ದಿನದ ಸುದ್ದಿ
ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ
ಸುದ್ದಿದಿನ,ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ ಪತ್ರವನ್ನು ಸಲ್ಲಿಸಲು ಸೂಚಿಸಿದೆ.
ಸಂಬಂಧಪಟ್ಟ ಬ್ಯಾಂಕ್ ಮ್ಯಾನೇಜರ್ ಸಹಿ ಪಡೆದು ನಿಗದಿತ ದಾಖಲೆಗಳೊಂದಿಗೆ ಮಾರ್ಚ್ 31 ರೊಳಗೆ ಜಿಲ್ಲಾಡಳಿತ ಭವನ, ಕೊಠಡಿ ಸಂಖ್ಯೆ 27ರಲ್ಲಿನ ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಬೇಕೆಂದು ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-234849 ಗೆ ಸಂಪರ್ಕಿಸಬಹುದು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243