Connect with us

ದಿನದ ಸುದ್ದಿ

ಎಂಜಿ ರೋಡ್ ಶಾಂತಿ ಬದುಕು ಮತ್ತು ಬವಣೆ

Published

on

ಸುದ್ದಿದಿನ ವಿಶೇಷ:  ಸ್ಯಾಂಡಲ್‌ವುಡ್‌ನ ಜ್ಯೂನಿಯರ್ ಆರ್ಟಿಸ್ಟ್‌ಗಳಿಗೆ ಎಂಜಿ ರೋಡ್ ಆರ್ಟಿಸ್ಟ್‌ಗಳು ಎಂಬ ಅನ್ವರ್ಥ ನಾಮವೊಂದಿದೆ. ಸಿನಿಮಾದಲ್ಲಿ ಸಣ್ಣಪುಟ್ಟ ರೋಲ್ ಮಾಡುವವರ ಇಂಥ ಕಲಾವಿದರ ಬದುಕನ್ನು ಅನಾವರಣ ಮಾಡುವ ‘ಎಂಜಿ ರೋಡ್ ಶಾಂತಿ’ ನಾಟಕವು ಇದೇ 20ರಂದು ಬೆಂಗಳೂರಿನಲ್ಲಿ ಪ್ರದರ್ಶನವಾಗಲಿದೆ.

ಒಬ್ಬಳು ನಾಟಕದ ಮೂಲಕ ದೇಶಾದ್ಯಂತ ಹೆಸರು ಮಾಡಿದ ರಂಗ ಕಲಾವಿದ ಪ್ರಸನ್ನ ಡಿ. ಅವರು ಈ ನಾಟಕವನ್ನು ನಿರ್ದೇಶಿಸಿದ್ದು, ಮೇ.20ರ ಸಂಜೆ 7.15ಕ್ಕೆ ಬೆಂಗಳೂರಿನ ಮಲ್ಲಹಳ್ಳಿಯಲ್ಲಿರುವ ಕಲಾಗ್ರಾಮದಲ್ಲಿ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ.

ಭಾರತೀಯ ಸಿನಿಮಾ ಹಾಗೂ ರಂಗಭೂಮಿ ಕ್ಷೇತ್ರದಿಂದ ಹತ್ತಿರದಿಂದ ಕಂಡು ಮಾಧ್ಯಮಗಳಲ್ಲಿ ಕೆಲಸ ಮಾಡಿರುವ ಅನುಭವವಿರುವ ಬರಹಗಾರ ವಿಜಯ್ ತೆಂಡೂಲ್ಕರ್ ಅವರ ‘ಬೇಬಿ’ ಮರಾಠಿ ಕಾಂದಂಬರಿಯ ಕನ್ನಡ ಅವತರಣಿಕೆಯು ಎಂಜಿ ರೋಡ್ ಶಾಂತಿ.

ಮರಾಠಿ ಕಾದಂಬರಿಯನ್ನು ಕನ್ನಡ ಮಣ್ಣಿಗೆ ಹೊಂದಿಕೊಳ್ಳುವಂತೆ ಕೆಲವು ಅಂಶಗಳನ್ನು ಸೇರಿಸಿ ನಾಟಕವನ್ನು ಕನ್ನಡಿಗನ ಮನ ಮುಟ್ಟುವಂತೆ ರೂಪಿಸಲಾಗಿದೆ ಎನ್ನುತ್ತಾರೆ ನಿರ್ದೇಶಕ ಪ್ರಸನ್ನ ಡಿ.

ಸಾಗರ ಮೂಲದವರಾದ ಪ್ರಸನ್ನ ಅವರು ಈವರೆಗೆ ಪೀರನೆಂಬ ಕಿರಾತಕನ ಪ್ರಸಂಗ, ಒಬ್ಬಳು, ಓವರ್ ಕೋಟ್, ಬಿಂಬಾಯಣ, ಪರಿಹಾರ  ಮೊದಲಾದ ನಾಟಕಗಳನ್ನು ನಿರ್ದೇಶಿಸಿದೆ. ಒಬ್ಬಳು ನಾಟಕವು ಇವರಿಗೆ ರಾಷ್ಟ್ರಮಟ್ಟದ ಹೆಸರು ತಂದುಕೊಟ್ಟಿದೆ.

