೋಜನೆಯಡಿ 17,715 ಅಭ್ಯರ್ಥಿಗಳಿಗೆ ತರಬೇತಿ ನೀಡಿದ್ದು, 2376 ಅಭ್ಯರ್ಥಿಗಳಿಗೆ ಉದ್ಯೋಗ ದೊರತಿದೆ.
ಜೊತೆಗೆ ಪದವಿ ಉತ್ತೀರ್ಣ ವಿದ್ಯಾರ್ಥಿಗಳು ಸಿವಿಲ್ ಸರ್ವಿಸಸ್ ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ನೀಡಲಾಗುತ್ತಿದೆ. ಒಟ್ಟಾರೆ ಯುವಜನತೆಗೆ ಐಎಎಸ್, ಕೆಎಎಸ್ ಈ ರೀತಿಯ ಉದ್ಯೋಗಾವಕಾಶಗಳು ಸಿಗುವಂತಾಗಲು ಎಸ್ಎಸ್ ಕೇರ್ ಟ್ರಸ್ಟ್ ನಿಂದ ತರಬೇತಿ ನೀಡಲಾಗುತ್ತಿದೆ.
ಯುವಕರು ಸ್ಕೂಲ್, ಕಾಲೇಜ್ಗೆ ಬಂದಾಗ ಅಲ್ಲಿರುವಂತಹ ವಿದ್ಯಾರ್ಥಿಗಳು ಸ್ಪೋರ್ಟ್ಸ್, ಕಲ್ಚರಲ್ ಆಕ್ಟಿವಿಟೀಸ್, ಜೊತೆಗೆ ಆನ್ಲೈನ್ ಕೋರ್ಸ್ಗಳಲ್ಲಿ ಭಾಗವಹಿಸಬೇಕು.
ಯಾವುದೇ ಕಂಪನಿಯ ಲಿಖಿತ ಪರೀಕ್ಷೆಗೆ ಹಾಜರಾದಾಗ ನಿಮ್ಮಲ್ಲಿ ಏನು ಲೋಪದೋಷ ಹೇಳಿದ್ರು, ಯಾವ ರೀತಿ ನೀವು ಮತ್ತೊಮ್ಮೆ ನಿಮ್ಮ ತಪ್ಪನ್ನು ಸರಿ ಮಾಡಿಕೊಳ್ಳಬಹುದು ಎನ್ನುವುದನ್ನು ಅರಿತು ಸಂದರ್ಶನ ಎದುರಿಸಬೇಕೆಂದರು.
ಉದ್ಯೋಗ ಮೇಳದಲ್ಲಿ ನೀಡಿದ ಪ್ರಮಾಣ ಪತ್ರ ಪಡೆದು ಆಯ್ಕೆಯಾದ ಕಂಪನಿಗೆ ವರದಿ ಮಾಡಿಕೊಳ್ಳಲು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಮಾತನಾಡಿ ಎಲ್ಲರಿಗೂ ಸರ್ಕಾರವೇ ಉದ್ಯೋಗ ನೀಡಲು ಆಗುವುದಿಲ್ಲ. ಜನರು ಸ್ವಯಂ ಬದುಕು ಕಟ್ಟಿಕೊಂಡು, ಉದ್ಯೋಗದಾತರಾಗಿ ಹೊರಹೊಮ್ಮಬೇಕು. ಶಿಕ್ಷಣ, ಜ್ಞಾನದ ಜೊತೆ ಕೌಶಲ್ಯತೆ ರೂಢಿಸಿಕೊಳ್ಳಬೇಕು. ಒಂದು ದೇಶದ ಪ್ರಗತಿ ಹಾಗೂ ಅಭಿವದ್ಧಿಗೆ ಯುವ ಶಕ್ತಿ ಪ್ರಮುಖವಾಗಿದ್ದು, ಉದ್ಯೋಗ ಮೇಳದಿಂದ ಯುವಕರಿಗೆ ಹೆಚ್ಚು ಲಾಭ ದೊರೆಯಲಿದೆ. ಇದರಿಂದ ಬದುಕು ಕಟ್ಟಿಕೊಂಡು ಯಶಸ್ಸು ಗಳಿಸಲು ಶ್ರಮಿಸಬೇಕು ಎಂದರು. ಯುವಕರು ದೇಶದ ಸಂಪತ್ತು. ಪ್ರತಿಯೊಬ್ಬರೂ ಯಾವುದಾದರೂ ಒಂದು ವೃತ್ತಿ ಮಾಡಬೇಕು. ಇದರಿಂದ ನಿಮ್ಮ ಭವಿಷ್ಯ ಉತ್ತಮವಾಗುತ್ತದೆ ಎಂದರು.
