Connect with us

ದಿನದ ಸುದ್ದಿ

ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾದಿಂದ ಮೇ 26 ರಂದು ಬಸವ ಜಯಂತಿ – ಪ್ರತಿಭಾ ಪುರಸ್ಕಾರ

Published

on

ಸುದ್ದಿದಿನ,ದಾವಣಗೆರೆ: ಅಖಿಲ ಭಾರತ ವೀರಶೈವ -ಲಿಂಗಾಯತ ಮಹಾಸಭಾ ಜಿಲ್ಲಾಘಟಕದ ವತಿಯಿಂದ ಮೇ 26ರಂದು ಸಂಜೆ 4ಕ್ಕೆ ನಗರದ ಬಿಐಇಟಿ ಕಾಲೇಜು ಆವರಣದಲ್ಲಿರುವ ಎಸ್.ಎಸ್.ಮಲ್ಲಿಕಾರ್ಜುನ ಸಾಂಸ್ಕೃತಿಕ ಕೇಂದ್ರದಲ್ಲಿ ಬಸವ ಜಯಂತಿ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದೆ ಎಂದು ಮಹಾಸಭಾದ ಜಿಲ್ಲಾಧ್ಯಕ್ಷ ದೇವರಮನೆ ಶಿವಕುಮಾ‌ರ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಸಕ ಶಾಮನೂರು ಶಿವಶಂಕರಪ್ಪ ಸಮಾರಂಭದ ಉದ್ಘಾಟನೆ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಎಸ್.ಎಸ್.ಪಾಟೀಲ್ ಆಗಮಿಸಲಿದ್ದಾರೆ. ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷರಾದ ಅಥಣಿ ವೀರಣ್ಣ, ಅಣಬೇರು ರಾಜಣ್ಣ, ಎಸ್‌.ಎಸ್.ಗಣೇಶ್ ಉಪಸ್ಥಿತರಿದ್ದು,ದೇವರಮನೆ ಶಿವಕುಮಾ‌ರ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಸಮಾರಂಭದಲ್ಲಿ ಬಸವತತ್ವ ಅನುಷ್ಠಾನದ ದಾರಿಗಳು ಕುರಿತು ಷಹಪುರದ ಬಸವ ಮಾರ್ಗದ ಸಂಪಾದಕ ವಿಶ್ವಾರಾಧ್ಯ ಸತ್ಯಂಪೇಟೆ ವಿಷಯ ಮಂಡನೆ ಮಾಡಲಿದ್ದಾರೆ. ಯುಪಿಎಸ್ ಇ ಎಐಆರ್ ನಲ್ಲಿ 101ನೇ ರ್ಯಾಂಕ್ ಪಡೆದ ಸೌಭಾಗ್ಯ ಎಸ್ ಬೀಳಗಿಮಠ, ಎಸ್ ಎಸ್ ಎಲ್ ಸಿಯಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್‌ ಪಡೆದ ಅಂಕಿತ ಬಸಪ್ಪ, ಜಿಲ್ಲೆಗೆ ಮೊದಲ ಸ್ಥಾನಪಡೆದ ಹೆಚ್.ಜಿ ಗಾನವಿ ಅವರಿಗೆ ಅಭಿನಂದನೆ ಸಲ್ಲಿಸಲಾಗುವುದು ಎಂದು ಮಾಹಿತಿ ನೀಡಿದರು.

ಇದೇ ವೇಳೆ 2021-22 ಹಾಗೂ 2022-23 ಸಾಲಿನಲ್ಲಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅತ್ಯಧಿಕ ಅಂಕಗಳಿಸಿದ ಸುಮಾರು 500 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರದೊಂದಿಗೆ ಸನ್ಮಾನಿಸಲಾಗುವುದು ಎಂದರು.

ಇದೇ ವೇಳೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನದ ಯಶಸ್ಸಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಗೌರವ ಸಮರ್ಪಣೆ ಮಾಡಲಾಗುವುದು. ಸಮಾರಂಭದಲ್ಲಿ ಶ್ರೀ ಸಿದ್ದರಾಮ ಕೇಸಾಪುರ ಮತ್ತು ತಂಡ,ಕಲರವ ಸಾಂಸ್ಕೃತಿಕ ವೇದಿಕೆ ಬೆಂಗಳೂರು ಹಾಗೂ ಕದಳಿವೇದಿಕೆ ವತಿಯಿಂದ ವಚನಗೀತೆ ನಡೆಯಲಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಅಣಬೇರು ರಾಜಣ್ಣ, ಬಿ.ಜೆ.ರಮೇಶ್, ಐಗೂರು ಚಂದ್ರಶೇಖರ್, ಪ್ರಕಾಶ್ ಪಾಟೀಲ್‌, ಶುಭ ಐನಳ್ಳಿ, ಶಿವಕುಮಾ‌ರ್ ಕೊರಟಗೆರೆ, ಸುನೀಲ್ ಬಾಗೇವಾಡಿ, ನಿಧಿ ಐನಮಹಾಸಭಾದಳ್ಳಿ ಇತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Continue Reading

Trending