ಮಂಡ್ಯದ ಪಾಂಡವಪುರ ತಾಲೂಕಿನ ಕಲಾವಿದೆ, ರಾಜ್ಯ ಪ್ರಶಸ್ತಿ ವಿಜೇತೆ ಅಕ್ಷತಾ ಪಾಂಡವಪುರ ಅವರು ಲೀಡ್ ರೋಲ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ನಾಲ್ಕು ಪಾತ್ರಗಳಿರುವ ಈ ನಾಟಕದಲ್ಲಿ ಅಕ್ಷತಾ ಅವರೊಂದಿಗೆ ಕಲಾವಿದರಾದ ಶಿವು, ಮುರುಳಿ, ಗೋಮಾರ್ದನಹಳ್ಳಿ ಮಂಜುನಾಥ್ ನಟಿಸಿದ್ದಾರೆ.

ಮೂಲ ನಾಟಕದಲ್ಲಿ ಬೇಬಿ ಎಂಬುವವಳು ಒಬ್ಬ ಜ್ಯೂನಿಯರ್ ಆರ್ಟಿಸ್ಟ್. ಆಕೆಯ ಬದುಕಿನಲ್ಲಿ ಘಟಿಸುವ ಘಟನೆಗಳೇ ಈ ನಾಟಕದ ಕಥಾವಸ್ತು. ಚಿಕ್ಕಾಸಿಗಾಗಿ ಸಣ್ಣಪುಟ್ಟ ಪಾತ್ರಗಳನ್ನೇ ಅವಲಂಬಿಸಿರುವ ಬೇಬಿ ಶಿವಪ್ಪ ಎಂಬುವವನ ಮನೆಯಲ್ಲಿ ಆಶ್ರಯ ಪಡೆದಿರುತ್ತಾಳೆ. ಬೇಬಿಯನ್ನು ತನ್ನ ತೃಷೆಗಾಗಿ ಬಳಸಿಕೊಳ್ಳುವ ಶಿವಪ್ಪ ಆಕೆಯ ತಮ್ಮನಿಗೆ ಕಿರುಕುಳ ನೀಡಿ ಹುಚ್ಚಾಸ್ಪತ್ರೆಗೆ ಸೇರಿಸುತ್ತಾನೆ. ಎರಡು ವರ್ಷಗಳ ನಂತರ ಆತ ವಾಪಸ್ ಮನೆಗೆ ಬಂದಾಗ ಶಿವಪ್ಪ ಆತನನ್ನು ಪಶುವಿನಂತೆ ಕಾಣುತ್ತಾನೆ ಇನ್ನಷ್ಟು ಚಿತ್ರಹಿಂಸೆ ಕೊಡುತ್ತಾನೆ. ಇದನ್ನು ಕಂಡೂ ಕೂಡ ಬೇಬಿಗೆ ಏನೂ ಮಾಡಲಾಗದ ಸ್ಥಿತಿ.

ಸಂಗೀತಗಾರನೊಬ್ಬನ ಹಾಡುಗಳು ಆಕೆಯ ಬದುಕಿಗೆ ಸ್ಫೂರ್ತಿ. ಆತ ಬರೆಯುವ ಹಾಡುಗಳೇ ಆಕೆಯ ಬದುಕಿಗೆ ಶಕ್ತಿ. ಹೇಗಾದರೂ ಮಾಡಿ ಜೀವನದಲ್ಲಿ ಮುಂದೆ ಬರಬೇಕೆಂಬ ಹಂಬಲದಲ್ಲಿರುವ ಆಕೆಗೆ ಸಹಾಯಕ ನಿರ್ದೇಶಕನೊಬ್ಬ ತನ್ನ ಸಿನಿಮಾದ ನಾಯಕಿ ಮಾಡುವುದಾಗಿ ಭರವಸೆ ನೀಡುತ್ತಾನೆ. ಆತ ಒಬ್ಬ ಬೇಬಿ ಮನೆಗೆ ಬಂದಾಗ ಶಿವಪ್ಪ ಅದನ್ನು ಕಂಡು ಬೇಬಿಯನ್ನು ಮನೆಯಿಂದ ಹೊರ ಹಾಕುತ್ತಾನೆ. ಇದು ಸಿನಿಮಾದ ಮುಖ್ಯ ಕತೆ.

