Connect with us

ಲೈಫ್ ಸ್ಟೈಲ್

ಬೇಸಿಗೆಯಲ್ಲಿ ಉಂಟಾಗುವ ಆರೋಗ್ಯ ಪರಿಣಾಮಗಳು

Published

on

ಬೇಸಿಗೆ ಬಂತೆಂದರೆ ಸಾಕು ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮನೆಯ ಅಥವಾ ಆಫೀಸ್ ಹೊರಗೆ ಕಾಲಿಡಲು ಮನಸಾಗುವುದಿಲ್ಲ. ಕಾರಣ ಇಷ್ಟೆ, ದೇಹವು ತನ್ನನ್ನು ತಾನಾಗಿಯೇ ಹೊರಗಿನ ಯಾವುದೇ ದುಷ್ಪರಿಣಾಮಿ ಶಕ್ತಿಗಳಿಂದ ರಕ್ಷಿಸಿಕೊಳ್ಳಲು ಬಯಸುತ್ತದೆ. ಇದು ದೇಹದ ಸ್ವ ರಕ್ಷಣಾ ಪರಿಕರಗಳಲ್ಲಿ ಒಂದು.

ಕೆಲವೊಮ್ಮೆ ತುರ್ತು ಪರಿಸ್ಥಿತಿಗಳಲ್ಲಿ ಎಂಥಾ ಉರಿಬಿಸಿಲೂ ಎನ್ನದೇ ಆಗಬೇಕಿರುವ ಕೆಲಸಕ್ಕೆ ಒತ್ತು ನೀಡಿ ಹೊರ ಹೋಗುತ್ತೇವೆ. ಆದರೆ ನಮ್ಮ ನಾಡಿನ ಬೆನ್ನೆಲುಬು ಆಗಿರವ ರೈತರು ಅದರಲ್ಲೂ ನೀರಾವರಿ ಹೊಂದಿರುವವರು ಇದ್ಯಾವ ಬಿಸಿಲಿಗೂ ಲೆಕ್ಕಿಸದೇ ಹೊಲಗಳಲ್ಲಿ ನಿತ್ಯ ಕೆಲಸ ಮಾಡುತ್ತಾರೆ. ಅವರಿಗೆ ನಮಸ್ಕರಿಸೋಣ. ಆದರೆ, ಬಿಸಿಲಲ್ಲಿ ಹೋದರೂ ಹೋಗದಿದ್ದರೂ ದೇಹದಲ್ಲಿ ಈ ಅವಧಿಯಲ್ಲಿ ಕೆಲವೊಂದು ಆರೋಗ್ಯ ಸಮಸ್ಯೆಗಳು ಉಲ್ಬಣಿಸುತ್ತವೆ. ಅವುಗಳಿಗೆ ಸ್ವಲ್ಪ ಮುಂಜಾಗ್ರತೆ ವಹಿಸಿದರೆ ಬೇಸಿಗೆ ಮುಗಿಯುವವರೆಗೂ ಯಾವುದೇ ಸಮಸ್ಯೆಯಿಲ್ಲದೇ ಮುಂದೆ ಸಾಗಬಹುದು.

1.ನಿರ್ಜಲೀಕರಣ 

ದೇಹದಲ್ಲಿನ ನೀರಿನಾಂಶ ನಮಗೆ ಗೊತ್ತಾಗುವಂತೆ ಮತ್ತು ಗೊತ್ತಾಗದೆಯೇ ಯಾವಾಗಲೂ ಹೊರಹೋಗುತ್ತಿರುತ್ತದೆ. ಅದರಲ್ಲೂ ಬೇಸಿಗೆಯಲ್ಲಿ ನೀರಿನಾಂಶವನ್ನು ಬೆವರು ಮತ್ತು ಉಸಿರಾಟಗಳಲ್ಲಿ ಹೊರಹಾಕುತ್ತೇವೆ. ಕಾರಣ ಹೊರಗಿನ ತಾಪಮಾನಕ್ಕೆ ತಕ್ಕಂತೆ ನಮ್ಮ ದೇಹದೊಳಗಿನ ತಾಪಮಾನವೂ ಹೆಚ್ಚುತ್ತದೆ. ಆಗ ಉಂಟಾಗುವುದೇ ನಿರ್ಜಲೀಕರಣ.

