ದಿನದ ಸುದ್ದಿ
ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಲಿಂಗಾಯತ ಮಠಾಧೀಶರಿಂದ ಸಿಎಂಗೆ ಮನವಿ
ಸುದ್ದಿದಿನಡೆಸ್ಕ್:ಶರಣರ ಜನ್ಮ ಸ್ಥಳ, ಐಕ್ಯಸ್ಥಳ ಹಾಗೂ ಇತರೆ ಸ್ಮಾರಕಗಳ ರಕ್ಷಣೆಗಾಗಿ ಶರಣ ಸ್ಮಾರಕ ರಕ್ಷಣಾ ಪ್ರಾಧಿಕಾರ ರಚನೆ, ಬಸವ ತತ್ವ ಪ್ರಚಾರಕ್ಕೆ 500 ಕೋಟಿ ನೆರವು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಿಂಗಾಯತ ಮಠಾಧೀಶರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಠಾಧೀಶರ ಬೇಡಿಕೆಗಳನ್ನು ಹಂತಹಂತವಾಗಿ ಈಡೇರಿಸಲಾಗುವುದು ಎಂದು ಭರವಸೆ ನೀಡಿದರು. ಬಸವಣ್ಣನವರ ವಿಚಾರ ಮತ್ತು ಹೋರಾಟ ಜಾತ್ಯಾತೀತ ಸಮಾಜ ನಿರ್ಮಾಣಕ್ಕೆ ಪೂರಕವಾಗಿದೆ ಎಂದು ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243