ಈ ಕತೆಯನ್ನು ಕನ್ನಡ ನೆಲಕ್ಕೆ ಹೊಂದಿಸುವ ನಿಟ್ಟಿನಲ್ಲಿ ನಿರ್ದೇಶಕರು ಡಬ್ಬಿಂಗ್ ಚರ್ಚೆ, ಕಾಸ್ಟಿಂಗ್ ಕೌಚ್ ಮೊದಲಾದ ವಿಷಯಗಳನ್ನು ಸ್ಪರ್ಶಿಸಿದ್ದಾರೆ.

ಜ್ಯೂನಿಯರ್ ಆರ್ಟಿಸ್ಟ್‌ಗಳು ಒಂದು ಸಿನಿಮಾದ ಬೆನ್ನೆಲುಬಾಗಿ ನಿಂತಿರುತ್ತಾರೆ. ಇವರಿಗೆ ನೀಡುವ ಸಂಭಾವನೆ ಅವರ ಪಾತ್ರಕ್ಕೆ ತಕ್ಕಂತಿರುತ್ತದೆ. ಮದುವೆ ಮನೆಯಲ್ಲಿ ಹೆಣ್ಣಿನ ಜತೆ ಇರುವ ಪಾತ್ರಕ್ಕೆ ಹೆಚ್ಚು, ಗ್ರಾಮೀಣ ಮಹಿಳೆ ಪಾತ್ರಕ್ಕೆ ಕಡಿಮೆ ಸಂಭಾವನೆ ಪಡೆಯುತ್ತಾರೆ. ಇಂಥ ಪಾತ್ರದಾರಿಗಳ ಬದುಕಿನ ಬವಣೆಗಳು ಹೇಳತೀರದು. ಅದನ್ನು ನಾಟಕವಾಗಿಸುವ ಪ್ರಯತ್ನ ನಮ್ಮದು ಎನ್ನುತ್ತಾರೆ ನಿರ್ದೇಶಕ ಪ್ರಸನ್ನ.

———————–……………………———————

“ಶ್ರೀ ರೆಡ್ಡಿ ಎಂಬ ಕಲಾವಿದೆ ಇತ್ತೀಚೆಗೆ ಸಾರ್ವಜನಿಕವಾಗಿ ಅರೆಬೆತ್ತಲಾಗಿದ್ದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ. ಕಲಾವಿದೆ ಎಂದರೆ ಆಕೆಯನ್ನು ಕಾಮ ತೃಷೆ ತೀರಿಸಿಕೊಳ್ಳುವ ಗಂಡು ಮನಸ್ಥಿತಿಯ ಪ್ರತಿಭಟನೆಯ ರೂಪವೇ ಎಂಜಿ ರೋಡ್ ಶಾಂತಿ. ಒಬ್ಬ ಕಲಾವಿದೆಯಲ್ಲಿರುವ ಪ್ರತಿಭೆಯನ್ನು ಗಂಡು ಯಾವ ರೀತಿ ಅಪಾನಿಸುತ್ತಾನೆ ಎಂಬುದನ್ನು ಇದು ಪ್ರತಿಪಾದಿಸುತ್ತದೆ.”

                           |ಪ್ರಸನ್ನ ಡಿ. ರಂಗ ನಿದೇರ್ಶಕ

ಲೇಖಕ: ಚಾಣಕ್ಯ
ಪರ್ತಕರ್ತ
ಮೈಸೂರು

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

Published

on

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು.

