ದಿನದ ಸುದ್ದಿ
ಹದಿನೆಂಟನೇ ಲೋಕಸಭಾ ಚುನಾವಣಾ ಫಲಿತಾಂಶದ ಕಿರುನೋಟ ; ಮಿಸ್ ಮಾಡ್ದೆ ಓದಿ
ಸುದ್ದಿದಿನ ಡೆಸ್ಕ್ : ಹದಿನೆಂಟನೇ ಲೋಕಸಭಾ ಚುನಾವಣಾ ಫಲಿತಾಂಶದ ಕಿರುನೋಟ ಈ ರೀತಿ ಇದೆ. ಬಿಜೆಪಿ ನಾಯಕರಾದ ನರೇಂದ್ರ ಮೋದಿ, ವಾರಾಣಸಿಯಿಂದ ಅಮಿತ್ ಶಾ, ಗಾಂಧಿನಗರದಿಂದ, ಬಿಕನೇರ್ ನಿಂದ ಅರ್ಜುನ್ ರಾಮ್ ಮೇಘ್ವಾಲ್, ಜೋದ್ಪುರದಿಂದ ಗಜೇಂದ್ರ ಸಿಂಗ್ ಶೇಖಾವತ್, ಗುನಾ ದಿಂದ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಓಂಬಿರ್ಲಾ ಜಯಗಳಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಯ್ ಬರೇಲಿ ಹಾಗೂ ವೈಯನಾಡು ಕ್ಷೇತ್ರಗಳಿಂದ ಸಮಾಜವಾದಿ ಪಕ್ಷದ ಡಿಂಪಲ್ ಯಾದವ್, ಮೈನ್ಪುರಿ ಕ್ಷೇತ್ರದಿಂದ ಹಾಗೂ ಟಿಎಂಸಿಯ ಶತ್ರುಘ್ನ ಸಿನ್ಹಾ, ಅನನ್ಸೋಲ್, ಮತಕ್ಷೇತ್ರದಿಂದ ಗೆಲುವು ಸಾಧಿಸಿದ್ದಾರೆ.
ಉತ್ತರಪ್ರದೇಶದ 80 ಕ್ಷೇತ್ರಗಳ ಪೈಕಿ ಸಮಾಜವಾದಿ ಪಕ್ಷ 37, ಬಿಜೆಪಿ 33, ಕಾಂಗ್ರೆಸ್ 6 ಮತ್ತು ರಾಷ್ಟ್ರೀಯ ಲೋಕದಳ 2 ಸ್ಥಾನಗಳನ್ನು ತಮ್ಮದಾಗಿಸಿಕೊಂಡಿದೆ. ಬಿಜೆಪಿ ಧುರೀಣ ನರೇಂದ್ರ ಮೋದಿ ಅವರು, ವಾರಾಣಸಿಯಲ್ಲಿ ಕಾಂಗ್ರೆಸ್ನ ಅಜಯ್ ರೈ ಅವರನ್ನು ಒಂದೂವರೆ ಲಕ್ಷಕ್ಕೂ ಅಧಿಕ ಮತಗಳಿಂದ ಸೋಲಿಸಿದ್ದಾರೆ. ಬಿಜೆಪಿಯ ರಾಜನಾಥ್ ಸಿಂಗ್, ಲಖನೌ ಕ್ಷೇತ್ರದಿಂದ ಒಂದು ಲಕ್ಷ 35 ಸಾವಿರ ಅಂತರದಿಂದ ಜಯ ಸಾಧಿಸಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ರಾಯ್ಬರೇಲಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ದಿನೇಶ್ ಪ್ರತಾಪ್ ಸಿಂಗ್ ಅವರನ್ನು 3 ಲಕ್ಷ 90 ಸಾವಿರಕ್ಕೂ ಅಧಿಕ ಮತಗಳಿಂದ ಸೋಲಿಸಿದ್ದಾರೆ. ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್ ಕನೌಜ್ ದಿಂದ ವಿಜಯ ಸಾಧಿಸಿದ್ದಾರೆ. ಬಿಹಾರದ 40 ಲೋಕಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮತ್ತು ಜೆಡಿಯು ತಲಾ 12 ಸ್ಥಾನಗಳನ್ನು ಗಳಿಸಿದೆ.