  • ನಿರ್ಜಲೀಕರಣದಿಂದ ಕಿಡ್ನಿಗಳಿಗೆ ಮುಖ್ಯವಾಗಿ ತೊಂದರೆಯಾಗಿ ದೇಹದೊಳಗಿನ ಕಲ್ಮಶಗಳನ್ನು ಹೊರಹಾಕಲಾಗುವುದಿಲ್ಲ.
  • ಕರುಳುಗಳಲ್ಲಿ ನೀರಿನಾಂಶ ಕಡಿಮೆಯಾಗಿ ಮಲವಿಸರ್ಜನೆಗೆ ತೊಂದರೆಯಾಗುತ್ತದೆ
    ತುಟಿ-ನಾಲಗೆ ಒಣಗಿ ಹೋಗುತ್ತವೆ
  • ಮಾಂಸಖಂಡಗಳ ಸೆಳೆತವುಂಟಾಗುತ್ತದೆ
  • ಚರ್ಮ ಸುಕ್ಕುಗಟ್ಟಲು ಶುರುವಾಗಿ ಕಾಂತಿ ಕಳೆದುಕೊಳ್ಳುತ್ತದೆ

2. ಶಾಖದ ಸ್ಟ್ರೋಕ್

  • ದೇಹದೊಳಗೆ ಶಾಖ ಹೆಚ್ಚಾಗಿ ಜೀವಕ್ಕೇ ಅಪಾಯ ತಂದೊಡ್ಡುವ ಪರಿಸ್ಥಿತಿಯೇ ಶಾಖದ ಸ್ಟ್ರೋಕ್.
  • ಇದರ ಪರಿಣಾಮ ಗಾಬರಿಗೊಳ್ಳುವುದು, ಉಸಿರಾಟ ತೊಂದರೆ, ಕ್ಷೀಣವಾದ ನಾಡಿಮಿಡಿತದಿಂದ ಮಿದುಳಿಗೆ ರಕ್ತಸಂಚಾರ ಅಗತ್ಯವಾಗಿ ಪೂರೈಕೆಯಾಗದೇ ಪ್ರಜ್ಞಾಹೀನ ಸ್ಥಿತಿಗೆ ತಲುಪಬಹುದು.

3. ಜೀರ್ಣಾಂಗವ್ಯೂಹದ ತೊಂದರೆಗಳು

  • ಪ್ರವಾಸಕ್ಕೆ ಹೋದಾಗ ಆಹಾರ ತುಂಬಾ ಹೊತ್ತು ಅತಿಯಾದ ಶಾಖಕ್ಕೆ ಒಳಗಾಗುವುದರಿಂದ ಆಹಾರ ಕೆಟ್ಟು ಹೋಗುತ್ತವೆ.
  • ಹೊರಗೆ ಮಾರುಕಟ್ಟೆಗಳಲ್ಲಿ ಮಾರುವ ಆಹಾರ ಪದಾರ್ಥಗಳು ಅಥವಾ ಮನೆಯಲ್ಲೇ ತಯಾರಿಸಿಟ್ಟ ಆಹಾರ ಪದಾರ್ಥಗಳು ಹೊರಗಿನ ಬಿಸಿಲಿನ ತಾಪಮಾನಕ್ಕೆ ತಮ್ಮ ಪೌಷ್ಟಿಕತೆಯನ್ನು ಕಳೆದುಕೊಳ್ಳುತ್ತವೆ.
  • ಅಂತಹ ಆಹಾರವನ್ನು ಸೇವಿಸುವುದರಿಂದ ಜೀರ್ಣಾಂಗವ್ಯೂಹದ ತೊಂದರೆಗಳು ಉಂಟಾಗುವ ಸಾಧ್ಯತೆಗಳಿರುತ್ತವೆ

4. ಕಣ್ಣುಗಳಿಗೆ ತೊಂದರೆ

ಸೂರ್ಯನ ಕಿರಣಗಳಲ್ಲಿ ಇರುವ ಅತಿನೇರಳೆ ಕಿರಣಗಳು ಕಣ್ಣೊಳಗಿನ ಕಾರ್ನಿಯಾ, ಲೆನ್ಸ್, ರೆಟಿನಾ, ಹೀಗೆ ಎಲ್ಲಾ ಭಾಗಗಳನ್ನೂ ಹಾನಿಯುಂಟು ಮಾಡುವ ಗುಣ ಹೊಂದಿದ್ದು, ಮುಂದೆ ಕಣ್ಣು ಕುರುಡು ಉಂಟಾಗಬಹುದು.