ಉದ್ಯೋಗದಾತ ಕಂಪನಿಗಳು ಕಾಲೇಜು ಆವರಣದಲ್ಲೇ ಮೇಳ ಆಯೋಜಿಸಿ, ಅಭ್ಯರ್ಥಿಗಳ ಸಂದರ್ಶನ ನಡೆಸಿ, ಅರ್ಹರಿಗೆ ಉದ್ಯೋಗ ನೀಡುತ್ತಿವೆ. ಇದು ವಿದ್ಯಾವಂತ ಬಡ ನಿರುದ್ಯೋಗಿಗಳಿಗೆ ಅನುಕೂಲವಾಗಿದೆ ಎಂದರು.
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯುವಕರು ಕೇವಲ ಪದವಿ ಪಡೆದರೆ ಸಾಲದು, ತಾಂತ್ರಿಕ ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕು. ಬದ್ಧತೆ, ಸಮಯಪ್ರಜ್ಞೆ ಮತ್ತು ಆತ್ಮವಿಶ್ವಾಸವಿದ್ದರೆ ಯಾವುದೇ ಉದ್ಯೋಗವನ್ನು ಪಡೆಯಬಹುದು ಎಂದು ಯುವಜನತೆಗೆ ಕರೆ ನೀಡಿದರು. ತರಬೇತಿಯು ಹೆಚ್ಚು ಅಭ್ಯರ್ಥಿಗಳಿಗೆ ಮಾರ್ಗದರ್ಶನ ನೀಡುವಲ್ಲಿ ಯಶಸ್ವಿಯಾಗಿವೆ ಎಂದು ಅವರು ತಿಳಿಸಿದರು.
ಮೋನಿಕಾ, ಚಂದನಾ, ಸಿಂಚನಾ, ಸುಶೀಲಾ, ವಿನೂತ, ಸಾನಿಯಾ, ಶರತ್, ಅಶ್ವಿನಿ ಇನ್ನೂ ಕೆಲವು ಅಭ್ಯರ್ಥಿಗಳಿಗೆ ಸ್ಥಳದಲ್ಲೇ ಆದೇಶ ಪ್ರತಿಯನ್ನು ನೀಡಿದರು.
ಮೇಳದ ಪ್ರಮುಖ ಅಂಕಿ-ಅAಶಗಳು: ಭಾಗವಹಿಸಿದ ಕಂಪನಿಗಳು: 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು, 61 ವಿಶೇಷ ಚೇತನ ಅಭ್ಯರ್ಥಿಗಳು ಒಳಗೊಂಡು 1944 ಉದ್ಯೋಗಾಕಾಂಕ್ಷಿಗಳು, ಆಯ್ಕೆ ಹಂತ ತಲುಪಿದವರು: 421 ಅಭ್ಯರ್ಥಿಗಳು, ಸ್ಥಳದಲ್ಲೇ ನೇಮಕಾತಿ: 421 ಅಭ್ಯರ್ಥಿಗಳಿಗೆ ಅಂತಿಮ ನೇಮಕಾತಿ ಆದೇಶ ಪಡೆದಿರುತ್ತಾರೆ. ಹಾಗೂ 555 ಅಭ್ಯರ್ಥಿಗಳು ಶಾರ್ಟ್ ಲಿಸ್ಟ್ ಆಗಿ 2ನೇ ಹಂತದ ಸಂದರ್ಶನ ಅರ್ಹತೆ ಪಡೆದಿರುತ್ತಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ರಾವ್ ಪ್ರಾಸ್ತವಿಕ ನುಡಿಗಳಾನ್ನಾಡಿದರು.
