ಕ್ರೀಡೆ
ಅತಿ ಕಡಿಮೆ ಪಂದ್ಯ ; 400 ವಿಕೆಟ್ : ದಾಖಲೆ ಬರೆದ ಸ್ಪಿನ್ನರ್ ಆರ್ ಅಶ್ವಿನ್

ಸುದ್ದಿದಿನ,ಅಹಮದಾಬಾದ್: ಟೀಂ ಇಂಡಿಯಾದ ಸ್ಪಿನ್ನರ್ ಆರ್ ಅಶ್ವಿನ್ ಅವರು ಅತಿ ಕಡಿಮೆ ಪಂದ್ಯಗಳಲ್ಲಿ 400 ವಿಕೆಟ್ಗಳನ್ನು ಪಡೆದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಭಾರತದ ಪರ ಹೊಸ ದಾಖಲೆಯನ್ನು ಬರೆದಿದ್ದಾರೆ.
ಅಶ್ವಿನ್ 77ನೇ ಪಂದ್ಯವನ್ನು ಆಡುತ್ತಿದ್ದು ಇಂಗ್ಲೆಂಡಿನ ಎರಡನೇ ಇನ್ನಿಂಗ್ಸ್ನಲ್ಲಿ ಬೆನ್ ಸ್ಟೋಕ್ಸ್ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದು, ವಿಶ್ವದಲ್ಲಿ ಈ ಸಾಧನೆಯನ್ನು ಮಾಡಿದ ಆಟಗಾರರ ಪಟ್ಟಿಯಲ್ಲಿ ಅಶ್ವಿನ್ ಅವರು ಎರಡನೇ ಸ್ಥಾನದಲ್ಲಿದ್ದಾರೆ. ಶ್ರೀಲಂಕಾದ ಸ್ಪಿನ್ನರ್ ಮುತ್ತಯ್ಯ ಮುರುಳೀಧರನ್(72ಪಂದ್ಯ) ಮೊದಲ ಸ್ಥಾನದಲ್ಲಿದ್ದಾರೆ.
400 ವಿಕೆಟ್ ಗಡಿ ದಾಟಿದ ಭಾರತದ 4ನೇ ಬೌಲರ್ ಅಶ್ವಿನ್ ಆಗಿದ್ದು, ಲೆಗ್ ಸ್ಪಿನ್ನರ್ ಅನಿಲ್ ಕುಂಬ್ಳೆ 619ವಿಕೆಟ್, ಕಪಿಲ್ ದೇವ್ 434ವಿಕೆಟ್, ಹರ್ಭಜನ್ ಸಿಂಗ್ 417 ವಿಕೆಟ್ಗಳನ್ನು ಪಡೆದಿದ್ದಾರೆ.
ಮೊದಲ ಇನ್ನಿಂಗ್ಸ್ನಲ್ಲಿ 3 ವಿಕೆಟ್, ಎರಡನೇ ಇನ್ನಿಂಗ್ಸ್ನಲ್ಲಿ ಅಶ್ವಿನ್ 4 ವಿಕೆಟ್ ಪಡೆದಿದ್ದಾರೆ. ಈ ಪಂದ್ಯಕ್ಕೂ ಮೊದಲು 76 ಪಂದ್ಯಗಳ 142 ಇನ್ನಿಂಗ್ಸ್ನಲ್ಲಿ ಬೌಲಿಂಗ್ ಮಾಡಿ 394 ವಿಕೆಟ್ಗಳನ್ನು ಪಡೆದಿದ್ದರು.
