ದಿನದ ಸುದ್ದಿ
ಕರ್ನಾಟಕದಲ್ಲಿ ಮಿಡತೆ ಹಿಂಡುಗಳ ದಾಳಿ; ಎಚ್ಚರಿಕೆ..!?
ಸುದ್ದಿದಿನ,ಧಾರವಾಡ: ಮಿಡತೆಗಳು ಉತ್ತರ ಭಾರತದ ಗುಜರಾತ, ರಾಜ್ಯಸ್ಥಾನ, ಹರಿಯಾಣ, ಮಧ್ಯಪ್ರದೇಶ ಮತ್ತು ಮಹಾರಾಷ್ಟ್ರಗಳಲ್ಲಿ ಕೃಷಿ, ಅರಣ್ಯ ಹಾಗೂ ತೋಟಗಾರಿಕಾ ಬೆಳೆಗಳ ಮೇಲೆ ದಂಡಿನ ರೂಪದಲ್ಲಿ ದಾಳಿ ಇಟ್ಟಿದ್ದು, ಕೃಷಿ ಇಲಾಖೆ ಹಾಗೂ ರೈತರು ಮುಂಜಾಗ್ರತೆ ವಹಿಸಬೇಕೆಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಹೇಳಿದರು.
ಸೋಮವಾರ ಬೆಳಿಗ್ಗೆ ಜಿಲ್ಲಾಧಿಕಾರಿಗಳ ನೂತನ ಕಚೇರಿ ಸಭಾಂಗಣದಲ್ಲಿ ಮರಭೂಮಿ ಮಿಡೆತೆಗಳ ಹಾವಳಿ ತಡೆಗಟ್ಟುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ವಿದೇಶದಿಂದ ಆಗಮಿಸಿರುವ ಮಿಡತೆಗಳ ಹಿಂಡು ವಿವಿಧ ರಾಜ್ಯಗಳ ಮೂಲಕ ಸಂಚರಿಸಿ ಕೃಷಿ, ಅರಣ್ಯ ಹಾಗೂ ತೋಟಗಾರಿಕಾ ಬೆಳೆಗಳನ್ನು ತಿನ್ನುತ್ತವೆ. ಇವುಗಳ ನಿಯಂತ್ರಣಕ್ಕಾಗಿ ರೈತರಿಗೆ ಕೃಷಿ ಇಲಾಖೆ ಅಧಿಕಾರಿಗಳು ಜಾಗೃತಿ ಕಾರ್ಯಕ್ರಮಗಳನ್ನ ರೂಪಿಸಬೇಕು. ಗ್ರಾಮ ಪಂಚಾಯತ ಮಟ್ಟದಲ್ಲಿ ಸಭೆಗಳನ್ನು ಏರ್ಪಡಿಸಿ ಮಿಡತೆಗಳ ಸಂಚಾರ ಹಾಗೂ ಅವುಗಳ ಜೀವನ ಚಕ್ರದ ಕುರಿತು ಪೂರ್ಣ ಮಾಹಿತಿಯನ್ನು ರೈತ ಸಮುದಾಯಕ್ಕೆ ನಿಡಬೇಕೆಂದು ಅವರು ಸೂಚಿಸಿದರು.
ಮಿಡತೆಯ ಹಿಂಡು ಜಮೀನುಗಳಿಗೆ ಆಗಮಿಸಿದರೆ ರೈತರು ತಮ್ಮ ಹೊಲಗಳಲ್ಲಿಯ ಬೆಳೆಗಳನ್ನು ರಕ್ಷಿಸಿಕೊಳ್ಳಲು ಖಾಲಿ ಡಬ್ಬಿ, ತಟ್ಟೆ, ಡ್ರಮ್ ಡೋಲು ಅಥವಾ ಇನ್ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಶಬ್ಧ ಮಾಡಿ ಮಿಡತೆಗಳನ್ನು ಹೊಲಗಳಲ್ಲಿ ಇಳಿಯದಂತೆ ಎಚ್ಚರಿಕೆ ವಹಿಸಿ ಓಡಿಸಬಹುದು ಅಥವಾ ಪಟಾಕಿ ಅಥವಾ ಸಿಡಿಮದ್ದುಗಳನ್ನು ಸಿಡಿಸಿ ಓಡಿಸಬಹುದು ಎಂದು ಅವರು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಬಿ.ಸಿ.ಸತೀಶ್ ಮಾತನಾಡಿ, ಗ್ರಾಮ ಮಟ್ಟದ ಟಾಸ್ಕ್ ಪೋರ್ಸ್ ಕಮೀಟಿಯಿಂದ ಗ್ರಾಮ ಮಟ್ಟದಲ್ಲಿ ಸಭೆ ಕರೆದು ಗ್ರಾಮಸ್ಥರಿಗೆ ಮಿಡತೆಯ ಗುಂಪುಗಳ ಬಗ್ಗೆ ತಿಳುವಳಿಕೆ ನಿಡಬೇಕು. ಮಿಡತೆಯ ಹಾವಳಿ ನಿಯಂತ್ರಣಕ್ಕಾಗಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕ್ರೀಯಾಯೋಜನೆಯನ್ನು ರೂಪಿಸಬೇಕು.ಅಗತ್ಯವೆನಿಸಿದರೆ ವಿಶೇಷ ಗ್ರಾಮ ಸಭೆಗಳನ್ನು ಜರುಗಿಸಿ ಅಗತ್ಯೆ ಸಿದ್ದತೆಯನ್ನು ಮಾಡಿಕೊಳ್ಳಬೇಕೆಂದು ಅವರು ಹೇಳಿದರು.
ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರಾಜಶೇಖರ ಐ.ಬಿ. ಅವರು ಮಾತನಾಡಿ, ಮಿಡತೆಗಳ ಹಾವಳಿ ಕಂಡು ಬಂದಲ್ಲಿ ರೈತರು ಬೇವಿನ ಮೂಲ ಕೀಟನಾಶಕ 0.15% ಇ.ಸಿವನ್ನು ಪ್ರತಿ 15 ಲೀಟರ್ಗೆ 45 ಮಿ.ಲೀಯಂತೆ ಸೇರಿಸಿ ನಿಂತ ಬೆಳೆಯ ಮೇಲೆ ಸಿಂಪಡಿಸಿ ಮಿಡತೆಗಳನ್ನು ವಿಕರ್ಷಿಸಬಹುದು.
ಮತ್ತು ಬೆಳೆಗಳ ಮೇಲೆ ಶೇ. 1.5 ರ ಕ್ವಿನಾಲ್ ಫಾಸ್ ಅಥವಾ ಶೇ. 1.5 ರ ಕ್ಲೋರೋಪ್ಲೈರಿಫಾಸ್ ಅಥವಾ ಶೇ. 2 ರ ಮಿಥೈಲ್ ಫೆರಾಥಿಯಾನ್ ಹುಡಿಯನ್ನು ನಿಂತ ಬೆಳೆಗಳ ಮೇಲೆ ಧೂಳಿಕರಿಸಬಹುದು. ಹಾಗೂ 500 ಮೀ.ಲೀ ಡಿಡಿವಿಪಿ, 76 ಇಸಿ ಕೀಟೌಷಧವನ್ನು 500 ಮಿ.ಲೀ. ನೀರಿನೊಂದಿಗೆ ಬೆರೆಸಿ 100 ಕಿ.ಲೋ ಒಣ ಉಸುಕಿನೊಂದಿಗೆ ಮಿಶ್ರಣಮಾಡಿ ಬೆಳೆಗಳ ಮೇಲೆ ಎರಚಬಹುದು.
ಈ ರೀತಿ ಎರಚುವುದರಿಂದ ಮಿಡತೆಗಳ ಹಾವಳಿಯನ್ನು ತಕ್ಷಣದಲ್ಲಿಯೇ ಕಡಿಮೆ ಮಾಡಬಹುದೆಂದು ಅವರು ಹೇಳಿದರು.