5. ಸನ್ ಬನ್ರ್ಸ್

ಅತಿ ಹೆಚ್ಚು ಕಾಲ ಬಿಸಿಲಲ್ಲಿ ಇರುವುದರಿಂದ ಕೆಲವೊಮ್ಮೆ ಚರ್ಮದ ಮೇಲೆ ಸೂರ್ಯನ ಕಿರಣಗಳಿಂದ ಹಾನಿಯುಂಟಾಗಬಹುದು. ಅದಕ್ಕೆ ಸನ್ ಬನ್ರ್ಸ್ ಎಂದು ಕರೆಯುತ್ತಾರೆ.
– ಹೆಚ್ಚಾಗಿ ಇದು ಸೂಕ್ಷ್ಮ ಚರ್ಮ ಮತ್ತು ಅತಿ ಬಿಳಿ ಚರ್ಮ ಹೊಂದಿರುವವರಿಗೆ ಉಂಟಾಗುತ್ತದೆ

6. ಚರ್ಮದ ಕ್ಯಾನ್ಸರ್

  • ಸನ್ ಬನ್ರ್ಸ್ ಉಂಟಾಗುವುದರ ಜೊತೆಗೆ ಚರ್ಮದೊಳಗಿನ ಕಣಗಳಲ್ಲಿನ ಡಿ ಎನ್ ಎ ದಲ್ಲಿ ವ್ಯತ್ಯಾಸ ಉಂಟಾಗಿ ಚರ್ಮದ ಕ್ಯಾನ್ಸರ್ ಗೂ ಅದು ನಾಂದಿಯಾಗಬಹುದು.
    ಇದು ಸಾಮಾನ್ಯವಾಗಿ 50 ವರ್ಷ ಗಳಿಗಿಂತ ಮೇಲ್ಪಟ್ಟವರಲ್ಲಿ ಕಾಣಿಸಿಕೊಳ್ಳುತ್ತದೆ.

7. ನೀರಿನಲ್ಲಿ ಮುಳುಗುವುದು

  • ಸಾಮಾನ್ಯವಾಗಿ ಬೇಸಿಗೆಯಲ್ಲಿ ಬಿಸಿಲಿನ ಧಗೆಯನ್ನು ತಾಳಲಾರದೆ ಹಳ್ಳಿಗಳಲ್ಲಿ ಊರಲ್ಲಿರುವ ಕೆರೆ ಅಥವಾ ನದಿಗಳಲ್ಲಿ ಈಜುವುದಕ್ಕಾಗಲೀ ಅಥವಾ ಸ್ನಾನ ಮಾಡುವುದಕ್ಕಾಗಲೀ ಹದಿಹರೆಯದ ಮಕ್ಕಳು ಹೊಗುವುದುಂಟು. ಇನ್ನು ಪಟ್ಟಣಗಳಲ್ಲಿ ಬಂದರೆ ಈಜು ಕೊಳಗಳಿಗೆ ಹೋಗುವುದುಂಟು.
  • ಆದರೆ ಆ ಸಂದರ್ಭಗಳಲ್ಲಿ ಹತೋಟಿ ನಮ್ಮ ಕೈಮೀರಿ ಹೋದರೆ ನೀರಿನ ಅವಘಡಗಳಿಂದ ಸಾವುಗಳು ಸಂಭವಿಸುವುದುಂಟು

8. ವೆಲ್ಡಿಂಗ್‍ನಿಂದ ಉಂಟಾಗುವ ಹಾನಿ

  • ವೆಲ್ಡಿಂಗ್ ಅಥವಾ ಬೇರೆ ಯಾವುದೇ ಬೆಂಕಿಯನ್ನು ಬಳಸಿಕೊಂಡು ನಡೆಸುವ ವೃತ್ತಿಗಳನ್ನು ಮಾಡುವವರು ಕಣ್ಣು, ಚರ್ಮಕ್ಕೆ ಬೇಸಿಗೆಯ ಧಗೆಯಲ್ಲಿ ಹಾನಿ ಮಾಡಿಕೊಳ್ಳುವ ಸಾಧ್ಯತೆಗಳು ಹೆಚ್ಚಿರುತ್ತವೆ.