"PHENOMENAL" says one legend about the "modern day" legend 🔝👌🏻@anilkumble1074 showers praise on off-spinner @ashwinravi99 😃#TeamIndia #INDvENG #PinkBallTest @Paytm pic.twitter.com/PMAe3jTBtD
— BCCI (@BCCI) February 25, 2021
💬 This body is ageing, but I won't be surprised if I surpass myself in the future: @ashwinravi99 👌🏻
Confidence 💯 percent from the champion spinner 🔝#TeamIndia #INDvENG #PinkBallTest @Paytm pic.twitter.com/vTcdoUGTj7
— BCCI (@BCCI) February 25, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಕೊರೋನಾ ಪಾಸಿಟಿವ್ : ಸಚಿನ್ ತೆಂಡೂಲ್ಕರ್ ಆಸ್ಪತ್ರೆಗೆ ದಾಖಲು

ಸುದ್ದಿದಿನ ಡೆಸ್ಕ್ : ಕ್ರಿಕೆಟ್ ದಂತಕಥೆ ಸಚಿನ್ ತೆಂಡೂಲ್ಕರ್ ಅವರು “ವೈದ್ಯಕೀಯ ಸಲಹೆಯ ಮೇರೆಗೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದಕ್ಕಾಗಿ ನಾನು ಆಸ್ಪತ್ರೆಗೆ ದಾಖಲಿಸಲಾಗಿದ್ದೇನೆ ಎಂದು ಶುಕ್ರವಾರ ಹೇಳಿದ್ದಾರೆ. ಅವರಿಗೆ ಕಳೆದ ವಾರ ಕೊರೋನಾ ಪಾಸಿಟಿವ್ ಬಂದಿತ್ತು.
ನಿಮ್ಮ ಶುಭಾಶಯಗಳು ಮತ್ತು ಪ್ರಾರ್ಥನೆಗಳಿಗೆ ನನ್ನ ಧನ್ಯವಾದಗಳು. ವೈದ್ಯಕೀಯ ಸಲಹೆಯಡಿಯಲ್ಲಿ ಮುನ್ನೆಚ್ಚರಿಕೆಯಾಗಿ ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವೇ ದಿನಗಳಲ್ಲಿ ಗುಣಮುಖನಾಗಿ ಮನೆಗೆ ಮರಳುವ ಭರವಸೆ ಇದೆ. ಎಲ್ಲರೂ ಕಾಳಜಿ ವಹಿಸಿ ಮತ್ತು ಸುರಕ್ಷಿತವಾಗಿರಿ. ವಿಶ್ವಕಪ್ ಗೆದ್ದ 10 ನೇ ವಾರ್ಷಿಕೋತ್ಸವದಲ್ಲಿರುವ ಎಲ್ಲಾ ಭಾರತೀಯರಿಗೆ ಮತ್ತು ನನ್ನ ತಂಡದ ಆಟಗಾರರಿಗೆ ಶುಭಾಶಯಗಳು ಎಂದು ಸಚಿನ್ ಟ್ವೀಟ್ ಮಾಡಿದ್ದಾರೆ.
Thank you for your wishes and prayers. As a matter of abundant precaution under medical advice, I have been hospitalised. I hope to be back home in a few days. Take care and stay safe everyone.
Wishing all Indians & my teammates on the 10th anniversary of our World Cup 🇮🇳 win.
— Sachin Tendulkar (@sachin_rt) April 2, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ದಾವಣಗೆರೆ | ಕ್ರೀಡೆಯಿಂದ ಮಾನಸಿಕ ನೆಮ್ಮದಿ : ಮೇಯರ್ ಎಸ್.ಟಿ ವೀರೇಶ್

ಸುದ್ದಿದಿನ,ದಾವಣಗೆರೆ: ಯಾವುದಾದರೂ ಕ್ರೀಡೆಯಲ್ಲಿ ನಿಮ್ಮನ್ನು ತೊಡಗಿಸಿಕೊಂಡಾಗ ನಿಮ್ಮ ಆರೋಗ್ಯ ಸುಧಾರಿಸಿ ಮಾನಸಿಕ ನೆಮ್ಮದಿ ದೊರೆಯುತ್ತದೆ ಎಂದು ಮಹಾನಗರಪಾಲಿಕೆಯ ಮಹಾಪೌರರಾದ ಎಸ್.ಟಿ ವೀರೇಶ್ ಅಭಿಪ್ರಾಯ ವ್ಯಕ್ತಪಡಿಸಿದರು.
ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರ ದಾವಣಗೆರೆ ಹಾಗೂ ದಾವಣಗೆರೆ ವಿಶ್ವವುದ್ಯಾಲಯದ ದೈಹಿಕ ಶಿಕ್ಷಣ ನಿರ್ದೇಶಕರ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಮಾ.16 ರಂದು ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಅಂತರ ಕಾಲೇಜು ದಾವಣಗೆರೆ ವಲಯ ಮತ್ತು ಅಂತರ ವಲಯದ ಬಾಲ್ ಬ್ಯಾಡ್ಮಿಂಟನ್ ಪುರುಷರ ಮತ್ತು ಮಹಿಳೆಯರ ಪಂದ್ಯಾವಳಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇದನ್ನೂ ಓದಿ | ಜಾರಕಿಹೊಳಿ ಸಿಡಿ ಪ್ರಕರಣ | ನನ್ನ ಮನೆಗೆ ಭೇಟಿ ನೀಡಿ ಸಿಡಿ ಕೊಟ್ಟಿದ್ದರು : ದಿನೇಶ್ ಕಲ್ಲಹಳ್ಳಿ
ಯುವಕರು ಮೊಬೈಲ್ ಸಂಸ್ಕøತಿಗೆ ಒಳಗಾಗಿದ್ದಾರೆ. ತಮ್ಮ ಜವಬ್ದಾರಿಗಳ ಬಗ್ಗೆ ಅರಿವಿರದೆ ಸಮಯ ವ್ಯರ್ಥ ಮಾಡುತಿದ್ದಾರೆ. ಈ ಮೊಬೈಲ್ ವ್ಯಸನವನ್ನು ಮುಂದುವರೆಸದೆ ಯಾವುದಾದರೂ ಕ್ರೀಡೆಯಲ್ಲಿ ನಿಮ್ಮನ್ನು ತೊಡಗಿಸಿಕೊಳ್ಳಿರಿ. ಕ್ರೀಡೆಯಿಂದ ನಿಮ್ಮ ಆರೋಗ್ಯ ಸುಧಾರಿಸುವುದಲ್ಲದೆ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ. ಇದರಿಂದ ನಿಮ್ಮ ಗುರಿಯನ್ನು ತಲುಪುವುದು ಸರಳವಾಗುತ್ತದೆ. ನಾನು ಸಾಮಾನ್ಯರಲ್ಲಿ ಸಾಮಾನ್ಯ ಮನುಷ್ಯನಾಗಿದ್ದು, ನನ್ನನ್ನು ಗುರುತಿಸಿ ಈ ದೊಡ್ಡ ಹುದ್ದೆಯನ್ನು ನೀಡಿದ್ದಾರೆ. ಹಾಗಾಗಿ ಏನೇ ಮಾಡಿದರೂ ನಮ್ಮಲ್ಲಿ ಧೃಢ ಸಂಕಲ್ಪ ಇರಬೇಕು ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಟಿ.ವೀರೇಶ್ ವಹಿಸಿದ್ದರು, ರಂಗಸ್ವಾಮಿ ಸ್ವಾಗತಿಸಿದರು. ಪ್ರೊ.ಭೀಮಣ್ಣ ಸುಣಗಾರ್ ನಿರೂಪಿಸಿದರು. ಡಾ. ಮಹೇಶ್ ಪಾಟೀಲ್ ವಂದಿಸಿದರು. ವೀರೇಂದ್ರ, ಸದಾಶಿವ, ಡಾ.ವೆಂಕಟೇಶ್, ತಿಪ್ಪೇಸ್ವಾಮಿ, ಬಸವರಾಜ್ ದಮ್ಮಳ್ಳಿ ಮುಂತಾದವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣು

ಸುದ್ದಿದಿನ ಡೆಸ್ಕ್ : ಭಾರತದ ಕುಸ್ತಿಪಟುಗಳಾದ ಗೀತಾ ಮತ್ತು ಬಬಿತಾ ಫೋಗಟ್ ಅವರ ಸೋದರ ಸಂಬಂಧಿ ರಿತಿಕಾ ಫೋಗಟ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ರಿತಿಕಾ ಅವರು ಕುಸ್ತಿ ಪಂದ್ಯಾವಳಿಯ ಅಂತಿಮ ಪಂದ್ಯದಲ್ಲಿ ಸೋತಿದ್ದು, ಸೋಲಿನ ನೋವನ್ನು ತಾಳಲಾಗದೇ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ | ಸೈನಾ ನೆಹ್ವಾಲ್ ಭಾರತದ ಮೂರನೇ ಉನ್ನತ ಬ್ಯಾಡ್ಮಿಂಟನ್ ಆಟಗಾರ್ತಿ
ಒಂದು ವರದಿ ಪ್ರಕಾರ ಮಾ.12 ಮತ್ತು 14ರಂದು ರಾಜಸ್ಥಾನದಲ್ಲಿ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ರಿತಿಕಾ ಭಾಗವಹಿಸಿದ್ದರು. ಇನ್ನು ಇವರ ಸಹೋದರಿಯರ ಜೀವನಾಧಾರಿತ ಚಿತ್ರ ‘ದಂಗಲ್’ ಚಿತ್ರ ಬಾಲಿವುಡ್ನಲ್ಲಿ ತೆರೆಕಂಡಿತ್ತು. ಅಮೀರ್ ಖಾನ್ ಈ ಸಿನೆಮಾದ ನಾಯಕನಟನಾಗಿ ಅಭಿನಯಿಸಿದ್ದರು.
Rest in Peace choti behen Ritika. I still can't believe what just happened with you Will miss you forever 💔💔 Om Shanti 🥺😢🙏🏼 pic.twitter.com/LiLum1kbYB
— Ritu phogat (@PhogatRitu) March 18, 2021
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days ago
6ನೇ ವೇತನ ಆಯೋಗದ ಶಿಫಾರಸ್ಸಿನಂತೆ ಸಾರಿಗೆ ನೌಕರರಿಗೆ ವೇತನ ಭತ್ಯೆ ನೀಡಲು ಸಾಧ್ಯವಿಲ್ಲ : ಮುಖ್ಯಮಂತ್ರಿ ಯಡಿಯೂರಪ್ಪ
-
ದಿನದ ಸುದ್ದಿ5 days ago
ಸಚಿವ ಲಕ್ಷ್ಮಣ ಸವದಿ ತವರು ಜಿಲ್ಲೆಯಲ್ಲೇ ಸಾರಿಗೆ ನೌಕರ ನೇಣಿಗೆ ಶರಣು..!
-
ದಿನದ ಸುದ್ದಿ5 days ago
ದಾವಣಗೆರೆ | ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕೋವಿಡ್ ಲಸಿಕಾ ಜಾಗೃತಿ ಅಭಿಯಾನ
-
ದಿನದ ಸುದ್ದಿ5 days ago
ಪರಿಶಿಷ್ಟ ಜಾತಿ ಅಭ್ಯರ್ಥಿ | ಮಾಧ್ಯಮ ಪ್ರವೇಶಿಕೆ : ಬರಹ ಮತ್ತು ಸಂವಹನ ಕೌಶಲ- ರಾಜ್ಯ ಮಟ್ಟದ ಕಮ್ಮಟ
-
ನಿತ್ಯ ಭವಿಷ್ಯ7 days ago
ಈ ರಾಶಿಯವರಿಗೆ ಯುಗಾದಿಯ ನಂತರ ಮದುವೆ ಕಾರ್ಯ, ರಿಯಲ್ ಎಸ್ಟೇಟ್ ನವರಿಗೆ ಯಶಸ್ಸು! ಗುರುವಾರ- ರಾಶಿ ಭವಿಷ್ಯ ಏಪ್ರಿಲ್-8,2021
-
ರಾಜಕೀಯ5 days ago
‘ಸತ್ಯಪ್ಪ ಸಾಹುಕಾರ’ ಎಂಬ ರೈತ ನಾಯಕ..!
-
ದಿನದ ಸುದ್ದಿ5 days ago
ಪ್ರತಿ ಗ್ರಾಮಪಂಚಾಯತಿಗಳಲ್ಲಿ ಮಕ್ಕಳ ಗ್ರಾಮಸಭೆ ನಡೆಸಲು ಸುತ್ತೋಲೆ; ಮಕ್ಕಳ ಹಕ್ಕುಗಳ ಉಲ್ಲಂಘನೆ ಮಾಡಿದಲ್ಲಿ ಕ್ರಮ: ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ
-
ದಿನದ ಸುದ್ದಿ5 days ago
ದಾವಣಗೆರೆ : ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