Connect with us

ದಿನದ ಸುದ್ದಿ

ಲವ್ ಜಿಹಾದ್ ವಿರುದ್ಧ ಸಹಾಯವಾಣಿ

Published

on

ಸುದ್ದಿದಿನ,ದಾವಣಗೆರೆ: ಶ್ರೀ ರಾಮಸೇನೆ, ಕರ್ನಾಟಕ ವತಿಯಿಂದ ಲವ್ ಜಿಹಾದಿಗಳೇ ಎಚ್ಚರ, ಕೊಡುವೆವು ಉತ್ತರ ಎನ್ನುವ ಘೋಷಣೆಯೊಂದಿಗೆ ಲವ್ ಜಿಹಾದಿನಲ್ಲಿ ಸಿಲುಕಿ ಸಂಕಷ್ಟ ಪಡುತ್ತಿರುವವರ ಅನುಕೂಲಕ್ಕಾಗಿ ರಾಜಾದ್ಯಂತ 24*7 ಸಹಾಯವಾಣಿ 9090443444 ಯಾವುದೇ ಕಡೆಗಳಿಂದ ಕರೆ ಬಂದರೂ ಸಹ ತಕ್ಷಣವೇ ಸಹಾಯ ಮಾಡಲಾಗುವುದು ಎಂದು ಶ್ರೀ ರಾಮಸೇನೆಯ ರಾಜಾಧ್ಯಕ್ಷ ಗಂಗಾಧರ ಜಿ.ಕುಲಕರ್ಣಿ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬುಧವಾರ ರಾಜ್ಯದ ಆರು ಕಡೆಗಳಲ್ಲಿ ಏಕಕಾಲದಲ್ಲಿ ಸಹಾಯವಾಣಿ ಆರಂಭಿಸಲಾಗುತ್ತಿದೆ. ಕಲಬುರಗಿಯಲ್ಲಿ ಸಿದ್ದಲಿಂಗ ಸ್ವಾಮಿ, ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್, ದಾವಣಗೆರೆಯಲ್ಲಿ ಗಂಗಾಧರ ಕುಲಕರ್ಣಿ, ಬೆಂಗಳೂರು, ಮಂಗಳೂರು, ಬಾಗಲಕೋಟೆ ಜಿಲ್ಲೆಯಲ್ಲಿ ಆರಂಭಿಸಲಾಗುತ್ತಿದೆ. ಲವ್‌ ಜಿಹಾದ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರೆಗಳನ್ನು ಮಾತ್ರ ಸ್ವೀಕರಿಸಲಾಗುವುದು. ಕರೆ ಮಾಡಿದವರ ಮಾಹಿತಿಯನ್ನು ಗುಪ್ತವಾಗಿ ಇಡಲಾಗುವುದು ಎಂದು ಹೇಳಿದರು.

ಹಿಂದೂ ಯುವತಿಯರಿಗೆ ಜಾಲ ಬೀಸಲು ಮುಸ್ಲಿಂ ಯುವಕರಿಗೆ ತರಬೇತಿ ನೀಡಿ, ಮುಸ್ಲಿಂ ಹುಡುಗರು ಹಿಂದು ಹೆಸರಿನಲ್ಲಿ ಹಿಂದು ಯುವತಿಯರನ್ನು ಪ್ರೀತಿಯ ಬಲೆಗೆ ಬೀಳಿಸಿಕೊಳ್ಳುತ್ತಾ, ಮೋಸದ ಪ್ರೀತಿ, ಆಕರ್ಷಕ ಉಡುಗೊರೆ ಕೊಡುವ ಮೂಲಕ ಲವ್ ಜಿಹಾದ ನ ಮೊದಲ ಹೆಜ್ಜೆ ಆರಂಭಿಸುತ್ತಾರೆ. ಬಲೆಗೆ ಬಿದ್ದ ಹಿಂದು ಯುವತಿಯರಿಗೆ ಡ್ರಗ್ಸ್ ಮದ್ಯಪಾನ, ವಶೀಕರಣ, ಬ್ಲಾಕ್ ಮೇಲ್, ಅಶ್ಲೀಲ ಫೆÇಟೋ, ವಿಡಿಯೋ ಸೇರಿದಂತೆ ಇನ್ನಿತರೆ ಮಾರ್ಗಗಳ ಮೂಲಕ ವಶದಲ್ಲಿಟ್ಟುಕೊಳ್ಳುವ ಕುತಂತ್ರ ನಡೆಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದಲ್ಲದೇ ಆಸ್ತಿ ಕಬಳಿಕೆ, ನಿಕಾಹ, ಬುರ್ಖಾ, ಹಿಜಾಬ್, ಗೋಮಾಂಸ ಭಕ್ಷಣೆ, ನಮಾಜ ಮುಂತಾದವುಗಳ ಮೂಲಕ ಹಿಂದು ಯುವತಿಯರನ್ನು ಇಸ್ಲಾಮಿಗೆ ಮತಾಂತರಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದೆಲ್ಲದರ ನಂತರ ಕೊನೆ ಹಂತದಲ್ಲಿ ಭಯೋತ್ಪಾದನೆಗೆ, ಗೂಡಚಾರ್ಯಕ್ಕೆ, ವೇಶ್ಯಾವಾಟಿಕೆಗೆ ಬಳಸಿಕೊಂಡು ಹಿಂದೂ ಯುವತಿಯರ ಜೀವನ ಹಾಳು ಮಾಡುಲಾಗುತ್ತಿದೆ. ಇಸ್ಲಾಂ ಜನಸಂಖ್ಯೆ ಹೆಚ್ಚಳಕ್ಕೆ, ವಿದೇಶಕ್ಕೆ ವೇಶ್ಯಾವಾಟಿಕೆಗೆ ಮಾರಾಟಕ್ಕೆ ಲವ್ ಜಿಹಾದ್ ಕೆಲಸ ಮಾಡುತ್ತಿದೆ. ಇದಕ್ಕೆ ಒಪ್ಪದಿದ್ದರೆ ಕೊನೆಯಲ್ಲಿ ಕೊಲೆಯಲ್ಲಿ ಅಂತ್ಯ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಇದೆಲ್ಲದರ ನಿಯಂತ್ರಣ, ಅಂತ್ಯಕ್ಕೆ ಶ್ರೀ ರಾಮಸೇನೆ ಮುಂದಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಮಣಿ ಸರ್ಕಾರ್, ಪರಶುರಾಮ ನಡುಮನಿ, ಪಿ.ಸಾಗ‌ರ್, ಬಿ.ಜಿ.ರಾಹುಲ್‌, ಶ್ರೀಧರ್, ಶಿವರಾಜ್ ಪೂಜಾ‌ರ್, ಸುನೀಲ್ ವಾಲಿ, ರಾಜು, ಸಿದ್ದಾರ್ಥ, ವಿನಯ್, ಶಶಿಕುಮಾ‌ರ್ ಇತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending