ದಿನದ ಸುದ್ದಿ
ಲೋಕಸಭಾ ಚುನಾವಣೆ | ದಾವಣಗೆರೆ ಜಿಲ್ಲೆಯಲ್ಲಿ 63 ವಿಶೇಷ ಮತಗಟ್ಟೆಗಳ ಸ್ಥಾಪನೆ, ವಿಭಿನ್ನವಾಗಿ ಸಿದ್ದವಾಗಿರುವ ಮತಗಟ್ಟೆಗಳು
ಸುದ್ದಿದಿನ ಡೆಸ್ಕ್ : ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಮೇ 7 ರಂದು ಚುನಾವಣೆ ನಡೆಯುತ್ತಿದ್ದು ಜಿಲ್ಲೆಯಲ್ಲಿನ ಎಲ್ಲಾ ಮತಗಟ್ಟೆಗಳಲ್ಲಿ ಮತದಾರರಿಗೆ ಅಗತ್ಯವಿರುವ ಎಲ್ಲಾ ಮೂಲಭೂತ ಸೌಲಭ್ಯಗಳನ್ನ ಕಲ್ಪಿಸಿ 7 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 5 ರಂತೆ 35 ಸಖಿ ಮತಗಟ್ಟೆಗಳು, ತಲಾ 1 ರಂತೆ 7 ಯುವ ನಿರ್ವಾಹಣೆ ಮತಗಟ್ಟೆಗಳು, ತಲಾ 1 ರಂತೆ 7 ಸಾಂಪ್ರದಾಯಿಕ ಮತಗಟ್ಟೆಗಳು, ತಲಾ 1 ರಂತೆ 7 ಧೈಯ ಆಧಾರಿತ ಮತಗಟ್ಟೆಗಳು ಹಾಗೂ ತಲಾ 1 ರಂತೆ 7 ವಿಶೇಷ ಚೇತನ ಮತಗಟ್ಟೆಗಳು ಸೇರಿ 63 ವಿಶೇಷ ಮತಗಟ್ಟೆಗಳನ್ನು ಸ್ಥಾಪಿಸಿ ವಿಶೇಷವಾಗಿ ಅಲಂಕರಿಸಿ ಮತದಾರರನ್ನು ಕೈಬೀಸಿ ಕರೆಯುವಂತೆ ಸಿಂಗರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ: ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ಸಖಿ ಮತಗಟ್ಟೆ
103- ಜಗಳೂರು ತಾ; ಮತಗಟ್ಟೆ 8 ಸರ್ಕಾರಿ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಕೊಠಡಿ 1 ಅರಸೀಕೆರೆ. ಇಲ್ಲಿ ಪುರುಷ 334, ಮಹಿಳೆ 345 ಸೇರಿ 679, ಸೊಕ್ಕೆ ಮತಗಟ್ಟೆ 20 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪುರುಷ 388, ಮಹಿಳೆ 395 ಒಟ್ಟು-783. ಪಲ್ಲಾಗಟ್ಟೆ ಮತಗಟ್ಟೆ 90 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಪುರುಷ 390, ಮಹಿಳೆ 389 ಸೇರಿ 779, ಜಗಳೂರು ಪಟ್ಟಣ ಮತಗಟ್ಟೆ 190 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ (ಸಂತೆ ಪೇಟೆ) ಕೊಠಡಿ ಸಂಖ್ಯೆ 2 ಇಲ್ಲಿ ಪುರುಷ 635, ಮಹಿಳೆ 688 ಸೇರಿ 1323, ಬಿದರಿಕೆರೆ ಮತಗಟ್ಟೆ 250 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, (ಹಳೆಯ ಕಟ್ಟಡ) (ಪಶ್ಚಿಮ ಭಾಗ) ಪುರುಷ 575, ಮಹಿಳೆ 614 ಸೇರಿ 1189.
ಹರಿಹರ ವಿಧಾನಸಭಾ ಕ್ಷೇತ್ರ
ಹರಿಹರ ಮತಗಟ್ಟೆ 59, ಮೈಸೂರು ಕಿರ್ಲೋಸ್ಕರ್ ಹೈಸ್ಕೂಲ್ ಕೊಠಡಿ ಸಂಖ್ಯೆ-2 ರಲ್ಲಿ ಪುರುಷ 505, ಮಹಿಳೆ 487 ಸೇರಿ 992, ಬೆಳ್ಳೂಡಿ ಮತಗಟ್ಟೆ 111 ಶ್ರೀ ಪಟೇಲ್ ಗುರು ಬಸಪ್ಪ ಪ್ರೌಢಶಾಲೆ ಪುರುಷ 420, ಮಹಿಳೆ 388 ಸೇರಿದಂತೆ 808, ಹರಿಹರ ಮತಗಟ್ಟೆ 46, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಇಲ್ಲಿ ಪುರುಷ 650, ಮಹಿಳೆ 623 ಸೇರಿ 1273, ಮಲೆಬೆನ್ನೂರು ಮತಗಟ್ಟೆ 192 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ 2 ಇಲ್ಲಿ ಪುರುಷ 520, ಮಹಿಳೆ 573 ಸೇರಿ 1093. ಕುಂಬಳೂರು ಮತಗಟ್ಟೆ 167 ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಕೊಠಡಿ ಸಂಖ್ಯೆ-1 ಇಲ್ಲಿ ಪುರುಷ 513, ಮಹಿಳೆ 526 ಒಟ್ಟು-1039.
ವಿಧಾನಸಭಾ ಕ್ಷೇತ್ರ ದಾವಣಗೆರೆ ಉತ್ತರ
ಕ್ಕಕರಗೊಳ್ಳ ಮತಗಟ್ಟೆ 4 ಸರ್ಕಾರಿ ಸಂಯುಕ್ತ ಪಿಯು ಕಾಲೇಜು ಕೊಠಡಿ ಸಂಖ್ಯೆ 1 ಪುರುಷ 582, ಮಹಿಳೆ 615 ಸೇರಿ 1197, ಬೇತೂರು 23 ಗ್ರಾಮ ಪಂಚಾಯಿತಿ ಕಚೆÉೀರಿ ಇಲ್ಲಿ ಪುರುಷ 564, ಮಹಿಳೆ 593 ಒಟ್ಟು-1157, ದಾವಣಗೆರೆ 208 ಅಥಣಿ ಹೈಸ್ಕೂಲ್ ಎಂಸಿಸಿ ಬಿ.ಬ್ಲಾಕ್ ಪುರುಷ 656, ಮಹಿಳೆ 671 ಒಟ್ಟು-1327. ದಾವಣಗೆರೆ 98 ಈಶ್ವರಮ್ಮ ಹೈಯರ್ ಪ್ರೈಮರಿ ಸ್ಕೂಲ್, ಪಿ.ಜೆ.ಬಡಾವಣೆ ಇಲ್ಲಿ ಪುರುಷ 606, ಮಹಿಳೆ 594 ಒಟ್ಟು-1200, ನಿಟ್ಟುವಳ್ಳಿ 137 ಸರ್ಕಾರಿ ಪ್ರೌಢಶಾಲೆ ಶಾಲಾ ಕೊಠಡಿ ಸಂಖ್ಯೆ 2 ರಲ್ಲಿ ಪುರುಷ 477, ಮಹಿಳೆ 539 ಒಟ್ಟು-1016.
ದಾವಣಗೆರೆ ದಕ್ಷಿಣ ಕ್ಷೇತ್ರ
ದಾವಣಗೆರೆ 142 ಮುದೇಗೌಡ್ರು ಮಲ್ಲಮ್ಮ ಮುರಿಗೆಪ್ಪ ಬಾಲಕಿಯರ ಪ್ರೌಢಶಾಲೆ, ಕೆ.ಆರ್.ರಸ್ತೆ ಇಲ್ಲಿ ಪುರುಷ 731, ಮಹಿಳೆ 737 ಒಟ್ಟು-1468. ಶಿರಮಗೊಂಡನಹಳ್ಳಿ 178 ಸರ್ಕಾರಿ ಪ್ರೌಢಶಾಲೆ ಪುರುಷ 497, ಮಹಿಳೆ 519 ಒಟ್ಟು-1016. ಹದಡಿ 202 ಗ್ರಾಮ ಪಂಚಾಯಿತಿ ಕಚೇರಿ ಪುರುಷ 554, ಮಹಿಳೆ 582 ಒಟ್ಟು-1136. ಜಾಲಿನಗರ 36 ಶ್ರೀ ದುಗಾರ್ಂಬಿಕಾ ಸಂಯುಕ್ತ ಪ್ರೌಢಶಾಲೆ ಪ್ರಯೋಗಾಲಯ ಪುರುಷ 336, ಮಹಿಳೆ 378 ಒಟ್ಟು-714, ದಾವಣಗೆರೆ ದೇವರಾಜ ಅರಸ್ ಬಡಾವಣೆ 41 ಶ್ರೀಮತಿ ಚಿರಡೋಣಿ ಕಮಲಮ್ಮ ವೈ ತಿಮ್ಮಪ್ಪ ಶೆಟ್ಟಿ ಸರ್ಕಾರಿ ಮಾಡರ್ನ್ ಹೈಯರ್ ಪ್ರೈಮರಿ ಸ್ಕೂಲ್ ಪುರುಷ 456, ಮಹಿಳೆ 449 ಒಟ್ಟು-905.
ಮಾಯಕೊಂಡ ಕ್ಷೇತ್ರ
ಆನಗೋಡು 61 ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪುರುಷ 630, ಮಹಿಳೆ 640 ಒಟ್ಟು-1231, ತೋಳಹುಣಸೆ ಯಲ್ಲಮ್ಮನಗರ 36 ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಕೊಠಡಿ ಸಂಖ್ಯೆ 1 ಪುರುಷ 364, ಮಹಿಳೆ 357 ಒಟ್ಟು-706. ಮಾಯಕೊಂಡ 160 ಕರ್ನಾಟಕ ಪಬ್ಲಿಕ್ ಸ್ಕೂಲ್ ಪುರುಷ 264, ಮಹಿಳೆ 275 ಒಟ್ಟು-539, ಅತ್ತಿಗೆರೆ 112 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪುರುಷ 493, ಮಹಿಳೆ 499 ಒಟ್ಟು-990, ತ್ಯಾವಣಿಗಿ 177, ಕರ್ನಾಟಕ ಪಬ್ಲಿಕ್ ಸ್ಕೂಲ್ ಹೈಸ್ಕೂಲ್ ವಿಭಾಗ ಪುರುಷ 492, ಮಹಿಳೆ 507 ಒಟ್ಟು 999 ಮತದಾರರು.
ವಿಧಾನಸಭಾ ಕ್ಷೇತ್ರ ಚನ್ನಗಿರಿ
ನಲ್ಲೂರು 105 ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಪುರುಷ 640, ಮಹಿಳೆ 635 ಸೇರಿ 1275, ಮಸಣಿಕೆರೆ 248 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಪುರುಷ 329, ಮಹಿಳೆ 299 ಸೇರಿ 628. ಕೆರೆಬಿಳಚಿ 62 ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಬಾಲಕಿಯರ ಶಾಲೆ (ಪಶ್ಚಿಮ ಭಾಗ) ಪುರುಷ 401, ಮಹಿಳೆ 465 ಒಟ್ಟು-866, ಹಿರೇಕೂಗಲೂರು 17 ಶ್ರೀ ತರಳಬಾಳು ಜಗದ್ಗುರ ಸರ್ಕಾರಿ ಜೂನಿಯರ್ ಕಾಲೇಜು ಹೈಸ್ಕೂಲ್ ವಿಭಾಗ ಪುರುಷ 608, ಮಹಿಳೆ 636 ಒಟ್ಟು-1244, ಚನ್ನಗಿರಿ ಬಿ.ಇ.ಓ ಕಚೇರಿ ಹಿಂಭಾಗ 169 ಸರ್ಕಾರಿ ಸಂಯುಕ್ತ ಬಾಲಕಿಯರ ಪ್ರೌಢಶಾಲೆ ಪುರುಷ 608, ಮಹಿಳೆ 636 ಒಟ್ಟು-1244.
ಹೊನ್ನಾಳಿ ಕ್ಷೇತ್ರ
ಸುರಹೊನ್ನೆ 169 ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಪುರುಷ 432 ಮಹಿಳೆ 489 ಒಟ್ಟು-921, ಗೋವಿನಕೋವಿ 149 ಸರ್ಕಾರಿ ಪ್ರೌಢಶಾಲೆ ಪುರುಷ 563, ಮಹಿಳೆ 616 ಒಟ್ಟು-1179, ನ್ಯಾಮತಿ 178 ಸರ್ಕಾರಿ ಪಿಯು ಕಾಲೇಜು ಕರ್ನಾಟಕ ಪಬ್ಲಿಕ್ ಸ್ಕೂಲ್ ಪುರುಷ 495, ಮಹಿಳೆ 520 ಒಟ್ಟು-1015, ಹಿರೇಬಾಸೂರು 129 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪುರುಷ 340, ಮಹಿಳೆ 314 ಒಟ್ಟು-654, ಹೊನ್ನಾಳಿ ತಾಲ್ಲೂಕು ಪಂಚಾಯತ್ ಕಚೇರಿ 84 ಪುರುಷ 294, ಮಹಿಳೆ 303 ಸೇರಿ 597 ಮತದಾರರು.
ಯುವ ಮತದಾರರ ಮತಗಟ್ಟೆಗಳು
ಜಗಳೂರು ತಾ; 183 ಜಗಳೂರು ಪಟ್ಟಣದ ಹೊರಕೆರೆ ಅಂಗನವಾಡಿ ಕೇಂದ್ರ ಇಲ್ಲಿ ಪುರುಷ 353, ಮಹಿಳೆ 377 ಒಟ್ಟು-730, ಹರಿಹರ ತಾ; 61 ಮೈಸೂರು ಕಿರ್ಲೋಸ್ಕರ್ ಪ್ರೌಢಶಾಲೆ ಕೊಠಡಿ ಸಂಖ್ಯೆ-5 ಇಲ್ಲಿ ಪುರುಷ 708, ಮಹಿಳೆ 731 ಸೇರಿ 1439, ದಾವಣಗೆರೆ ಉತ್ತರ; ಕುಂದುವಾಡ ರಸ್ತೆ ಚಿಗಟೇರಿ ಬಡಾವಣೆ 49 ಸಪ್ತಗಿರಿ ವಿದ್ಯಾಲಯ ಇಲ್ಲಿ ಪುರುಷ 415, ಮಹಿಳೆ 403 ಸೇರಿ 818, ದಾವಣಗೆರೆ- ದಕ್ಷಿಣ; 2 ಯರಗುಂಟೆ ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 725, ಮಹಿಳೆ 747, ಒಟ್ಟು-1472. ಮಾಯಕೊಂಡ ಕ್ಷೇತ್ರ; 159 ಮಾಯಕೊಂಡ ಕರ್ನಾಟಕ ಪಬ್ಲಿಕ್ ಶಾಲೆ (ಪ್ರಾಥಮಿಕ ವಿಭಾಗ) ಪುರುಷ 453, ಮಹಿಳೆ 488 ಸೇರಿ ಒಟ್ಟು-941. ಚನ್ನಗಿರಿ ಕ್ಷೇತ್ರ; 138 ಮುದಿಗೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 499, ಮಹಿಳೆ 508 ಒಟ್ಟು-1007. ಹೊನ್ನಾಳಿ ಕ್ಷೇತ್ರ; 193 ಕುಳಗಟ್ಟೆ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 382, ಮಹಿಳೆ 369 ಸೇರಿ 751 ಮತದಾರರಿದ್ದಾರೆ.
ಸಾಂಪ್ರದಾಯಿಕ ಮತಗಟ್ಟೆಗಳು
ಜಗಳೂರು ತಾ; 76 ಅಣಬೂರು ಗೊಲ್ಲರಹಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 638, ಮಹಿಳೆ 616 ಒಟ್ಟು-1254. ಹರಿಹರ ಕ್ಷೇತ್ರ; 153 ಯಲವಟ್ಟಿ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 457, ಮಹಿಳೆ 434 ಒಟ್ಟು-891. ದಾವಣಗೆರೆ ಉತ್ತರ; 200 ದಾವಣಗೆರೆ ಭದ್ರಾ ಕಾಲೋನಿಯ ಕಾರ್ಯಪಾಲಕ ಅಭಿಯಂತರ ಕಚೇರಿ ಇಲ್ಲಿ ಪುರುಷ 667, ಮಹಿಳೆ 654 ಒಟ್ಟು-1321, ದಾವಣಗೆರೆ- ದಕ್ಷಿಣ; 169 ಜಾಲಿನಗರ ಜನತಾ ವಿದ್ಯಾಲಯ ಇಂಗ್ಲೀಷ್ ಮಾಧ್ಯಮ ಪ್ರೌಢಶಾಲೆ ಇಲ್ಲಿ ಪುರುಷ 476, ಮಹಿಳೆ 476 ಒಟ್ಟು-952. ಮಾಯಕೊಂಡ ಕ್ಷೇತ್ರ; 5 ಶ್ರೀರಾಮನಗರ ಲಂಬಾಣಿಹಟ್ಟಿ ಮಜರೆ ಗ್ರಾಮ ಆಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪೂರ್ವ ಭಾಗ, ಇಲ್ಲಿ ಪುರುಷ 325, ಮಹಿಳೆ 345 ಒಟ್ಟು-670. ಚನ್ನಗಿರಿ ವಿಧಾನಸಭಾ ಕ್ಷೇತ್ರ; 100 ಅಸ್ತಾಪನಹಳ್ಳಿ ಸರ್ಕಾರಿ ಎಸ್ಟಿ ಆಶ್ರಮ ಶಾಲೆ ಇಲ್ಲಿ ಪುರುಷ 474, ಮಹಿಳೆ 505, ಒಟ್ಟು-979. ಹೊನ್ನಾಳಿ ಕ್ಷೇತ್ರ; 92 ಆಂಜಿನೇಯಪುರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 296, ಮಹಿಳೆ 276 ಸೇರಿ ಒಟ್ಟು-572.
ಧ್ಯೇಯ ಆಧಾರಿತ ಮತಗಟ್ಟೆಗಳು
ಜಗಳೂರು ಕ್ಷೇತ್ರ; 238 ಮುಸ್ಟೂರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 501, ಮಹಿಳೆ 546 ಒಟ್ಟು-1047. ಹರಿಹರ ಕ್ಷೇತ್ರ; 98 ಹನಗವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 325, ಮಹಿಳೆ 330 ಒಟ್ಟು-655, ದಾವಣಗೆರೆ- ಉತ್ತರ; 201 ದಾವಣಗೆರೆ ಭದ್ರಾ ಕಾಲೋನಿಯ ಕಾರ್ಯಪಾಲಕ ಇಂಜಿನಿಯರ್ ಕಚೇರಿ ಇಲ್ಲಿ ಪುರುಷ 678, ಮಹಿಳೆ 680 ಒಟ್ಟು-1358, ದಾವಣಗೆರೆ- ದಕ್ಷಿಣ; 139 ಜಯದೇವ ಹಾಸ್ಟೆಲ್, ಹದಡಿ ರಸ್ತೆಯ ಶ್ರೀಮತಿ ಗೌರಮ್ಮ ಡಿ.ಎಂ. ಹನಗೋಡಿ ಮಠದ ನರ್ಸರಿ ಮತ್ತು ಹಿರಿಯ ಪ್ರಾಥಮಿಕ ಶಾಲೆ, ಇಲ್ಲಿ ಪುರುಷ 158, ಮಹಿಳೆ 173 ಒಟ್ಟು-331. ಮಾಯಕೊಂಡ ಕ್ಷೇತ್ರ; 41 ಹೊನ್ನೂರು ಸರ್ಕಾರಿ ಹಿರಿಯ ಪ್ರಾಥಮಿಕ ಇಲ್ಲಿ ಪುರುಷ 449, ಮಹಿಳೆ 461, ಒಟ್ಟು-910, ಚನ್ನಗಿರಿ ಕ್ಷೇತ್ರ; 160 ಚನ್ನಗಿರಿ ಪಟ್ಟಣ ಸರ್ಕಾರಿ ಸಂಯುಕ್ತ ಬಾಲಕಿಯರ ಪ್ರೌಢಶಾಲೆ ಇಲ್ಲಿ ಪುರುಷ 573, ಮಹಿಳೆ 607, ಒಟ್ಟು-1180. ಹೊನ್ನಾಳಿ ಕ್ಷೇತ್ರ; 232 ಚೀಲೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 462, ಮಹಿಳೆ 510, ಒಟ್ಟು-972 ಮತದಾರರು.
ವಿಶೇಷ ಚೇತನರಿಂದ ನಿರ್ವಹಿಸುವ ಮತಗಟ್ಟೆಗಳು
ಜಗಳೂರು ಕ್ಷೇತ್ರ; 181 ಜಗಳೂರು ಪಟ್ಟಣದ ಹೊರಕೆರೆ ಸರ್ಕಾರಿ ಕನ್ನಡ ಮಾದರಿ ಹೈಯರ್ ಪ್ರೈಮರಿ ಸ್ಕೂಲ್, ಇಲ್ಲಿ ಪುರುಷ 257, ಮಹಿಳೆ 244, ಒಟ್ಟು-501. ಹರಿಹರ ಕ್ಷೇತ್ರ; 113 ಬೆಳ್ಳೂಡಿ ಶ್ರೀ ಪಟೇಲ್ ಗುರುಬಸಪ್ಪ ಪ್ರೌಢಶಾಲೆ ಇಲ್ಲಿ ಪುರುಷ 601, ಮಹಿಳೆ 613 ಸೇರಿ 1214. ದಾವಣಗೆರೆ- ಉತ್ತರ; 178 ನಿಟ್ಟುವಳ್ಳಿ ಸರ್ಕಾರಿ ಪ್ರೌಢಶಾಲೆ ಕೊಠಡಿ 4 ರಲ್ಲಿ ಪುರುಷ 620, ಮಹಿಳೆ 664 ಒಟ್ಟು-1284. ದಾವಣಗೆರೆ- ದಕ್ಷಿಣ; 39 ಶಿವಾಲಿ ಟಾಕೀಸ್ ರಸ್ತೆ, ಕೌಶಲಾಭಿವೃದ್ಧಿಗಾಗಿ ಸಂಯೋಜಿತ ಪ್ರಾದೇಶಿಕ ಕೇಂದ್ರ ಇಲ್ಲಿ ಪುರುಷ 614, ಮಹಿಳೆ 620 ಸೇರಿ 1234. ಮಾಯಕೊಂಡ ಕ್ಷೇತ್ರ; 61 ಆನಗೋಡು ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿ ಪುರುಷ 598, ಮಹಿಳೆ 634 ಸೇರಿ 1232. ಚನ್ನಗಿರಿ ಕ್ಷೇತ್ರ; 36 ಸಂತೆಬೆನ್ನೂರು ಶ್ರೀಶೈಲ ಜಗದ್ಗುರು ವಾಗೀಶ ಪಾಂಡಿತರಾಧ್ಯ ಸರ್ಕಾರಿ ಜೂನಿಯರ್ ಕಾಲೇಜು, ಇಲ್ಲಿ ಪುರುಷ 420, ಮಹಿಳೆ 423, ಒಟ್ಟು-843. ಹಾಗೂ ಹೊನ್ನಾಳಿ ವಿಧಾನಸಭಾ ಕ್ಷೇತ್ರ ಮತಗಟ್ಟೆ 74 ಹೊನ್ನಾಳಿಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಇಲ್ಲಿ ಪುರುಷ 270, ಮಹಿಳೆ 314 ಸೇರಿದಂತೆ ಒಟ್ಟು 584 ಮತದಾರರಿದ್ದಾರೆ.
ವಿಶೇಷಚೇತನರಿಗೆ ವಿಶೇಷವಾಗಿ ಎಲ್ಲಾ ಮತಗಟ್ಟೆ ಸಿಬ್ಬಂದಿಗಳಿಗೆ ಇನ್ನೋವಾ ವಾಹನ ನೀಡಿದ್ದು ಮಸ್ಟರಿಂಗ್, ಡಿ.ಮಸ್ಟರಿಂಗ್ನಲ್ಲಿ ಮೊದಲ ಆದ್ಯತೆ ನೀಡಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
ಸುದ್ದಿದಿನ,ಬೆಂಗಳೂರು:ತತ್ವಪದಗಳು ಎಲ್ಲ ಕಾಲಕ್ಕೂ ಸಲ್ಲುವಂತಹ ಬೆಳಕನ್ನು ನೀಡುವ ಸೃಜನಶೀಲ ಸಂರಚನೆಗಳಾಗಿವೆ ಎಂದು ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಅಧ್ಯಕ್ಷರಾದ ಶ್ರೀ ಕಾ.ತ.ಚಿಕ್ಕಣ್ಣ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಕೆ.ನಾರಾಯಣಪುರದ ಕ್ರಿಸ್ತು ಜಯಂತಿ ಡೀಮ್ಡ್ ವಿಶ್ವವಿದ್ಯಾನಿಲಯದ ಕನ್ನಡ ವಿಭಾಗ ಹಾಗೂ ಕರ್ನಾಟಕ ಸರ್ಕಾರದ ಸಂತಕವಿ ಕನಕದಾಸ ಮತ್ತು ತತ್ವಪದಕಾರರ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ: ಸಾಂಸ್ಕೃತಿಕ ಅನುಸಂಧಾನ’ ವಿಷಯ ಕುರಿತಾದ ಒಂದು ದಿನದ ರಾಷ್ಟ್ರೀಯ ವಿಚಾರಸಂಕಿರಣದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕನ್ನಡ ಸಾಹಿತ್ಯ ಚರಿತ್ರೆಯಲ್ಲಿ ತತ್ವಪದ ಸಾಹಿತ್ಯ ರೂಪುಗೊಂಡಿದ್ದ ಕಾಲವನ್ನು ಕತ್ತಲಯುಗ ಎಂದು ಕರೆದು ವಿಸ್ಮೃತಿಗೆ ತಳ್ಳಲಾಗಿತ್ತು. ಆದರೆ ಆ ಕತ್ತಲೆಯುಗದಲ್ಲಿಯೇ ಜಗತ್ತಿಗೆ ಮಹೋನ್ನತ ಬೆಳಕು ನೀಡುವ ನುಡಿರತ್ನಗಳು ರಚನೆಗೊಂಡಿದ್ದವು. ತತ್ವಪದಕಾರರು ಪರಂಪರೆಯೊಂದಿಗೆ ಸಂವಾದ ನಡೆಸುತ್ತಾ ವರ್ತಮಾನಕ್ಕೆ ಸೂಕ್ತವಾಗಿ ಅನ್ವಯವಾಗುವ ಹಾಗೂ ಭವಿಷ್ಯಕ್ಕೆ ಬೇಕಾದ ಜಾಗೃತಿಯನ್ನು ನೀಡುವ ಮೂಲಕ ಕನ್ನಡ ಸಂಸ್ಕೃತಿಯಲ್ಲಿ ತಮ್ಮದೇ ಆದ ಮೌಲ್ಯಯುತ ಸ್ಥಾನವನ್ನು ಪಡೆದುಕೊಂಡಿವೆ. ಸಮಾಜದಲ್ಲಿರುವ ಜಾತಿಭೇದ, ಲಿಂಗಭೇದ, ವರ್ಣಭೇದ ಮೊದಲಾದ ವಿಷಕಾರಿ ಮನಸ್ಥಿತಿಗೆ ತತ್ವಪದಕಾರರು ತಮ್ಮ ನುಡಿ-ನಡೆಗಳ ಮೂಲಕ ಚಿಕಿತ್ಸೆ ನೀಡುವ ಮೂಲಕ ಬದುಕಿನ ಸತ್ಯ ಮತ್ತು ಸಾರ್ಥಕತೆಯನ್ನು ಸಾಧಿಸಿತೋರಿದ್ದಾರೆ ಎಂದು ತಿಳಿಸಿದರು.
ವಿಶ್ವಾತ್ಮಕವಾದ ಸಂವೇದನೆಯ ತತ್ವಪದ ಸಾಹಿತ್ಯ
ವಿಚಾರಸಂಕಿರಣವನ್ನು ಉದ್ಘಾಟನೆ ಮಾಡಿದ ಕ್ರಿಸ್ತು ಜಯಂತಿ ವಿವಿಯ ಸಂಸೋಧನೆ ಮತ್ತು ಅಭಿವೃದ್ಧಿ ವಿಭಾಗದ ನಿರ್ದೇಶಕರಾದ ಫಾ.ಡಾ.ಮರಿಯಾಲಾಲ್ ಜೋಸೆಫ್ ಅವರು, ಕನ್ನಡದ ತತ್ವಪದಗಳು ಜನಸಾಮಾನ್ಯರ ವೇದಗಳಾಗಿವೆ. ಕನ್ನಡ ಸಾಹಿತ್ಯಕ್ಕೆ ಸಂಗೀತಾತ್ಮಕ ಶಾಸ್ತ್ರೀಯ ಸಂರಚನೆಯ ಜೊತೆಗೆ ವಿಶ್ವಾತ್ಮಕವಾದ ಸಂವೇದನೆಯ ಮೂಲಕ ಮಹತ್ತರವಾದ ಕೊಡುಗೆ ನೀಡಿದ್ದು ತತ್ವಪದ ಸಾಹಿತ್ಯ.
ಮಧ್ಯಯುಗೀನ ಕಾಲದ ಭಕ್ತಿಚಳವಳಿಯ ಭಾಗವಾಗಿ ಮೂಡಿಬಂದ ವಚನ ಸಾಹಿತ್ಯ ಹಾಗೂ ಕೀರ್ತನ ಸಾಹಿತ್ಯಗಳು ಕರ್ನಾಟಕದಲ್ಲಿ ಮೂಡಿಸಿದ ಸಾಂಸ್ಕೃತಿಕ ಚೈತನ್ಯಶೀಲತೆಯನ್ನು ನಂತರದಲ್ಲಿ ಮುಂದುವರೆಸುವ ಮೂಲಕ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದದ್ದು ತತ್ವಪದ ಸಾಹಿತ್ಯವಾಗಿದೆ. ಇಂದಿನ ಆವೇಗದ ಆಧುನಿಕ ಜಗತ್ತಿಗೆ ತತ್ವಪದಕಾರರು ನೀಡಿದ ಅರಿವಿನ ಬೆಳಕು ಅತ್ಯಗತ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.
ನಿಜತ್ವ ಬೆಳಗುವ ದಾರಿದೀಪ ತತ್ವಪದಗಳು-ಪದ್ಮಾಲಯ ನಾಗರಾಜ್: ಪ್ರಧಾನಗೋಷ್ಠಿಯ ಅಧ್ಯಕ್ಷತೆ ವಹಿಸಿ ತತ್ವಪದಗಳ ಸಾಂಸ್ಕೃತಿಕ ಮಹತ್ವ ಕುರಿತು ಮಾತನಾಡಿದ ಅಚಲ ಸಾಧಕರಾದ ಪದ್ಮಾಲಯ ನಾಗರಾಜ್ ಅವರು, ಜಗತ್ತಿನಾದ್ಯಂತ ಇಂದು ನಡೆಯುತ್ತಿರುವ ಅಧಿಕಾರ ಹಾಗೂ ವ್ಯಾಪಾರದಾಹೀ ರಾಜಕೀಯ ಲಂಪಟ, ಆರ್ಥಿಕ ಲಂಪಟ ಹಾಗೂ ಸಾಮಾಜಿಕ ಅಸಮಾನ ಸೃಷ್ಟಿಗಳು ಮಾನವಲೋಕವನ್ನು ಭ್ರಮೆ ಮತ್ತು ಅಸತ್ಯದತ್ತ ಕೊಂಡೊಯ್ಯುತ್ತಿವೆ. ಅವೈಜ್ಞಾನಿಕ ಕಲ್ಪನೆಗಳನ್ನು ಹುಟ್ಟುಹಾಕುತ್ತಾ ವಾಸ್ತವಿಕತೆಯಿಂದ ದೂರಮಾಡುತ್ತಿವೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ನಿರಂತರ ಆಗುವಿಕೆಯ ಅನಂತವಿಶ್ವದಲ್ಲಿ ನಾವೊಂದು ಬಿಂದುವೆಂಬ ಸತ್ಯದರ್ಶನ ಮಾಡಿಸುವ ಮೂಲಕ ನಿಜತ್ವವನ್ನು ಬೆಳಗುವ ದಾರದೀಪವಾಗಿವೆ ತತ್ವಪದಗಳು ಎಂದು ತಿಳಿಸಿದರು.
‘ತತ್ವಪದಕಾರ್ತಿಯರ ಲೋಕದೃಷ್ಠಿ’ಯನ್ನು ಕುರಿತು ವಿಚಾರಮಂಡನೆ ಮಾಡಿದ ಡಾ.ಶೋಭಾರಾಣಿ ಎನ್. ಅವರು, ‘ತತ್ವಪದಕಾರ್ತಿಯರು ಸಂಸಾರದ ಸಹಯಾನದೊಂದಿಗೇ ಅಧ್ಯಾತ್ಮಿಕ ಸಾಧನೆಯನ್ನು ಮಾಡಬಹುದೆಂದು ಸಾಧಿಸಿತೋರಿದ್ದಾರೆ. ನಿರ್ಭೀತ ನುಡಿಕಾರರು ತತ್ವಪದಕಾರ್ತಿಯರು. ಮಹಿಳಾ ತತ್ವಪದಕಾರರ ಇನ್ನೂ ಎಷ್ಟೋ ತತ್ವಪದಗಳು ಸಂಗ್ರಹವಾಗಬೇಕಿದೆ’ ಎಂದು ಅಭಿಪ್ರಯಪಟ್ಟರು.
‘ಕನ್ನಡ ತತ್ವಪದಗಳು ಮತ್ತು ಬಹುತ್ವ ಭಾರತ’ ಕುರಿತು ಮಾತನಾಡಿದ ರವಿ ಕಂಬಳಿ ಅವರು, ಬಹುಸಂಸ್ಕೃತಿಗಳಿರುವ ಭಾರತದಲ್ಲಿ ಏಕರೂಪೀತನದ ಯಾಜಮಾನ್ಯ ಹೇರುವ ದೌರ್ಜನ್ಯ ಹಾಗೂ ಸಮಸ್ಯೆಗಳಿಗೆ ಪ್ರತಿಕ್ರಿಯೆಯಾಗಿ ಕನ್ನಡ ತತ್ವಪದಕಾರರು ಬಹುತ್ವವನ್ನು ತಮ್ಮ ಸಾಹಿತ್ಯದ ಆಶಯ ಹಾಗೂ ಬದುಕಿನ ಆಚರಣೆಯನ್ನಾಗಿ ಮಾಡಿಕೊಂಡರು. ಮೌಢ್ಯರಹಿತವಾದ ಸಮಸಮಾಜ ಕಲ್ಪನೆ ಅವರದಾಗಿತ್ತು. ತಮಗಿಂತಲೂ ಹಿಂದೆ ಹಲವು ಬಗೆಯ ಬಹುತ್ವದ ಮಾದರಿಗಳನ್ನು ಪ್ರತಿಪಾದಿಸಿದ್ದ ವಚನಕಾರರು ಇವರಿಗೆ ಆದರ್ಶವಾಗಿದ್ದರು ಎಂದು ತಿಳಿಸಿದರು.
ವಿಚಾರಸಂಕಿರಣದ ಭಾಗವಾಗಿ ಹೊರತರಲಾಗಿದ್ದ ‘ಕನ್ನಡ ತತ್ವಪದ ಸಾಹಿತ್ಯ
ಸಾಂಸ್ಕೃತಿಕ ಅನುಸಂಧಾನ-ಸಂಪುಟ 1 ಮತ್ತು 2’ ಕೃತಿಗಳನ್ನು ಲೋಕಾರ್ಪಣೆಗೊಳಿಸಲಾಯಿತು. ಪ್ರಸಿದ್ಧ ಗಾಯಕರಾದ ಶ್ರೀ ಖಾಸೀಂ ಮಲ್ಲಿಗೆ ಮಡುವು ತತ್ವಪದ ಗಾಯನವನ್ನು ಪ್ರಸ್ತುತಪಡಿಸಿದರು. ಪರ್ಯಾಯಗೋಷ್ಠಿಗಳಲ್ಲಿ 6೦ಕ್ಕೂ ಹೆಚ್ಚು ಸಂಶೋಧಕರು ಪ್ರಬಂಧ ಮಂಡನೆ ಮಾಡಿದರು.
ಕ್ರಿಸ್ತು ಜಯಂತಿ ವಿಶ್ವವಿದ್ಯಾಲಯದ ಮಾನವಿಕ ವಿಭಾಗದ ಡೀನರಾದ ಡಾ.ಗೋಪಕುಮಾರ್ ಎ.ವಿ. ಅವರು ಮುಖ್ಯ ಅತಿಥಿಯಾಗಿದ್ದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಕ್ಯಾಪ್ಟನ್ ಡಾ.ಸರ್ವೇಶ್ ಬಿ.ಎಸ್. ಅವರು ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ವಿಚಾರಸಂಕಿರಣದ ಸಂಯೋಜಕರಾದ ಡಾ.ಕಿರಣಕುಮಾರ್ ಹೆಚ್.ಜಿ ಅವರು ವಂದಿಸಿದರು.
ಕನ್ನಡ ಪ್ರಾಧ್ಯಾಪಕರಾದ ಡಾ.ಕುಪ್ಪನಹಳ್ಳಿ ಎಂ.ಭೈರಪ್ಪ ಅವರು ನಿರೂಪಿಸಿದರು. ಕನ್ನಡ ಪ್ರಾಧ್ಯಾಪಕರಾದ ಪ್ರೊ.ಚಂದ್ರಶೇಖರ್ ಎನ್., ಡಾ.ಸೈಯದ್ ಮುಯಿನ್, ಡಾ.ರವಿಶಂಕರ್ ಎ.ಕೆ., ತತ್ವಪದಕಾರರ ಅಧ್ಯಯನ ಕೇಂದ್ರದ ಸಿಬ್ಬಂದಿವರ್ಗದವರಾದ ರಜತಾ ಶೆಟ್ಟಿ ಹಾಗೂ ಸುಪ್ರಿಯಾ ಅವರು ಉಪಸ್ಥಿತರಿದ್ದರು. 200ಕ್ಕೂ ಹೆಚ್ಚು ಅಧ್ಯಾಪಕರು, ಸಂಶೋಧಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಕೊಪ್ಪಳ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇಲ್ಲಿ 2022-23 ರಿಂದ 2024-25ನೇ ಸಾಲಿನ ಅವಧಿಯಲ್ಲಿ ವಿದ್ಯಾರ್ಥಿಗಳಿಂದ ಸಂಗ್ರಹಿಸಿದ ಅರೇ ಸರ್ಕಾರಿ ಖಾತೆಯ ಅನುದಾನದಲ್ಲಿ ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ನಿಯಮಬಾಹಿರವಾಗಿ ಖರೀದಿ ಪ್ರಕ್ರಿಯೆಗೆ ಮುಂದಾಗಿ ಲಕ್ಷಾಂತರ ರೂಪಾಯಿಗಳನ್ನು ವಂಚಿಸಿರುವ ಪ್ರಾಂಶುಪಾಲರಾದ ಡಾ. ಗಣಪತಿ ಕೆ. ಲಮಾಣಿ ಇವರ ವಿರುದ್ಧ ಸೂಕ್ತ ಕಾನೂನುಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.
ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ಕೊಪ್ಪಳ ಇವರಿಂದ ಅರೇ ಸರ್ಕಾರಿ ಖಾತೆಯ ಅನುದಾನದ ಬಳಕೆಯ ಅಧಿಕೃತ ದಾಖಲೆಗಳನ್ನು ಪಡೆದು, ಪರಿಶೀಲನೆ ಮಾಡಿದಾಗ ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ಮಾಡಿರುವುದು ಮಾತ್ರವಲ್ಲದೆ, ವೆಂಕಟೇಶ್ ಟ್ರೇರ್ಸ್, ಕುಕನೂರು ಮತ್ತು ವೆಂಕಟೇಶ್ ಟ್ರೇರ್ಸ್, ತಳಕಲ್ಲ ಎಂಬ ಒಂದೇ ಹೆಸರಿನ ಏಜೆನ್ಸಿಯ ಮೂಲಕ ಎರಡು ಸ್ಥಳಗಳ ಹೆಸರಿನಲ್ಲಿ ನಕಲಿ ಜಿ.ಎಸ್.ಟಿ ಬಿಲ್ಲುಗಳನ್ನು ಸೃಷ್ಟಿಸಿಕೊಂಡು ಲಕ್ಷಾಂತರ ರೂಪಾಯಿ ಅನುದಾನವನ್ನು ವಂಚನೆ ಮಾಡಿರುವುದು ಕಂಡುಬದಿರುತ್ತದೆ.
ಪ್ರಾಂಶುಪಾಲರಿಗೆ ಈ ಬಗ್ಗೆ ಸ್ಪಷ್ಟನೆ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. 3 ತಿಂಗಳು ಕಳೆದರೂ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರು ಯಾವುದೇ ಪ್ರತ್ಯುತ್ತರ ನೀಡದ ಕಾರಣ, ನಕಲಿ ಜಿ.ಎಸ್.ಟಿ ಮೂಲಕ ಹಣ ವಂಚಿಸಿರುವ ಪ್ರಕರಣವನ್ನು ತನಿಖೆಗೆ ಒಳಪಡಿಸುವಂತೆ ಲೋಕಾಯುಕ್ತಗೆ ದೂರು ನೀಡಿ, ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ
ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್ಸೆಟ್ ಸಂಸ್ಥೆಯಿಂದ ಫಾಸ್ಟ್ ಫುಡ್ ತಯಾರಿಕೆ ಕುರಿತ 12 ದಿನಗಳ ಉಚಿತ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಫೆಬ್ರವರಿ 16 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿಯನ್ನು ಸಲ್ಲಿಸಬಹುದು. 18 ರಿಂದ 50 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ ಅನ್ನು ಕಡ್ಡಾಯವಾಗಿ ಹೊಂದಿರಬೇಕು. ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು. ತರಬೇತಿ ಅವಧಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ಮೊಬೈಲ್ ಸಂಖ್ಯೆ: 9481506564, 9740982585, 9380162042, 9241482541, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಅವ್ಯವಹಾರ | ಕೊಪ್ಪಳ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಗಣಪತಿ ಕೆ. ಲಮಾಣಿ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಪ್ರೊ.ಪೂರ್ಣಾನಂದ, ಎ.ನಾರಾಯಣ, ಸತೀಶ್ ಆಚಾರ್ಯ ಸೇರಿದಂತೆ ಹಲವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ
-
ದಿನದ ಸುದ್ದಿ7 days agoಇದೇ 11 ರಂದು ಜಿಎಂ ವಿಶ್ವವಿದ್ಯಾಲಯದಲ್ಲಿ ಪ್ರಥಮ ಘಟಿಕೋತ್ಸವ : ಕುಲಪತಿ ಡಾ. ಎಸ್.ಆರ್. ಶಂಕಪಾಲ್
-
ದಿನದ ಸುದ್ದಿ3 days agoತತ್ವಪದಗಳು ಸಾರ್ವಕಾಲಿಕ ಬೆಳಕನಿಧಿ: ಕಾ.ತ.ಚಿಕ್ಕಣ್ಣ
-
ದಿನದ ಸುದ್ದಿ4 days agoಫಾಸ್ಟ್ ಫುಡ್ ತಯಾರಿಕೆ ಉಚಿತ ತರಬೇತಿ
-
ದಿನದ ಸುದ್ದಿ4 days agoಐ.ಎ.ಎಸ್ ಮತ್ತು ಕೆ.ಎ.ಎಸ್ ಪರೀಕ್ಷೆಗಳಿಗೆೆ ತರಬೇತಿ

