Connect with us

ದಿನದ ಸುದ್ದಿ

ಲವ್ ಜಿಹಾದ್ ವಿರುದ್ಧ ಸಹಾಯವಾಣಿ

Published

on

ಸುದ್ದಿದಿನ,ದಾವಣಗೆರೆ: ಶ್ರೀ ರಾಮಸೇನೆ, ಕರ್ನಾಟಕ ವತಿಯಿಂದ ಲವ್ ಜಿಹಾದಿಗಳೇ ಎಚ್ಚರ, ಕೊಡುವೆವು ಉತ್ತರ ಎನ್ನುವ ಘೋಷಣೆಯೊಂದಿಗೆ ಲವ್ ಜಿಹಾದಿನಲ್ಲಿ ಸಿಲುಕಿ ಸಂಕಷ್ಟ ಪಡುತ್ತಿರುವವರ ಅನುಕೂಲಕ್ಕಾಗಿ ರಾಜಾದ್ಯಂತ 24*7 ಸಹಾಯವಾಣಿ 9090443444 ಯಾವುದೇ ಕಡೆಗಳಿಂದ ಕರೆ ಬಂದರೂ ಸಹ ತಕ್ಷಣವೇ ಸಹಾಯ ಮಾಡಲಾಗುವುದು ಎಂದು ಶ್ರೀ ರಾಮಸೇನೆಯ ರಾಜಾಧ್ಯಕ್ಷ ಗಂಗಾಧರ ಜಿ.ಕುಲಕರ್ಣಿ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಬುಧವಾರ ರಾಜ್ಯದ ಆರು ಕಡೆಗಳಲ್ಲಿ ಏಕಕಾಲದಲ್ಲಿ ಸಹಾಯವಾಣಿ ಆರಂಭಿಸಲಾಗುತ್ತಿದೆ. ಕಲಬುರಗಿಯಲ್ಲಿ ಸಿದ್ದಲಿಂಗ ಸ್ವಾಮಿ, ಹುಬ್ಬಳ್ಳಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್‌ ಮುತಾಲಿಕ್, ದಾವಣಗೆರೆಯಲ್ಲಿ ಗಂಗಾಧರ ಕುಲಕರ್ಣಿ, ಬೆಂಗಳೂರು, ಮಂಗಳೂರು, ಬಾಗಲಕೋಟೆ ಜಿಲ್ಲೆಯಲ್ಲಿ ಆರಂಭಿಸಲಾಗುತ್ತಿದೆ. ಲವ್‌ ಜಿಹಾದ್ ಪ್ರಕರಣಗಳಿಗೆ ಸಂಬಂಧಿಸಿದಂತೆ ಕರೆಗಳನ್ನು ಮಾತ್ರ ಸ್ವೀಕರಿಸಲಾಗುವುದು. ಕರೆ ಮಾಡಿದವರ ಮಾಹಿತಿಯನ್ನು ಗುಪ್ತವಾಗಿ ಇಡಲಾಗುವುದು ಎಂದು ಹೇಳಿದರು.