ಮುಂಜಾಗ್ರತಾ ಕ್ರಮಗಳು

  • ಸಾಮಾನ್ಯವಾಗಿ ಯಾವ ಕಾಲಕ್ಕೂ ಅನ್ವಯವಾಗುವಂತೆ ದಿನಕ್ಕೆ 2.5 ರಿಂದ 3 ಲೀ ನೀರು ಕುಡಿಯಬೇಕಾಗಿರುತ್ತದೆ. ಆದರೆ ಬೇಸಿಗೆಯಲ್ಲಿ ನಿರ್ಜಲೀಕರಣದ ಪರಿಣಾಮ 3ಲೀ ಗೂ ಹೆಚ್ಚು ನೀರು ಕುಡಿಯುವುದು ಸೂಕ್ತ.
  • ಬಿಸಿಲಲ್ಲಿ ಮಾಡಬಹುದಾದ ಕೆಲಸಗಳು ನೆರಳಲ್ಲೂ ಮಾಡಬಹುದಾದರೆ ನೆರಳಲ್ಲೇ ಮಾಡುವುದು ಸೂಕ್ತ.
  • ಅತೀ ಶಾಖಕ್ಕೆ ತೆರೆದಿಟ್ಟ ಆಹಾರ ಪದಾರ್ಥಗಳನ್ನು ತಿನ್ನದಿರುವುದು ಸೂಕ್ತ.
  • ಹೊರಗೆ ಹೋಗುವಾಗ ಕಣ್ಣುಗಳಿಗೆ ತಂಪು ಕನ್ನಡಕಗಳನ್ನು ಬಳಕೆ ಮಾಡುವುದು.ಅದರಲ್ಲೂ ಅತಿನೇರಳೆ ಕಿರಣಗಳು ಹಾಯದ ಕನ್ನಡಕಗಳನ್ನು ಬಳಸಿದರೆ ಉತ್ತಮ.
  • ಚರ್ಮ ಹಾನಿಯನ್ನು ತಪ್ಪಿಸಲು ಸನ್‍ಸ್ಕ್ರೀನ್‍ಗಳನ್ನು ಬಳಸುವುದು.
  • ದೇಹದ ತಾಪಮಾನ ಈಗಾಗಲೇ ಹೆಚ್ಚಿರುವ ಸಂದರ್ಭಗಳಲ್ಲಿ ( ಉದಾ; ಜ್ವರ, ಇತ್ಯಾದಿ) ಬಿಸಿಲಿಗೆ ಹೋಗದಿರುವುದು.
  • ಪ್ರತಿದಿನ ಬೆಳಗ್ಗೆ ವ್ಯಾಯಾಮ ಅಥವಾ ಜಾಗಿಂಗ್ ಗೆ ಹೋಗುವವರು ಆದಷ್ಟು ಸೂರ್ಯ ಉದಯವಾಗುವ ಸಮಯದೊಳಗೆ P ಮನೆ ಸೇರುವುದು.
  • ವೆಲ್ಡಿಂಗ್ ಕೆಲಸ ಮಾಡುವವರು ಕಣ್ಣುಗಳಿಗೆ ದೃಷ್ಟಿ ಪರದೆಗಳನ್ನು ಬಳಸುವುದು.

 

ವಿಡಿಯೋ ಸುದ್ದಿ ನೋಡಲು ಸುದ್ದಿದಿನ Youtube channel ಗೆ subscribe ಆಗಿ:

Click to comment

Leave a Reply

Your email address will not be published. Required fields are marked *

ದಿನದ ಸುದ್ದಿ

Photo Gallery | ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025

Published

on

Photo Gallery: ಚನ್ನಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಜಾನಪದ ಉತ್ಸವ-2025'

ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ (ಮಾರ್ಚ್-22) ‘ಜಾನಪದ ಉತ್ಸವ – 2025″ ಅದ್ದೂರಿಯಾಗಿ ನಡೆಯಿತು.

ಜಾನಪದ ತಜ್ಞ, ಕುವೆಂಪು ವಿಶ್ವವಿದ್ಯಾಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ಬಸವರಾಜ ನೆಲ್ಲಿಸರ, ಅವರು ಉತ್ಸವಕ್ಕೆ ಚಾಲನೆ ನೀಡಿದರು.

ಎತ್ತಿನ ಬಂಡಿಯಲ್ಲಿ ಅಧ್ಯಾಪಕರು, ಅತಿಥಿಗಳ ಮೆರವಣಿಗೆ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ನೀರು ತುಂಬಿದ ಪೂರ್ಣ ಕುಂಭಗಳನ್ನು ಹೊತ್ತು ಅತಿಥಿಗಳನ್ನು ಸ್ವಾಗತಿಸಿದರು.
 

ಅಂದು ಕಾಲೇಜಿನಲ್ಲಿ ಹಬ್ಬದ ವಾತಾವರಣ ಮನೆ ಮಾಡಿತ್ತು. ವರ್ಷದಲ್ಲಿ ಬರುವ ಯುಗಾದಿ, ಸಂಕ್ರಾಂತಿ, ಶಿವರಾತ್ರಿ, ಕ್ರಿಸ್ ಮಸ್, ರಂಜಾನ್, ದಸರಾ, ಭೂಮಿ ಹುಣ್ಣಿಮೆ, ರಾಶಿ ಪೂಜೆ ಸೇರಿದಂತೆ, ಬಳೆಗಾರ, ಕಣಿಹೇಳುವ, ಚೌಕಾಬಾರಾ, ಗುರುಕುಲ, ಆಯುರ್ವೇದ, ಗೋ ಪೂಜೆ ಎಲ್ಲವೂ ಜಾನಪದ ಸಂಸ್ಕೃತಿಯನ್ನು ಪುನರ್ ನಿರ್ಮಾಣಮಾಡಿದ್ದವು.

ಉತ್ಸವದಲ್ಲಿ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು, ಪಂಚೆ, ಅಂಗಿ, ಕುರ್ತಾ, ಲಂಗಾದಾವಣಿ, ಸೀರೆ ಉಟ್ಟು ,ಬುರ್ಕಾ, ತೊಟ್ಟು ಸಡಗರ ಸಂಭ್ರಮದಿಂದ ಕುಣಿದಾಡಿದರು.

ರಾಮನವಮಿಯ ಬೆಲ್ಲದ ಪಾನಕ – ಕೋಸಂಬರಿ, ಕ್ರಿಸ್ಮಸ್ ನ ಕೇಕ್, ರಂಜಾನ್ ಹಬ್ಬದ ಇಪ್ತಾರ್ ಕೂಟದ ಫಲಾಹಾರ, ಗಣಪತಿ ಹಬ್ಬದ ಕಡುಬು, ಯುಗಾದಿಯ ಹೋಳಿಗೆ, ಭೂಮಿ‌ಪೂಜೆಯ ಪಾಯಸ ಹೀಗೆ ವಿವಿಧ ಬಗೆಯ ತಿಂಡಿತಿನಿಸುಗಳು 30 ಜಿಲ್ಲೆಗಳ ವಿಶೇಷ ಖಾಧ್ಯಗಳು ಹಬ್ಬದ ಸಡಗರವನ್ನು ಇಮ್ಮಡಿಗೊಳಿಸಿದವು.

 

ವಸ್ತು ಪ್ರದರ್ಶನ

 

ಸುಮಾರು ವರ್ಷಗಳ ಹಿಂದೆ ಬಳಕೆಯಲ್ಲಿದ್ದ ಬೀಸು ಕಲ್ಲು, ಒನಕೆ, ಸೌದೆ ಒಲೆ, ಕೊಡಲಿ, ಮಚ್ಚು, ಬರ್ಜಿ, ಚನ್ನೆಮಣೆ, ಕೀಲುಗೊಂಬೆ, ಪಾರಂಪರಿಕ ಔಷಧಿ, ಕುಡುಗೋಲು, ಬಂಡಿ,ನಾಣ್ಯಗಳು,ಸೇರು, ಒಳಕಲ್ಲು, ಶಹನಾಯಿ,ಮಜ್ಜಿಗೆಯ ಕಡೆಗೋಲು, ತಾಳ, ಹಾರ್ಮೊನಿಯಂ, ಗಂಡುಕೊಡಲಿ,ಶಾವಿಗೆ ಒತ್ತು,ಹುತ್ತದ ಮಾದರಿ,ವಿಭಿನ್ನ ಬಗೆಯ ರಂಗವಲ್ಲಿ, ವಿವಿಧ ಧಾನ್ಯದ ರಾಶಿ,ಕಳಸ, ದಸರಾ ಗೊಂಬೆಗಳು, ನವರಾತ್ರಿಯ ಮಾತೃದೇವತೆ, ಕುರಾನ್ ಪ್ರತಿ, ಜಾನಮಾಜ್,ಕ್ರಿಸ್ತನ ಜನನದ ಗೋದರಿ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಮಾದರಿ ಚಿತ್ರಗಳು ವಸ್ತುಪ್ರದರ್ಶನದಲ್ಲಿದ್ದವು.

 

ದೇಸೀ ಆಟಗಳು

 

ದೇಸೀ ಆಟಗಳಾದ ಹಗ್ಗ ಜಗ್ಗಾಟ, ಲಗೋರಿ, ಬುಗುರಿ, ಕುಂಟೋಬಿಲ್ಲೆ ಹಾಗೂ ಜನಪದ ನೃತ್ಯ-ಹಾಡು ಸ್ಪರ್ಧೆಗಳಲ್ಲಿ ವಿದ್ಯಾರ್ಥಿಗಳು ಸಂತಸದಿಂದ ಭಾಗವಹಿಸಿದರು.

ಉತ್ಸವದ ಅಧ್ಯಕ್ಷತೆಯನ್ನು ಪ್ರಾಂಶುಪಾಲ ಡಾ.ಬಿ.ಜಿ.ಅಮೃತೇಶ್ವರ ಅವರು ವಹಿಸಿಕೊಂಡಿದ್ದರು. ಹಾಗೂ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಪಕ ಹಾಗೂ ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಷ್ಮುಖಪ್ಪ ಕೆ.ಹೆಚ್, ಐಕ್ಯುಎಸಿ ಸಂಚಾಲಕ ಪ್ರೊ.ವಿಜಯ್ ಕುಮಾರ್, ಉತ್ಸವದ ಕ್ರೀಡೆಗಳ ಆಯೋಜಕ ಹಾಗೂ ದೈಹಿಕ ನಿರ್ದೇಶಕರಾದ ಕಲ್ಲೇಶಪ್ಪ ಎಸ್.ಜಿ ಹಾಗೂ ಕಾಲೇಜಿನ ಎಲ್ಲಾ ಅಧ್ಯಾಪಕರು ಹಾಗೂ ಬೋಧಕೇತರ ಸಿಬಂದಿಗಳು ಮತ್ತು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಭಾಗವಹಿಸಿದ್ದರು.

Janapada Utsava Channagiri Govt collage (24)
Continue Reading

ದಿನದ ಸುದ್ದಿ

ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಅಗತ್ಯ : ಪ್ರಾಚಾರ್ಯ ಎಂ.ನಾಸಿರುದ್ದೀನ್

Published

on

ಸುದ್ದಿದಿನ,ಚಿತ್ರದುರ್ಗ: ಜಗತ್ತಿನಲ್ಲಿ ಭೂಮಿಯ ಮೇಲೆ ಸಕಲ ಜೀವರಾಶಿಗಳು ಬದುಕಲು ಅವಕಾಶವಿದ್ದು ಪರಿಸರ ಸಂರಕ್ಷಣೆ ಮಾಡುವುದರ ಮೂಲಕ ಪಕ್ಷಿ ಸಂಕುಲ ಸಂರಕ್ಷಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಡಯಟ್ ಪ್ರಾಚಾರ್ಯ ಎಂ.ನಾಸಿರುದ್ದೀನ್ ಹೇಳಿದರು.

ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿ ಮಾತನಾಡಿದ ಅವರು ಪ್ರಸ್ತುತ ಸಂದರ್ಭದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದ್ದು ಪಕ್ಷಿಗಳಿಗೆ ನೀರು ಮತ್ತು ಆಹಾರವನ್ನು ಪೂರೈಕೆ ಮಾಡುವ ಮೂಲಕ ಪಕ್ಷಿಗಳ ಬಗ್ಗೆ ಕಾಳಜಿಯೊಂದಿಗೆ ಸಂರಕ್ಷಿಸುವ ಭಾವನೆ ಬೆಳೆಸಿಕೊಳ್ಳಬೇಕು ಎಂದರು. ನಮ್ಮ ಮನೆಗಳ ಮೇಲ್ಚಾವಣಿಯಲ್ಲಿ ನೀರು, ಆಹಾರ ವ್ಯವಸ್ಥೆ ಮಾಡುವುದರಿಂದ ಪಕ್ಷಿಗಳನ್ನು ಸಂರಕ್ಷಿಸಲು ಅನುಕೂಲವಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಉಪನ್ಯಾಸಕ ಆರ್.ನಾಗರಾಜು ಕಚೇರಿ ಸಿಬ್ಬಂದಿ ವರ್ಗದವರು ಇದ್ದರು.

ಫೋಟೋ: ನಗರದ ಡಯಟ್ ಆವರಣದಲ್ಲಿರುವ 50 ಕ್ಕೂ ಹೆಚ್ಚು ಮರಗಳಲ್ಲಿ ಪ್ರಾಚಾರ್ಯ ಎಂ.ನಾಸಿರುದ್ದೀನ್ ಪಕ್ಷಿಗಳಿಗೆ ಆಹಾರ, ನೀರು ಪೂರೈಕೆ ವ್ಯವಸ್ಥೆ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ಮತ್ತಿನ ಕುಣಿಕೆ

Published

on

  • ಗುರು ಸುಳ್ಯ

ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ

ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ

ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…

ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ

ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ

ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)

ಕವಿ : ಗುರು ಸುಳ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 hours ago

ಸಾಮಾಜಿಕ ಸುಧಾರಣೆಗೆ ಡಾ. ಬಾಬು ಜಗಜೀವನ್‍ರಾಂ ಕೊಡುಗೆ ಅಪಾರ : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ಸುದ್ದಿದಿನ,ದಾವಣಗೆರೆ:ಡಾ.ಬಾಬು ಜಗಜೀವನರಾಂ ಅವರು ತಮ್ಮ ಬದುಕಿನುದ್ದಕ್ಕೂ ಎಲ್ಲಾ ಕ್ಷೇತ್ರಗಳಿಗೆ ಅಪಾರ ಕೊಡುಗೆ ನೀಡಿದ ಮಹಾನ್ ನಾಯಕ ಎಂದು ಲೋಕಸಭಾ ಸದಸ್ಯರಾದ ಡಾ.ಪ್ರಭಾ ಮಲ್ಲಿಕಾರ್ಜುನ್ ಬಣ್ಣಿಸಿದರು. ಶನಿವಾರ (ಏ.5)...

ದಿನದ ಸುದ್ದಿ3 hours ago

ಮೇ11 ರಂದು ಗ್ರಾಮ ಪಂಚಾಯತಿ ಚುನಾವಣೆ

ಸುದ್ದಿದಿನಡೆಸ್ಕ್:ವಿವಿಧ ಕಾರಣಗಳಿಂದ ತೆರವಾಗಿರುವ, ರಾಜ್ಯದ 133 ತಾಲೂಕುಗಳ, 222 ಗ್ರಾಮ ಪಂಚಾಯಿತಿಗಳ, ೨೬೦ ಸದಸ್ಯ ಸ್ಥಾನಗಳಿಗೆ, ಮೇ 11 ರಂದು ಚುನಾವಣೆ ನಿಗದಿಯಾಗಿದೆ ಎಂದು, ರಾಜ್ಯ ಚುನಾವಣಾ...

ದಿನದ ಸುದ್ದಿ23 hours ago

ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿಕಲಚೇತನರ ಗ್ರಾಮೀಣ ಪುನರ್ವಸತಿ ಯೋಜನೆಯಡಿ ದಾವಣಗೆರೆ ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವಿ.ಆರ್.ಡಬ್ಲ್ಯೂ) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. 18 ರಿಂದ 45...

ದಿನದ ಸುದ್ದಿ24 hours ago

ಹಂಪಿ ವಿಶ್ವವಿದ್ಯಾಲಯದ 33 ನೇ ನುಡಿಹಬ್ಬ ; ನಾಡೋಜ ಗೌರವ ಪದವಿ ಪ್ರದಾನ

ವರದಿ: ಗಿರೀಶ್ ಕುಮಾರ್ ಗೌಡ, ಬಳ್ಳಾರಿ ಸುದ್ದಿದಿನ,ವಿಜಯನಗರ: ಹಂಪಿ ಕನ್ನಡ ವಿಶ್ವವಿದ್ಯಾಲಯದ 33 ನೇ ನುಡಿಹಬ್ಬ ಸಮಾರಂಭವು ಶುಕ್ರವಾರ ರಂದು ವಿವಿ ಆವರಣದ ನವರಂಗ ಬಯಲು ರಂಗಮಂದಿರದಲ್ಲಿ...

ದಿನದ ಸುದ್ದಿ24 hours ago

ದಾವಣಗೆರೆ | ನಾಳೆ ಡಾ.ಬಾಬು ಜಗಜೀವನ ರಾಂ 118ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಮಹಾನಗರಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ದಾವಣಗೆರೆ ಇವರುಗಳ ಸಂಯುಕ್ತಾಶ್ರಯದಲ್ಲಿ ಏಪ್ರಿಲ್ 5 ರಂದು ಬೆಳಿಗ್ಗೆ 11...

ದಿನದ ಸುದ್ದಿ2 days ago

ವಕ್ಫ್ ತಿದ್ದುಪಡಿ ಮಸೂದೆ ಮುಸ್ಲಿಂರ ಕಡೆಗಣನೆ, ಆಸ್ತಿ ಹಕ್ಕು ಕಸಿದುಕೊಳ್ಳುವ ಅಸ್ತ್ರ: ಸೈಯದ್ ಖಾಲಿದ್ ಅಹ್ಮದ್

ಸುದ್ದಿದಿನ,ದಾವಣಗೆರೆ: ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಿರುವ ಕೇಂದ್ರದ ಬಿಜೆಪಿ ನೇತೃತ್ವದ ಎನ್ ಡಿ ಎ ಸರ್ಕಾರವು ಈ ಮೂಲಕ ಮುಸ್ಲಿಮರನ್ನು ಕಡೆಗಣಿಸುವ, ವೈಯಕ್ತಿಕ ಕಾನೂನುಗಳು ಮತ್ತು ಆಸ್ತಿ...

ದಿನದ ಸುದ್ದಿ2 days ago

ದಾವಣಗೆರೆ ವಿ.ವಿ 12ನೇ ಘಟಿಕೋತ್ಸವ | ವಿಶ್ವವಿದ್ಯಾಲಯಗಳಲ್ಲಿ 2500 ಹುದ್ದೆಗಳು ಖಾಲಿ ಇವೆ : ಸಚಿವ ಡಾ.ಎಂ.ಸಿ. ಸುಧಾಕರ್

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿ ಜೀವನದ ಕನಸುಗಳನ್ನು ನನಸಾಗಿಸಲು ನಿರಂತರ ಪ್ರಯತ್ನ ಬಹಳ ಮುಖ್ಯವಾಗಿರುತ್ತದೆ. ಶಿಕ್ಷಣವು ವ್ಯಕ್ತಿಯ ಜೀವನದಲ್ಲಿ ಹೊಸ ಆಲೋಚನೆಗಳು, ಜ್ಞಾನ ಮತ್ತು ಸಾಧ್ಯತೆಗಳನ್ನು ತುಂಬುವ ನಿರಂತರ ಪ್ರಯಾಣವಾಗಿದೆ. ದಾವಣಗೆರೆ...

ದಿನದ ಸುದ್ದಿ3 days ago

ಮುಖ್ಯಮಂತ್ರಿ ಪದಕ ; ಮುಖ್ಯ ಪೊಲೀಸ್ ಪೇದೆ ಕೊಟ್ರೇಶ್ ಅಯ್ಕೆ

ಸುದ್ದಿದಿನ,ಕೊಟ್ಟೂರು:ತಾಲೂಕಿನ ಬೋರನಹಳ್ಳಿ ಗ್ರಾಮ ಮುಖ್ಯಪೊಲೀಸ್ ಪೇದೆ ಕೊಟ್ರೇಶ್ ಚಿಮ್ಮನಹಳ್ಳಿ ಅವರಿಗೆ 2024 ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರದಾನ ಮಾಡಲು 02.04.2025 ರಂದು ನಿರ್ದೇಶಕರು ಆದೇಶ ಹೊರಡಿಸಿದ್ದಾರೆ....

ದಿನದ ಸುದ್ದಿ3 days ago

ದಾವಣಗೆರೆ | ವೃತ್ತಿಪರ ಕೋರ್ಸ್‍ಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಐಐಎಸ್ಸಿ, ಐಐಟಿ ಮತ್ತು ನೀಟ್ ಸಂಸ್ಥೆಗಳ ಮೂಲಕ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಅಂಡ್ ಮಶಿನ್ ಲರ್ನಿಂಗ್ ವೃತ್ತಿಪರ ಕೋರ್ಸ್‍ಗಳಲ್ಲಿ ಭಾಗವಹಿಸುವ ಪರಿಶಿಷ್ಟ ಪಂಗಡದ 200 ಇಂಜಿನಿಯರಿಂಗ್...

ದಿನದ ಸುದ್ದಿ3 days ago

ಜನಪದ ಕಲೆ ಗ್ರಾಮೀಣ ಜನರ ಜೀವನಾಡಿ : ಪ್ರಾಚಾರ್ಯೆ ಡಾ.ಶಶಿಕಲಾ‌.ಎಸ್

ಸುದ್ದಿದಿನ,ಭರಮಸಾಗರ:ಜನಪದ ಕಲೆ ನಮ್ಮ ನಾಡಿನ ಗ್ರಾಮೀಣ ಜನರ ಜೀವನಾಡಿಯಾಗಿದೆ. ಜಾನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಸಂಸ್ಕೃತಿಯ ಬೇರುಗಳಿದ್ದಂತೆ. ಗ್ರಾಮೀಣ ಸಂಸ್ಕೃತಿಯನ್ನು ಬಿಂಬಿಸುವ ಆಚರಣೆಯೇ ಜಾನಪದ ಉತ್ಸವವೆಂದು...

Trending