ಕೀಟನಾಶಕಗಳ ಸಿಂಪರಣೆ ಬಳಕೆಯನ್ನು ತಂಪಾದ ಸಮಯದಲ್ಲಿ ಅಂದರೆ ಬೆಳಗ್ಗಿನ 7 ರಿಂದ 10 ಘಂಟೆಯವರೆಗೂ ಹಾಗೂ ಸಾಯಂಕಾಲ 5 ರಿಂದ 7 ಘಂಟೆಯವರೆಗೂ ಕೈಗೊಳ್ಳುವುದು ಸೂಕ್ತವಾಗಿದೆ. ಕೀಟನಾಶಕ ಸಿಂಪರಣೆ ಕೈಗೊಳ್ಳುವಾಗ ಅವಶ್ಯಕ ಬಟ್ಟೆಗಳಿಂದ ಮೈಯನ್ನು ಮುಚ್ಚಿಕೊಂಡಿರುವುದು ಹಾಗೂ ಮುಖಗವಸುಗಳು, ಕೈಗವಸುಗಳು ಹಾಗೂ ಟೊಪ್ಪಿಗೆಗಳನ್ನು ಬಳಸಬೇಕು.
ಕಿಟನಾಶಕಗಳ ಸಿಂಪರಣೆ ಮುಗಿದ ನಂತರ ಕೂಡಲೇ (ಕ್ಷೇತ್ರವನ್ನು ತೊರೆಯುವುದು ಒಳ್ಳೆಯದು) ಜಮೀನಿನಿಂದ ಹೊರನಡೆಯಬೇಕು. ಕೀಟನಾಶಕ ಸಿಂಪರಣೆಯ ನಂತರ ಯಾವುದೇ ಬೆಳೆಯ ಕೊಯ್ಲನ್ನು ಕನಿಷ್ಠ ಒಂದು ವಾರದವರೆಗೆ ಕೈಗೊಳ್ಳಬಾರದು. ಸಾಗುವಳಿ ಮಾಡದ ಹೊಲಗಳಲ್ಲಿ, ಪ್ರದೇಶಗಳಲ್ಲಿ ಮೊಟ್ಟೆ ಇಕ್ಕುವ ರಂಧ್ರಗಳು ಕಂಡು ಬಂದಲ್ಲಿ ಶೇ. 1.5 ರ ಕ್ವಿನಾಲ್ ಫಾಸ್ ಅಥವಾ ಶೇ. 1.5 ರ ಕ್ಲೋರೋಪ್ಲೈರಿಫಾಸ್ ಅಥವಾ ಶೇ. 2 ರ ಮಿಥೈಲ್ ಫೆರಾಥಿಯಾನ್ ಹುಡಿಯನ್ನು ಧೂಳಿಕರಿಸಬಹುದು ಹಾಗೂ ನಂತರ ಇಂತಹ ಕ್ಷೇತ್ರದಲ್ಲಿ ರೆಂಟೆ ಹೊಡೆಯುವ ಮೂಲಕ ಮೊಟ್ಟೆ ಗುಂಪುಗಳನ್ನು ಹಾಗೂ ಮಿಡತೆಗಳ ನವಜಾತ ಮರಿಗಳನ್ನು ಸಾಯಿಸಬಹುದಾಗಿದೆ ಎಂದು ಅವರು ಹೇಳಿದರು.