ಹಿಂದೂ ಯುವತಿಯರಿಗೆ ಜಾಲ ಬೀಸಲು ಮುಸ್ಲಿಂ ಯುವಕರಿಗೆ ತರಬೇತಿ ನೀಡಿ, ಮುಸ್ಲಿಂ ಹುಡುಗರು ಹಿಂದು ಹೆಸರಿನಲ್ಲಿ ಹಿಂದು ಯುವತಿಯರನ್ನು ಪ್ರೀತಿಯ ಬಲೆಗೆ ಬೀಳಿಸಿಕೊಳ್ಳುತ್ತಾ, ಮೋಸದ ಪ್ರೀತಿ, ಆಕರ್ಷಕ ಉಡುಗೊರೆ ಕೊಡುವ ಮೂಲಕ ಲವ್ ಜಿಹಾದ ನ ಮೊದಲ ಹೆಜ್ಜೆ ಆರಂಭಿಸುತ್ತಾರೆ. ಬಲೆಗೆ ಬಿದ್ದ ಹಿಂದು ಯುವತಿಯರಿಗೆ ಡ್ರಗ್ಸ್ ಮದ್ಯಪಾನ, ವಶೀಕರಣ, ಬ್ಲಾಕ್ ಮೇಲ್, ಅಶ್ಲೀಲ ಫೆÇಟೋ, ವಿಡಿಯೋ ಸೇರಿದಂತೆ ಇನ್ನಿತರೆ ಮಾರ್ಗಗಳ ಮೂಲಕ ವಶದಲ್ಲಿಟ್ಟುಕೊಳ್ಳುವ ಕುತಂತ್ರ ನಡೆಸಲಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಇದಲ್ಲದೇ ಆಸ್ತಿ ಕಬಳಿಕೆ, ನಿಕಾಹ, ಬುರ್ಖಾ, ಹಿಜಾಬ್, ಗೋಮಾಂಸ ಭಕ್ಷಣೆ, ನಮಾಜ ಮುಂತಾದವುಗಳ ಮೂಲಕ ಹಿಂದು ಯುವತಿಯರನ್ನು ಇಸ್ಲಾಮಿಗೆ ಮತಾಂತರಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದೆಲ್ಲದರ ನಂತರ ಕೊನೆ ಹಂತದಲ್ಲಿ ಭಯೋತ್ಪಾದನೆಗೆ, ಗೂಡಚಾರ್ಯಕ್ಕೆ, ವೇಶ್ಯಾವಾಟಿಕೆಗೆ ಬಳಸಿಕೊಂಡು ಹಿಂದೂ ಯುವತಿಯರ ಜೀವನ ಹಾಳು ಮಾಡುಲಾಗುತ್ತಿದೆ. ಇಸ್ಲಾಂ ಜನಸಂಖ್ಯೆ ಹೆಚ್ಚಳಕ್ಕೆ, ವಿದೇಶಕ್ಕೆ ವೇಶ್ಯಾವಾಟಿಕೆಗೆ ಮಾರಾಟಕ್ಕೆ ಲವ್ ಜಿಹಾದ್ ಕೆಲಸ ಮಾಡುತ್ತಿದೆ. ಇದಕ್ಕೆ ಒಪ್ಪದಿದ್ದರೆ ಕೊನೆಯಲ್ಲಿ ಕೊಲೆಯಲ್ಲಿ ಅಂತ್ಯ ಮಾಡುವ ಕೆಲಸಕ್ಕೆ ಮುಂದಾಗಿದ್ದಾರೆ. ಇದೆಲ್ಲದರ ನಿಯಂತ್ರಣ, ಅಂತ್ಯಕ್ಕೆ ಶ್ರೀ ರಾಮಸೇನೆ ಮುಂದಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಜಿಲ್ಲಾಧ್ಯಕ್ಷ ಮಣಿ ಸರ್ಕಾರ್, ಪರಶುರಾಮ ನಡುಮನಿ, ಪಿ.ಸಾಗ‌ರ್, ಬಿ.ಜಿ.ರಾಹುಲ್‌, ಶ್ರೀಧರ್, ಶಿವರಾಜ್ ಪೂಜಾ‌ರ್, ಸುನೀಲ್ ವಾಲಿ, ರಾಜು, ಸಿದ್ದಾರ್ಥ, ವಿನಯ್, ಶಶಿಕುಮಾ‌ರ್ ಇತರರು ಇದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಆರೋಗ್ಯ ಇಲಾಖೆ ನೇಮಕಾತಿ ; ಸಚಿವ ದಿನೇಶ್ ಗುಂಡೂರಾವ್ ರಿಂದ ಸಿಹಿ ಸುದ್ದಿ