ದೆಹಲಿಯಲ್ಲಿ ಎಲ್ಲ 7 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ. ಪಂಜಾಬ್ನಲ್ಲಿ 13 ಸ್ಥಾನಗಳ ಪೈಕಿ ಕಾಂಗ್ರೆಸ್ 7, ಆಮ್ ಆದ್ಮಿ ಪಕ್ಷ 3, ಶಿರೊಮಣಿ ಅಕಾಲಿ ದಳ 1, ಪಕ್ಷೇತರರು 2 ಸ್ಥಾನ ಗಳಿಸಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ತಲಾ 5 ಸ್ಥಾನಗಳಲ್ಲಿ ಜಯಗಳಿಸಿದೆ. ಜಮ್ಮು-ಕಾಶ್ಮೀರದಲ್ಲಿ ಬಿಜೆಪಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ತಲಾ 2 ಸ್ಥಾನ ಗಳಿಸಿದ್ದು, ಮತ್ತೊಂದು ಸ್ಥಾನದಲ್ಲಿ ಸ್ವತಂತ್ರ ಅಭ್ಯರ್ಥಿ ವಿಜಯ ಸಾಧಿಸಿದ್ದಾರೆ. ಚಂಡೀಗಢದ ಸ್ಥಾನವನ್ನು ಕಾಂಗ್ರೆಸ್ ಪಡೆದುಕೊಂಡಿದೆ. ಲಡಾಖ್ನ ಲೋಕಸಭಾ ಕ್ಷೇತ್ರದಲ್ಲಿ ಸ್ವತಂತ್ರ್ಯ ಅಭ್ಯರ್ಥಿ ಆಯ್ಕೆಯಾಗಿದ್ದಾರೆ.
ಹಿಮಾಚಲ ಪ್ರದೇಶದ ಎಲ್ಲ 4, ಮಧ್ಯಪ್ರದೇಶದ ಎಲ್ಲ 29 ಹಾಗೂ ಉತ್ತರಖಂಡದ ಎಲ್ಲ 5, ತ್ರಿಪುರ್ ಎಲ್ಲ 2, ಅಂಡಮಾನ್-ನಿಕೋಬಾರ್ 1 ಸ್ಥಾನಗಳಲ್ಲಿ ಬಿಜೆಪಿ ಜಯ ದಾಖಲಿಸಿದೆ. ರಾಜ್ಯಸ್ಥಾನದ 25 ಸ್ಥಾನಗಳ ಪೈಕಿ ಬಿಜೆಪಿ 14, ಕಾಂಗ್ರೆಸ್ 8, ಸಿಪಿಎಂ ಹಾಗೂ ಆರ್ಎಲ್ಎಸ್ ಮತ್ತು ಭಾರತ್ ಆದಿವಾಸಿ ಪಕ್ಷ 1 ಸ್ಥಾನ ಪಡೆದಿವೆ. ಗುಜರಾತ್ನಲ್ಲಿ 25 ಸ್ಥಾನಗಳನ್ನು ಬಿಜೆಪಿ ಹಾಗೂ 1 ಸ್ಥಾನವನ್ನು ಕಾಂಗ್ರೆಸ್ ಪಡೆದುಕೊಂಡಿದೆ. ಮಹಾರಾಷ್ಟ್ರದ 48 ಸ್ಥಾನಗಳ ಪೈಕಿ 9 ಬಿಜೆಪಿ, 13 ಕಾಂಗ್ರೆಸ್, 9 ಶಿವಸೇನಾ ಉದ್ದವ್, 7 ಶಿವಸೇನಾ ಎಸ್ಎಚ್ಎಸ್, 8 ಎನ್ಸಿಪಿ ಪವಾರ್ ಹಾಗೂ 1 ಸ್ಥಾನ ಪಕ್ಷೇತರ ಅಭ್ಯರ್ಥಿ ಪಾಲಾಗಿದೆ.
ಗೋವಾದಲ್ಲಿ 1 ಸ್ಥಾನವನ್ನು ಕಾಂಗ್ರೆಸ್ ಮತ್ತೊಂದು ಸ್ಥಾನವನ್ನು ಬಿಜೆಪಿ ಗೆದ್ದುಕೊಂಡಿದೆ. ಛತ್ತೀಸ್ಗಢದಲ್ಲಿ ಬಿಜೆಪಿ 10, ಹಾಗೂ ಕಾಂಗ್ರೆಸ್ 1 ಸ್ಥಾನದಲ್ಲಿ ಜಯಸಾಧಿಸಿದೆ. ಜಾರ್ಖಂಡ್ನಲ್ಲಿ ಬಿಜೆಪಿ 8, ಎಜೆಎಸ್ಯು 1, ಜೆಎಂಎಂ 3 ಹಾಗೂ ಕಾಂಗ್ರೆಸ್ 2 ಸ್ಥಾನಗಳಲ್ಲಿ ಜಯ ಸಾಧಿಸಿದೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ 29 ಸ್ಥಾನಗಳನ್ನು ಗೆದ್ದಿದೆ. ಅಸ್ಸಾಂನಲ್ಲಿ ಬಿಜೆಪಿ 9, ಕಾಂಗ್ರೆಸ್ 3, ಯುಪಿಪಿಎಲ್ ಮತ್ತು ಅಸ್ಸಾಂಗಣ ಪರಿಷತ್ ತಲಾ 1 ಸ್ಥಾನಗಳಿಸಿದೆ.
ನಾಗಾಲ್ಯಾಂಡ್ನ 1 ಹಾಗೂ ಮಣಿಪುರದ ಎರಡೂ ಸ್ಥಾನಗಳಲ್ಲಿ ಕಾಂಗ್ರೆಸ್ ಗೆದ್ದುಕೊಂಡಿದೆ. ಆಂಧ್ರಪ್ರದೇಶದ 25 ಸ್ಥಾನಗಳಲ್ಲಿ ಟಿಡಿಪಿ 16, ಬಿಜೆಪಿ 3, ವೈಎಸ್ಆರ್ಸಿಪಿ 4, ಜನಸೇನಾ ಪಕ್ಷ 2 ಸ್ಥಾನಗಳಲ್ಲಿ ವಿಜಯ ಸಾಧಿಸಿದೆ. ತೆಲಂಗಾಣದಲ್ಲಿ ಬಿಜೆಪಿ-ಕಾಂಗ್ರೆಸ್ ತಲಾ 8 ಸ್ಥಾನ ಹಾಗೂ ಎಐಎಂಐಎಂ 1 ಕ್ಷೇತ್ರದಲ್ಲಿ ಜಯಗಳಿಸಿದೆ.
ತಮಿಳುನಾಡಿನಲ್ಲಿ ಡಿಎಂಕೆ 22, ಕಾಂಗ್ರೆಸ್ 9, ವಿಸಿಕೆ, ಸಿಪಿಐ ಮತ್ತು ಸಿಪಿಐಎಂ ತಲಾ 2 ಕ್ಷೇತ್ರಗಳಲ್ಲಿ ವಿಜಯ ದಾಖಲಿಸಿದೆ. ಕೇರಳದಲ್ಲಿ ಯುಡಿಎಫ್ 18, ಸಿಪಿಐಎಂ 1 ಸ್ಥಾನದಲ್ಲಿ ಜಯಗಳಿಸಿವೆ. ಬಿಜೆಪಿ ಇದೇ ಮೊದಲ ಬಾರಿಗೆ ತನ್ನ ಖಾತೆಯನ್ನು ಆರಂಭಿಸಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಪೈಕಿ 17 ರಲ್ಲಿ ಬಿಜೆಪಿ, 2 ರಲ್ಲಿ ಜೆಡಿಎಸ್, 9 ರಲ್ಲಿ ಕಾಂಗ್ರೆಸ್ ಜಯ ಸಾಧಿಸಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