ಮೊಟ್ಟೆಯಿಂದ ನವಜಾತ ಮರಿಗಳು ಹಾಗೂ ಅಪ್ಸರೆ ಕೀಟಗಳು ಹೊರಬರುತ್ತಿರುವುದನ್ನು ಗಮನಿಸಿದಾಗ ಶೇ. 1.5 ರ ಕ್ವಿನಾಲ್ ಫಾಸ್ ಅಥವಾ ಶೇ. 1.5 ರ ಕ್ಲೋರೋಪ್ಲೈರಿಫಾಸ್ ಅಥವಾ ಶೇ. 2 ರ ಮಿಥೈಲ್ ಫೆರಾಥಿಯಾನ್ ಹುಡಿಯನ್ನು ಪ್ರತಿ ಹೆಕ್ಟೇರಿಗೆ 25 ಕೆ.ಜಿ. ಯಂತೆ ಧೂಳಿಕರಿಸಬಹುದು. ಮಿಡತೆಗಳ ದಂಡು ರೂಪುಗೊಂಡು ಒಂದು ಹೊಲದಿಂದ ಇನ್ನೊಂದು ಹೊಲಕ್ಕೆ ದಾಳಿ ಇಡುವುದು ಕಂಡು ಬಂದರೆ ಅಪ್ಸರೆ ಕೀಟಗಳನ್ನು ನಾಶಪಡಿಸಲು ಒಣ ಹುಲ್ಲನ್ನು ಅಥವಾ ಸಸ್ಯವಶೇಷಗಳನ್ನು ಉರಿಸಿ ನಾಶಪಡಿಸಬಹುದು.
ಮಿಡತೆಗಳ ಹಾವಳಿ ಹೆಚ್ಚಾದ ಸಮಯದಲ್ಲಿ ಬಿತ್ತುವ ಮುಂಚೆ ಹೊಲದ ಸುತ್ತಲು ಎರಡು ಅಗಲದ ಹಾಗೂ ಎರಡು ಅಡಿ ಆಳದ ಕಾಲುವೆಯನ್ನು ತೋಡಿ, ಅದಕ್ಕೆ ಶೆ. 1.5 ರ ಕ್ವಿನಾಲ್ ಫಾಸ್ ಅಥವಾ ಶೇ. 1.5 ರ ಕ್ಲೋರ್ಪೈರಿಫಾಸ್ ಅಥವಾ ಶೇ. 2 ರ ಮಿಥೈಲ್ ಫೆರಾಥಿಯಾನ್ ಹುಡಿಯನ್ನು ಧೂಳಿಕರಿಸಬಹುದು ಹಾಗೂ ಅಥವಾ ನೀರನ್ನು ನಿಲ್ಲುವ ಹಾಗಿ ಸುರಿಯುವುದು.
ಮಿಡತೆ ದಂಡು ಬೇಸಾಯ ಕ್ರಮಕ್ಕೆ ಒಳಪಡದ ಕ್ಷೇತ್ರದಲ್ಲಿ ಇಳಿದಾಗ ಹಾಗೂ ಹಾನಿ ಕಂಡುಬಂದಾಗ [ಹುಡಿ 1.5 ರ ಕ್ವಿನಾಲ್ ಫಾಸ್ ಅಥವಾ ಶೇ. 1.5 ರ ಕ್ಲೋರೋಪ್ಲೈರಿಫಾಸ್ ಅಥವಾ ಶೆ. 2 ರ ಮಿಥೈಲ್ ಫೆರಾಥಿಯಾನ್] ಹುಡಿಯನ್ನು ಪ್ರತಿ ಹೆಕ್ಟೇರಿಗೆ 25 ಕೆ.ಜಿ. ಯಂತೆ ಧೂಳಿಕರಿಸುವಂತಹ ಎಚ್ಚರಿಕೆ ಕ್ರಮಗಳನ್ನು ಅನುಸರಿಸಬೇಕೆಂದು ಜಂಟಿ ಇಲಾಖೆಯ ಕೃಷಿ ನಿರ್ದೇಶಕ ರಾಜಶೇಖರ ಐ.ಬಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಸಂವಿಧಾನಕ್ಕೆ ಅಪಾಯವಾದರೆ, ಬಡವರ, ಶ್ರಮಿಕರ ಭವಿಷ್ಯಕ್ಕೆ ಅಪಾಯವಾದಂತೆ : ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ಮಡಿಕೇರಿ : ದೇಶದ ಸಂವಿಧಾನಕ್ಕೆ ಅಪಾಯವಾದರೆ ಈ ದೇಶದ ಮಹಿಳೆಯರ, ಬಡವರ, ಮಧ್ಯಮ ವರ್ಗದವರ, ಶ್ರಮಿಕರ, ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಈ ಲೋಕಸಭಾ ಚುನಾವಣೆ ನಮಗೊಂದು ಅವಕಾಶ. ಈ ಬಾರಿ ಬಿಜೆಪಿಯನ್ನು ಸೋಲಿಸಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಪ್ರಜಾತಂತ್ರ ಉಳಿಸಬೇಕು ಎಂದು ಕರೆ ನೀಡಿದರು.
ಬಳಿಕ ತುಮಕೂರಿನಲ್ಲಿ ಮಾತನಾಡಿದ ಅವರು, ರಾಜ್ಯದ ಹಿತಾಸಕ್ತಿ ಕಾಪಾಡುವಲ್ಲಿ ಕಳೆದ ಲೋಕಸಭಾ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಬಿಜೆಪಿ ಸಂಸದರು ವಿಫಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು.
ಮಹಿಳೆಯರ ಅಭ್ಯುದಯಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ನುಡಿದಂತೆ ಜಾರಿಗೆ ತಂದಿದ್ದೇವೆ. ಇದರಿಂದಾಗಿ ಮಹಿಳೆಯರ ಜೀವನದಲ್ಲಿ ಸುಧಾರಣೆ ಕಂಡಿದೆ, ಈ ಯೋಜನೆಯ ಫಲಾನುಭವಿಗಳ ಬಗ್ಗೆ ಟೀಕಿಸುವುದು ಸರಿಯಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಮಡಿಕೇರಿಯಲ್ಲಿ ನಡೆದ ಜನಧ್ವನಿ-2 ಬೃಹತ್ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದೆ.
ಸಂವಿಧಾನಕ್ಕೆ ಅಪಾಯ ಎಂದರೆ ದೇಶದ ಮಹಿಳೆಯರು, ಬಡವರು, ಮಧ್ಯಮ ವರ್ಗದವರು, ಶೂದ್ರರು, ಶ್ರಮಿಕರ ಬದುಕು-ಭವಿಷ್ಯಕ್ಕೆ ಅಪಾಯ ಎಂದರ್ಥ.
ಭಾರತದಲ್ಲಿ ಪ್ರಜಾತಂತ್ರ ಅಪಾಯದಲ್ಲಿದೆ. ಇದನ್ನು ಉಳಿಸುವ ಅನಿವಾರ್ಯತೆ ನಮ್ಮೆಲ್ಲರ ಮುಂದಿದೆ. ಈ ಲೋಕಸಭಾ ಚುನಾವಣೆ ನಮಗೊಂದು… pic.twitter.com/UapeRxBcZP
— Siddaramaiah (@siddaramaiah) April 14, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ದಾವಣಗೆರೆ | ದ್ವಿತೀಯ ಪಿ.ಯು.ಸಿ ಪರೀಕ್ಷೆ; ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ
ಸುದ್ದಿದಿನ,ದಾವಣಗೆರೆ : 2024 ರ ಮಾರ್ಚ್ನಲ್ಲಿ ನಡೆದ ದ್ವಿತೀಯ ಪಿ.ಯು.ಸಿ. ಫಲಿತಾಂಶ ಪ್ರಕಟವಾಗಿದ್ದು ಜಿಲ್ಲೆಗೆ ಶೇ 80.96 ರಷ್ಟು ಫಲಿತಾಂಶ ಬಂದಿದ್ದು ಶೇ 74.27 ಗಂಡು, ಶೇ 82.01 ರಷ್ಟು ಹೆಣ್ಣು ಮಕ್ಕಳು ಉತ್ತೀರ್ಣರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದರು.