Published

on

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯರು, ಸಿಬ್ಬಂದಿಗಳ ಕೊರತೆ ಇದ್ದು, ಹಂತ ಹಂತವಾಗಿ ವೈದ್ಯರ ನೇಮಕ ಮಾಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಡಿಕೇರಿಯಲ್ಲಿ ನಿನ್ನೆ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಯಲ್ಲಿಯೇ ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ದೊರೆಯುವಂತಾಗಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಿಎಸ್‌ಟಿ ಭಾರತೀಯರ ಜೀವನ ಸುಧಾರಿಸುವ ಸಾಧನ : ಪ್ರಧಾನಿ ಮೋದಿ

Published

on

ಸುದ್ದಿದಿನಡೆಸ್ಕ್:ಸರಕು ಮತ್ತು ಸೇವಾ ತೆರಿಗೆ ಜಿಎಸ್‌ಟಿಗೆ ಏಳು ವರ್ಷ ತುಂಬಿದ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ, 140 ಕೋಟಿ ಭಾರತೀಯರ ಜೀವನವನ್ನು ಸುಧಾರಿಸುವ ಸಾಧನವಾಗಿದೆ. ಇದರ ಜಾರಿಯ ಬಳಿಕ ಬಡವರು ಮತ್ತು ಜನಸಾಮಾನ್ಯರಿಗೆ ಗಮನಾರ್ಹ ಉಳಿತಾಯವಾಗಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪ್ರಧಾನಿ ಹೇಳಿದ್ದಾರೆ.

ಜಿಎಸ್‌ಟಿ ಜಾರಿಯಾದ ನಂತರ ಗೃಹಬಳಕೆಯ ವಸ್ತುಗಳು ಹೆಚ್ಚು ಅಗ್ಗವಾಗಿವೆ ಎಂದಿರುವ ಅವರು, ಜನರ ಜೀವನವನ್ನು ಪರಿವರ್ತಿಸುವ ಈ ಸುಧಾರಣೆಗಳ ಪ್ರಯಾಣವನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಹರಿಹರ | ಡಿಪ್ಲೊಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೊಮಾ ಕೋರ್ಸ್‍ಗಳಾದ ಡಿಪ್ಲೊಮಾ ಇನ್ ಟೂಲ್ ಮತ್ತು ಡೈ ಮೇಕಿಂಗ್, ಡಿಪ್ಲೊಮಾ ಇನ್ ಆಟೋಮೇಷನ್ ಮತ್ತು ರೊಬೊಟಿಕ್ಸ್. ಡಿಪ್ಲೊಮಾ ಇನ್ ಎಲೆಕ್ಟಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಇನ್ ಪ್ರಿಸಿಷನ್ ಮ್ಯಾನ್ಯುಪ್ಯಾಕ್ಟರಿಂಗ್, ಡಿಪ್ಲೊಮಾ ಕೋರ್ಸುಗಳ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಮತ್ತು ಎಸ್.ಎಸ್.ಎಲ್.ಸಿ ಪಾಸಾದ ಅರ್ಹ ವಿದ್ಯಾರ್ಥಿಗಳು ಜಿಟಿಟಿಸಿ ಹರಿಹರ ಕೇಂದ್ರಕ್ಕೆ ನೇರವಾಗಿ ಸಂಪರ್ಕಿಸಿ ಆಪ್‍ಲೈನ್‍ನಲ್ಲಿ ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಪ್ಲಾಟ್ ನಂ:22 ಸಿ & ಡಿ ಕೆಐಎಡಿಬಿ ಇಂಡಸ್ಟ್ರಿಯಲ್ ಏರಿಯ ಹರ್ಲಾಪುರ,ಕೆ ಎಸ್‍ ಆರ್ ಟಿ ಸಿ ಡಿಪೋ ಹತ್ತಿರ ಹರಿಹರ ದೂ.ಸಂ. 9845941245 / 8711913947

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending