ದಿನದ ಸುದ್ದಿ
ಹಿರಿಯ ನಟ ಲೋಕನಾಥ್ ನಿಧನಕ್ಕೆ ಮುಖ್ಯಮಂತ್ರಿ ಶೋಕ
ಸುದ್ದಿದಿನ,ಬೆಂಗಳೂರು : ಹಿರಿಯ ನಟ ಲೋಕನಾಥ್ ಅವರ ನಿಧನಕ್ಕೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಶೋಕ ವ್ಯಕ್ತ ಪಡಿಸಿದ್ದಾರೆ.
ಪೋಷಕ ಪಾತ್ರಗಳಿಗೆ ಜೀವ ತುಂಬಿದ ನಟ ಲೋಕನಾಥ್ ಅವರ ಭೂತಯ್ಯನ ಮಗ ಅಯ್ಯು ಚಿತ್ರದ ಪಾತ್ರ ಜನಮನದಲ್ಲಿ ಸದಾ ಹಸಿರಾಗಿ ಉಳಿದಿದೆ. ಚಿತ್ರರಂಗ , ರಂಗಭೂಮಿ ಎರಡರಲ್ಲೂ ಅವರ ಕೊಡುಗೆ ಸ್ಮರಣೀಯ ಎಂದಿರುವ ಮುಖ್ಯಮಂತ್ರಿಗಳು ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟ ಲೋಕನಾಥ್ ನಿಧನ ದುಃಖ ಉಂಟು ಮಾಡಿದೆ.ಪೋಷಕ ಪಾತ್ರಗಳಿಗೆ ಜೀವ ತುಂಬಿದ ನಟ ಲೋಕನಾಥ್ ಅವರ ಭೂತಯ್ಯನ ಮಗ ಅಯ್ಯು ಚಿತ್ರದ ಪಾತ್ರ ಜನಮನದಲ್ಲಿ ಸದಾ ಹಸಿರಾಗಿ ಉಳಿದಿದೆ. ಚಿತ್ರರಂಗ , ರಂಗಭೂಮಿ ಎರಡರಲ್ಲೂ ಅವರ ಕೊಡುಗೆ ಸ್ಮರಣೀಯ.ಲೋಕನಾಥ್ ಆತ್ಮಕ್ಕೆ ಶಾಂತಿ ಸಿಗಲಿ,ಕುಟುಂಬಕ್ಕೆ ಅಗಲಿಕೆಯ ದುಃಖ ಭರಿಸುವ ಶಕ್ತಿ ದೊರೆಯಲಿ pic.twitter.com/NAnCZ7j1an
— CM of Karnataka (@CMofKarnataka) December 31, 2018
ಸುದ್ದಿದಿನ.ಕಾಂ|ವಾಟ್ಸಾಪ್|9986715401