ಅವರು ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಚುನಾವಣಾ ಸಂಬಂಧ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಏಪ್ರಿಲ್ 10 ರಂದು ಫಲಿತಾಂಶ ಪ್ರಕಟವಾಗಿದ್ದು ಹೆಚ್ಚಿನ ವಿವರಗಳು ಬರಬೇಕಾಗಿದೆ. ಈ ವರ್ಷ ಜಿಲ್ಲೆಯಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯನ್ನು 19644 ರೆಗ್ಯುಲರ್, 422 ಖಾಸಗಿ ಸೇರಿ 20066 ವಿದ್ಯಾರ್ಥಿಗಳು ತೆಗೆದುಕೊಂಡಿದ್ದರು. ಇದರಲ್ಲಿ 15904 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇ 80.96 ರಷ್ಟು ಫಲಿತಾಂಶ ಪಡೆದಿದ್ದಾರೆ.
ಕಳೆದ ವರ್ಷ ಶೇ 75.72 ರಷ್ಟು ಫಲಿತಾಂಶ ಬಂದಿತ್ತು, ಈ ವರ್ಷ ಶೇ 5.24 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಜಿಲ್ಲೆಗೆ ಟಾಪ್ ಬಂದವರಲ್ಲಿ ಕಲಾ ವಿಭಾಗದಲ್ಲಿ ಹರಿಹರದ ಶ್ರೀಮತಿ ಗಿರಿಯಮ್ಮ ಕಾಂತಪ್ಪ ಮಹಿಳಾ ಪದವಿ ಪೂರ್ವ ಕಾಲೇಜಿನ ಹೀನಬಾನು ಪಿ.ಕೆ. 591 ಅಂಕ ಪಡೆದು ಶೇ 98.5, ವಾಣಿಜ್ಯ; ದಾವಣಗೆರೆ ತಾ; ಗೋಪನಾಳು ಸರ್ಕಾರಿ ಪದವಿ ಪೂರ್ವ ಕಾಲೇಜಿನ ರೇಷ್ಮಾ ಬಾನು 589 ಅಂಕ ಪಡೆದು ಶೇ 98.16 ರಷ್ಟು ಫಲಿತಾಂಶ ಪಡೆದು ಜಿಲ್ಲೆಗೆ ಮೊದಲಿಗರಾಗಿದ್ದಾರೆ.
ವಿಜ್ಞಾನ ವಿಭಾಗದಲ್ಲಿ ಲೋಕಿಕೆರೆ ರಸ್ತೆಯಲ್ಲಿನ ಸರ್ಎಂವಿ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಮೊಹಮ್ಮದ್ ಸುಹೇಲ್, ಅಮೃತ ದೊಡ್ಡ ಬಸಪ್ಪನವರ್, ಅನನ್ಯ ಹೆಚ್.ಎಸ್, ಆಕಾಶ್ ಸಿ.ಪಾಟೀಲ್ ಇವರು 593 ಅಂಕ ಶೇ 98.83 ರಷ್ಟು ಸಮನಾದ ಫಲಿತಾಂಶ ಹಂಚಿಕೊಂಡಿದ್ದಾರೆ ಎಂದರು.
ವಿಭಾಗವಾರು ಫಲಿತಾಂಶ; ಕಲಾ ವಿಭಾಗದಲ್ಲಿ ಶೇ 57.83 ರಷ್ಟು ಫಲಿತಾಂಶ ಬಂದಿದ್ದು ಇದರಲ್ಲಿ ಗಂಡು ಶೇ 45, ಹೆಣ್ಣು ಶೇ 66.46 ರಷ್ಟು ಉತ್ತೀರ್ಣರಾಗಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಶೇ 76.22 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 65.5, ಹೆಣ್ಣು ಶೇ 80.8, ವಿಜ್ಞಾನ ವಿಭಾಗದಲ್ಲಿ ಶೇ 91.13 ರಷ್ಟು ಫಲಿತಾಂಶ ಬಂದಿದ್ದು ಗಂಡು ಶೇ 91.39 ಹಾಗೂ ಹೆಣ್ಣು ಶೇ 88.69 ರಷ್ಟು ಫಲಿತಾಂಶ ಬಂದಿದೆ.
ನಗರಕ್ಕಿಂತ ಗ್ರಾಮೀಣರ ಮೇಲುಗೈ; ಫಲಿತಾಂಶದಲ್ಲಿ ನಗರ ಪ್ರದೇಶಕ್ಕಿಂತ ಗ್ರಾಮೀಣ ವಿದ್ಯಾರ್ಥಿಗಳು ಶೇ 1.1 ರಷ್ಟು ಮೇಲುಗೈ ಸಾಧಿಸಿದ್ದಾರೆ. ಗ್ರಾಮೀಣ ಪ್ರದೇಶದಲ್ಲಿ ಶೇ 73.65 ಗಂಡು, ಶೇ 84.6 ಹೆಣ್ಣು ಉತ್ತೀರ್ಣರಾದರೆ ನಗರ ಪ್ರದೇಶದ ಒಟ್ಟು ಫಲಿತಾಂಶ ಶೇ 80.75 ರಲ್ಲಿ ಗಂಡು ಶೇ 74.41, ಹೆಣ್ಣು ಶೇ 81.37 ರಷ್ಟು ಫಲಿತಾಂಶ ಪಡೆದಿದ್ದಾರೆ.
ಶೇ 100 ರಷ್ಟು ಫಲಿತಾಂಶ ಪಡೆದ ಶಾಲೆಗಳು; ದಾವಣಗೆರೆ ಅಂಜುಂ ಪದವಿ ಪೂರ್ವ ಕಾಲೇಜು, ಲೇಬರ್ ಕಾಲೋನಿ, ಜೈನ್ ಟ್ರಿನಿಟಿ ಪದವಿ ಪೂರ್ವ ಕಾಲೇಜು, ಅನ್ಮೋಲ್ ಪದವಿ ಪೂರ್ವ ಕಾಲೇಜು, ಶ್ರೀ ಗೀತಂ ಪದವಿ ಪೂರ್ವ ಕಾಲೇಜು, ದಾವಣಗೆರೆ ಇವು ಶೇ 100 ರಷ್ಟು ಫಲಿತಾಂಶ ಪಡೆದ ಕಾಲೇಜುಗಳಾಗಿವೆ.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸುರೇಶ್ ಬಿ.ಇಟ್ನಾಳ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂರ್, ಶಾಲಾ ಶಿಕ್ಷಣ, ಪದವಿ ಪೂರ್ವ ಇಲಾಖೆ ಉಪನಿರ್ದೇಶಕ ಕರಿಸಿದ್ದಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ಗೆ ರೂ.10 ಪಡೆದ ಶಾಪಿಂಗ್ ಮಾಲ್ಗೆ ದಂಡ
ಸುದ್ದಿದಿನ ,ದಾವಣಗೆರೆ : ವಕೀಲ ವೃತ್ತಿಯಲ್ಲಿ ತೊಡಗಿಕೊಂಡಿರುವ ಆರ್. ಬಸವರಾಜ್ ಎಂಬುವವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು ರೂ.1,499 ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ ರೂ.10/- ಪೇಪರ್ ಬ್ಯಾಗ್ಗೆ ಪಡೆಯಲಾಯಿತು.
ಗ್ರಾಹಕರಾದ ಆರ್. ಬಸವರಾಜ್ ಇವರ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ದೂರನ್ನು ದಾಖಲಿಸಿ ವಾಣಿಜ್ಯ ಸಂಸ್ಥೆ ವಿರುದ್ದ ರೂ.50,000 ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊ ರೂ.10,000 ಗಳನ್ನು ಪಾವತಿಸುವಂತೆ ದೂರನ್ನು ದಾಖಲಿಸಿದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ಗೆ ಹೆಚ್ಚುವರಿಯಾಗಿ ಪಡೆದ ಹಣಕ್ಕೆ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ ರೂ.10 ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಮಹಿಳಾ ಸದಸ್ಯರಾದ ಶ್ರೀಮತಿ ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ ರೂ.7000 ದಂಡವಿದಿಸಿ ಆದೇಶಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243