ಶಾಸಕ ನಿವಾಸದಲ್ಲಿ ಶನಿವಾರ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿ ಮಾತನಾಡಿದ ಶಾಸಕರು, ಇದೇ ಮಾ.21ರಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಗಲಿದ್ದು, ಮಕ್ಕಳು ಯಾವುದೇ ಆತಂಕ ಇಲ್ಲದೆ ಪರೀಕ್ಷೆ ಎದುರಿಸುವ ಮೂಲಕ ಉತ್ತಮ ಅಂಕಗಳನ್ನು ಪಡೆಯುವಂತೆ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ, ಇಸಿಒ ಗೋವಿಂದರಾಜ್ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

Published

on

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು. ಇದೇ ಸಂದರ್ಭದಲ್ಲಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾದ ಡಾ. ಬಿ ಶೈಲಶ್ರೀರವರು, ಸಂಶೋಧನಾ, ಸ್ನಾತಕೋತ್ತರ ಪ್ರಥಮ ಹಾಗೂ ದ್ವೀತಿಯ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ.

ಅರ್ಹರನ್ನು ಪಡಿತರ ಚೀಟಿಗೆ ಸೇರಿಸಿ, ಅನರ್ಹರನ್ನು ಕೈಬಿಡುವಂತೆ, ಎಲ್ಲ ರಾಜ್ಯ ಸರ್ಕಾರಗಳಿಗೆ ನಿರ್ದೇಶಿಸಲಾಗಿದೆ ಎಂದು, ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಪ್ರಲ್ಹಾದ ಜೋಶಿ, ಸ್ಪಷ್ಟಪಡಿಸಿದ್ದಾರೆ.

ಲೋಕಸಭೆಯಲ್ಲಿ ಮಾತನಾಡಿದ ಅವರು, ‘ಅಂತ್ಯೋದಯ ಅನ್ನ ಯೋಜನೆ’ ಅಡಿ, ಕಳೆದ 2000ದಿಂದ ಆರ್ಥಿಕವಾಗಿ ದುರ್ಬಲರು ಹಾಗೂ ವಿಶೇಷ ಚೇತನರಿಗೆ, ಅತಿ ಕಡಿಮೆ ಬೆಲೆಯಲ್ಲಿ, ತಿಂಗಳಿಗೆ 35 ಕಿಲೋ ಆಹಾರ ಧಾನ್ಯ ನೀಡಲಾಗುತ್ತಿದೆ. ಪ್ರತಿ ಕುಟುಂಬಗಳಿಗೆ 35 ಕಿಲೋ ಪಡಿತರ ವಿತರಿಸಲಾಗುತ್ತಿದೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಶಾಸಕ ನಿವಾಸದಲ್ಲಿ ಶನಿವಾರ...

ದಿನದ ಸುದ್ದಿ2 days ago

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು....

ದಿನದ ಸುದ್ದಿ3 days ago

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ. ಅರ್ಹರನ್ನು...

ದಿನದ ಸುದ್ದಿ3 days ago

ಅನ್ನಭಾಗ್ಯ ಯೋಜನೆ | ನೇರ ನಗದು ವರ್ಗಾವಣೆ ಬದಲು ಅಕ್ಕಿ ವಿತರಣೆ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ ಪ್ರಸ್ತುತ ರಾಜ್ಯದಲ್ಲಿರುವ ಅಂತ್ಯೋದಯ ಅನ್ನಯೋಜನೆ ಮತ್ತು ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಪ್ರತಿ ತಿಂಗಳು ಪಡಿತರ ಚೀಟಿಯಲ್ಲಿನ...

ದಿನದ ಸುದ್ದಿ3 days ago

ದಾವಣಗೆರೆ | ಮನೆ ಬೋರ್ ವೆಲ್ ನೀರು ವಾಣಿಜ್ಯ ಉದ್ದೇಶಕ್ಕೆ ಬಳಕೆ ; ಕ್ರಮ ಕೈಗೊಳ್ಳಲು ಸರಸ್ವತಿ ಬಡಾವಣೆ ನಿವಾಸಿಗಳ ಆಗ್ರಹ

ಸುದ್ದಿದಿನ,ದಾವಣಗೆರೆ: ಅಂತರ್ಜಲ ಪ್ರಾಧಿಕಾರದ ನಿರಾಪೇಕ್ಷಣಾ ಪತ್ರವನ್ನು ಪಡೆಯದೆ ಮನೆಯ ಬೋರ್ ವೆಲ್ಲಿನಿಂದ ವಾಣಿಜ್ಯ ಉದ್ದೇಶಕ್ಕಾಗಿ ಸರತಿ ಸಾಲಿನಲ್ಲಿ ಸತತ ನಾಲ್ಕೈದು ವರ್ಷಗಳಿಂದ ಟ್ಯಾಂಕರ್ ಗಳ ಮೂಲಕ ದಿನಕ್ಕೆ...

ದಿನದ ಸುದ್ದಿ4 days ago

ಖಾತ್ರಿ ಯೋಜನೆಯ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ :‌ ಸಿಎಂ ಸಿದ್ದರಾಮಯ್ಯ

ಸುದ್ದಿದಿನ,ಬೆಂಗಳೂರು:ಗ್ಯಾರಂಟಿ ಅನುಷ್ಟಾನ ಸಮಿತಿಗಳಿಂದ, ಶಾಸಕರ ಘನತೆಗೆ ಕುಂದಿಲ್ಲ; ಈ ಕುರಿತು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಪಕ್ಷ ನಾಯಕರ ಆರೋಪಕ್ಕೆ, ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಅವರು, ಅಧಿವೇಶನ...

ದಿನದ ಸುದ್ದಿ4 days ago

ಮೊಬೈಲ್ ರಿಪೇರಿ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರಡ್‍ಸೆಟ್ ಸಂಸ್ಥೆ ವತಿಯಿಂದ ಮೊಬೈಲ್ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ...

ದಿನದ ಸುದ್ದಿ4 days ago

ವಾಣಿಜ್ಯ ಮಳಿಗೆಗಳ ಹರಾಜು ದಿನಾಂಕ ಮುಂದೂಡಿಕೆ

ಸುದ್ದಿದಿನ,ದಾವಣಗೆರೆ:ಹರಿಹರ ತಾಲ್ಲೂಕು ಕ್ರೀಡಾಂಗಣದಲ್ಲಿರುವ ವಾಣಿಜ್ಯ ಮಳಿಗೆಗಳನ್ನು ಮಾಸಿಕ ಬಾಡಿಗೆ ಆಧಾರದ ಮೇಲೆ ನೀಡಲು ಹರಾಜು ಕರೆಯಲಾಗಿದ್ದು, ಕಾರಣಾಂತರಗಳಿಂದ ಹರಾಜು ದಿನಾಂಕವನ್ನು ಮಾ.20 ರ ಬೆಳಿಗ್ಗೆ 11.00 ಗಂಟೆಗೆ...

ದಿನದ ಸುದ್ದಿ4 days ago

ಚನ್ನಗಿರಿ | ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ‘ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ’

ಸುದ್ದಿದಿನ,ಚನ್ನಗಿರಿ:ಪಟ್ಟಣದ ಶ್ರೀ ಶಿವಲಿಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಚನ್ನಗಿರಿ ನ್ಯಾಯಾಯದಲ್ಲಿ ಒಂದನೇ ಹೆಚ್ಚುವರಿ ಸಿವಿಲ್ ನ್ಯಾಯಧೀಶರಾಗಿರುವ ಕು.ಶಮಾ...

ದಿನದ ಸುದ್ದಿ4 days ago

ದಾವಣಗೆರೆಯಲ್ಲಿ ಉದ್ಯೋಗ ಮೇಳ | ಬನ್ನಿ ಭಾಗವಹಿಸಿ, ಉದ್ಯೋಗ ಪಡೆಯಿರಿ

ಡಾ. ವೆಂಕಟೇಶ್ ಬಾಬು ಎಸ್., ಪ್ಲೇಸ್ಮೆಂಟ್ ಆಫೀಸರ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ದಾವಣಗೆರೆ ನಮಗೆಲ್ಲರಿಗೂ ಒಂದು ಉತ್ತಮ ಜೀವನವನ್ನ ನಿರ್ಮಿಸಲು ಉದ್ಯೋಗ ಅತ್ಯಗತ್ಯ. ಆದರೆ, ಇತ್ತೀಚಿನ...

Trending