ದೂಡಾ ಅಧ್ಯಕ್ಷರಾದ ದಿನೇಶ್.ಕೆ.ಶೆಟ್ಟಿ, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕೌಸರ್ ರೇಷ್ಮಾ, ಜಿಲ್ಲಾ ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಬಸವರಾಜ.ಟಿ.ಶಾಮನೂರು, ಉಪಾಧ್ಯಕ್ಷರಾದ ಮಂಜಣ್ಣ, ಪ್ರಾಂಶುಪಾಲರಾದ ಬಸವರಾಜ ತಹಶೀಲ್ದಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ, ಜಿ.ಪಂ ಮುಖ್ಯ ಯೋಜನಾಧಿಕಾರಿ ಮಲ್ಲನಾಯ್ಕ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ ಮಾಹೆಗೆ ಪಡಿತರ ಹಂಚಿಕೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ-26ರ ಮಾಹೆಗೆ ಅನ್ವಯವಾಗುವಂತೆ ವಿವಿಧ ವರ್ಗದ ಪಡಿತರ ಚೀಟಿದಾರರಿಗೆ ಪಡಿತರ ಹಂಚಿಕೆ ಮಾಡಲಾಗಿದೆ.
ಅಂತ್ಯೋದಯ ಕಾರ್ಡದಾರರಿಗೆ 1 ರಿಂದ 3 ಸದಸ್ಯರಿರುವ ಕಾರ್ಡಿಗೆ 35 ಕೆ.ಜಿ ಅಕ್ಕಿ, 4 ಸದಸ್ಯರಿರುವ ಪ್ರತಿ ಕಾರ್ಡಿಗೆ 40 ಕೆ.ಜಿ ಅಕ್ಕಿ, 5 ಸದಸ್ಯರಿರುವ ಪ್ರತಿ ಕಾರ್ಡಿಗೆ 50 ಕೆ.ಜಿ ಅಕ್ಕಿ, 6 ಸದಸ್ಯರಿರುವ ಪ್ರತಿ ಕಾರ್ಡಿಗೆ 60 ಕೆ.ಜಿ ಅಕ್ಕಿ, 7 ಸದಸ್ಯರಿರುವ ಪ್ರತಿ ಕಾರ್ಡಿಗೆ 70 ಕೆ.ಜಿ ಅಕ್ಕಿ, 8 ಸದಸ್ಯರಿರುವ ಪ್ರತಿ ಕಾರ್ಡಿಗೆ 80 ಕೆ.ಜಿ ಅಕ್ಕಿ, 9 ಸದಸ್ಯರಿರುವ ಪ್ರತಿ ಕಾರ್ಡಿಗೆ 90 ಕೆ.ಜಿ, 10 ಸದಸ್ಯರಿರುವ ಪ್ರತಿ ಕಾರ್ಡಿಗೆ 100 ಕೆ.ಜಿ ಅಕ್ಕಿಯನ್ನು ನೀಡಲಾಗುವುದು.
ಪೋರ್ಟಬಿಲಿಟಿ ಜಾರಿಯಲ್ಲಿರುವುದರಿಂದ ಯಾವುದೇ ಅಂತರ್ ರಾಜ್ಯ ಅಥವಾ ಜಿಲ್ಲೆಯ ಪಡಿತರ ಚೀಟಿಗಳಿಗೆ ಯಾವುದೇ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಪಡೆಯಲು ಅವಕಾಶವಿರುತ್ತದೆ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಜನರಿಗೆ ಗುಣಮಟ್ಟದ ಪೌಷ್ಟಿಕ ಆಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ : ಡಾ.ಹೆಚ್.ಕೃಷ್ಣ
ಸುದ್ದಿದಿನ,ದಾವಣಗೆರೆ:ಆಹಾರ ಪಡೆಯುವುದು ಜನರ ಹಕ್ಕು, ಅದನ್ನು ಅನುಷ್ಠಾನಗೊಳಿಸುವುದು ನಮ್ಮ, ನಿಮ್ಮೆಲ್ಲರ ಕರ್ತವ್ಯ. ಅದಕ್ಕೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ಸಹ ನಮ್ಮೆಲ್ಲರ ಜವಾಬ್ದಾರಿ. ಜನರಿಗೆ ಕೇವಲ ಆಹಾರ ಧಾನ್ಯಗಳನ್ನು ಒದಗಿಸುವುದು ಅಷ್ಟೇ ಸಾಕಾಗುವುದಿಲ್ಲ. ಜನರಿಗೆ ಸರಿಯಾದ ಪ್ರಮಾಣದ, ಗುಣಮಟ್ಟದ, ಸುರಕ್ಷಿತ ಮತ್ತು ಪೌಷ್ಟಿಕ ಆಹಾರವನ್ನು ಸಮುದಾಯದ ಸ್ಥಳೀಯ ಸಂಸ್ಕೃತಿಗೆ ಅನುಗುಣವಾಗಿ ಆಹಾರವನ್ನು ಒದಗಿಸಿದಾಗ ಮಾತ್ರ ಆಹಾರ ಭದ್ರತೆಯನ್ನು ಕೊಟ್ಟಿದ್ದೇವೆ ಎಂದು ಹೇಳಲು ಸಾಧ್ಯವಾಗುತ್ತದೆ ಎಂದು ಆಹಾರ ಭದ್ರತಾ ಆಯೋಗದ ಅಧ್ಯಕ್ಷರಾದ ಡಾ.ಹೆಚ್.ಕೃಷ್ಣ ಅವರು ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಅನುಷ್ಠಾನದ ಮೇಲ್ವಿಚಾರಣೆ ಮಾಡುವ ಜವಾಬ್ದಾರಿ ನಮ್ಮ ರಾಜ್ಯ ಆಹಾರ ಆಯೋಗಕ್ಕೆ ಇದೆ. ಈ ಜವಾಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸಬೇಕಾದರೆ, ಇಲ್ಲಿ ಹಾಜರಿರುವ ಎಲ್ಲಾ ಇಲಾಖೆಗಳು ಸಮನ್ವಯ ಮತ್ತು ಸಹಕಾರದ ಮನೋಭಾವದಿಂದ ಕಾರ್ಯನಿರ್ವಹಿಸಬೇಕು. ವಿವಿಧ ಇಲಾಖೆಗಳ ನಡುವೆ ಈ ರೀತಿಯ ಸಮನ್ವಯವನ್ನು ಸಾಧಿಸಲು ಆಹಾರ ಭದ್ರತಾ ಕಾಯ್ದೆಯ ಜಾರಿಯಲ್ಲಿ ಕುಂದುಕೊರತೆ ನಿವಾರಣಾ ಅಧಿಕಾರಿಗಳಾದ ಮಾನ್ಯ ಜಿಲ್ಲಾಧಿಕಾರಿಗಳು ಮತ್ತು ಅವರ ಕಚೇರಿ ಪ್ರಮುಖವಾದ ಪಾತ್ರವನ್ನು ವಹಿಸುತ್ತದೆ.
ಸುರಕ್ಷಿತ ಕುಡಿಯುವ ನೀರು, ಸ್ವಚ್ಛತೆ, ಆರೋಗ್ಯ ಸೇವೆಗಳ ಲಭ್ಯತೆ, ಗುಣಮಟ್ಟದ ಶಿಕ್ಷಣ ಹಾಗೂ ಉದ್ಯೋಗಾವಕಾಶಗಳು ಪ್ರಮುಖವಾದಂತಹ ವಿಷಯಗಳು. ಇದರ ಜೊತೆಗೆ ಸಾಮಾಜಿಕ, ದೈಹಿಕ ಹಾಗೂ ಆರ್ಥಿಕ ದುರ್ಬಲತೆಗಳ ಬಗ್ಗೆ ಸ್ಪಷ್ಟವಾದ ಗಮನಹರಿಸುವುದು ಅತ್ಯಂತ ಅವಶ್ಯಕ. ಲಿಂಗ, ಜಾತಿ, ವರ್ಗ, ಉದ್ಯೋಗದ ಆಧಾರದ ಅಸಮಾನತೆಗಳು ಮತ್ತು ಬಡತನ ಈ ಸವಾಲುಗಳನ್ನು ಯಾವಾಗಲೂ ನಮ್ಮ ದೇಶವನ್ನ, ರಾಜ್ಯದಲ್ಲಿ ಇರುವಂತಹ ಸಮಸ್ಯೆಗಳು. ಆದ್ದರಿಂದ ರಾಜ್ಯದಲ್ಲಿ ಆಹಾರ ಅಭಾವ ಮತ್ತು ಅಪೌಷ್ಟಿಕತೆಯನ್ನು ನಿರ್ಮೂಲನೆಗೊಳಿಸಬೇಕಾದರೆ ನಾವು, ನೀವೆಲ್ಲರೂ ಒಟ್ಟಾಗಿ ಸೇರಿ ಕಾರ್ಯ ನಿರ್ವಹಿಸುವ ಅಗತ್ಯವಿದೆ ಎಂದು ತಿಳಿಸಿದರು.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013ರ ಮತ್ತೊಂದು ಪ್ರಮುಖ ಅಂಶವೆಂದರೆ ಜೀವನ ಚಕ್ರ ದೃಷ್ಟಿಕೋನ. ಗರ್ಭಧಾರಣೆಯಿಂದ ಆರಂಭಿಸಿ ಜನನ, ಬಾಲ್ಯ, ಯೌವ್ವನ, ಪ್ರೌಢಾವಸ್ಥೆ ಹಾಗೂ ವೃದ್ಧಾಪ್ಯದವರೆಗೆ ಮಾನವನ ಜೀವನದ ಎಲ್ಲಾ ಹಂತಗಳ ಅಗತ್ಯಗಳನ್ನು ಈ ಕಾಯ್ದೆ ಗಮನದಲ್ಲಿಟ್ಟುಕೊಂಡಿದೆ. ಒಂದು ಹಕ್ಕು ಆಧಾರಿತ ಕಾನೂನು. ಅಂದರೆ ಐ.ಸಿ.ಡಿ.ಎಸ್ (ICDS), ಅಂಗನವಾಡಿ, ಮಧ್ಯಾಹ್ನದ ಬಿಸಿಯೂಟ ಯೋಜನೆ, ಸಾರ್ವಜನಿಕ ವಿತರಣಾ ವ್ಯವಸ್ಥೆ, ಟಿ.ಪಿ.ಡಿ.ಎಸ್ (TPDS) ಮತ್ತು ಮಾತೃತ್ವದ ಹಕ್ಕುಗಳು. ಈ ನಾಲ್ಕು ಯೋಜನೆಗಳ ಮೂಲಕ ದೊರೆಯುವ ಸೇವೆಗಳು ಈಗ ಕಾನೂನಾತ್ಮಕವಾಗಿ ಬೇಡಿಕೆ ಇಡಬಹುದಾದ ಹಕ್ಕುಗಳಾಗಿವೆ. ಆದ್ದರಿಂದ ಅನುಷ್ಠಾನದಲ್ಲಿ ಜನರನ್ನು ಕೇಂದ್ರಬಿಂದುವಾಗಿ ಇಟ್ಟುಕೊಂಡು ವ್ಯವಸ್ಥೆಯನ್ನು ಜವಾಬ್ದಾರಿಯುತ, ಪಾರದರ್ಶಕ ಹಾಗೂ ಸಮಾನತೆಯ ತತ್ವದ ಮೇಲೆ ಕಾರ್ಯ ನಿರ್ವಹಿಸಬೇಕು, ಅನ್ನೋದು ನನ್ನ ನಂಬಿಕೆ ಎಂದರು.
ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, ಆಹಾರ ಸುರಕ್ಷತೆ ಹಾಗೂ ಅದರೊಂದಿಗೆ ಸಂಬಂಧಿಸಿದ ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವ ಅಪಾರ ಸಾಮರ್ಥ್ಯವನ್ನು ಹೊಂದಿದ್ದೇವೆ ಎಂದು ಭಾವಿಸಿದ್ದೇನೆ. ಎಲ್ಲರೂ ಒಟ್ಟಾಗಿ ಬದ್ಧತೆಯಿಂದ ಹಕ್ಕು ಆಧಾರಿತ ದೃಷ್ಟಿಕೋನದೊಂದಿಗೆ ಈ ಕಾಯ್ದೆಯನ್ನು ಅದರ ನಿಜವಾದ ಅರ್ಥದಲ್ಲಿ ಜಾರಿಗೆ ತಂದರೆ ಆಹಾರದ ಹಕ್ಕನ್ನು ಸಹಕಾರಗೊಳಿಸುವಲ್ಲಿ ಕರ್ನಾಟಕ ಮುಂಚೂಣಿ ರಾಜ್ಯವಾಗುವುದು. ಭಾರತದಲ್ಲಿ ಆಹಾರ ಭದ್ರತೆ, ಅದು ಹಕ್ಕು ಎಂಬ ತತ್ವದ ಮೇಲೆ ಆಧಾರಿತವಾಗಿದೆ. ಈ ಹಕ್ಕಿಗೆ ಕಾನೂನಾತ್ಮಕ ಬಲ ನೀಡಿದ ಮಹತ್ವದ ಕಾಯ್ದೆ ಈ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ,
ಕೇಂದ್ರ ಅಥವಾ ರಾಜ್ಯ ಸರ್ಕಾರದ ಯೋಜನೆಗಳು ಗ್ರಾಮ ಪಂಚಾಯತಿ ಮಟ್ಟದಲ್ಲಿ, ತಾಲೂಕು ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಸರಿಯಾಗಿ ಜಾರಿಗೆ ಬರಬೇಕು. ಅದಕ್ಕೆ ಅಧಿಕಾರಿಗಳು ಆಹಾರದ ಹಕ್ಕುಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು. ಅವರ ಸಮಸ್ಯೆಗಳನ್ನ ಕೇಳಬೇಕು. ದೂರುಗಳಿದ್ದರೆ ಅದನ್ನ ಸರಿಮಾಡಬೇಕು ಎಂದರು.
ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ಮಾತನಾಡಿ ತೂಕದಲ್ಲಿನ ಮೋಸವನ್ನು ತಡೆಯಲು ಮತ್ತು ಪಾರದರ್ಶಕತೆಯನ್ನು ತರಲು, ಅಂಗಡಿಗಳಲ್ಲಿ ‘ಜಿಯೋ ಫೆನ್ಸಿಂಗ್’ (Geo-fencing) ತಂತ್ರಜ್ಞಾನವನ್ನು ಅಳವಡಿಸುವುದು ಅವಶ್ಯಕ, ಇದು ಅಂಗಡಿಯ 10 ಮೀಟರ್ ಒಳಗೆ ಮಾತ್ರ ವ್ಯವಹಾರ ನಡೆಯುವಂತೆ ಮಾಡುತ್ತದೆ, ಈವರೆಗೆ ತೂಕದಲ್ಲಿ ವ್ಯತ್ಯಾಸ ಮತ್ತು ಇತರ ಅಕ್ರಮಗಳಿಗಾಗಿ ಸುಮಾರು 23 ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ನ್ಯಾಯಬೆಲೆ ಅಂಗಡಿಗಳನ್ನು ಅಧಿಕಾರಿಗಳ ತಂಡೊಂದಿಗೆ ಖುದ್ದಾಗಿ ಭೇಟಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ. ಒಟ್ಟಾರೆಯಾಗಿ, ನ್ಯಾಯಬೆಲೆ ಅಂಗಡಿಗಳಲ್ಲಿ ಪಾರದರ್ಶಕತೆಯನ್ನು ಕಾಪಾಡಿಕೊಳ್ಳುವುದು ಮತ್ತು ಬಡ ಜನರಿಗೆ ಸಿಗಬೇಕಾದ ಪಡಿತರ ಸರಿಯಾದ ತೂಕದಲ್ಲಿ ಸಿಗುವಂತೆ ಮಾಡುವುದು ಇದರ ಉದ್ದೇಶವಾಗಿದೆ ಎಂದು ಸಭೆಗೆ ತಿಳಿಸಿದರು.
ಆಹಾರ ಭದ್ರತಾ ಆಯೋಗದ ಸದಸ್ಯರಾದ ಲಿಂಗರಾಜ್ ಕೋಟೆ , ಸುಮಂತ್ ರಾವ್, ಮಾರುತಿ ದೊಡ್ಡಲಿಂಗಣ್ಣ, ಕೆ.ಎಸ್. ವಿಜಯಲಕ್ಷ್ಮಿ, ರೋಹಿಣಿ ಪ್ರಿಯಾ, ಸದಸ್ಯ ಕಾರ್ಯದರ್ಶಿ ಮತ್ತು ಅಪರ ನಿರ್ದೇಶಕರಾದ ಸುಜಾತಾ ಹೊಸಮನಿ , ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಧುಸೂಧನ್, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


